HD Revanna

HD Revanna

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಎಚ್.ಡಿ. ರೇವಣ್ಣ ಹುಟ್ಟಿದ್ದು 1966ರ ಡಿಸೆಂಬರ್ 17ರಂದು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹಿರಿಯ ಮಗ. ಎಚ್.ಡಿ. ಕುಮಾರಸ್ವಾಮಿ ಅವರ ಅಣ್ಣನಾದ ರೇವಣ್ಣ ಓದಿದ್ದು ಎಸ್ಸೆಸ್ಸೆಲ್ಸಿವರೆಗೆ ಮಾತ್ರ. ಆದರೆ ತಮ್ಮ ಹುಟ್ಟೂರು ಇರುವ ಹೊಳೆನರಸೀಪುರ ಕ್ಷೇತ್ರವನ್ನು ಜೆಡಿಎಸ್ ಭದ್ರಕೋಟೆಯನ್ನಾಗಿ ಮಾಡುವಲ್ಲಿ ಅವರ ಶ್ರಮ ಹೆಚ್ಚಿದೆ. 1994ರಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು. 1999ರಲ್ಲಿ ಸೋತ ಬಳಿಕ 2004ರಿಂದ ಇಲ್ಲಿ ಸತತವಾಗಿ ಗೆಲುವು ಪಡೆದರು. ಎಚ್ ಡಿ ರೇವಣ್ಣ ಲೋಕೋಪಯೋಗಿ ಖಾತೆ (ಪಿಡಬ್ಲ್ಯುಡಿ) ಮತ್ತು ಇಂಧನ ಖಾತೆಗಳಿರುವ ಸಚಿವ ಸ್ಥಾನಗಳನ್ನು ನಿಭಾಯಿಸಿದ್ದಾರೆ. ಧರಂ ಸಿಂಗ್ ಮತ್ತು ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ನಲ್ಲಿ 9 ವರ್ಷ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

ರೇವಣ್ಣ ವಿರುದ್ಧ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ: 100ಕ್ಕೂ ಹೆಚ್ಚು ಸಾಕ್ಷ್ಯಗಳು ಸಂಗ್ರಹ

ಕೆಆರ್​ ನಗರ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್​​ಡಿ ರೇವಣ್ಣಗೆ ಜೈಲುಶಿಕ್ಷೆಯಾಗಿತ್ತು. ಕಿಡ್ನ್ಯಾಪ್ ಸಂತ್ರಸ್ತೆಯ ದೂರಿನ ಮೇಲೆ ರೇವಣ್ಣ ವಿರುದ್ಧ ಕೇಸ್‌ ದಾಖಲಾಗಿತ್ತು. 10 ದಿನ ಜೈಲು ಅನುಭವಿಸಿ ಹೊರ ಬಂದಿದ್ದರು. ಸದ್ಯ ಪ್ರಕರಣ ಬಹುತೇಕ ತನಿಖೆ ಪೂರ್ಣಗೊಂಡಿದ್ದು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ವರಿಷ್ಠರು ಯಾರನ್ನೇ ಸಿಎಂ ಮಾಡಿದರೂ ನನಗೆ ಸಂಬಂಧಿಸದ ವಿಷಯ: ಹೆಚ್ ಡಿ ರೇವಣ್ಣ

ಯಾರೇನೇ ಹೇಳಿದರೂ ಹೆಚ್ ಡಿ ದೇವೇಗೌಡರ ಹಿರಿಮಗ ರೇವಣ್ಣ ಗಟ್ಟಿಜೀವ. ತಮ್ಮ ಇಬ್ಬರು ಮಕ್ಕಳು ಗುರುತರವಾದ ಆರೋಪಗಳಲ್ಲಿ ಜೈಲಲ್ಲಿದ್ದರೂ ಅವರು ಧೃತಿಗೆಟ್ಟಿಲ್ಲ. ಮಾಧ್ಯಮದ ಪ್ರತಿನಿಧಿಗಳೊಂದಿಗೆ ಎಂದಿನಂತೆ ಮಾತಾಡುತ್ತಾರೆ. ಖುದ್ದು ರೇವಣ್ಣ ಮಹಿಳೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನು ಪಡೆದು ಹೊರಬಂದಿದ್ದಾರೆ.

