HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್ ಮುಂದಿನ ನಡೆ ಏನು?
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್ರೀಯ ಪಕ್ಷ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಕುಮಾರಸ್ವಾಮಿಯವರು ದೆಹಲಿಯಿಂದ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Sunil MH
- Updated on: Feb 25, 2026
- 6:55 pm
BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ.
- Sunil MH
- Updated on: Feb 19, 2026
- 11:58 am
ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್ಡಿಕೆಗೆ ಬಿಜೆಪಿ ಹೈಕಮಾಂಡ್ನಿಂದ ಸಿಕ್ತು ಅಭಯ!
ಕರ್ನಾಟಕದಲ್ಲಿ ಎನ್ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಹೆಚ್ಡಿಕೆ ಮಾತಿಗೆ ಪೂರಕವಾಗಿ ರಾಧಾಮೋಹನ್ ಸ್ಪಂದಿಸಿದ್ದಾರೆ ಎನ್ನಲಾಗಿದೆ.
- Sunil MH
- Updated on: Feb 10, 2026
- 10:59 am
ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!
ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವುದನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಜೆಡಿಎಸ್ನಲ್ಲಿ ಇದ್ದುಕೊಂಡು ಹೀಗೆ ಮಾಡುವುದು ನಗೆಪಾಟಲಿಗೀಡಾಗುತ್ತದೆ ಎಂದು ಹೇಳಿದರು. ಒಂದು ನಿಷ್ಠೆ ಮತ್ತು ನಿಯತ್ತು ಇರಬೇಕು ಎಂದು ಜಿಟಿಡಿಗೆ ಅವರು ತಿವಿದಿದ್ದಾರೆ.
- Ram
- Updated on: Feb 8, 2026
- 1:50 pm
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ; ಕೇಂದ್ರದ ಅರಣ್ಯ ಸಚಿವರ ಜತೆ ಹೆಚ್ಡಿಕೆ ಮಾತುಕತೆ
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ, ವಿಶೇಷವಾಗಿ ಆನೆಗಳ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರ ಮೇಲೆ ವನ್ಯಜೀವಿಗಳಿಂದ ಆಗುತ್ತಿರುವ ತೀವ್ರ ಹಾನಿ ಮತ್ತು ಪ್ರಾಣಾಪಾಯದ ಬಗ್ಗೆ ಕುಮಾರಸ್ವಾಮಿ ಗಮನ ಸೆಳೆದರು. ಇದಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಲು ಯಾದವ್ ಅಧಿಕಾರಿಗಳಿಗೆ ಸೂಚಿಸಿದರು.
- Bhavana Hegde
- Updated on: Feb 4, 2026
- 2:37 pm
ಮಾಜಿ ಸಂಸದರೊಬ್ಬರದ್ದು ಎನ್ನಲಾದ ಆಡಿಯೋ ವೈರಲ್: ರಾಜಕೀಯ ರಹಸ್ಯಗಳು ಬಯಲು
ಮಾಜಿ ಸಂಸದರೊಬ್ಬರು ಮಾತಾಡಿದ್ದಾರೆ ಎನ್ನಲಾದ ಸ್ಫೋಟಕ ಆಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತನೊಂದಿಗೆ ಮಾತನಾಡುತ್ತಾ, ಹಲವು ರಾಜಕೀಯ ರಹಸ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಕೆಲವ ವಿರುದ್ಧ ಗಂಭೀರ ಆರೋಪ ಕೂಡ ಮಾಡಿದ್ದಾರೆ.
- Dileep CP
- Updated on: Jan 28, 2026
- 9:56 pm
ರೈತರ ಪ್ರತಿಭಟನೆ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಬಿಡದಿಯ ಬೈರಮಂಗಲದಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ, ಒಬ್ಬ ರೈತ ಮಹಿಳೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಭಾವನಾತ್ಮಕವಾಗಿ ಮನವಿ ಮಾಡಿದರು. 2006ರ ಭೂಸ್ವಾಧೀನ ನೀತಿಯಿಂದಾದ ತೊಂದರೆಗಳು ಮತ್ತು ರಾಜಕೀಯ ನಾಯಕರ ನಿರ್ಲಕ್ಷ್ಯವನ್ನು ಎತ್ತಿಹಿಡಿದರು. "ನಮ್ಮನ್ನು ಉಳಿಸಲು ನೀವೇ ನಮ್ಮ ಕೊನೆಯ ಭರವಸೆ" ಎಂದು ಸೆರಗೊಡ್ಡಿ ಬೇಡಿಕೊಂಡರು.
