AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಅನೇಕರು ದೀರ್ಘಕಾಲ ಕುಳಿತು ಕೆಲಸ ಮಾಡುತ್ತಾರೆ. ಆದರೆ ಇದನ್ನು ಸಾಮಾನ್ಯ ಅಭ್ಯಾಸವೆಂದು ಪರಿಗಣಿಸಬಾರದು.ಏಕೆಂದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕೆಲವು ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಇದು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಡಾ. ಅಜಯ್ ಕುಮಾರ್ ನೀಡಿದ್ದು, ಯಾವ ರೀತಿಯ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷ್ಯ ಮಾಡಬಾರದು, ಜೊತೆಗೆ ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಜಿಮ್ ಪ್ರಾರಂಭಿಸಿ ಮಧ್ಯದಲ್ಲಿಯೇ ಬಿಟ್ಟಿದ್ದೀರಾ? ಇದರಿಂದ ಆರೋಗ್ಯಕ್ಕೆ ಹಾನಿಯಾಗುತ್ತಾ ತಿಳಿದುಕೊಳ್ಳಿ

ಇಂದಿನ ಕಾಲದಲ್ಲಿ ಫಿಟ್ ಮತ್ತು ಆಕ್ಟಿವ್ ಆಗಿರಲು ಜಿಮ್‌ಗೆ ಹೋಗುವುದು ಜೀವನಶೈಲಿಯ ಒಂದು ಪ್ರಮುಖ ಭಾಗವಾಗಿದೆ. ಆದರೆ, ಅನೇಕರು ಕೆಲವು ಸಮಯದ ನಂತರ ನಾನಾ ಕಾರಣಗಳಿಂದ ಜಿಮ್ ಅನ್ನು ಮಧ್ಯದಲ್ಲೇ ಬಿಡುತ್ತಾರೆ. ಆದರೆ ಒಮ್ಮೆ ಜಿಮ್ ಪ್ರಾರಂಭಿಸಿ ಮಧ್ಯದಲ್ಲಿ ಬಿಡುವುದರಿಂದ ದೇಹಕ್ಕೆ ಯಾವ ರೀತಿಯ ತೊಂದರೆಯಾಗುತ್ತದೆ, ನಿಜವಾಗಿಯೂ ಈ ರೀತಿ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವೇ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಕೆಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅನೇಕರಿಗೆ ಒಣ ಕೆಮ್ಮಿನ ಸಮಸ್ಯೆಗಳು ಕಂಡುಬರುತ್ತಿದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ತಡೆಯದಿದ್ದರೆ ಇದು ದೀರ್ಘಕಾಲದ ವರೆಗೆ ಮುಂದುವರಿಯಬಹುದು ಮತ್ತು ದೈನಂದಿನ ಜೀವನದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಮಾತನಾಡಲು, ಕೆಲಸ ಮಾಡಲು ಮತ್ತು ನಿದ್ರೆ ಮಾಡಲು ಸಹ ತೊಂದರೆ ಉಂಟಾಗಬಹುದು. ಆದ್ದರಿಂದ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕೆಲವು ಸರಳ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.

ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ದೊಡ್ಡವರಂತೆಯೇ ಮಕ್ಕಳ ದೇಹದಲ್ಲಿಯೂ ಪ್ರೋಟೀನ್ ಕೊರತೆ ಉಂಟಾಗಬಹುದು. ಆದರೆ ಅನೇಕ ಬಾರಿ ಪೋಷಕರು ಇದನ್ನು ಗಮನಿಸುವುದಿಲ್ಲ. ಆದರೆ ಇದರ ಕೊರತೆಯಾದರೆ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಜೊತೆಗೆ ಪ್ರೋಟೀನ್ ಕೊರತೆಯಾದಾಗ ಕಂಡುಬರುವ ಲಕ್ಷಣಗಳು ಹೇಗಿರುತ್ತವೆ, ಅದಕ್ಕೆ ಕಾರಣಗಳೇನು, ಪ್ರೋಟೀನ್ ಸಮೃದ್ಧವಾಗಿರುವ ಆಹಾರಗಳು ಯಾವವು ಎಂಬುದರ ಬಗ್ಗೆ ಡಾ. ಹಿಮಾಂಶು ಭದಾನಿ ಮಾಹಿತಿ ನೀಡಿದ್ದಾರೆ. ನೀವು ಕೂಡ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಿ.

