AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

ಸಿಎಂ ಸಿದ್ದರಾಮಯ್ಯಗೆ ಹೆಚ್​​.ಡಿ. ಕುಮಾರಸ್ವಾಮಿ ಸವಾಲ್​: ಕೇಂದ್ರ ಸಚಿವ ಹೇಳಿದ್ದೇನು?

ದಾವಣಗೆರೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಪುತ್ರನ ರಾಜಕೀಯ ಪ್ರವೇಶವನ್ನು ಪ್ರಶ್ನಿಸಿದ ಅವರು, ತಮ್ಮ ಕುಟುಂಬ ರಾಜಕೀಯ ಭಿನ್ನವಾಗಿದೆ ಎಂಬ ಸಮಜಾಯಿಷಿ ನೀಡಿದ್ದಾರೆ. ಅಲ್ಲದೆ, ಅಧಿಕಾರದ ಅಹಂಕಾರ ಮತ್ತು ನಿಗಮಗಳಲ್ಲಿನ ಭ್ರಷ್ಟಾಚಾರದ ಕುರಿತು ಟೀಕೆ ಮಾಡಿದ್ದಾರೆ.

ಕುಮಾರಸ್ವಾಮಿ-ಲೋಕಾಯುಕ್ತ ಎಡಿಜಿಪಿ ಜಟಾಪಟಿ ಕ್ಲೈಮ್ಯಾಕ್ಸ್ ಹಂತಕ್ಕೆ: ರಾಜಿ ಸಂಧಾನಕ್ಕೆ ಸಮ್ಮತಿ

ಭಾರೀ ಸಂಚಲನ ಮೂಡಿಸಿದ್ದ ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಅವರಿಗೆ ಮತ್ತು ಅವರ ಕುಟುಂಬಕ್ಕೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ಬೆದರಿಕೆ ಹಾಕಿರುವ ಪ್ರಕರಣ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಕರ್ನಾಟಕ ಹೈಕೋರ್ಟ್​ ಸಲಹೆ ಮೇರೆಗೆ ಈ ಪ್ರಕರಣ ​ರಾಜಿ ಸಂಧಾನ ಹಂತಕ್ಕೆ ಬಂದಿದೆ. ಹಾಗಾದ್ರೆ, ಕೋರ್ಟ್​ ಹೇಳಿದ್ದೇನು? ಏನಿದು ಪ್ರಕರಣ ಎನ್ನುವ ವಿವರ ಇಲ್ಲಿದೆ.

ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​.ಡಿ. ಕುಮಾರಸ್ವಾಮಿ?

ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ನಡೆಯುವ ಪ್ರಚಾರ ಕಾರ್ಯಗಳ ಕುರಿತು ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಡೆದ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅವರು ಪ್ರಚಾರಕ್ಕಾಗಿ ಸಮಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ಕೇಂದ್ರ ಸರ್ಕಾರವು ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದೆ. ಸಚಿವ ಕುಮಾರಸ್ವಾಮಿ ಅವರ ಮನವಿ ಮೇರೆಗೆ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸ್ಪಂದಿಸಿದ್ದಾರೆ. ಸೋಮವಾರದಿಂದಲೇ ತಂಬಾಕು ಖರೀದಿ ಆರಂಭವಾಗಲಿದ್ದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

2 ವರ್ಷದ ಮಗುವಿಗೆ ಬಂತು ಮಾರಕ ಕಾಯಿಲೆ! ನೆರವಿನ ಭರವಸೆ ನೀಡಿದ ಕೇಂದ್ರ ಸಚಿವ ಹೆಚ್​ಡಿಕೆ

ಮಂಡ್ಯದ ಎರಡು ವರ್ಷದ ಸಾಯಿ ಚಿರಾಗ್ ಎಂಬ ಮಗು ಅಪರೂಪದ ಎಸ್‌ಎಂಎ (SMA) ಕಾಯಿಲೆಯಿಂದ ಬಳಲುತ್ತಿದೆ. 16 ಕೋಟಿ ರೂ. ಚಿಕಿತ್ಸೆಗೆ ಬೇಕಾಗಿದ್ದು, ಪೋಷಕರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದರು. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಪರಿಹಾರ ನಿಧಿ ಮೂಲಕ ಹಾಗೂ ವೈಯಕ್ತಿಕವಾಗಿ ನೆರವು ನೀಡುವುದಾಗಿ ಭರವಸೆ ನೀಡಿದ್ದು, ಮಗುವಿನ ಚಿಕಿತ್ಸೆಗೆ ಆಸರೆಯಾಗಿದ್ದಾರೆ.

ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​

ಮಂಡ್ಯದ ವಿಸಿ ಫಾರಂನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ 14 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 14ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡೆಯಲ್ಲಿ ಉತ್ತಮ ಅವಕಾಶ ಹಾಗೂ ಸೌಲಭ್ಯಗಳನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದು ಮಂಡ್ಯದ ಕ್ರೀಡಾ ಮೂಲಸೌಕರ್ಯಕ್ಕೆ ದೊಡ್ಡ ಉತ್ತೇಜನ ನೀಡಲಿದೆ.

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ತಿರುಗೇಟು ಕೊಟ್ಟಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಸಿ,ಕುಂಬಳಕಾಯಿ ಕಳ್ಳ ಅಂದ್ರೆ ನಾನೆ ನಾನೆ ಅಂತ ಹೆಗಲು ಮುಟ್ಟಿಕೊಂಡ್ರೆ ಏನು ಮಾಡ್ಲಿ ಎಂದು ಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ‌ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂಗ್ರೆಸ್ ನಲ್ಲಿ‌ ಸ್ವಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗ್ತಿದೆ ಅಂತ ವಿಪಕ್ಷಗಳು ಹೊಸ ಬಾಂಬ್​​ ಸಿಡಿಸಿರೋದೀಗ ರಾಜಕೀಯ ಚದುರಂಗದಲ್ಲಿ ಮಾತಿನ ಸಮರಕ್ಕೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ: ಕದಲೂರು ಉದಯ್ ಸ್ಫೋಟಕ ಆರೋಪ

ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಉದಯ್ ಹೇಳಿದ್ದಾರೆ. ಮಂಡ್ಯಕ್ಕೆ ಕೈಗಾರಿಕೆ ತರುವಂತೆ ಸವಾಲು ಹಾಕಿದ್ದು, ಇದು ಮಂಡ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯು ಪಕ್ಷದ ಶಾಸಕರು ಮತ್ತು ನಾಯಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ. ಫೋನ್ ಟ್ಯಾಪಿಂಗ್ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ ಸಂಗತಿಯಾಗಿದ್ದು, ನಿರಂತರವಾಗಿ ನಡೆದುಕೊಂಡು ಬಂದಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್​​ ಸಿಡಿಸಿದ್ದಾರೆ.

  • Ram
  • Updated on: Mar 2, 2026
  • 4:41 pm

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ.

  • Ram
  • Updated on: Mar 2, 2026
  • 2:57 pm

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು?

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್ರೀಯ ಪಕ್ಷ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಕುಮಾರಸ್ವಾಮಿಯವರು ದೆಹಲಿಯಿಂದ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • Sunil MH
  • Updated on: Feb 25, 2026
  • 6:55 pm