- Prashantha B
- Updated on: Jan 25, 2026
- 7:33 pm
ಆಗ ವೀರಪ್ಪನ್ ಕೇಸ್ನಲ್ಲಿ ಗಿಫ್ಟ್: ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್
ಹಾಸನ ಜೆಡಿಎಸ್ ಸಮಾವೇಶದಲ್ಲಿ ಎಚ್.ಡಿ. ಕುಮಾರಸ್ವಾಮಿ ದೇವೇಗೌಡರ ರೈತಪರ ಯೋಜನೆಗಳು ಮತ್ತು ನೀರಾವರಿ ಕೊಡುಗೆಗಳನ್ನು ಸ್ಮರಿಸಿದರು. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಗಿಂತ ದೇವೇಗೌಡರ ಕನಸು ಮುಖ್ಯ ಎಂದರು. ವೀರಪ್ಪನ್ ಪ್ರಕರಣದಲ್ಲಿ ಪೊಲೀಸರಿಗೆ 30 ಲಕ್ಷ ರೂಪಾಯಿ ವರ್ಗಾವಣೆ ಕುರಿತು ನೋವು ವ್ಯಕ್ತಪಡಿಸಿ, ತನಿಖಾ ವಿಧಾನಗಳನ್ನು ಪ್ರಶ್ನಿಸಿ ಕಾಂಗ್ರೆಸ್ಗೆ ಸವಾಲೆಸೆದರು.
- Manjunath KB
- Updated on: Jan 24, 2026
- 7:59 pm
ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್ಡಿಕೆ ಹೇಳಿದ್ದಿಷ್ಟು
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಆದರೆ, ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸುತ್ತಾ ಇದ್ದಾರೆ. ಇದರೊಂದಿಗೆ ದಿಲ್ಲಿಯಲ್ಲಿ ದೇಹವಿದ್ದರೂ ಮನಸ್ಸು ಮಾತ್ರ ಕರ್ನಾಟಕದಲ್ಲೇ ಇದೆ. ಇದಕ್ಕೆ ಪೂರಕವೆಂಬಂತೆ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ರೀ ಎಂಟ್ರಿ ನೀಡುವ ಬಗ್ಗೆ ಸ್ಫೋಟಕ ಸುಳಿವು ನೀಡಿದ್ದಾರೆ.
- Ramesh B Jawalagera
- Updated on: Jan 23, 2026
- 7:57 pm
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ
ಇದೇ ಜನವರಿ 24ರಂದು ಜೆಡಿಎಸ್ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್ಡಿ ರೇವಣ್ಣ ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು...ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ ಅಡ್ಡ ಬಾಯಿ ಹಾಕಿದರು. ಇದರಿಂದ ಕುಮಾರಸ್ವಾಮಿ ಸ್ವಲ್ಪ ಸುಮ್ನೆ ಇರು ಎಂದು ಕೈ ಸಂಜ್ಞೆ ಮಾಡಿದರು. ಆಗ ರೇವಣ್ಣ ಸೈಲೆಂಟ್ ಮೂಡಿಗೆ ಜಾರಿದರು.
- Ramesh B Jawalagera
- Updated on: Jan 21, 2026
- 2:38 pm
ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ-JDS ಮೈತ್ರಿಯಲ್ಲಿ ಭಿನ್ನರಾಗ: ಹೆಚ್ಡಿಕೆ ಮುಂದಿನ ನಡೆ ಏನು?
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ವಿಚಾರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಜೆಡಿಎಸ್ ಎಲ್ಲಾ ಚುನಾವಣೆಗಳಲ್ಲೂ ಒಟ್ಟಾಗಿ ಬಯಸಿದರೆ, ಕೆಲವು ಬಿಜೆಪಿ ನಾಯಕರು ಸ್ಥಳೀಯ ಮಟ್ಟದಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಈ ವಿರೋಧ ಎದುರಾಗಿದೆ ಎನ್ನಲಾಗಿದೆ. ಆದರೆ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಸಭೆ ನಡೆಸಿ ಈ ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಮುಂದಾಗಿದ್ದಾರೆ.
- Sunil MH
- Updated on: Jan 14, 2026
- 12:36 pm
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್ಡಿ ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯರನ್ನು ಲೀಸ್ ಆಧಾರಿತ ಮುಖ್ಯಮಂತ್ರಿ ಎಂದಿದ್ದಾರೆ. ಮನರೇಗಾ ಯೋಜನೆ ಬದಲಾವಣೆ ಮತ್ತು ಅವ್ಯವಹಾರಗಳ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಬಹಿರಂಗ ಚರ್ಚೆಯ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಬದಲಾವಣೆ ಮಾಡಲಾಗಿದೆಯೇ ಹೊರತು ಹೆಸರು ಬದಲಾವಣೆಗೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.
- Gangadhar Saboji
- Updated on: Jan 10, 2026
- 4:22 pm