AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್​​ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ

ಮಾಜಿ ಪ್ರಧಾನಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಕುರಿತು ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೇವೇಗೌಡರು ಟಿಕೆಟ್‌ಗೆ ಅರ್ಜಿಯನ್ನೇ ಹಾಕಿರಲಿಲ್ಲ ಎಂದಿರುವ ಅವರು, ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ-ಜೆಡಿಎಸ್​​ ಮೈತ್ರಿ ಒಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​ಗೆ ಬಿಜೆಪಿ-ಜೆಡಿಎಸ್ ಶಾಕ್

ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿ ಮಾಸ್ಟರ್‌ಸ್ಟ್ರೋಕ್ ನೀಡಿದೆ. ಇದು ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ನಿರೀಕ್ಷೆಗೆ ದೊಡ್ಡ ತಿರುಗೇಟು ನೀಡಿದ್ದು, ಚುನಾವಣೆ ಕಣವನ್ನು ರಂಗೇರಿಸಿದೆ. ಪರಿಷತ್ ಚುನಾವಣೆ ಲೆಕ್ಕಾಚಾರ ಹೇಗಿದೆ ಎಂಬ ವಿವರ ಇಲ್ಲಿದೆ.

  • Sunil MH
  • Updated on: Jun 8, 2026
  • 12:40 pm

ಕ್ಷೇತ್ರ ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ? ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಕರ್ನಾಟದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 18ರಂದು ಚುನಾವಣೆ ನಡೆಯಲಿದೆ. ಆದ್ರೆ, ಈ ನಾಲ್ಕು ಸ್ಥಾನಗಳ ಪೈಕಿ 3 ಕಾಂಗ್ರೆಸ್ ಇನ್ನುಳಿದ ಒಂದು ಸ್ಥಾನಕ್ಕೆ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಡೆವೆ ತೀವ್ರ ಪೈಪೋಟಿ ಶುರುವಾಗಿದ್ದು, ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡರನ್ನೇ ಮುಂದುವರಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಇನ್ನೊಂದೆಡೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬೇರೆದೊಂದು ಹೆಸರು ಶಿಫಾರಸ್ಸು ಮಾಡಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಸುಮಲತಾ ಅಂಬರೀಶ್ ಅವರ ಹೆಸರು ಮುನ್ನಲೆಗೆ ಬಂದಿದೆ.

1956ರಿಂದ ರಾಜ್ಯದಲ್ಲಿ ಪೂರ್ಣಾವಧಿ ಸಿಎಂ ಆಗಿದ್ದು ಕೇವಲ ಮೂವರು!: ಉಳಿದವರದ್ದೆಲ್ಲ ಅಲ್ಪಾವಧಿ ಅಧಿಕಾರ

ಕರ್ನಾಟಕ ಸಿಎಂ ರಾಜೀನಾಮೆ ಬೆನ್ನಲ್ಲೇ ರಾಜ್ಯ ರಾಜಕೀಯದ ಇತಿಹಾಸ ಮತ್ತೆ ಮುಂಚೂಣಿಗೆ ಬಂದಿದೆ. 1956ರಿಂದ ಇಂದಿನವರೆಗೆ ಕೇವಲ ಮೂವರಷ್ಟೇ ಪೂರ್ಣಾವಧಿ ಸಿಎಂ ಆಗಿದ್ದು, ಆ ಪೈಕಿ ಸಿದ್ದರಾಮಯ್ಯ ಕೂಡ ಒಬ್ಬರು. ಉಳಿದಂತೆ ಕರ್ನಾಟಕ ಕಂಡ ಎಲ್ಲ ಸಿಎಂಗಳು ಅಲ್ಪಾವಧಿಯ ಅಧಿಕಾರ ನಡೆಸಿದ್ದು, ಯಾಕಾಗಿ ಅವರು ಅಧಿಕಾರ ಕಳೆದುಕೊಂಡಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು... ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.

ಬಿಜೆಪಿ ಸೇರಿದ ರಾಜಣ್ಣ: ಹಿರಿಯೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣು, ಉಪಚುನಾವಣೆ ಅಖಾಡಕ್ಕೆ ರಂಗು

