
HD Kumaraswamy
ಹೆಚ್ಡಿ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಅವರ ಪುತ್ರ. ಹೆಚ್ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್ ಹಿಟ್ ಆಗಿವೆ. ನಂತರ ಹೆಚ್ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ
ನನ್ನ ಬಗ್ಗೆ ಅಸೂಯೆ ಪಡೋದ್ರಿಂದ ಕುಮಾರಸ್ವಾಮಿಗೆ ಖುಷಿ ಸಿಗೋದಾದರೆ ಬಹಳ ಸಂತೋಷ: ಡಿಕೆ ಶಿವಕುಮಾರ್
ಮಂಡ್ಯದಲ್ಲಿಂದು ಕುಮಾರಸ್ವಾಮಿಯವರಿಗೆ ಡಿಕೆ ಸುರೇಶ್ ನಿಮ್ಮ ಅರೋಗ್ಯದ ಬಗ್ಗೆ ಮಾತಾಡಿದ್ದಾರೆ ಅಂತ ಪತ್ರಕರ್ತರು ಹೇಳಿದಾಗ ಅವರು ಖಡಕ್ಕಾದ ಪ್ರತಿಕ್ರಿಯೆ ನೀಡಿದ್ದರು. ಸುರೇಶ್ ಹಿಂದೊಮ್ಮೆ ಹೆಚ್ ಡಿ ದೇವೇಗೌಡರ ಅರೋಗ್ಯದ ಬಗ್ಗೆಯೂ ಮಾತಾಡಿ ಟೀಕಿಗೊಳಗಾಗಿದ್ದರು. ಈ ಎರಡು ರಾಜಕೀಯ ಕುಟುಂಬಗಳ ನಡುವೆ ವಾದ ವಿವಾದ, ಮಾತು ಪ್ರತಿಮಾತು ಕನ್ನಡಿಗರಿಗೆ ಹೊಸದೇನಲ್ಲ.
- Arun Belly
- Updated on: Jun 7, 2025
- 8:00 pm
Bengaluru Stampede; ಸಿಎಂ ಮತ್ತು ಡಿಸಿಎಂ ನಡುವಿನ ಪ್ರತಿಷ್ಠೆಯ ಕಾಳಗಕ್ಕೆ ಅಮಾಯಕ ಮಕ್ಕಳು ಬಲಿ: ಕುಮಾರಸ್ವಾಮಿ
ಕುಮಾರಸ್ವಾಮಿಯವರ ಆರೋಗ್ಯದ ಬಗ್ಗೆ ಡಿಕೆ ಸುರೇಶ್ ಟೀಕೆ ಮಾಡಿರುವುದಕ್ಕೆ ವ್ಯಗ್ರರಾದ ಕುಮಾರಸ್ವಾಮಿ, ನನ್ನ ಆರೋಗ್ಯ ಸರಿಯಾಗೇ ಇದೆ, ಮಂಡ್ಯ ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲೆ ಇರೋವರೆಗೆ ಅರೋಗ್ಯ ಚೆನ್ನಾಗೇ ಇರುತ್ತದೆ, ನನ್ನ ಮೇಲೆ ಯಾವ ಒತ್ತಡವೂ ಇಲ್ಲ, ದೇವರು ನನ್ನನ್ನು ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
- Arun Belly
- Updated on: Jun 7, 2025
- 6:18 pm
ಕಾವೇರಿ ಆರತಿಗೆ 100 ಕೋಟಿ ರೂ. ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ: ಹೆಚ್ಡಿ ಕುಮಾರಸ್ವಾಮಿ
ಮಂಡ್ಯದಲ್ಲಿ ನಡೆದ ಮೈಶುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ದೇಶಾದ್ಯಂತ 14,000 ವಿದ್ಯುತ್ ಬಸ್ಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಬೆಂಗಳೂರಿಗೆ 4500 ಮತ್ತು ಇತರ ರಾಜ್ಯಗಳಿಗೆ 2000 ಬಸ್ಗಳನ್ನು ನೀಡುವುದಾಗಿ ಹೇಳಿದ್ದಾರೆ. ಮಂಡ್ಯದ ಅಭಿವೃದ್ಧಿ, ಕೈಗಾರಿಕಾ ಸ್ಥಾಪನೆ, ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಅವರು ಭರವಸೆ ನೀಡಿದ್ದಾರೆ. ಮೈಶುಗರ್ ಶಿಕ್ಷಣ ಸಂಸ್ಥೆ ಮತ್ತು ಎಚ್ಎಂಟಿ ಕಾರ್ಖಾನೆಯನ್ನು ಉಳಿಸುವುದಕ್ಕೆ ತಮ್ಮ ಬದ್ಧತೆಯನ್ನು ಸಹ ಅವರು ವ್ಯಕ್ತಪಡಿಸಿದ್ದಾರೆ.
