HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ಬಿಡದಿ ಟೌನ್ಶಿಪ್ ವಿವಾದಕ್ಕೆ ಮತ್ತೊಂದು ತಿರುವು: ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ
ಬಿಡದಿ ಟೌನ್ಶಿಪ್ ಬಗ್ಗೆ ಪರ ವಿರೋದಗಳು ವ್ಯಕ್ತವಾಗಿದ್ದು, ಇದು ರಾಜಕಿಯ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಡಿಕೆ ಶಿವಕುಮಾರ್ ಸರ್ಕಾರ ಮಾಡಿಯೇ ತೀರಬೇಕೆಂದು ಹಠಕ್ಕೆ ಬಿದ್ದಿದ್ದರೆ, ಇನ್ನೊಂದೆಡೆ ವಿಪಕ್ಷಗಳು ಜೆಡಿಎಸ್ ಮತ್ತು ಬಿಜೆಪಿ ಟೌನ್ಶಿಪ್ ಮಾಡದಂತೆ ಪಟ್ಟು ಹಿಡಿದಿವೆ. ಹೀಗೆ ಈ ಯೋಜನೆ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದರ ಮಧ್ಯೆ ಇದಿಗ ಸರ್ಕಾರ, ಈ ಸಂಬಂಧ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಿದೆ.
- Ramesh B Jawalagera
- Updated on: Aug 8, 2026
- 9:12 pm
ಸಮಸ್ಯೆಯಲ್ಲಿದ್ದವರಿಗೆ ಪರಿಹಾರ: ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಮನೆ ಮನೆಗೆ ತೆರಳಿ ಮಾತುಕತೆ ಮೂಲಕ ಮನವೊಲಿಸುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಸಮಧಾನಿತ ಶಾಸಕರಿಗೆ ಜೆಡಿಎಸ್ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ.
- Manjunath KB
- Updated on: Aug 8, 2026
- 8:03 pm
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ
ಬಿಡದಿ ಟೌನ್ಶಿಪ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಕ್ಷದ ಕಾರ್ಯಕರ್ತರಿಗೆ ಪಾದಯಾತ್ರೆಯಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಸಮನ್ವಯ ಸಮಿತಿಯನ್ನೂ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
- Kiran Haniyadka
- Updated on: Aug 8, 2026
- 1:43 pm
ಲೋಕಾಯುಕ್ತ ಎಡಿಜಿಪಿ-ಕುಮಾರಸ್ವಾಮಿ ರಾಜಿ ಸಂಧಾನ ವಿಫಲ: ಮತ್ತೆ ವಿಚಾರಣೆ ನಿಗದಿಪಡಿಸಿದ ಕೋರ್ಟ್
ಲೋಕಾಯುಕ್ತ ಎಡಿಜಿಪಿ, ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿರುವ ಆರೋಪ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧಿಸಿದಂತೆ ಇತ್ಯರ್ಥಪಡಿಸಲು ರಾಜಿ ಸಂಧಾನ ಮಾಡಿಕೊಳ್ಳುವಂತೆ ಹೈಕೋರ್ಟ್ ಸೂಚಿಸಿತ್ತು. ಆದ್ರೆ, ರಾಜಿ ಸಂಧಾನ ವಿಫಲವಾಗಿದೆ. ಹೀಗಾಗಿ ಕೋರ್ಟ್, ಮತ್ತೆ ವಿಚಾರಣೆಯನ್ನು ನಿಗದಿಪಡಿಸಿದೆ.
- Ramesha M
- Updated on: Aug 7, 2026
- 6:10 pm
ಬಿಡದಿ ಟೌನ್ಶಿಪ್ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಜ್ಜು: ಬೃಹತ್ ಪಾದಯಾತ್ರೆ ನಡೆಸಲು ನಿರ್ಧಾರ
ಬಿಡದಿ ಟೌನ್ಶಿಪ್ ಯೋಜನೆಯ ವಿರುದ್ಧದ ಹೋರಾಟದ ಕುರಿತು ಚರ್ಚಿಸಲು ಬಿಜೆಪಿ ನಾಯಕರು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಮತ್ತು ಪಿ.ಸಿ. ಮೋಹನ್ ಇದ್ದರು. ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಡುವ ಕಾರ್ಯತಂತ್ರ, ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ ಹಾಗೂ ಹೋರಾಟದ ರೂಪರೇಷೆಗಳ ಬಗ್ಗೆ ಮಾತುಕತೆ ನಡೆಸಿದರು.
- Prashantha B
- Updated on: Aug 6, 2026
- 7:18 am
12 ಲಕ್ಷ ಸಾಲಬಾಧೆಯಿಂದ ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
Mandya News: ಮಂಡ್ಯ ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ 11-12 ಲಕ್ಷ ರೂಪಾಯಿ ಸಾಲಬಾಧೆಯಿಂದ ಬೇಸತ್ತ ರೈತ ದಂಪತಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಪತಿ ಮೀಸೆ ಪುಟ್ಟಸ್ವಾಮಿ ಹಾಗೂ ಪತ್ನಿ ನಾಗಮ್ಮ ಅವರ ಕುಟುಂಬಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕುಟುಂಬ ಸದಸ್ಯರಿಂದ ಸಾಲದ ಬಗ್ಗೆ ಮಾಹಿತಿ ಪಡೆದರು.