ಸೂರಜ್ ರೇವಣ್ಣ ವಿರುದ್ಧದ ಎರಡನೇ ಕೇಸ್ ಕೂಡ ಸಿಐಡಿಗೆ ಹಸ್ತಾಂತರಿಸಿದ ಸರ್ಕಾರ

ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ ವಿಧಾನ ಪರಿಷತ್​ ಸದಸ್ಯ ಸೂರಜ್​ ರೇವಣ್ಣ ಅವರನ್ನು ಬಂಧಿಸಲಾಗಿದೆ. ಜೊತೆಗೆ ಅವರ ಮೇಲೆ ದಾಖಲಾಗಿದ್ದ ಮೊದಲ ಕೇಸ್​ನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ಅದರಂತೆ ನಿನ್ನೆ(ಜೂ.25) ಕೂಡ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಮತ್ತೊಂದು ಕೇಸ್​ ದಾಖಲಾಗಿತ್ತು. ಇದೀಗ ಅದನ್ನೂ ಕೂಡ ಸಿಐಡಿಗೆ ಹಸ್ತಾಂತರಿಸಿ ಸರ್ಕಾರ ಆದೇಶಿಸಿದೆ.

ಜೆಡಿಎಸ್ ಫ್ಲೆಕ್ಸ್​ಗಳಲ್ಲಿ ದೇವೇಗೌಡರ ಹಿರಿಯ ಮಗ ಹೆಚ್​ಡಿ ರೇವಣ್ಣ ಫೋಟೋಗೆ ಕೋಕ್

ಅದ್ಯಾಕೋ ಗೊತ್ತಿಲ್ಲ ಒಂದಿಲ್ಲೊಂದು ವಿವಾದಗಳು ಮಾಜಿ ಸಚಿವ ರೇವಣ್ಣ ಕುಟುಂಬವನ್ನ ಸುತ್ತಿಕೊಳ್ಳುತ್ತಿವೆ. ಇದು ಜೆಡಿಎಸ್ ಪಾಳಯಕ್ಕೂ ಕೂಡ ದೊಡ್ಡ ಮಟ್ಟಿನ ಪೆಟ್ಟನ್ನ ಕೊಟ್ಟಿದೆ. ಹೀಗಾಗಿ ದಳಪತಿಗಳು ರೇವಣ್ಣನಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಫೆಕ್ಸ್ ಗಳಲ್ಲಿ ರೇವಣ್ಣ ಭಾವಚಿತ್ರ ಹಾಕದೇ ಅಂತರ ಕಾಯ್ದುಕೊಂಡಿದೆ.

ಸಲಿಂಗ ಕಾಮ ಕೇಸ್​ಗೆ ಬಿಗ್ ಟಿಸ್ಟ್: ಸೂರಜ್ ವಿರುದ್ಧವೇ ತಿರುಗಿ ಬಿದ್ದು ದೂರು ದಾಖಲಿಸಿದ ಆಪ್ತ ಶಿವಕುಮಾರ್​!

ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಪರವಾಗಿ ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಇದೀಗ ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಇದರಿಂದ ಸೂರಜ್​ ಮತ್ತೊಂದು ಸಂಕಷ್ಟ ಎದುರಾಗಿದೆ.​

ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು

ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬಾತನ ವಿರುದ್ಧ ಹಣ ದುರುಪಯೋಗ ಆರೋಪದಡಿ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್(FIR)​ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ.