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಹೈ ಬ್ಲಡ್ ಪ್ರೆಶರ್ ಆರೋಗ್ಯಕ್ಕೆ ಬಹಳ ಅಪಾಯಕಾರಿ ಎಂಬುದು ತಿಳಿದ ವಿಚಾರ. ಆದರೆ ನಿಮಗೆ ಗೊತ್ತಾ? ರಕ್ತದೊತ್ತಡ ಹೆಚ್ಚಾದರೆ ಬ್ರೇನ್ ಸ್ಟ್ರೋಕ್ ಅಪಾಯ ಹೆಚ್ಚುತ್ತದೆ. ಆದರೆ ಯಾವ ಮಟ್ಟದ ಬಿಪಿ ಇದ್ದರೆ ಸ್ಟ್ರೋಕ್ ಅಪಾಯ ಹೆಚ್ಚುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಹೈ ಬಿಪಿ ಇರುವವರಲ್ಲಿ ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು, ಇದರ ಲಕ್ಷಣಗಳು ಹೇಗಿರುತ್ತವೆ, ಜೊತೆಗೆ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ!

ಸಾಮಾನ್ಯವಾಗಿ ಮಹಿಳೆಯರಾಗಲಿ ಅಥವಾ ಪುರಷರಾಗಲಿ 40 ವರ್ಷದ ನಂತರ, ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯವಾಗುತ್ತದೆ. ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಈ ವಯಸ್ಸಿನಲ್ಲಿ, ಕೆಲವು ಅಗತ್ಯ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ, ಇದರಿಂದ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಬಹುದು. ಹಾಗಾದರೆ 40ರ ನಂತರ ಯಾವ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ಸಿಗುವ ಉಪಯೋಗಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ ಇದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್‌ದೇವ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಕೂದಲು ಉದುರುವ ಸಮಸ್ಯೆ ಹೆಚ್ಚಾದಾಗ ಏನು ಮಾಡಬೇಕು?, ಅದು ಯಾವ ಸಮಸ್ಯೆಯ ಲಕ್ಷಣ ಮತ್ತು ಅದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಮಗೂ ಕೂಡ ಈ ರೀತಿಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬೇಡಿ. ಬದಲಾಗಿ ವೈದ್ಯರು ಹೇಳಿರುವ ಈ ಸಲಹೆಗಳನ್ನು ಪಾಲಿಸಿ.

ಕೋಮಾದಿಂದ ಹೊರಬರುವ ಸಮಯ ಪ್ರತಿಯೊಬ್ಬರಲ್ಲಿಯೂ ಭಿನ್ನವಾಗಿರುವುದಕ್ಕೆ ಕಾರಣವೇನು?

ಕೋಮಾ ಎನ್ನುವುದು ವ್ಯಕ್ತಿಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಗಂಭೀರ ವೈದ್ಯಕೀಯ ಸ್ಥಿತಿ. ನಿಮಗೆ ತಿಳಿದಿರಬಹುದು ಕೋಮಾ ಎಂದರೆ ವ್ಯಕ್ತಿ ದೀರ್ಘಕಾಲದ ವರೆಗೆ ಅಚೇತನ ಸ್ಥಿತಿಯಲ್ಲಿ ಇರುವ ಗಂಭೀರ ಆರೋಗ್ಯ ಪರಿಸ್ಥಿತಿ. ಆದರೆ ನೀವು ಎಂದಾದರೂ ಗಮನಿಸಿದ್ದೀರಾ, ಕೋಮಾದಿಂದ ಹೊರಬರುವ ಸಮಯ ಪ್ರತಿ ರೋಗಿಯಲ್ಲೂ ವಿಭಿನ್ನವಾಗಿರುತ್ತದೆ. ಇದಕ್ಕೆ ಕಾರಣವೇನು? ಪ್ರತಿಯೊಬ್ಬರೂ ಕೂಡ ಈ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಕುರಿತು ಡಾ. ದಲ್ಜೀತ್ ಸಿಂಗ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ತಿಳಿಯಲು ಸ್ಟೋರಿ ಓದಿ.

ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ

ಅನೇಕರಿಗೆ ದೇಹದ ಮೇಲೆ ಪದೇ ಪದೇ ದದ್ದುಗಳು ಕಾಣಿಸಿಕೊಳ್ಳುವ ಸಮಸ್ಯೆ ಇರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್‌ದೇವ ಅವರು ಕೆಲವು ವಿಷಯಗಳನ್ನು ಹಂಚಿಕೊಂಡಿದ್ದು, ಯಾವ ಕಾರಣಕ್ಕೆ ದದ್ದುಗಳು ಕಂಡುಬರುತ್ತವೆ? ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಮತ್ತು ಅದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಹೇಳಿದ್ದಾರೆ. ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು. ಈಗ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಈ ಪ್ರಕರಣವು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೋಮಾ ಮತ್ತು ಬ್ರೈನ್ ಡೆಡ್ ನಡುವಿನ ವ್ಯತ್ಯಾಸವೇನು, ಕೋಮಾದಲ್ಲಿ ಏನಾಗುತ್ತದೆ ಮತ್ತು ಅದು ಮೆದುಳು ನಿಷ್ಕ್ರಿಯವಾಗುವುದಕ್ಕಿಂತ ಹೇಗೆ ಭಿನ್ನವಾಗಿದೆ? ಈ ಎರಡು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಹಾಗೂ ಕಾನೂನು ನಿರ್ಧಾರಗಳು ಏಕೆ ಬೇರೆಬೇರೆ ಆಗಿರುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ

ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ಪ್ರಕರಣಗಳು ಹಿಂದಿಗಿಂತಲೂ ಹೆಚ್ಚಾಗಿ ಕಂಡುಬರುತ್ತಿದೆ. ಅಷ್ಟು ಮಾತ್ರವಲ್ಲ ಇದು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಇವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಂಡಿರುವುದು ಬಹಳ ಒಳ್ಳೆಯದು ಏಕೆಂದರೆ ಅವುಗಳನ್ನು ತಕ್ಷಣ ಗುರುತಿಸುವುದರಿಂದ ಅಪಾಯವನ್ನು ತಡೆಯಬಹುದಾಗಿದೆ.

ಒತ್ತಡ, ಸ್ಕ್ರೀನ್‌ ಸಮಯದ ಹೆಚ್ಚಳದಿಂದ ಉಂಟಾಗುತ್ತಿದೆ ನಿದ್ರೆ ಸಮಸ್ಯೆ: ನಗರದ ಜನರಿಗೆ ವೈದ್ಯರ ಎಚ್ಚರಿಕೆ

ಮನುಷ್ಯ ನಿದ್ರೆ ಸರಿಯಾಗಿ ಮಾಡದಿದ್ದರೆ ಅವನ ಆರೋಗ್ಯ ಹದಗೆಡುತ್ತದೆ. ಆಹಾರ ಪದ್ಧತಿ ಎಷ್ಟು ಮುಖ್ಯವಾಗುತ್ತದೆಯೋ ನಿದ್ರೆಯೂ ಕೂಡ ಅಷ್ಟೇ ಮಹತ್ವದ್ದಾಗಿದೆ. ಆದರೆ ಈ ಬಗ್ಗೆ ಯಾರೂ ಕೂಡ ಅಷ್ಟಾಗಿ ಯೋಚಿಸುವುದಿಲ್ಲ. ಕೆಲಸದ ಒತ್ತಡ, ಅತಿಯಾಗಿ ಮೊಬೈಲ್, ಟಿವಿ, ಲ್ಯಾಪ್ ಟಾಪ್ ನೋಡುವುದು ಹೀಗೆ ನಾನಾ ರೀತಿಯ ಕಾರಣಗಳಿಂದ ನಗರಗಳಲ್ಲಿ ವಾಸ ಮಾಡುವವರು ನಿದ್ರೆ ಸರಿಯಾಗಿ ಮಾಡುವುದಿಲ್ಲ. ಆದರೆ ಈ ರೀತಿ ಮಾಡಬಾರದು. ಅಷ್ಟು ಮಾತ್ರವಲ್ಲ, ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಾಗುತ್ತವೆ, ಇದನ್ನು ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು