AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna

HD Revanna

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಎಚ್.ಡಿ. ರೇವಣ್ಣ ಹುಟ್ಟಿದ್ದು 1966ರ ಡಿಸೆಂಬರ್ 17ರಂದು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹಿರಿಯ ಮಗ. ಎಚ್.ಡಿ. ಕುಮಾರಸ್ವಾಮಿ ಅವರ ಅಣ್ಣನಾದ ರೇವಣ್ಣ ಓದಿದ್ದು ಎಸ್ಸೆಸ್ಸೆಲ್ಸಿವರೆಗೆ ಮಾತ್ರ. ಆದರೆ ತಮ್ಮ ಹುಟ್ಟೂರು ಇರುವ ಹೊಳೆನರಸೀಪುರ ಕ್ಷೇತ್ರವನ್ನು ಜೆಡಿಎಸ್ ಭದ್ರಕೋಟೆಯನ್ನಾಗಿ ಮಾಡುವಲ್ಲಿ ಅವರ ಶ್ರಮ ಹೆಚ್ಚಿದೆ. 1994ರಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು. 1999ರಲ್ಲಿ ಸೋತ ಬಳಿಕ 2004ರಿಂದ ಇಲ್ಲಿ ಸತತವಾಗಿ ಗೆಲುವು ಪಡೆದರು. ಎಚ್ ಡಿ ರೇವಣ್ಣ ಲೋಕೋಪಯೋಗಿ ಖಾತೆ (ಪಿಡಬ್ಲ್ಯುಡಿ) ಮತ್ತು ಇಂಧನ ಖಾತೆಗಳಿರುವ ಸಚಿವ ಸ್ಥಾನಗಳನ್ನು ನಿಭಾಯಿಸಿದ್ದಾರೆ. ಧರಂ ಸಿಂಗ್ ಮತ್ತು ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ನಲ್ಲಿ 9 ವರ್ಷ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ

ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಬಳಿಕ ಎಚ್​​​ಡಿಕೆ ಸುದ್ದಿಗೋಷ್ಠಿ ನಡೆಸಿ ಮಾತನಾಡುವ ವೇಳೆ ಸಹೋದರ ಎಚ್​​​ಡಿ ರೇವಣ್ಣ ಮೇಲೆ ಕೋಪಗೊಂಡಿರುವ ಪ್ರಸಂಗ ಜರುಗಿದೆ. ಹೌದು...ಕುಮಾರಸ್ವಾಮಿ ಮಾತನಾಡುವಾಗ ಪಕ್ಕದಲ್ಲೇ ಕುಳಿತ್ತಿದ್ದ ರೇವಣ್ಣ ಸಹ ಅಡ್ಡ ಬಾಯಿ ಹಾಕಿದರು. ಇದರಿಂದ ಕುಮಾರಸ್ವಾಮಿ ಸ್ವಲ್ಪ ಸುಮ್ನೆ ಇರು ಎಂದು ಕೈ ಸಂಜ್ಞೆ ಮಾಡಿದರು. ಆಗ ರೇವಣ್ಣ ಸೈಲೆಂಟ್ ಮೂಡಿಗೆ ಜಾರಿದರು.

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್​​​ಡಿ ರೇವಣ್ಣಗೆ ಬಿಗ್ ರಿಲೀಫ್‌

ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಣ್ಣ ಇದೀಗ ಕೋರ್ಟ್​ ಆದೇಶದಿಂದ ನಿರಾಳರಾಗಿದ್ದಾರೆ. ಹಾಗಾದ್ರೆ, ಕೋರ್ಟ್​ ಕೈಬಿಟ್ಟ ಸೆಕ್ಷನ್ ಯಾವುದು? ಏನು ಅಪರಾಧ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿರುವ ಸೂರಜ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟಿದೆ. ಸೂರಜ್ ರೇವಣ್ಣ ವಿರುದ್ಧದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಲ್ಲಿಸಿದ್ದ 'ಬಿ' ರಿಪೋರ್ಟ್​ ವರದಿಯನ್ನು ತಿರಿಸ್ಕರಿಸಿದೆ. ಅಲ್ಲದೇ ತನಿಖೆ ಮುಂದುವರಿಕೆಗೆ ಆದೇಶಿಸಿದೆ. ಇದರಿಂದ ಸೂರಜ್ ರೇವಣ್ಣ ಮತ್ತೆ ಸಂಕಷ್ಟ ಎದುರಾಗಿದೆ.

