AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Revanna

HD Revanna

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಎಚ್.ಡಿ. ರೇವಣ್ಣ ಹುಟ್ಟಿದ್ದು 1966ರ ಡಿಸೆಂಬರ್ 17ರಂದು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹಿರಿಯ ಮಗ. ಎಚ್.ಡಿ. ಕುಮಾರಸ್ವಾಮಿ ಅವರ ಅಣ್ಣನಾದ ರೇವಣ್ಣ ಓದಿದ್ದು ಎಸ್ಸೆಸ್ಸೆಲ್ಸಿವರೆಗೆ ಮಾತ್ರ. ಆದರೆ ತಮ್ಮ ಹುಟ್ಟೂರು ಇರುವ ಹೊಳೆನರಸೀಪುರ ಕ್ಷೇತ್ರವನ್ನು ಜೆಡಿಎಸ್ ಭದ್ರಕೋಟೆಯನ್ನಾಗಿ ಮಾಡುವಲ್ಲಿ ಅವರ ಶ್ರಮ ಹೆಚ್ಚಿದೆ. 1994ರಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದರು. 1999ರಲ್ಲಿ ಸೋತ ಬಳಿಕ 2004ರಿಂದ ಇಲ್ಲಿ ಸತತವಾಗಿ ಗೆಲುವು ಪಡೆದರು. ಎಚ್ ಡಿ ರೇವಣ್ಣ ಲೋಕೋಪಯೋಗಿ ಖಾತೆ (ಪಿಡಬ್ಲ್ಯುಡಿ) ಮತ್ತು ಇಂಧನ ಖಾತೆಗಳಿರುವ ಸಚಿವ ಸ್ಥಾನಗಳನ್ನು ನಿಭಾಯಿಸಿದ್ದಾರೆ. ಧರಂ ಸಿಂಗ್ ಮತ್ತು ಕುಮಾರಸ್ವಾಮಿ ನೇತೃತ್ವದ ಸರ್ಕಾರಗಳಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ನಲ್ಲಿ 9 ವರ್ಷ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು?

ಸಚಿವ ಸ್ಥಾನ ಸಿಕ್ಕ ಬಳಿಕ ಎಚ್​​​​ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್​​​​ಎಂ ರೇವಣ್ಣ, ಅವನ‌ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.

ಆಸಿಡ್ ದಾಳಿ ಆಗದಿದ್ರೆ ನಮ್ಮ ತಾಯಿ ಇನ್ನೂ 10 ವರ್ಷ ಬದುಕುತ್ತಿದ್ರು ಎಂದ HD ರೇವಣ್ಣ

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, 2001ರಲ್ಲಿ ಆಸಿಡ್ ದಾಳಿ ಆಗದೆ ಹೋಗಿದ್ದರೆ ಅವರಿಗೆ (ಚೆನ್ನಮ್ಮ) ಇಷ್ಟು ಬೇಗ ಸಾವು ಬರ್ತಿರಲಿಲ್ಲ. ರೇವಣ್ಣನನ್ನ ಮುಗಿಸಲೇ ಬೇಕು ಎಂದು ಸಂಚು ರೂಪಿಸಿದ್ದರು. ಅಂದು ನಾನು ಇದ್ದಿದ್ದರೆ ನನ್ನ ಮೇಲೆ ದಾಳಿ ಆಗೋದು. ನಾನು ಇಲ್ಲದ ಕಾರಣ ನಮ್ಮ ತಾಯಿ ನೋವು ತಿಂದರು ಎಂದು ತಾಯಿ ಮೇಲೆ ನಡೆದಿದ್ದ ಆಸಿಡ್ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

ಇಂದು ಮಧ್ಯಾಹ್ನ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ, 4 ಸಾವಿರ ಆಸನ ವ್ಯವಸ್ಥೆ: ಜೋಶಿ ಸೇರಿ ಪ್ರಮುಖ ಬಿಜೆಪಿ ನಾಯಕರು ಭಾಗಿ

HD Deve Gowda Wife Chennamma Last Rituals: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9:30ರವರೆಗೆ ರೇವಣ್ಣ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಪಾರ್ಥಿವ ಶರೀರವನ್ನು ಮಾವಿನಕೆರೆಗೆ ಕೊಂಡೊಯ್ಯಲಾಗುವುದು. ಸಾರ್ವಜನಿಕರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ.

‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ಚೆನ್ನಮ್ಮ ನೆನೆದು ಗಳ ಗಳತೆ ಅತ್ತ ಹೆಚ್​​.ಡಿ. ರೇವಣ್ಣ

ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸ್ಥಳ ಪರಿಶೀಲಿಸಿದ ಶಾಸಕ ಹೆಚ್.ಡಿ. ರೇವಣ್ಣ ಭಾವುಕರಾಗಿದ್ದಾರೆ. "ನನ್ನ ದೇವತೆಯನ್ನೇ ಕಳೆದುಕೊಂಡೆ" ಎಂದು ಮಾಧ್ಯಮಗಳ ಮುಂದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಗದ್ಗರಿತರಾಗಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ

ಅನಾರೋಗ್ಯದಿಂದಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಮತ್ತು ನಾಳೆ ರೇವಣ್ಣ ಅವರ ಹೊಳೆನರಸೀಪುರದ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.

ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ.

ಆಸಿಡ್ ದಾಳಿಯ ನರಕಯಾತನೆ, ಅಪರಾಧಿಯನ್ನು ಕ್ಷಮಿಸಿದ ಕರುಣಾಮಯಿ: ದೇವೇಗೌಡರ ಬದುಕಿನ ಶಕ್ತಿಯಾಗಿದ್ದ ಚೆನ್ನಮ್ಮ

Chennamma Deve Gowda Death: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದಿಂದ ಕುಟುಂಬ ದುಃಖತಪ್ತವಾಗಿದೆ. 2001ರಲ್ಲಿ ಚೆನ್ನಮ್ಮ ಹಾಗೂ ಸೊಸೆ ಭವಾನಿ ರೇವಣ್ಣ ಮೇಲೆ ನಡೆದ ಭೀಕರ ಆಸಿಡ್ ದಾಳಿಯ ರಾಜಕೀಯ ಪಿತೂರಿಯನ್ನು ದೇವೇಗೌಡರು 'ವೀಕೆಂಡ್ ವಿತ್ ರಮೇಶ್'ನಲ್ಲಿ ಬಿಚ್ಚಿಟ್ಟಿದ್ದರು. ರೇವಣ್ಣ ಗುರಿಯಾಗಿದ್ದರೂ, ಚೆನ್ನಮ್ಮ ಮತ್ತು ಭವಾನಿ ಆಸಿಡ್‌ಗೆ ತುತ್ತಾಗಿದ್ದರು. ತಮ್ಮನ ಮಗನೇ ಅಪರಾಧಿಯಾಗಿದ್ದರೂ, ದೇವೇಗೌಡರು ಆತನಿಗೆ ಕ್ಷಮಾದಾನ ನೀಡಿ, ಕೌಟುಂಬಿಕ ಪ್ರೀತಿಗೆ ದೊಡ್ಡ ಉದಾಹರಣೆಯಾಗಿದ್ದಾರೆ. ಈ ಘಟನೆ ಅವರ ಬದುಕಿನ ಕರಾಳ ಸತ್ಯ.

Chennamma Deve Gowda Death: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚೆನ್ನಮ್ಮ ದೇವೇಗೌಡ ನಿಧನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ ದಿಢೀರ್​​ ಏರುಪೇರಾಗಿದ್ದ ಹಿನ್ನೆಲೆ ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

HD Deve Gowda Wife Chennamma health update: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇಂದು ಬೆಳಗ್ಗೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

  • Sunil MH
  • Updated on: Jul 18, 2026
  • 8:11 am

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಐಪಿಸಿ 354 ಸೆಕ್ಷನ್ ರದ್ದುಪಡಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಈ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಡಾವಳಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ರೇವಣ್ಣ ಈಗ ಸುಪ್ರೀಂ ಕೋರ್ಟ್ ಮುಂದೆ ಪ್ರತಿವಾದ ಮಂಡಿಸಬೇಕಿದೆ.

ಶುರುವಾಯ್ತಾ ಮೈತ್ರಿ ಕುಸ್ತಿ? ಹೆಚ್​ಡಿ ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು

ಸುಮಲತಾ ಅಂಬರೀಶ್​ಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ ಕುರಿತು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಇದು ಪಕ್ಷದ ಆಂತರಿಕ ವಿಚಾರ ಎಂದ ಅಶೋಕ್, ಯಾರಿಗೂ ಭರವಸೆ ನೀಡಿರಲಿಲ್ಲ, ರಾಜ್ಯಸಭಾ ಟಿಕೆಟ್ ಕಾರ್ಯಕರ್ತರಿಗೆ ನೀಡಲಾಗಿದೆ ಎಂದರು. ರೇವಣ್ಣ ಅಥವಾ ಬೇರೆಯವರಿಗೆ ಈ ಕುರಿತು ಮಾತನಾಡುವ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!