- Dileep CP
- Updated on: Jul 31, 2026
- 7:09 pm
ಪ್ರಾಧಿಕಾರದ ತೀರ್ಪು ಸ್ವಿಕರಿಸಿದ್ರೆ ಅದೇ ನಮ್ಮ ವೀಕ್ನೆಸ್ ಆಗುತ್ತೆ: ಡಿಕೆಶಿಗೊಂದು ಕುಮಾರಸ್ವಾಮಿ ಸಲಹೆ
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ಭುಗಿಲೆದ್ದಿರುವ ರೈತರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಸಂಘಟನೆಗಳು ಮುಂದಾಗಿವೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಇನ್ನೊಂದೆಡೆ ಈಗಾಗಲೇ ವಿವಿಧ ಸಂಘಟನೆಗಳು, ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿವೆ. ಹಾಗೇ ವಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸಿದ್ದು, ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ಹಾಕುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ.
- Ramesh B Jawalagera
- Updated on: Jul 31, 2026
- 3:22 pm
ಕಾವೇರಿ ನೀರು ಹಂಚಿಕೆ ವಿವಾದ: ಎಸಿ ರೂಮ್ನಲ್ಲಿ ಕೂತು ತೀರ್ಮಾನ ಸರಿಯಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ
Cauvery Water Dispute: ಕಾವೇರಿ ನೀರು ಹಂಚಿಕೆ ಕುರಿತು CWMA ಆದೇಶವನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಜಲಾಶಯಗಳ ನೀರಿನ ಪ್ರಮಾಣ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮುಂದೆ ಹರಿಯುವ ನೀರನ್ನು ಆಧರಿಸಿ, ಅಂದಾಜು ಲೆಕ್ಕಾಚಾರದ ಮೇಲೆ ನೀರು ಬಿಡುಗಡೆ ಮಾಡಲು ಆದೇಶಿಸುವುದು ಸರಿಯಲ್ಲ ಎಂದು ಅವರು ಕಿಡಿ ಕಾರಿದ್ದಾರೆ.
- Manjunath KB
- Updated on: Jul 31, 2026
- 12:53 pm
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್ಎಂಟಿ ವಾಚ್ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.
- Manjunath KB
- Updated on: Jul 30, 2026
- 7:26 pm
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ
ಹಾಸನ: ಭವಾನಿ ರೇವಣ್ಣ ಅವರು ಅತ್ತೆ ಚನ್ನಮ್ಮರ ಬಗ್ಗೆ ಭಾವುಕ ನೆನಪುಗಳನ್ನು ಹಂಚಿಕೊಂಡರು. ಚನ್ನಮ್ಮ ಅವರು ಅತಿಯಾದ ದೇವರ ಭಕ್ತಿ ಹೊಂದಿದ್ದರು, ಪ್ರತಿದಿನವೂ ದೀರ್ಘಕಾಲ ಪೂಜೆ ಸಲ್ಲಿಸುತ್ತಿದ್ದರು. ರೇವಣ್ಣ ಅವರಿಗೆ ತಂದೆ-ತಾಯಿ ದೇವರ ಸಮಾನವಾಗಿದ್ದರು. ಅಮ್ಮ ಹಾಸನಕ್ಕೆ ಬಂದಾಗ ತನ್ನೊಂದಿಗೇ ಇರುತ್ತಿದ್ದರು. ಚನ್ನಮ್ಮ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ರಾಜಕಾರಣಿಯೇ ಅಲ್ಲದಿದ್ದರೂ, ಅವರು ಗಳಿಸಿದ್ದ ಪ್ರೀತಿ ಅಪಾರ ಎಂದು ಭವಾನಿ ಹೇಳಿದರು.
- Manjunath KB
- Updated on: Jul 30, 2026
- 7:21 pm
ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಪತ್ನಿ ಚೆನ್ನಮ್ಮ ಅಗಲಿಕೆಯ ನೋವಿನಿಂದ ಹೊರಬರಲಾಗದೆ ಕಣ್ಣೀರಿಡುತ್ತಿದ್ದಾರೆ. ಚೆನ್ನಮ್ಮ ಅವರ 11ನೇ ದಿನದ ಕಾರ್ಯಕ್ಕಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಕಲ ಸಿದ್ಧತೆ ನಡೆದಿದೆ. ಲಕ್ಷಾಂತರ ಭಕ್ತರು, ಕುಟುಂಬಸ್ಥರು ಭಾಗವಹಿಸುವ ನಿರೀಕ್ಷೆಯಿದ್ದು, ಅವರ ಪುತ್ರ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
- Manjunath KB
- Updated on: Jul 30, 2026
- 9:15 am
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್ಡಿ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮನವರ ಅಗಲಿಕೆಯ ನಂತರ, ಹೆಚ್.ಡಿ. ಕುಮಾರಸ್ವಾಮಿ ಅವರು ಅವರ ನೆನಪಿನಲ್ಲಿ ಸಮಾಜ ಸೇವೆಯ ವಿನೂತನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ವೃದ್ಧರು, ಅನಾಥರು, ರೈತರು ಮತ್ತು ಸಂಸ್ಕೃತ ಪಾಠಶಾಲೆಗಳಿಗಾಗಿ ಈ ಸ್ಥಳವನ್ನು ಸಮರ್ಪಿಸಲಾಗುವುದು. ತಮ್ಮ ಗಳಿಕೆಯನ್ನು ನಾಡಿನ ಜನತೆಗೆ ಅರ್ಪಿಸುವ ಹಾಗೂ ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.
- Manjunath KB
- Updated on: Jul 29, 2026
- 5:47 pm