HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್.ಡಿ. ಕುಮಾರಸ್ವಾಮಿ ಭಾವುಕ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮತ್ತು ತಮ್ಮ ತಾಯಿಯೂ ಆಗಿರುವ ಚೆನ್ನಮ್ಮ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾಯಿ ತಮಗೆ ಕಲಿಸಿದ ಬದುಕಿನ ಪಾಠಗಳು ಮತ್ತು ಅವರ ಸರಳ ದಾಂಪತ್ಯ ಜೀವನವನ್ನು ನೆನೆದು ಅವರು ಭಾವುಕರಾದ ಪ್ರಸಂಗ ನಡೆದಿದೆ. ಇವತ್ತಿನ ಸಮಾಜಕ್ಕೆ ನಮ್ಮ ತಂದೆ ತಾಯಿಯ ದಾಂಪತ್ಯ ಮಾದರಿ ಎಂದೂ ಅವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.
- Sunil MH
- Updated on: Jul 19, 2026
- 9:20 am
ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ
ಅನಾರೋಗ್ಯದಿಂದಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಮತ್ತು ನಾಳೆ ರೇವಣ್ಣ ಅವರ ಹೊಳೆನರಸೀಪುರದ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
- Shivaprasad B
- Updated on: Jul 19, 2026
- 7:07 am
ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.
- Ramesh B Jawalagera
- Updated on: Jul 18, 2026
- 10:28 pm
ಆ್ಯಸಿಡ್ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು
Chennamma Rare Photos: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದಾರೆ. ಎಂಟು ದಶಕಗಳ ಕಾಲ ಬದುಕಿದ್ದ ಚೆನ್ನಮ್ಮ ದೇವೇಗೌಡರ ಜತೆ 7 ದಶಕಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಇಡೀ ಕುಟುಂಬದ ಆಧಾರಸ್ತಂಭವಾಗಿದ್ದ ಅವರ ಸರಳ ಜೀವನ ಎಲ್ಲರಿಗೆ ಸ್ಫೂರ್ತಿದಾಯಕ. ಅವರ ಅಪರೂಪದ ಫೋಟೋಗಳು ಇಲ್ಲಿವೆ.
- Gangadhar Saboji
- Updated on: Jul 18, 2026
- 8:32 pm
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ನಿ ಚೆನ್ನಮ್ಮ ನಿಧನಕ್ಕೆ ಕುಟುಂಬದಲ್ಲಿ ಆಳವಾದ ದುಃಖ ಆವರಿಸಿದೆ. ಅವರ ಸಹೋದರ ತಮ್ಮ ನೋವನ್ನು ತೋಡಿಕೊಂಡಿದ್ದು, ಚೆನ್ನಮ್ಮ ಅವರನ್ನು ದೇವರು ಎಂದಿದ್ದಾರೆ. ರಾಜಕೀಯ ಎತ್ತರದಲ್ಲಿದ್ದರೂ ಚೆನ್ನಮ್ಮ ಎಂದಿಗೂ ತುಂಬಿದ ಕೊಡದಂತೆ ಗಂಭೀರವಾಗಿ, ಸರಳವಾಗಿ ಮತ್ತು ನಿಗರ್ವಿಯಾಗಿ ಜೀವನ ನಡೆಸಿದ್ದರು.
- Manjunath KB
- Updated on: Jul 18, 2026
- 7:36 pm
ದೇವೇಗೌಡರ ಪತ್ನಿ ಚೆನ್ನಮ್ಮ ಅಗಲಿಕೆಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ಕಂಬನಿ
Chennamma Passes Away: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಶನಿವಾರ ವಿಧಿವಶರಾಗಿದ್ದಾರೆ. ಸರಳ ಜೀವಿ ಚೆನ್ನಮ್ಮ ಅಗಲಿಕೆ ಬೆನ್ನಲ್ಲೇ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಇಡೀ ಕರುನಾಡೇ ಕಂಬನಿ ಮಿಡಿಯುವಂತೆ ಮಾಡಿದೆ.
- Gangadhar Saboji
- Updated on: Jul 18, 2026
- 7:47 pm
ದೇವೇಗೌಡರ ಬೆನ್ನಿಗೆ ನಿಂತಿದ್ದ ಧೀಶಕ್ತಿ: ಅತಿಥಿಗಳ ಪಾಲಿನ ಅನ್ನಪೂರ್ಣೆ; ಕುಟುಂಬ ಮುನ್ನಡೆಸಿದ ಮಹಾತಾಯಿ ‘ಚೆನ್ನಮ್ಮ’
Chennamma Passes Away: ಹೆಚ್ಡಿ ದೇವೇಗೌಡರ ರಾಜಕೀಯ ಯಶಸ್ಸಿನ ಹಿಂದೆ ಅವರ ಪತ್ನಿ ಚೆನ್ನಮ್ಮ ಅವರ ಪಾತ್ರ ಅಸಾಮಾನ್ಯ. ಬಡತನದಿಂದ ಪ್ರಧಾನಿ ಪಟ್ಟಕ್ಕೇರಿದ ಪತಿಗೆ ಶಕ್ತಿಯಾಗಿದ್ದ ಚೆನ್ನಮ್ಮ, ಕುಟುಂಬವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಪ್ಪಟ ಸಂಪ್ರದಾಯಸ್ಥ ಮಹಿಳೆಯಾಗಿ, ಮಕ್ಕಳಿಗೆ ತಾಯಿಯಾಗಿ, ಅತಿಥಿಗಳಿಗೆ ಅನ್ನಪೂರ್ಣೆಯಾಗಿದ್ದ ಮಹಾತಾಯಿ. ಚೆನ್ನಮ್ಮ ಅವರ ಕುರಿತಾಗಿ ಕುತೂಹಲಕಾರಿ ಮಾಹಿತಿ ಇಲ್ಲಿದೆ.
