HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತದ ಹೊಗೆ , ದೆಹಲಿಯಲ್ಲಿ ಮಹತ್ವದ ಬೆಳವಣಿಗೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸೃಷ್ಟಿಸಿದ್ದ ಕುರ್ಚಿ ಕಾಳಗ ಸದ್ಯಕ್ಕೆ ಶಾಂತವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಅವರ ಮನೆಗೆ ಇವರು, ಇವರ ಮನೆಗೆ ಅವರು ಹೋಗಿ ತಿಂಡಿ ತಿಂದು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಹೀಗಾಗಿ ಕೈ ಬಿಕ್ಕಟ್ಟು ಶಾಂತವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಮತ ಮತ್ತೆ ಹೊಗೆಯಾಡಲು ಶುರುವಾಗಿದೆ.
- Ramesh B Jawalagera
- Updated on: Dec 2, 2025
- 10:50 pm
ಸ್ವಾಮೀಜಿಗಳು ಇಲ್ಲದೇ ಹೋಗಿದ್ರೆ ಸಿಎಂ ಆಗ್ತಿದ್ರಾ ದೇವೇಗೌಡ್ರು? ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ಟಾಂಗ್
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುಮಾರಸ್ವಾಮಿ ಸರ್ಕಾರ ಉಳಿಸಲು ನಿಷ್ಠೆಯಿಂದ ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ. ಸ್ವಾಮೀಜಿಗಳ ಬೆಂಬಲದ ಕುರಿತು ಹೆಚ್ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದು, ಸ್ವಾಮೀಜಿ ಇಲ್ಲದೆ ದೇವೇಗೌಡರು ಸಿಎಂ ಆಗ್ತಿದ್ರಾ? ಎಂದು ಪ್ರಶ್ನಿಸಿದ್ದಾರೆ.
- Anil Kalkere
- Updated on: Nov 30, 2025
- 12:41 pm
ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಎಚ್ಡಿಕೆ ಪ್ರಸ್ತಾಪ ಪರಿಗಣಿಸಿದ ಕೇಂದ್ರ ಸರ್ಕಾರ
Piyush Goyal says yes for the proposed Industrial corridor development programme in Karnataka: ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು, ಬೀದರ್ ಜಿಲ್ಲೆಗಳನ್ನು ಒಳಗೊಂಡ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಒಲವು ತೋರಿದೆ. ಈ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವ ಈ ಕಾರಿಡಾರ್ ಯೋಜನೆಯನ್ನು ಎಚ್ಡಿ ಕುಮಾರಸ್ವಾಮಿ ಪ್ರಸ್ತಾಪಿಸಿದ್ದರು. ಎರಡು ವಾರದ ಹಿಂದೆ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಅವರನ್ನು ಭೇಟಿಯಾಗಿ ಈ ಕಾರಿಡಾರ್ ಯೋಜನೆಯ ಪ್ರಸ್ತಾಪ ಮಾಡಿದ್ದರು.
- Vijaya Sarathy SN
- Updated on: Nov 26, 2025
- 3:36 pm
ಮುಂದಿನ ಆರೇಳು ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು: ಭವಿಷ್ಯ ನುಡಿದ ಹೆಚ್ಡಿ ಕುಮಾರಸ್ವಾಮಿ
ಮುಂದಿನ ಆರು ಏಳು ತಿಂಗಳಲ್ಲಿ ಕರ್ನಾಟಕದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜನತೆ ಈಗಾಗಲೇ ಬೇಸತ್ತಿದ್ದು, ಸರ್ಕಾರವನ್ನು ಕಿತ್ತೊಗೆಯಲು ಕಾಯುತ್ತಿದ್ದಾರೆ ಎಂದರು.
- Anil Kalkere
- Updated on: Nov 22, 2025
- 8:37 pm
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ: ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ
ಜೆಡಿಎಸ್ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ . ಅದರಂತೆ ನಾಳೆ (ನವೆಂಬರ್ 21) ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡುವ ಸಾಧ್ಯತೆಗಳಿವೆ.
