HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಬಿಗ್ ಬಾಂಬ್: ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ!
ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ಹಿಂದೆ ಸಚಿವರಾಗಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ. ತರಾತುರಿಯಲ್ಲಿ ಎಇಇಗಳ ನೇಮಕಾತಿ ಸಂಬಂಧ ಸಚಿವರು ರಾಜೀನಾಮೆ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪಗಳಿಗೆ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.
- Sunil MH
- Updated on: Aug 28, 2026
- 12:51 pm
ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ?: ಮೋದಿ-ಕೇಂದ್ರ ಸಚಿವರ ಭೇಟಿ ಬೆನ್ನಲ್ಲೇ ಹೆಚ್ಚಿದ ಚರ್ಚೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮರಳಿ ರಾಜ್ಯ ರಾಜಕಾರಣಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಅವರು ಸುದೀರ್ಘ ಮಾತುಕತೆ ನಡೆಸಿರೋದು ಇದಕ್ಕೆ ಮತ್ತಷ್ಟು ಇಂಬು ನೀಡುವಂತಿದೆ. ರಾಜ್ಯದಲ್ಲಿ ಎನ್ಡಿಎ ಬಲವರ್ಧನೆ ಜೊತೆಗೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಹೆಚ್ಚಿಸಲು ಜಂಟಿ ಹೋರಾಟಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Sunil MH
- Updated on: Aug 28, 2026
- 12:05 pm
ಕೊನೆಗೂ ಕಾರ್ಯಕರ್ತರ ಆಸೆ ಈಡೇರಿತು: ರಾಮನಗರ ಕ್ಷೇತ್ರವನ್ನ ಮತ್ತೆ ಪಡೆಯಲು ದಳಪತಿಗಳ ಪ್ಲ್ಯಾನ್
ರಾಮನಗರ ವಿಧಾನಸಭಾ ಕ್ಷೇತ್ರ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಕೆಲ ವರ್ಷಗಳ ಕೆಳಗೆ ಜೆಡಿಎಸ್ ಪ್ರಾಬಲ್ಯವಿದ್ದ ಕ್ಷೇತ್ರ. ಆದರೆ ಇದೀಗ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಹೀಗಾಗಿ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ದಳಪತಿಗಳು ಮುಂದಾಗಿದ್ದಾರೆ. ಇದಕ್ಕೊಂದು ದಳಪತಿಗಳು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳು ಇವೆ. ಆಗಲೇ ಕುಮಾರಸ್ವಾಮಿ ರಣತಂತ್ರ ಹೆಣೆದಿದ್ದಾರೆ.
- Prashantha B
- Updated on: Aug 27, 2026
- 9:29 pm
FIR ಹಾಕಿದ್ರೂ ಬೆದರಬೇಡಿ: ನೈಸ್ ರಸ್ತೆಯಲ್ಲಿ ಟೋಲ್ ಕಟ್ಟದಂತೆ ಕುಮಾರಸ್ವಾಮಿ ಮತ್ತೆ ಕರೆ
ನೈಸ್ ರಸ್ತೆ ಟೋಲ್ ಪಾವತಿ ವಿಚಾರವಾಗಿ ವಾಹನ ಸವಾರರಲ್ಲಿ ಗೊಂದಲ ಉಂಟಾಗಿದೆ. ವಾಹನ ಸವಾರರು ನೈಸ್ ರಸ್ತೆ ಬಳಕೆಗೆ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದು, ಇದಾದ ಬಳಿಕ ಜನರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ನಿತ್ಯ ವಾಗ್ದಾದ , ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಮತ್ತೊಮ್ಮೆ ಕುಮಾರಸ್ವಾಮಿ, ಟೋಲ್ ಕಟ್ಟದಂತೆ ಕರೆ ನೀಡಿದ್ದಾರೆ.