- Manjunath KB
- Updated on: Jul 18, 2026
- 6:16 pm
ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ.
- Ramesh B Jawalagera
- Updated on: Jul 18, 2026
- 6:08 pm
ಆಸಿಡ್ ದಾಳಿಯ ನರಕಯಾತನೆ, ಅಪರಾಧಿಯನ್ನು ಕ್ಷಮಿಸಿದ ಕರುಣಾಮಯಿ: ದೇವೇಗೌಡರ ಬದುಕಿನ ಶಕ್ತಿಯಾಗಿದ್ದ ಚೆನ್ನಮ್ಮ
Chennamma Deve Gowda Death: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದಿಂದ ಕುಟುಂಬ ದುಃಖತಪ್ತವಾಗಿದೆ. 2001ರಲ್ಲಿ ಚೆನ್ನಮ್ಮ ಹಾಗೂ ಸೊಸೆ ಭವಾನಿ ರೇವಣ್ಣ ಮೇಲೆ ನಡೆದ ಭೀಕರ ಆಸಿಡ್ ದಾಳಿಯ ರಾಜಕೀಯ ಪಿತೂರಿಯನ್ನು ದೇವೇಗೌಡರು 'ವೀಕೆಂಡ್ ವಿತ್ ರಮೇಶ್'ನಲ್ಲಿ ಬಿಚ್ಚಿಟ್ಟಿದ್ದರು. ರೇವಣ್ಣ ಗುರಿಯಾಗಿದ್ದರೂ, ಚೆನ್ನಮ್ಮ ಮತ್ತು ಭವಾನಿ ಆಸಿಡ್ಗೆ ತುತ್ತಾಗಿದ್ದರು. ತಮ್ಮನ ಮಗನೇ ಅಪರಾಧಿಯಾಗಿದ್ದರೂ, ದೇವೇಗೌಡರು ಆತನಿಗೆ ಕ್ಷಮಾದಾನ ನೀಡಿ, ಕೌಟುಂಬಿಕ ಪ್ರೀತಿಗೆ ದೊಡ್ಡ ಉದಾಹರಣೆಯಾಗಿದ್ದಾರೆ. ಈ ಘಟನೆ ಅವರ ಬದುಕಿನ ಕರಾಳ ಸತ್ಯ.
- Akshay Pallamajalu
- Updated on: Jul 18, 2026
- 6:03 pm
Chennamma Deve Gowda Death: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ
ಚೆನ್ನಮ್ಮ ದೇವೇಗೌಡ ನಿಧನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದ ಹಿನ್ನೆಲೆ ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
- Prasanna Hegde
- Updated on: Jul 18, 2026
- 5:49 pm
ಮತ್ತೊಂದು ಸ್ವರೂಪ ಪಡೆದ ಬಿಡದಿ ಟೌನ್ಶಿಪ್ ವಿವಾದ: ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ
ಬಿಡದಿ ಟೌನ್ ಶಿಪ್ ಯೋಜನೆ ಪರ ವಿರೋಧದ ರಾಜಕೀಯ ಹೋರಾಟ ಮತ್ತೊಂದು ಹಂತ ತಲುಪಿದ್ದು, ಇದೀಗ ರಾಜಕೀಯ ನಾಯಕರು ಪರಸ್ಪರ ವೈಯಕ್ತಿಯಕವಾಗಿ ಆರೋಪ ಪ್ರತ್ಯಾರೋಪಕ್ಕಿಳಿದಿದ್ದಾರೆ. ಹೌದು...ಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭಷ್ಟ್ರಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ, ಡಿಎಲ್ಎಫ್ ಗೆ ಟೆಂಡರ್ ಡೀಲ್ ಬಗ್ಗೆ ಪ್ರಸ್ತಾಪಿಸಿ ಕೌಂಟರ್ ಕೊಟ್ಟಿದ್ದಾರೆ.
- Ramesh B Jawalagera
- Updated on: Jul 18, 2026
- 4:13 pm
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
HD Deve Gowda wife Chennamma Health update: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ನಿನ್ನೆಗಿಂತ ಇಂದು ಸುಧಾರಣೆ ಕಂಡುಬಂದಿದ್ದು, ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯ ವಿಡಿಯೋ ಇಲ್ಲಿದೆ.
- Sunil MH
- Updated on: Jul 18, 2026
- 11:19 am