ಕಾಂಗ್ರೆಸ್‌ನ (Congress) ಹಿರಿಯ ನಾಯಕ ಹಾಗೂ ಸಚಿವ ಡಿ. ಸುಧಾಕರ್ (D Sudhakar) ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Hiriyur By Election) ಎದುರಾಗಿದ್ದು, ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ಕ್ಷೇತ್ರದಲ್ಲಿ ಉಪಚುನಾವಣೆಯ ರಾಜಕೀಯ ಕಾವೇರಿದೆ. ಯಾವ ಪಕ್ಷದಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಜಿಟಿ ದೇವೇಗೌಡಗೆ ಬಿಗ್ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು ಜೆಡಿಎಸ್​​ ಸಮಾವೇಶ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಜಿ.ಟಿ. ದೇವೇಗೌಡರನ್ನು ದೂರ ಇಟ್ಟು ಅವರ ಪುತ್ರ ಜಿ.ಟಿ. ಹರೀಶ್ ಗೌಡ ನೇತೃತ್ವದಲ್ಲಿ ನಡೆದಿದೆ. ಎಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಭಾಗವಹಿಸಿದ್ದರೂ, ಜಿ.ಟಿ.ಡಿ. ಹಾಗೂ ಎಚ್.ಡಿ. ರೇವಣ್ಣ ಅವರ ಭಾವಚಿತ್ರಗಳು ಬ್ಯಾನರ್‌ಗಳಿಂದ ಮಾಯವಾಗಿವೆ. ಈ ಬೆಳವಣಿಗೆ ಜೆಡಿಎಸ್‌‌ನಲ್ಲಿ ಆಳವಾಗುತ್ತಿರುವ ಭಿನ್ನಮತವನ್ನು ಸೂಚಿಸುತ್ತದೆ.

  • Ram
  • Updated on: May 17, 2026
  • 3:52 pm

ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಹೆಚ್‌ಡಿ ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ಯೋಜನೆಯನ್ನು ಟೀಕಿಸಿದ್ದಾರೆ. ಪ್ರಸ್ತುತ ಸರ್ಕಾರ ರೈತರ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಡಿಕೆಶಿ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದನ್ನು ನೆನಪಿಸಿಕೊಂಡು, ರೈತರ ಪರವಾಗಿ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ!

ಎಚ್​​ಡಿ ಕುಮಾರಸ್ವಾಮಿಯೊಂದಿಗಿನ ಮನಸ್ತಾಪದಿಂದ ಜೆಡಿಎಸ್ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಜಿಟಿ ದೇವೇಗೌಡ ಅವರು ಏಕಾಏಕಿ ಎಚ್​​ಡಿ ದೇವೇಗೌಡ ಅವರನ್ನ ಭೇಟಿ ಮಾಡಿದ್ದಾರೆ. ಕೋರ್ ಕಮಿಟಿಯಿಂದ ಗೇಟ್ ಪಾಸ್ ನೀಡಿದ ಬಳಿಕ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಮಧ್ಯೆ ಜಿಟಿಡಿ, ದೇವೇಗೌಡ್ರನ್ನ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಇನ್ನು ಬಹುದಿನಗಳ ನಂತರ ದೇವೇಗೌಡರ ಭೇಟಿ ಬಳಿಕ ಜಿಟಿಡಿ ತಮ್ಮ ಮುಂದಿನ ರಾಜಕೀಯ ನಿಲುವು ಸ್ಪಷ್ಟಪಡಿಸಿದ್ದಾರೆ.

ತಂದೆ ಬಗ್ಗೆ ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್​​ ಪುತ್ರನಿಗೆ JDS ಕೌಂಟರ್​​

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಳಿದ್ದ ಪ್ರಶ್ನೆಗಳು ರಾಜಕೀಯ ವಿವಾದಕ್ಕೆ ಕಾರಣವಾಗಿವೆ. "ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಆರೋಗ್ಯ ಮುಚ್ಚಿಟ್ಟಿದ್ದಾರೆಯೇ?" ಎಂಬ ಹೆಚ್‌ಡಿಕೆ ಹೇಳಿಕೆಗೆ ಸುಧಾಕರ್ ಪುತ್ರ ನೋವು ವ್ಯಕ್ತಪಡಿಸಿದ್ದರು. ಆದರೆ, ಈ ವಿಡಿಯೋ ಸ್ಕ್ರಿಪ್ಟೆಡ್ ಎಂದ ಜೆಡಿಎಸ್, ಸುಧಾಕರ್ ಆರೋಗ್ಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ರಹಸ್ಯವನ್ನು ಪ್ರಶ್ನಿಸಿದೆ.

ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಸಚಿವ ಜಮೀರ್‌ ಅಹ್ಮದ್‌ ಖಾನ್ ಜೆಡಿಎಸ್‌ಗೆ ವಾಪಸಾಗುತ್ತಾರೆ ಎಂಬ ಊಹಾಪೋಹಗಳನ್ನ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಅದೆಲ್ಲವೂ ಗಾಳಿ ಸುದ್ದಿ ಎಂದು ಹೇಳುವ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ. ಅಲ್ಲದೇ ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ

ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.