ಹಾಸನಾಂಬೆ ದರ್ಶನಕ್ಕೆ ಬರುವಾಗ ಕಾರು ತಡೆದಿದ್ದಕ್ಕೆ ಶಾಸಕ ಹೆಚ್​.ಡಿ. ರೇವಣ್ಣ ಗರಂ

ಶಿಷ್ಟಾಚಾರ ಪಾಲನೆ ಅಧಿಕಾರಿಗಳಿಗೆ ತಿಳಿಸದೆ ಹಾಸನಾಂಬೆ ದರ್ಶನಕ್ಕೆ ತಮ್ಮ ಭದ್ರತಾ ವ್ಯವಸ್ಥೆ ಜೊತೆ ಬಂದ ಶಾಸಕ ಹೆಚ್​.ಡಿ. ರೇವಣ್ಣ ಅವರನ್ನು ಸಿಬ್ಬಂದಿ ತಡೆದ ಪರಿಣಾಮ ಹೈಡ್ರಾಮಾ ನಡೆದಿದೆ. ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕರು ಸಿಟ್ಟಾಗಿದ್ದು, ಬಳಿಕ ಕಾರಿನಿಂದ ಇಳಿದು ನಡೆದುಕೊಂಡೇ ದರ್ಶನಕ್ಕೆ ತೆರಳಿದ್ದಾರೆ.

ಪ್ರಜ್ವಲ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ, ಅಷ್ಟನ್ನು ಮಾತ್ರ ಹೇಳಬಲ್ಲೆ: ಸೂರಜ್ ರೇವಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದ ಶಾಸಕರಿಗೆ ₹25 ಕೋಟಿ ಮತ್ತು ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡೋದಾಗಿ ಹೇಳಿದ್ದಾರೆ, ಇನ್ನೂ ಬಿಡುಗಡೆ ಮಾಡಿಲ್ಲ, ಸೋಮವಾರದಿಂದ ವಿಧಾನಸಭಾ ಅಧಿವೇಶನ ಶುರುವಾಗಲಿದೆ, ಅದಕ್ಕಿಂತ ಮೊದಲೇ ಮಾಡುತ್ತಾರೋ ಅಥವಾ ನಂತರ ಮಾಡುತ್ತಾರೋ ಗೊತ್ತಿಲ್ಲ, ಬಿಡುಗಡೆ ಮಾಡುವದನ್ನು ಅವರೇ ಹೇಳಿರುವುದರಿಂದ ಕಾಯಬೇಕು ಎಂದು ಸೂರಜ್ ರೇವಣ್ಣ ಹೇಳಿದರು.

ಪೂರ್ತಿ ಕುಟುಂಬ ರಾಜಕಾರಣದಲ್ಲಿದ್ದರೂ ಪ್ರಜ್ವಲ್ ಪರದೇಶಿ, ಇನ್ನು ಜೈಲುವಾಸವೇ ಬದುಕು

ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್​ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೂ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ಹೇಳಲಾಗುತ್ತಿದೆ. ಅದು ಸರಿ, ಅದರೆ, ಜಾಮೀನು ಕೋರಿ ಇವರು ಸಲ್ಲಿಸಿದ್ದ ಅರ್ಜಿ ಉಚ್ಚ ಮತ್ತು ಸರ್ವೋಚ್ಚ ನ್ಯಾಯಾಲಯ ಎರಡು ಕಡೆಯೂ ತಿರಸ್ಕೃತಗೊಂಡಿತ್ತು ಅನ್ನೋದನ್ನು ಮರೆಯಬಾರದು. ಮತ್ತೊಂದು ಗಮನಾರ್ಹ ಸಂಗತಿಯೆಂದರೆ, ಅವರ ಮೇಲಿನ ಮತ್ತೊಂದು ಆರೋಪದ ವಿಚಾರಣೆ ಆರಂಭವಾಗಿದೆ.