- Ramesh B Jawalagera
- Updated on: Nov 20, 2025
- 7:21 pm
ಕರ್ನಾಟಕದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮನವಿ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯೆಲ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮಂಡ್ಯ, ಬೀದರ್, ರಾಯಚೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಹಾಸನ, ಕೋಲಾರ, ಮಂಗಳೂರು ಮತ್ತು ಚಾಮರಾಜನಗರಗಳ ವಿರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಅಥವಾ NICDP ಚೌಕಟ್ಟಿನ ಅಡಿಯಲ್ಲಿ ಕೈಗಾರಿಕಾ ಉದ್ಯಾನವನಗಳನ್ನು ಸ್ಥಾಪಿಸುವುದು ಈ ಪ್ರಸ್ತಾವನೆಯಲ್ಲಿ ಸೇರಿದೆ.
- Sushma Chakre
- Updated on: Nov 13, 2025
- 7:04 pm
ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ
ಜಾತ್ಯತೀತ ಜನತಾದಳ ಪಕ್ಷ (ಜೆಡಿಎಸ್) 25 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದಳಪತಿಗಳು ರಾಜ್ಯಾದ್ಯಂತ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ , ಕೇಂದ್ರ ಸಚಿವರೂ ಆಗಿರುವ ಎಚ್ ಡಿ ಕುಮಾರಸ್ವಾಮಿ ಅವರು ನಾಯಕರು ಸಭೆ ಮಾಡಿದ್ದಾರೆ. ಇದೇ ವೇಳೆ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಕೋರ್ ಕಮಿಟಿ ಪುನರ್ ರಚನೆ ಮಾಡಿದ್ದು, ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಿಂದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ.
- Ramesh B Jawalagera
- Updated on: Nov 10, 2025
- 6:33 pm
ಜೆಡಿಎಸ್ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು
ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.
- Ramesh B Jawalagera
- Updated on: Nov 10, 2025
- 5:49 pm
ವಿಧಾನಸೌಧದಲ್ಲೇ ಭಯೋತ್ಪಾದಕರನ್ನಿಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ಮಾತನಾಡ್ತಾರೆ: ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ರಾಜಾತಿಥ್ಯದ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಇದು ಹೊಸ ಬೆಳವಣಿಗೆಯಲ್ಲ ಎಂದಿರುವ ಅವರು, ಹಿಂದೆ ಅಧಿಕಾರಿಗಳ ನಡುವೆ ನಡೆದ ಘರ್ಷಣೆ ರಾಜಕಾರಣವಾಗಿತ್ತು ಎಂದು ನೆನಪಿಸಿದ್ದಾರೆ. ಮಾಧ್ಯಮಗಳಲ್ಲಿ ಎಲ್ಲಾ ಮಾಹಿತಿ ಲಭ್ಯವಿರುವಾಗ, ಗೃಹ ಸಚಿವರು ಘೋಷಿಸಿರುವ ತನಿಖೆ ಕೇವಲ ಸಮಯ ವ್ಯರ್ಥ ಎಂದು ಅವರು ಪ್ರಶ್ನಿಸಿದ್ದಾರೆ.
- Ganapathi Sharma
- Updated on: Nov 10, 2025
- 1:59 pm
ಸಮರಕ್ಕೂ ಮುನ್ನವೇ ಕೈ ಮುಂದೆ ಶಸ್ತ್ರ ತ್ಯಾಗ: ಭದ್ರಕೋಟೆ ಮಂಡ್ಯದಲ್ಲೇ ಮಂಕಾಯ್ತಾ ಜೆಡಿಎಸ್?
ಮಂಡ್ಯ ಜೆಡಿಎಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿದೆ. ಆದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಿಲ್ಲವಾದರೂ ಲೋಕಸಭಾ ಚುನಾವಣೆಯಲ್ಲಿ ಎಚ್ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಈ ಮೂಲಕ ಮಂಡ್ಯ ಜಿಲ್ಲೆ ಜೆಡಿಎಸ್ ಪಾಲಿಗೆ ಶಕ್ತಿ ಕೇಂದ್ರ ಎಂದು ಸಾಬೀತು ಮಾಡಿದ್ದರು. ಕುಮಾರಸ್ವಾಮಿ ಕ್ಷೇತ್ರದ ಹಾಲಿ ಎಂಪಿ ಆಗಿದ್ದರೂ ಸಹ ಜಿಲ್ಲೆಯಲ್ಲಿ ಜೆಡಿಎಸ್ ಗೆ ಮುಖಭಂಗವಾಗಿದೆ.
- Dileep CP
- Updated on: Oct 29, 2025
- 10:46 pm