HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

ಮೋದಿ ಹುಟ್ಟುಹಬ್ಬಕ್ಕೆ ಸ್ವಚ್ಛತಾ ಅಭಿಯಾನ; ಉಕ್ಕು ಕಾರ್ಖಾನೆಯಲ್ಲಿ ಕಸ ಗುಡಿಸಿದ ಹೆಚ್​ಡಿ ಕುಮಾರಸ್ವಾಮಿ

ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಕೇಂದ್ರ ಬೃಹತ್ ಕೈಗಾರಿಕೆಗಳು ಮತ್ತು ಉಕ್ಕು ಇಲಾಖೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಉಕ್ಕು ಕಾರ್ಖಾನೆಯಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು.

ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್

ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾನುವಾರ ರಾಜ್ಯದ ಶಾಲೆಗಳಲ್ಲಿ ಮಾನವ ಸರಪಳಿ ನಿರ್ಮಿಸಿದ್ದರ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕಿ ವಿಧಾನಸೌಧದಲ್ಲಿ ಮೆರೆಯುತ್ತಿರುವವರದ್ದು, ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂಬಂತಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯನವರ ನಾಯಕತ್ವ ಪ್ರಶ್ನಿಸುವ ಅರ್ಹತೆ ಕುಮಾರಸ್ವಾಮಿಗಿಲ್ಲ; ಚೆಲುವರಾಯಸ್ವಾಮಿ

ಮಂಡ್ಯದ ಮಳವಳ್ಳಿಯಲ್ಲಿ ಇಂದು ಗಗನಚುಕ್ಕಿ ಜಲಪಾತೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಬಿಚ್ಚಿಟ್ಟಿದ್ದಾರೆ. ಹಾಗೇ, ಹೆಚ್​ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಒಂದು ಸಮಾಜದ ಬಗ್ಗೆ ಅವಹೇಳನ ಮಾಡುವುದಕ್ಕೆ ಬೆಂಬಲವಿಲ್ಲ; ಮುನಿರತ್ನ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಗುತ್ತಿಗೆದಾರ ಚೆಲುವರಾಜು ಬಿಡುಗಡೆ ಮಾಡಿರುವ ಆಡಿಯೋದಿಂದಾಗಿ ಆರ್​ಆರ್​ ನಗರದ ಬಿಜೆಪಿ ಶಾಸಕ ಮುನಿರತ್ನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾತಿ ನಿಂದನೆ ಆರೋಪದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.

  • Sunil MH
  • Updated on: Sep 14, 2024
  • 8:03 pm

ದಲಿತ ವ್ಯಕ್ತಿಗೆ ಹಂಚಿಕೆಯಾಗಿದ್ದ ಸೈಟ್​​ನಲ್ಲಿ​ ಮನೆ ನಿರ್ಮಾಣ: ಸಿಎಂ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ‌

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮೂಡ ಆರೋಪದ ಬಳಿಕ‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮತ್ತೊಂದು ಗಂಭೀರ ಆರೋಪ‌ ಮಾಡಿದ್ದಾರೆ. ಡಿಸಿಎಂ ಆಗಿದ್ದಾಗ ಸಿದ್ದರಾಮಯ್ಯನವರು ಒಂದು ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ನೀವು ಮನೆ ಕಟ್ಟಿದ್ದೀರಾ, ಆ ದಾಖಲೆ ಬೇಕಾ ಎಂದು ಪ್ರಶ್ನಿಸಿದ್ದಾರೆ.

  • Sunil MH
  • Updated on: Sep 14, 2024
  • 3:41 pm

ಎಲೆಕ್ಟ್ರಿಕ್ ದ್ವಿಚಕ್ರ ವಾಹಗಳಿಗೆ 10,000 ರೂ ಸಬ್ಸಿಡಿ; 2025ರ ಮಾರ್ಚ್​ವರೆಗೂ ಮಾತ್ರ ಈ ಕೊಡುಗೆ

Electric vehicles subsidy: ಈ ಹಣಕಾಸು ವರ್ಷಾಂತ್ಯದವರೆಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ ಸಬ್ಸಿಡಿ, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ 50,000 ರೂ ಸಬ್ಸಿಡಿ ಸಿಗಲಿದೆ. ಪಿಎಂ ಇ-ಡ್ರೈವ್ ಯೋಜನೆಯಲ್ಲಿ 2025ರ ಮಾರ್ಚ್​ವರೆಗೂ ಈ ಸಬ್ಸಿಡಿ ಕೊಡಲಾಗುತ್ತದೆ. ಅದಾದ ಬಳಿಕ ಸಬ್ಸಿಡಿ ಪ್ರಮಾಣ ಅರ್ಧದಷ್ಟು ಕಡಿಮೆ ಆಗುತ್ತದೆ. ದ್ವಿಚಕ್ರ ವಾಹನಗಳಿಗೆ 5,000 ರೂ ಮತ್ತು ತ್ರಿಚಕ್ರ ವಾಹನಗಳಿಗೆ 25,000 ರೂ ಮಾತ್ರ ಸಬ್ಸಿಡಿ ಇರುತ್ತದೆ.

Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

ನಾಗಮಂಗಲ ಕೋಮುಗಲಭೆ ಕೇಸ್​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಕುಮಾರಸ್ವಾಮಿ ಭೇಟಿ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಅನ್ಯಕೋಮಿನವರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.

ನಾಗಮಂಗಲ ಗಲಭೆ: ಪರಮೇಶ್ವರ್ ಹೇಳಿಕೆಯಿಂದ ಕೆರಳಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನಾಗಮಂಗಲ ಕಿಚ್ಚು ಕರ್ನಾಟಕ ರಾಜಕೀಯದಲ್ಲಿ ಬೆಂಕಿ ಹಚ್ಚಿದೆ. ನಾಗಮಂಗಲ ಗಲಭೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಿ ಅಂತ್ಯವಾಗಿದೆ. ಸಮಸ್ಯೆಯಾಗಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿರುವುದು ಬಿಜೆಪಿ, ಜೆಡಿಎಸ್ ನಾಯಕರನ್ನು ಕೆರಳಿಸಿದೆ. ರಾಜಕಾರಣ ಮಾಡಬಾರದು ಎಂಬ ಹೇಳಿಕೆ ಕುಮಾರಸ್ವಾಮಿಯವರನ್ನು ಕೆರಳಿಸಿದೆ. ಅವರು ನೀಡಿದ ತಿರುಗೇಟು ಏನೆಂಬುದು ಇಲ್ಲಿದೆ.