AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

4,500 ಇವಿ ಬಸ್ ಸೇರ್ಪಡೆಗೆ ಅಸ್ತು: ಬಿಎಂಟಿಸಿ ಚಾಲಕರನ್ನೇ ನೇಮಿಸಲು ನೌಕರರ ಪಟ್ಟು, ಹೋರಾಟದ ಎಚ್ಚರಿಕೆ

ಕೇಂದ್ರದ ಪಿಎಂ-ಇ ಡ್ರೈವ್ ಯೋಜನೆಯಡಿ ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ ಸಾರಿಗೆ ನೌಕರರು ಖಾಸಗಿ ಚಾಲಕರ ನೇಮಕಾತಿಯನ್ನು ವಿರೋಧಿಸಿದ್ದು, ಬಿಎಂಟಿಸಿ ಸಿಬ್ಬಂದಿಯನ್ನೇ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ. ಇಲ್ಲವಾದರೆ ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ.

ರಮೇಶ್​​ ಬಳಿಕ ಸತೀಶ್ ಜಾರಕಿಹೊಳಿ ಮುಗಿಸಲೂ ಯತ್ನ: ಸ್ಫೋಟಕ ಹೇಳಿಕೆ ಕೊಟ್ಟ ಹೆಚ್​​.ಡಿ. ಕುಮಾರಸ್ವಾಮಿ

ಅಮೆರಿಕಾ ಪ್ರವಾಸ ಮುಗಿಸಿ ಮರಳಿದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ED ದಾಳಿಗಳು, ರಮೇಶ್ ಹಾಗೂ ಸತೀಶ್ ಜಾರಕಿಹೊಳಿ ಪ್ರಕರಣಗಳು, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಸರ್ಕಾರದ 100 ದಿನಗಳ ಆಡಳಿತದ ಕುರಿತು ಪ್ರಶ್ನಿಸಿದ್ದಾರೆ. ವಿಜಯದಶಮಿ ಯುದ್ಧಕ್ಕೆ ಕಾಲ ಎಂದ ಅವರು, ಹಲವು ವಿಷಯಗಳ ಬಗ್ಗೆ ಟೀಕಿಸಿದರು.

ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು?: ಕೆಪಿಎಸ್‌ಸಿ, ನೈಸ್ ಹಗರಣ ಎತ್ತಿದ್ದಕ್ಕೇ ಟಾರ್ಗೆಟ್ ಎಂದ ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪ್ರಕರಣ ತಮ್ಮ ಕುಟುಂಬವನ್ನು ಗುರಿಯಾಗಿಸುವ ರಾಜಕೀಯ ಷಡ್ಯಂತ್ರವೆಂದು ಆರೋಪಿಸಿದ್ದಾರೆ. ಕೆಪಿಎಸ್‌ಸಿ, ನೈಸ್ ಹಗರಣಗಳನ್ನು ಎತ್ತಿದ ನಂತರ ಈ ಹೊಸ ಬೆಳವಣಿಗೆಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆಪಾದಿಸಿದ್ದಾರೆ.

ಅಲ್ಲೋಲ ಕಲ್ಲೋಲ ಹೇಳಿಕೆ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಹೆಚ್​​.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವ ಹೇಳಿದ್ದಿಷ್ಟು

ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಹಲವು ಅಕ್ರಮಗಳ ಆರೋಪ ಮಾಡಿದ್ದಾರೆ. ಕೆಪಿಎಸ್‌ಸಿ ಮತ್ತು ಎಇ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳನ್ನು ಉಲ್ಲೇಖಿಸಿ, ಈ ಬಗ್ಗೆ ದಾಖಲೆಗಳನ್ನು ಜನತೆಯ ಮುಂದಿಡುತ್ತೇನೆ ಎಂದಿದ್ದಾರೆ. ತಮ್ಮ ಟೀಕೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಜಾತಿ ಆಧಾರಿತವಲ್ಲ, ಬದಲಿಗೆ ರಾಜ್ಯದ ಹಿತಕ್ಕಾಗಿ ಎಂದು ಸ್ಪಷ್ಟಪಡಿಸಿದ್ದಾರೆ.

ಟಾರ್ಗೆಟ್‌ ಯಾರು? ದೇಶವೇ ಅಲ್ಲೋಲ ಕಲ್ಲೋಲ ಆಗೋ ದಾಖಲೆ ಏನು? ಇಲ್ಲಿದೆ ವಿವರ

ಅಮೆರಿಕಾಕ್ಕೆ ಹೋಗುವ ಮುನ್ನವೇ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಇದೀಗ ವಿದೇಶ ಪ್ರವಾಸದಿಂದ ಕುಮಾರಸ್ವಾಮಿ ವಾಪಾಸ್ ಆಗಿದ್ದು, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯವನ್ನು ಯಾವಾಗ ಹೇಳುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಸೋಮವಾರ ಅಥವಾ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಕೆಲವೊಂದಿಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯವರ ಸುದ್ದಿಗೋಷ್ಠಿಯತ್ತ ನೆಟ್ಟಿದ್ದು, ಯಾರಿಗೆ ಸಂಬಂಧಿಸಿದ ಯಾವೆಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