- Web contact
- Updated on: Aug 21, 2026
- 5:26 pm
ಹೇಳಿಕೆ ನೀಡಿ ಕುಮಾರಣ್ಣ ಸೈಲೆಂಟ್: ಇತ್ತ ನೈಸ್ ಟೋಲ್ ಸಿಬ್ಬಂದಿ-ಜನರ ಮಧ್ಯೆ ನಿತ್ಯ ಫೈಟ್!
ನೈಸ್ ರಸ್ತೆ ಟೋಲ್ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೋಲ್ ಕಟ್ಟಬೇಡಿ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಕೆಲ ವಾಹನ ಸವಾರರು ಟೋಲ್ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಮತ್ತೊಂದೆಡೆ ರೈತ ಸಂಘಗಳು ಕುಮಾರಸ್ವಾಮಿ ಹೇಳಿಕೆಗೆ ಬೆಂಬಲ ಸೂಚಿಸಿದ್ದು, ಜಮೀನು ಕಳೆದುಕೊಂಡ ರೈತರು ಮಾತ್ರ ತಮ್ಮ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ನೈಸ್ ಆಡಳಿತ ಟೋಲ್ ಪಾವತಿಸದೇ ಸಂಚರಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
- Prashantha B
- Updated on: Aug 20, 2026
- 9:38 pm
ಟೌನ್ಶಿಪ್, ನೈಸ್ ರಸ್ತೆ ವಿವಾದ: ಬಹಿರಂಗ ಚರ್ಚೆಗೆ ನಾನು ಸಿದ್ಧ; ಸರ್ಕಾರಕ್ಕೆ ಸವಾಲೆಸೆದ ಹೆಚ್ಡಿ ಕುಮಾರಸ್ವಾಮಿ
HD Kumaraswamy Challenges Congress: ಬೆಂಗಳೂರಿನ ನೈಸ್ ರಸ್ತೆ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಸಿಡಿದೆದ್ದಿವೆ. ಬಿಡದಿ ಟೌನ್ಶಿಪ್ ಮತ್ತು ನೈಸ್ ಯೋಜನೆಗಳ ಕುರಿತು ಕಾಂಗ್ರೆಸ್ ಆರೋಪಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
- Sunil MH
- Updated on: Aug 18, 2026
- 4:13 pm
ಮತ್ತೆ ಮುನ್ನೆಲೆಗೆ ಬಂದ ಬೆಂಗಳೂರಿನ ನೈಸ್ ರಸ್ತೆ ವಿವಾದ: ಟೋಲ್ ವಿರುದ್ಧ ಸಿಡಿದೆದ್ದ ಪ್ರತಿಪಕ್ಷಗಳು
ನೈಸ್ ಸಂಸ್ಥೆಯಲ್ಲಿರುವ ಟೋಲ್ ಗೇಟ್ ರಾಜಜೀಯ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ನೈಸ್ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ಗಳನ್ನು ತತ್ಕ್ಷಣ ಜಾರಿಗೆ ಬರುವಂತೆ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಬಿಜೆಪಿ ಸಹ ಬೆಂಬಲಿಸಿದೆ.
- Ramesh B Jawalagera
- Updated on: Aug 16, 2026
- 5:36 pm
ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರ
ನೈಸ್ (NICE) ರಸ್ತೆಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ಮತ್ತು ಅದನ್ನು ತಕ್ಷಣವೇ ಸ್ಥಗಿತಗೊಳಿಸಿ ಯೋಜನೆಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.
