AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

ಬಿಡದಿ ಟೌನ್​ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್​ಡಿ ಕುಮಾರಸ್ವಾಮಿ ತಂತ್ರ

ಬಿಡದಿ ಟೌನ್​ಶಿಪ್ ಯೋಜನೆ ವಿರುದ್ಧ ರಾಮನಗರದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಅಪ್ಪಿಕೋ ಚಳುವಳಿ ಮೂಲಕ ಮರಗಳನ್ನು ಉಳಿಸಲು ಆಗ್ರಹಿಸಿದ ರೈತರು, ಸರ್ಕಾರದ ಗಮನ ಸೆಳೆದರು. ಈ ಮಧ್ಯೆ, ಕುಮಾರಸ್ವಾಮಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದು,ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮರ ತಾರಕಕ್ಕೇರಿದೆ.

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ: ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ ಘಟನೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ. ಕುಮಾರಸ್ವಾಮಿ, ಕಾರ್ಯಕರ್ತರು ಪ್ರಚೋದನಾಕಾರಿ ಹೇಳಿಕೆಗಳಿಗೆ ಉದ್ರೇಕಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಚಪ್ಪಲಿ ತೂರುವಿಕೆ ನಮ್ಮ ಸಂಸ್ಕೃತಿಯಲ್ಲ, ಶಾಂತಚಿತ್ತರಾಗಿರಬೇಕು. ಸಮಾಜದಲ್ಲಿ ಅಶಾಂತಿಗೆ ಅವಕಾಶ ನೀಡಬೇಡಿ ಎಂದ ಅವರು, ಚರ್ಚೆಗೆ ಸಿದ್ಧ ಎಂದು ಪತ್ರ ಬರೆದಿರುವುದಾಗಿ ತಿಳಿಸಿದರು.

  • Sunil MH
  • Updated on: Jun 28, 2026
  • 3:58 pm

ಕಾಂಗ್ರೆಸ್​​ ಸೇರ್ತಾರ ಜಿ.ಟಿ. ದೇವೇಗೌಡ?: ಸ್ವತಃ ಸ್ಪಷ್ಟನೆ ಕೊಟ್ಟ ಜೆಡಿಎಸ್​​ ಶಾಸಕ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಬೇಕೆಂದು ಮೊದಲು ಹೇಳಿದ್ದೇ ನಾನು ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಮೈಸೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಸೇರುವ ವದಂತಿಗಳನ್ನು ಅಲ್ಲಗಳೆದ ಅವರು, ತಾವು ಕಳೆದ ಒಂದೂವರೆ ವರ್ಷದಿಂದ ಕುಮಾರಸ್ವಾಮಿ ಜೊತೆ ಮಾತಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣದ ಭಿನ್ನಾಭಿಪ್ರಾಯಗಳು ಸಾಮಾನ್ಯ ಎಂದಿದ್ದಾರೆ.

  • Ram
  • Updated on: Jun 28, 2026
  • 11:04 am

ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ

ಬಿಡದಿ ಟೌನ್​​ಶಿಪ್ ಯೋಜನೆ ಪರ, ವಿರುದ್ಧ ರೈತರು ರಣಕಹಳೆ ಮೊಳಗಿಸಿದ್ದಾರೆ. ರಾಜಕೀಯ ತಿರುವು ಕೂಡ ಪಡೆದುಕೊಂಡಿದೆ. ಅದರಲ್ಲೂ ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್​​ ಮಧ್ಯೆ ಜಟಾಪಟಿ ಜೋರಾಗಿದೆ. ರೈತರ ಜೊತೆ ಚರ್ಚಿಸೋಣ ಎಂದು ಸವಾಲು ಹಾಕಿದ್ದ ಕುಮಾರಸ್ವಾಮಿ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟಿದ್ದರು. ಈ ವೇಳೆ ಯೋಜನೆ ಪರ ಪ್ರತಿಭಟನಾನಿರತ ರೈತರಿಂದ ಹೈಡ್ರಾಮವೇ ನಡೆದಿದೆ.