ಹೆಚ್​ಡಿ ರೇವಣ್ಣ ಬೆಂಗಳೂರು ಮನೆ ಮುಂದೆ ಬೀದಿನಾಯಿಗಳೂ ಸುಳಿದಾಡುತ್ತಿಲ್ಲ, ಸುತ್ತಲೂ ಸ್ಮಶಾನ ಮೌನ

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕರೆ ಅವರ 35ನೇ ಹುಟ್ಟುಹಬ್ಬವನ್ನು ಮಂಗಳವಾರ (ಆಗಸ್ಟ್ 5) ಇದೇ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸುವ ಯೋಚನೆ ರೇವಣ್ಣ ದಂಪತಿಗಿತ್ತು. ಅದರೆ ನಿನ್ನೆ ನ್ಯಾಯಾಲಯ ಪ್ರಜ್ವಲ್ ದೋಷಿ ಅಂತ ತೀರ್ಪಿತ್ತ ನಂತರ ಅವರ ಉತ್ಸಾಹ ಕಮರಿ ಹೋಗಿತ್ತು. ಇವತ್ತು ಜೀವಾವಧಿ ಶಿಕ್ಷೆಯ ಸುದ್ದಿ ಕೇಳಿ ರೇವಣ್ಣ ಮತ್ತು ಭವಾನಿಯವರ ಜಂಘಾಬಲವೇ ಉಡುಗಿಹೋಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಮಾಧ್ಯಮಗಳಿಗೆ ಏನನ್ನೂ ಹೇಳದ ಹೆಚ್ ಡಿ ರೇವಣ್ಣ

ಪ್ರಜ್ವಲ್ ರೇವಣ್ಣ ವಿರುದ್ಧ ಬಹಳಷ್ಟು ಸಂತ್ರಸ್ತೆಯರು ಮಾರ್ಯದೆ, ಗೌರವಕ್ಕೆ ಹೆದರಿ ದೂರು ಸಲ್ಲಿಸಿಲ್ಲ. ಕೆಲವಷ್ಟೇ ಜನ ಧೈರ್ಯ ಮಾಡಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅವರ ಲ್ಯಾಪ್​ಟಾಪ್​ನಲ್ಲಿದ್ದ ವಿಡಿಯೋಗಳನ್ನು ಪೆನ್​ ಡ್ರೈವ್​ಗಳಿಗೆ ಅಪ್ಲೋಡ್ ಮಾಡಿಕೊಂಡು ಹಾಸನ ನಗರ ಮತ್ತು ಇತರ ಭಾಗಗಳಲ್ಲಿ ಪೆನ್ ಡ್ರೈವ್​​ಗಳನ್ನು ಹಂಚಲಾಗಿತ್ತು.

ಪ್ರಜ್ವಲ್ ತಪ್ಪಿತಸ್ಥ ಅಂತ ಕೋರ್ಟ್ ತೀರ್ಪು ನೀಡಿದ ಬಳಿಕ ತಾನು ಹೇಳೋದೇನಿರುತ್ತದೆ? ಸುಮಲತಾ ಅಂಬರೀಶ್

ಪ್ರಕರಣದ ಎಲ್ಲ ಅಂಶಗಳನ್ನು ಗಮನಿಸಿಯೇ ಜನಪ್ರತಿನಿಧಿಗಳ ಕೋರ್ಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿರುತ್ತದೆ, ಕೋರ್ಟ್ ಮಾತಾಡಿರುವುದರಿಂದ ತಾನು ಮಾತಾಡುವುದರಲ್ಲಿ ಅರ್ಥವಿರುವುದಿಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದರು. ಕಾಂಗ್ರೆಸ್ ನಾಯಕರನ್ನು ಹೊರತುಪಡಿಸಿ, ಬಿಜೆಪಿ ನಾಯಕರಾಗಲೀ, ಜೆಡಿಎಸ್ ಮುಖಂಡರಾಗಲೀ ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ಕಾಮೆಂಟ್ ಮಾಡುತ್ತಿಲ್ಲ.

ಪ್ರಜ್ವಲ್ ರೇವಣ್ಣ ವಿರುದ್ಧ ಬಂದಿರುವ ತೀರ್ಪಿಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಯಾಕೆ ಪ್ರತಿಕ್ರಿಯಿಸುತ್ತಿಲ್ಲ? ಪ್ರಿಯಾಂಕ್ ಖರ್ಗೆ

ನ್ಯಾಯಾಲಯವೇ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಅಂತ ಹೇಳಿದೆ, ತಾನು ಅಂದುಕೊಳ್ಳುವ ಹಾಗೆ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ನ್ಯಾಯಾಲಯ ದೋಷಿ ಅಂತ ಹೇಳಿದೆ, ಇನ್ನೂ ಮೂರ್ನಾಲ್ಕು ಪ್ರಕರಣಗಳ ವಿಚಾರಣೆ ನಡೆಯಬೇಕಿದೆ, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಉತ್ತರ ನೀಡಬೇಕು, ಪ್ರಜ್ವಲ್, ಸೂರಜ್, ಮುನಿರತ್ನ ಎಲ್ಲರ ವಿರುದ್ಧ ದಾಖಲಾಗಿರೋದು ಅತ್ಯಾಚಾರದ ಪ್ರಕರಣಗಳು ಎಂದು ಖರ್ಗೆ ಹೇಳಿದರು.

ಸರ್ಕಾರದ ವಿರುದ್ಧ ಸಿಡಿಯುವ ರೇವಣ್ಣ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಮತ್ತು ಗುಂಡೂರಾವ್​ರನ್ನು ಟೀಕಿಸಲ್ಲ

ಗಮನಿಸಬೇಕಾದ ಸಂಗತಿಯೆಂದರೆ, ಜಿಲ್ಲಾಸ್ಪತ್ರೆ ಮತ್ತು ನಿರ್ದಿಷ್ಟವಾಗಿ ಹಾಸನ ಜಿಲ್ಲೆ ಅವ್ಯವಸ್ಥೆಗಳ ಆಗರವಾಗಿದ್ದರೂ ಶಾಸಕ ರೇವಣ್ಣ, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಅವರನ್ನು ದೂರುವುದಿಲ್ಲ, ಇಬ್ಬರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುತ್ತಾರೆ. ಉಸ್ತುವಾರಿ ಸಚಿವನಿಗೆ ಮಂತ್ರಗಿರಿ ಬೇಕಿಲ್ಲ ಅನ್ನೋದು ರೇವಣ್ಣಗೆ ಇನ್ನೂ ಗೊತ್ತಾದಂತಿಲ್ಲ.

ವರ್ಗಾವಣೆ ಧಂದೆಯನ್ನು ಸರ್ಕಾರ ಎಗ್ಗಿಲ್ಲದೆ ನಡೆಸುತ್ತಿದೆ ಎಂದ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ

ವರ್ಗಾವಣೆ ಧಂದೆಯನ್ನು ಕಾಂಗ್ರೆಸ್ ಸರ್ಕಾರ ಎಗ್ಗಿಲ್ಲದ ನಡೆಸುತ್ತಿದೆ, ತಮಗೆ ಬೇಕಾದ ಆಫೀಸರ್​ಗಳನ್ನು ಹಾಕಿಸಿಕೊಳ್ಳಬೇಕಾದರೆ ₹ 5-10 ಲಕ್ಷ ಖರ್ಚು ಮಾಡಬೇಕು, ತನ್ನ ಕ್ಷೇತ್ರದ ಒಬ್ಬ ಸರ್ಕಾರಿ ನೌಕರನನ್ನು ಉಡುಪಿ ಜಿಲ್ಲೆಯ ಬೆಳ್ತಂಗಡಿಗೆ ಟ್ರಾನ್ಸ್​ಫರ್ ಮಾಡಲಾಗಿದೆ ಎಂದು ಹೇಳಿದ ರೇವಣ್ಣ ಅವರು, ಇದೆಲ್ಲ ಬಹಳ ದಿನ ನಡೆಯಲ್ಲ, ದೇವರೇ ನಿಮಗೆ ಶಿಕ್ಷೆ ನೀಡುತ್ತಾನೆ ಎಂದು ಸಚಿವ ಸುಧಾಕರ್​ರನ್ನು ಎಚ್ಚರಿಸಿದರು.

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