- Sunil MH
- Updated on: Aug 16, 2026
- 12:32 pm
ಸ್ವಾತಂತ್ರ್ಯೋತ್ಸವ ಅಂಗವಾಗಿ HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹೆಚ್ಎಂಟಿ ಸಂಸ್ಥೆಯು ಗಂಡಭೇರುಂಡ ಚಿಹ್ನೆ ಮತ್ತು ಕನ್ನಡ ಅಂಕಿಗಳಿರುವ ವಿಶೇಷ ವಾಚ್ಗಳನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜಾಲಹಳ್ಳಿ ಕೇಂದ್ರದಲ್ಲಿ ಈ ಅನನ್ಯ ವಾಚ್ಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. 2 ಕಿಲೋಮೀಟರ್ ಉದ್ದದ ಕ್ಯೂನಲ್ಲಿ ನಿಂತು ಜನ ತಮ್ಮ ಮೆಚ್ಚಿನ ಮೇಡ್ ಇನ್ ಇಂಡಿಯಾ ವಾಚ್ಗಳನ್ನು ಖರೀದಿಸುತ್ತಿದ್ದಾರೆ, ಇದು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಸಾರುತ್ತಿದೆ.
- Vinay Kashappanavar
- Updated on: Aug 15, 2026
- 10:13 pm
‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’! ಜೆಪಿ ಭವನದ ಗೋಡೆ, ಗೇಟ್ಗೆ ಪೋಸ್ಟರ್ ಅಂಟಿಸಿ ಹೆಚ್ಡಿಕೆ ವಿರುದ್ಧ ಕಾಂಗ್ರೆಸ್ ವ್ಯಂಗ್ಯ
ಬಿಡದಿ ಟೌನ್ಶಿಪ್ ಯೋಜನೆಯ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ನಡುವೆ, ಕಾಂಗ್ರೆಸ್ ಯುವ ಘಟಕವು ಜೆಪಿ ಭವನದ ಗೋಡೆ ಮತ್ತು ಗೇಟ್ಗಳಿಗೆ ಪೋಸ್ಟರ್ಗಳನ್ನು ಅಂಟಿಸಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು, ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’ ಎಂದು ಲೇವಡಿ ಮಾಡಲಾಗಿದೆ.
- Shivaprasad B
- Updated on: Aug 11, 2026
- 10:14 am
ಬಿಡದಿ ಟೌನ್ಶಿಪ್ ಕಿಚ್ಚು: ಮೊದಲ ದಿನದ ಜೆಡಿಎಸ್ ಪಾದಯಾತ್ರೆ ಅಂತ್ಯ; ಎಲ್ಲರಿಗೂ ಧನ್ಯವಾದ ಹೇಳಿದ ನಿಖಿಲ್
JDS Padayatra: ಬಿಡದಿ ಟೌನ್ಶಿಪ್ ವಿರೋಧಿಸಿ ಇಂದಿನಿಂದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಆರಂಭಿಸಿವೆ. ಬೆಳಿಗ್ಗೆ ಬೈರಮಂಗಲ ಗ್ರಾಮದಿಂದ ಆರಂಭವಾಗಿದ್ದ ಪಾದಯಾತ್ರೆ, ಇದೀಗ ಬಿಡದಿಯಲ್ಲಿ ಮುಕ್ತಾಯಗೊಂಡಿದೆ. ಆ ಮೂಲಕ ಮೊದಲ ದಿನದ ಪಾದಯಾತ್ರೆ ಯಶಸ್ವಿಯಾಗಿ ನೆರವೇರಿದೆ. ನಾಳೆ ನೈಸ್ ರಸ್ತೆವರೆಗೂ ಪಾದಯಾತ್ರೆ ಮುಂದುವರೆಯಲಿದೆ.
- Prashantha B
- Updated on: Aug 9, 2026
- 8:21 pm
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಯಾರೆಲ್ಲ ಭಾಗಿ?
ರಾಜ್ಯ ಸರ್ಕಾರದ ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ 'ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯಡಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಬೃಹತ್ ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಪಾದಯಾತ್ರೆಗೆ ಹಸುರು ನಿಶಾನೆ ತೋರಿದ್ದು, ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್ವರೆಗೂ ಪಾದಯಾತ್ರೆ ನಡೆಯಲಿದೆ.
- Prashantha B
- Updated on: Aug 9, 2026
- 2:03 pm