- Dileep CP
- Updated on: Jun 7, 2025
- 4:45 pm
Bengaluru Stampede: ಸದನದಲ್ಲಿ ಶಿವಕುಮಾರ್ಗೆ ನನ್ನ ವಿರುದ್ಧ ಮಾತಾಡುವುದೇನಿದೆ? ಹೆಚ್ ಡಿ ಕುಮಾರಸ್ವಾಮಿ
ಪರಿಹಾರದ ವಿಷಯದಲ್ಲಿ ಕುಮಾರಸ್ವಾಮಿ ಸ್ಪಷ್ಟವಾದ ಪ್ರತಿಕ್ರಿಯೆ ನೀಡಲಿಲ್ಲ. ಕರ್ನಾಟಕ ಸರ್ಕಾರ ಮತ್ತು ಆರ್ಸಿಬಿ ತಂಡದ ಮಾಲೀಕರು ಕಾಲ್ತುಳಿತದಲ್ಲಿ ಮಡಿದವರ ಕುಟುಂಬಗಳಿಗೆ ಹತ್ತತ್ತು ಲಕ್ಷ ರೂ. ನೀಡುತ್ತಿದ್ದಾರೆ, ಹಣ ಎಷ್ಟು ನೀಡಿದರೂ ಹೋದ ಜೀವವಂತೂ ವಾಪಸ್ಸು ಬರಲಾರದು, ವಿಶೇಷ ಪ್ರಕರಣ ಅಂತ ಪರಿಗಣಿಸಿ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತೋ ನೋಡೋಣ ಎಂದು ಅವರು ಹೇಳಿದರು.
- Arun Belly
- Updated on: Jun 7, 2025
- 1:10 pm
Bengaluru Stampede; ನನ್ನ ಕಣ್ಣೀರು ಬಗ್ಗೆ ಯಾಕೆ ಚರ್ಚೆ? ಬೇರೆಯವರು ಕಣ್ಣೀರು ಹಾಕಿದ್ದೇನಾಯಿತು? ಶಿವಕುಮಾರ್
ತಾನು ಬೆಂಗಳೂರು ನಗರ ಉಸ್ತುವಾರಿ ಸಚಿವನಾಗಿರುವುದರಿಂದ ಕೆಎಸ್ಸಿಎ ಅಧಿಕಾರಿಗಳು ಫೋನ್ ಮಾಡಿದ್ದರು, ಆಟಗಾರರು ಅಹ್ಮದಾಬಾದ್ನಿಂದ ಬಂದಾಗ ಅವರನ್ನು ರಿಸೀವ್ ಮಾಡಿಕೊಳ್ಳಲು ಹೋಗಿ ಕನ್ನಡದ ಧ್ವಜ ನೀಡಿದೆ ಮತ್ತು ವಿಕ್ಟರಿ ಪರೇಡ್ಗೆ ಅನುಮತಿಯಿಲ್ಲದ ಕಾರಣ ಸಹಕರಿಸಬೇಕೆಂದು ಹೇಳಿದೆ, ಗಲಾಟೆಯಾಗುತ್ತಿರುವ ವಿಷಯ ಗೊತ್ತಾದಾಗ ಸ್ಟೇಡಿಯಂಗೆ ಹೋಗಿ ಹತ್ತು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸಲು ಹೇಳಿದೆ, ಇದರಲ್ಲಿ ತಪ್ಪೇನಿದೆ ಎಂದು ಶಿವಕುಮಾರ್ ಪ್ರಶ್ನಿಸಿದರು.
- Arun Belly
- Updated on: Jun 6, 2025
- 6:28 pm
Bangalore Stampede: ಸಿದ್ದರಾಮಯ್ಯ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: ಹೆಚ್ಡಿಕೆ ಆರೋಪ ಯಾರ ಬಗ್ಗೆ!?