ಸಂತ್ರಸ್ತೆಯ ಖಾಸಗಿ ವಿಡಿಯೋ ಹರಿಬಿಟ್ಟ ಆರೋಪ: ಪ್ರಜ್ವಲ್​​, ಪ್ರೀತಂ ಗೌಡ ವಿರುದ್ಧ ಎಫ್​ಐಆರ್​

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್​ಡಿ ರೇವಣ್ಣ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಬೆಂಗಳೂರು ಸೈಬರ್​ ಕ್ರೈಂ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಮಂಡ್ಯದಲ್ಲಿ ಕುಮಾರಸ್ವಾಮಿಯವರ ಅಭಿನಂದನಾ ಕಾರ್ಯಕ್ರಮದ ಫ್ಲೆಕ್ಸ್ ಗಳಲ್ಲಿ ರೇವಣ್ಣನ ಫೋಟೋಗೆ ಜಾಗವಿಲ್ಲ!

ಆಫ್ ಕೋರ್ಸ್, ರೇವಣ್ಣ ಸುಮಾರು ಒಂದು ವಾರ ಕಾಲ ಜೈಲಲ್ಲಿದ್ದಿದ್ದು ಗೊತ್ತಿರದ ವಿಷಯವೇನಲ್ಲ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗಬಹುದಾದ ಮುಜುಗುರದಿಂದ ತಪ್ಪಿಸಿಕೊಳ್ಳಲು ಜೆಡಿಎಸ್ ಮುಖಂಡರು ರೇವಣ್ಣ ಮತ್ತು ಅವರ ಕುಟುಂಬದ ಸದಸ್ಯರನ್ನು ಫ್ಲೆಕ್ಸ್ ಗಳಿಂದ ದೂರವಿಟ್ಟಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಮೂರನೇ ಬಾರಿ ಸೆಂಟ್ರಲ್ ಜೈಲಿಗೆ ಬಂದ ಮಾಜಿ ಸಂಸದ

ಪ್ರಜ್ವಲ್ ಗ್ಯಾಸ್ಟ್ರಿಕ್ ಮತ್ತು ಬೆನ್ನುನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಅವರ ಪರ ವಕೀಲ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಮನವಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸುವಂತೆ ನ್ಯಾಯಾಧೀಶರು ವಕೀರಿಗೆ ಸೂಚಿಸಿದ್ದಾರೆ. ಒಂದು ಪಕ್ಷ ಜೈಲು ಅಧಿಕಾರಿಗಳು ಚಿಕಿತ್ಸೆ ಒದಗಿಸಲು ನಿರಾಕರಿಸಿದ್ದೇಯಾದಲ್ಲಿ ತಮಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಹೇಳಿದ್ದಾರಂತೆ.

ತಮ್ಮ ಮೇಲೆ ಆರೋಪಗಳು ಬಂದಾಗ ಬೇರೆಯವರ ಕಡೆ ಬೊಟ್ಟು ಮಾಡುವುದು ದೇವೇಗೌಡರ ಕುಟುಂಬಕ್ಕೆ ಅಭ್ಯಾಸವಾಗಿದೆ: ಡಿಕೆ ಸುರೇಶ್

ತಾವು ಕಟಕಟೆಯಲ್ಲಿ ನಿಲ್ಲಬೇಕಾಗಿ ಬಂದ ಸಂದರ್ಭಗಳಲ್ಲೆಲ್ಲ ಬೇರೆಯವರನ್ನು ದೋಷಿಯ ಸ್ಥಾನದಲ್ಲಿ ನಿಲ್ಲಿಸುವುದು, ಅವರ ಮೇಲೆ ಗೂಬೆ ಕೂರಿಸುವುದು ಆ ಕುಟುಂಬಕ್ಕೆ ಅಭ್ಯಾಸವಾಗಿಬಿಟ್ಟಿದೆ ಎಂದು ಸುರೇಶ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇನ್ನು ಮುದೆ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಓಡಾಡಿಕೊಂಡಿರುತ್ತೇನೆ ಎಂದು ಅವರು ಹೇಳಿದರು.