  • Sunil MH
  • Updated on: Sep 13, 2026
  • 5:25 pm

‘ಭಾರತದಲ್ಲಿ ಹೂಡಿಕೆ ಮಾಡಿ’: ಕನ್ನಡಿಗರು ಮತ್ತು ಭಾರತೀಯರಿಗೆ ಹೆಚ್​ಡಿ ಕುಮಾರಸ್ವಾಮಿ ಕರೆ

ಅಮೆರಿಕದಲ್ಲಿ ನಡೆದ ಅಕ್ಕ ಬಿಸಿನೆಸ್ ಫೋರಂ-2026ರಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ವಿದೇಶಿ ಕನ್ನಡಿಗರು ಮತ್ತು ಭಾರತೀಯರಿಗೆ ಭಾರತದಲ್ಲಿ ಹೂಡಿಕೆ ಮಾಡುವಂತೆ ಕರೆ ನೀಡಿದರು. ಜೊತೆಗೆ ಉದ್ಯೋಗ ಸೃಷ್ಟಿಕರ್ತರಾಗಿ ಭಾರತದ ತಂತ್ರಜ್ಞಾನ ಮತ್ತು ಅನುಭವ ಬಳಸಿಕೊಳ್ಳಿ ಎಂದು ಹೇಳಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆ: ಮೋದಿ ಹೊಸ ಟೀಂನಲ್ಲಿ HDK ಇರಲ್ವಾ? ಮಾನದಂಡ ಏನು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್‌ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂದಿನ ವಾರವೇ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು 70 ವರ್ಷ ದಾಟಿದ ಸುಮಾರು 14 ಸಚಿವರಿಗೆ ಕೋಕ್ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆಪಿಎಸ್​​ಸಿ ಹಗರಣ: ಪ್ರಿಯಾಂಕ್ ಖರ್ಗೆ RDPR ಮಂತ್ರಿಯಾಗಿದ್ದಾಗ ಏನೇನಾಯ್ತು ಅಂತ ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ

ಕೆಪಿಎಸ್​​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಯನ್ನ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ. ಇದರ ಮಧ್ಯೆ ಕೆಪಿಎಸ್​​​​ಸಿ ಹಗರಣ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆರ್​​​​ಡಿಪಿಆರ್ ಮಂತ್ರಿಯಾಗಿದ್ದಾಗ ಏನೆಲ್ಲಾ ಆಯ್ತು ಎನ್ನುವುದನ್ನು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

  • Sunil MH
  • Updated on: Sep 2, 2026
  • 5:32 pm

ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೆಪಿಎಸ್‌ಸಿ ಅಕ್ರಮದ ಕುರಿತು ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ನೇಮಕಾತಿ ಅಕ್ರಮ, ಓಎಂಆರ್ ಶೀಟ್ ವಿಷಯ, ಹಾಗೂ ಆರೋಪಿ ಜ್ಞಾನೇಂದ್ರ ಕುಮಾರ್ ವಿಚಾರದಲ್ಲಿ ಖರ್ಗೆ ಅವರ ಹೇಳಿಕೆಗಳನ್ನು ಪ್ರಶ್ನಿಸಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಿಸಿದ ಕುಮಾರಸ್ವಾಮಿ, ಖರ್ಗೆ ಸತ್ಯ ಮರೆಮಾಚುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Breaking News In Kannada Live: ಆ.31ರ ಇಡೀ ದಿನ ಸುದ್ದಿ ಬೆಳವಣಿಗೆಗಳ ಹೈಲೇಟ್ಸ್

TV9 Kannada News Today Live Updates: ಉತ್ತರಾಖಂಡದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರವಾರ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿ 24 ಮೀನುಗಾರರ ರಕ್ಷಣೆ ಮಾಡಲಾಗಿದ್ದು, 80 ಲಕ್ಷ ರೂ. ನಷ್ಟ ಸಂಭವಿಸಿದೆ. ಇತ್ತ ಬಿಗ್ ಬಾಸ್ 13 ಸಂಭಾವನೆ ವಿಚಾರವಾಗಿ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಲೈವ್ ಅಪ್ಡೇಟ್ಸ್‌ ಇಲ್ಲಿದೆ.

KPSC ವಿವಾದ: ಕೆಲ ಸೀಕ್ರೆಟ್ ಬಿಚ್ಚಿಟ್ಟು ಪ್ರಿಯಾಂಕ್‌ ಖರ್ಗೆಗೆ ಕುಮಾರಸ್ವಾಮಿ ತಿರುಗೇಟು

KPSC ಅಕ್ರಮ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ಮಾಡಿದ್ದಾರೆ. ಓಎಂಆರ್ ಶೀಟ್‌ ತಿದ್ದಿ ಅಕ್ರಮ ನೇಮಕಾತಿಗಳು ಸಾಬೀತಾಗಿವೆ. ಸಿಬಿಐ ತನಿಖೆ ಆಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡುವ ಮೊದಲು, ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಸವಾಲೆಸೆದಿದ್ದಾರೆ.

ಬಳ್ಳಾರಿ ಪಾದಯಾತ್ರೆಗೆ ಬಿಜೆಪಿಯಲ್ಲೇ ಅಪಸ್ವರ: ಇನ್ನೊಂದೆಡೆ ಕಡ್ಡಿ ಮುರಿಂತೆ ಹೇಳಿದ ಕುಮಾರಸ್ವಾಮಿ

ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿಯ ಆಗ್ರಹದಂತೆ ನಾಗೇಂದ್ರ ಸಚಿವ ಸ್ಥಾನವನ್ನು ತೊರೆದಿದ್ದಾರೆ. ಇದರೊಂದಿಗೆ ವಿಕ್ಷದ ಬೇಡಿಕೆ ಈಡೇರಿದೆ. ಆದರೂ ಬಳ್ಳಾರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಕ್ಷದಲ್ಲೇ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಹಿರಿಯರ ಅಪಸ್ವರದ ನಡುವೆಯೂ ಪಾದಯಾತ್ರೆಗೆ ವಿಜಯೇಂದ್ರ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಮಿತ್ರ ಪಕ್ಷದ ನಾಯಕ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