Bengaluru RCB Victory Celebrations Stampede: ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದಾರೆ. ಅಲ್ಲದೆ, ವಿಧಾನಸೌಧದ ಎದುರುಗಡೆ ಕೂಡ ಸನ್ಮಾನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮ ಆಯೋಜಿಸಿದ್ದು ಯಾರು? ಈ ವಿಡಿಯೋ ನೋಡಿ
- Vivek Biradar
- Updated on: Jun 6, 2025
- 3:19 pm
Bengaluru Stampede; ಡ್ರಾಮಾ ಮಾಡೋದ್ರಲ್ಲಿ ಕುಮಾರಸ್ವಾಮಿ ಎಕ್ಸ್ಪರ್ಟ್ ಅಂತ ಜನರಿಗೆ ಗೊತ್ತಿದೆ: ಡಿಕೆ ಸುರೇಶ್
ಸತ್ತವರ ಮೇಲೆ ರಾಜಕಾರಣ ಮಾಡಿಕೊಂಡು ಕುಮಾರಸ್ವಾಮಿ ರಾಜಕೀಯದಲ್ಲಿ ಬೆಳೆದಿದ್ದು; ಸತ್ತವರ ಕುರಿತಾಗಲೀ, ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆಯಾಗಲೀ ಅವರಿಗೆ ಕಿಂಚಿತ್ತೂ ಗೌರವವಿಲ್ಲ, ರಾಜಕೀಯ ಅರೋಪಗಳನ್ನು ಮಾಡೋದು ಬಿಟ್ಟು ಅವರಿಗೇನೂ ಗೊತ್ತಿಲ್ಲ ಎಂದು ಸುರೇಶ್ ಹೇಳಿದರು. ಕಾಲ್ತುಳಿತ ನಡೆದಿದೆ, ಕಾರ್ಯಕ್ರಮವನ್ನು ಬೇಗ ಮಗಿಸುವಂತೆ ಹೇಳಲು ಶಿವಕುಮಾರ್ ಸ್ಟೇಡಿಯಂಗೆ ತೆರಳಿದ್ದರು ಸುರೇಶ್ ಹೇಳಿದರು.
- Arun Belly
- Updated on: Jun 6, 2025
- 2:39 pm
Bengaluru Stampede; ದಕ್ಷರನ್ನು ಸಸ್ಪೆಂಡ್ ಮಾಡಿ ರಾಜ್ಯದ ಜನತೆಗೆ ಸರ್ಕಾರ ಕೆಟ್ಟ ಸಂದೇಶ ನೀಡಿದೆ: ಹೆಚ್ ಡಿ ಕುಮಾರಸ್ವಾಮಿ
ಆದರೆ ಸಸ್ಪೆನ್ಷನ್ ಒಂದು ಕಣ್ಣೊರೆಸುವ ಯತ್ನ ಎಂದು ಅಧಿಕಾರಿಗಳಿಗೂ ಗೊತ್ತು, 15-20 ದಿನಗಳ ಕಾಲ ಅವರನ್ನು ಅಮಾನತ್ತಿನಲ್ಲಿಟ್ಟು ನಂತರ ಬಡ್ತಿ ನೀಡಿ ಸೇವೆಗೆ ಕರೆಸಿಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಬೇಜಾರು ಮಾಡ್ಕೋಬೇಡಿ, ಇದೊಂದು ನಾಟಕ ಅಂತ ಸಸ್ಪೆಂಡ್ ಆಗಿರುವ ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿರುತ್ತದೆ ಎಂದು ಕೇಂದ್ರ ಸಚಿವ ಹೇಳಿದರು.
- Arun Belly
- Updated on: Jun 6, 2025
- 11:24 pm
ಬೆಂಗಳೂರು ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ ಅವರೇ ನೇರ ಹೊಣೆ ಎಂದ ವಿಪಕ್ಷಗಳು ಎತ್ತಿದ ಸಾಲು ಪ್ರಶ್ನೆಗಳು ಇಲ್ಲಿವೆ
ಆರ್ಸಿಬಿ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪ್ರತಿಪಕ್ಷಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಹೊಣೆಗಾರರೆಂದು ಆರೋಪಿಸಿವೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ನಿರ್ಲಕ್ಷ್ಯ ಮತ್ತು ಅಸಮರ್ಪಕ ಭದ್ರತಾ ವ್ಯವಸ್ಥೆಯನ್ನು ಖಂಡಿಸಿದ್ದಾರೆ. ಪೊಲೀಸ್ ಆಯುಕ್ತರ ಅಮಾನತು ಕೇವಲ ನಾಟಕ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಪ್ರತಿಪಕ್ಷಗಳು ಕೇಳಿರುವ ಪ್ರಮುಖ ಪ್ರಶ್ನೆಗಳು ಇಲ್ಲಿವೆ.
- Kiran Haniyadka
- Updated on: Jun 6, 2025
- 12:25 pm
ಪಂಜಾಬ್ ವಿರುದ್ಧ RCBಗೆ ಗೆಲವು: ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರಿಂದ ಅಭಿನಂದನೆಯ ಸುರಿಮಳೆ
ಆರ್ಸಿಬಿ ತಂಡವು ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿದೆ. ಈ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹಾಗೂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕಾಲದ ಕನಸು ಈಡೇರಿದೆ ಎಂದು ಅನೇಕರು ಸಂತಸ ವ್ಯಕ್ತಪಡಿಸಿದ್ದಾರೆ.
- Vivek Biradar
- Updated on: Jun 4, 2025
- 12:38 am