‘ಜೈಲಿಗೆ ಹೋಗಲು ಸಿದ್ಧರಾಗಿ’: ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, "ಜೈಲಿಗೆ ಹೋಗಲು ಸಿದ್ಧರಾಗಿ" ಎಂಬ ಸಂದೇಶವನ್ನು ಪ್ರಮುಖವಾಗಿ ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೆಚ್.ಡಿ. ಕುಮಾರಸ್ವಾಮಿ ಎಂದು ಎಲ್ಲರಿಗೂ ಗೊತ್ತು ಎಂದೂ ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಪೋಸ್ಟರ್‌ಗಳಲ್ಲಿ ಹಾಸ್ಯ ಮಿಶ್ರಿತ ಸಂಭಾಷಣೆಯನ್ನೂ ಚಿತ್ರಿಸಲಾಗಿದೆ. ಈ ಪೋಸ್ಟರ್ ವಾರ್ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಬಿಡದಿ ಟೌನ್​​​​ ಶಿಪ್: ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಬಿಡದಿ ಟೌನ್‌ಶಿಪ್ ವಿವಾದವು ಡಿಕೆ ಶಿವಕುಮಾರ್ ಮತ್ತು ಹೆಚ್‌ಡಿ ಕುಮಾರಸ್ವಾಮಿ ನಡುವೆ ರಾಜಕೀಯ ಕದನಕ್ಕೆ ವೇದಿಕೆಯಾಗಿದೆ. ಕುಮಾರಸ್ವಾಮಿ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಆಹ್ವಾನಿಸಿದರೆ, ಡಿಕೆ ಶಿವಕುಮಾರ್ ಜೂನ್ 26ಕ್ಕೆ ವಿಧಾನಸೌಧಕ್ಕೆ ಬನ್ನಿ ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ ಜೂನ್ 27ರಂದು ಬಿಡದಿ ಅಥವಾ ಬೈರಮಂಗಲದಲ್ಲಿ ಚರ್ಚೆಗೆ ಆಹ್ವಾನಿಸಿದ್ದಾರೆ.

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​: ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಹೆಚ್​​.ಡಿ. ಕುಮಾರಸ್ವಾಮಿ ಕಿವಿಮಾತು

ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ಮುಂದಾದ ಬಿಜೆಪಿಗೆ, ಈ ವಿಚಾರವನ್ನು ಇಲ್ಲಿಗೇ ಕೈಬಿಡುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ. ಬಿಜೆಪಿ ಹಿರಿಯ ಶಾಸಕ ಸುರೇಶ್ ಕುಮಾರ್ ಕೂಡ ಈ ಬಗ್ಗೆ ತಿಳಿಹೇಳಿದ್ದು, ರಾಜಕೀಯದಲ್ಲಿ ಆಗಿರುವ ಅಪಚಾರಗಳಿಗೆ ರಾಜಕೀಯ ಉತ್ತರ ಕಂಡುಕೊಳ್ಳಬೇಕು. ಧರ್ಮಸ್ಥಳವು ನಾಡಿನ ಭಕ್ತರ ಶ್ರದ್ಧಾ ಕೇಂದ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಕಾಪಾಡಬೇಕಿದೆ ಎಂದು ತಿಳಿಸಿದ್ದಾರೆ.

  • Sunil MH
  • Updated on: Jun 22, 2026
  • 12:59 pm

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗೊತ್ತಾ?

ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್​​​ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್​ಯಕ್ಷ ಎಚ್​​ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್‌ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್​​ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್​ ಮನೆ ಸೇರಿಕೊಂಡಿದ್ದಾರೆ.

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ

ಮೇಕೆದಾಟು ಯೋಜನೆಗೆ ತಮಿಳುನಾಡಿನ ನಿರಂತರ ಆಕ್ಷೇಪಗಳಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ ಈ ಯೋಜನೆ ನಿರ್ಣಾಯಕವಾಗಿದೆ. ದೇವೇಗೌಡರ ನಾಯಕತ್ವದಲ್ಲಿ ಪ್ರಧಾನಿಗಳಿಗೆ ಮನವಿ ಸಲ್ಲಿಸಿದ್ದರೂ, ತಮಿಳುನಾಡು ಸಹಮತ ನೀಡುತ್ತಿಲ್ಲ. ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಸಹೋದರತ್ವದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ

ಮಂಡ್ಯದ ಪಿಇಟಿ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಕಪಾಲಭಾತಿ ಮತ್ತು ಅನುಲೋಮ-ವಿಲೋಮ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಸನಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ? ಹೆಚ್​ಡಿ ಕುಮಾರಸ್ವಾಮಿ ಏನಂದರು ನೋಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಬಿರುಕು ಬಿಡಲಿದೆ ಎಂಬ ವದಂತಿಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಮೈತ್ರಿ ಮುರಿಯುವುದಿಲ್ಲ. ಅಭ್ಯರ್ಥಿ ನಿಲ್ಲಿಸುವ ಮುನ್ನವೇ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸಿದ್ದು, ಅಡ್ಡಮತದಾನದ ಕುರಿತು ಸಿಟಿ ರವಿ ನೇತೃತ್ವದ ತಂಡ ಪರಿಶೀಲಿಸುತ್ತಿದೆ ಎಂದರು.

ಅಡ್ಡಮತದಾನ: ಜೆಡಿಎಸ್​​​, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ?

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದೆ. ಕಾಂಗ್ರೆಸ್ ನಾಯಕರು ಗೆಲುವಿನ ನಗೆ ಬೀರಿದ್ರೆ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಒಗ್ಗಟ್ಟು ಪ್ರದರ್ಶಿಸಬೇಕಿದ್ದ ವಿಪಕ್ಷಗಳ ಶಾಸಕರು ಮೈತ್ರಿಗೆ ಕೈಕೊಟ್ಟಿದ್ದಾರೆ. ಈ ಕುರಿತು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಮಹತ್ವರ ರಾಜಕೀಯ ಬೆಳೆವಣಿಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.