AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಅಯೋಡಿನ್ ಕೊರತೆಯನ್ನು ನಿರ್ಲಕ್ಷಿಸಬೇಡಿ! ದೇಹದಲ್ಲಿ ಕಾಣಿಸಿಕೊಳ್ಳುವ ಪ್ರಮುಖ ಎಚ್ಚರಿಕೆ ಲಕ್ಷಣಗಳು

ಅಯೋಡಿನ್ ಸಣ್ಣ ಪ್ರಮಾಣದಲ್ಲಿ ಬೇಕಾಗುವ ಖನಿಜವಾದರೂ, ದೇಹದ ಅನೇಕ ಪ್ರಮುಖ ಕಾರ್ಯಗಳಿಗೆ ಇದು ಅತ್ಯಗತ್ಯ. ವಿಶೇಷವಾಗಿ ಥೈರಾಯ್ಡ್ ಆರೋಗ್ಯ, ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ದೇಹದ ಚಯಾಪಚಯ ಸರಿಯಾಗಿ ನಡೆಯಲು ಅಯೋಡಿನ್ ಕೊರತೆಯಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಹಾಗಾದರೆ ಐಯೋಡಿನ್ ಕೊರತೆಯಾಗಿರುವುದನ್ನು ತಿಳಿದುಕೊಳ್ಳುವುದು ಹೇಗೆ, ಲಕ್ಷಣಗಳು ಯಾವ ರೀತಿ ಕಂಡುಬರುತ್ತದೆ ಮತ್ತು ಇದರ ಕೊರತೆ ನೀಗಿಸಿಕೊಳ್ಳಲು ಯಾವ ರೀತಿ ಆಹಾರ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

70% ಕೋಕೋ ಇರುವ ಡಾರ್ಕ್ ಚಾಕೊಲೇಟ್ ಏಕೆ ಒಳ್ಳೆಯದು? ವೈದ್ಯರು ಹೇಳಿರುವ ಮಾಹಿತಿ ಇಲ್ಲಿದೆ

ಇತರ ಚಾಕೊಲೇಟ್‌ಗಳಿಗೆ ಹೋಲಿಸಿದರೆ ಡಾರ್ಕ್ ಚಾಕೊಲೇಟ್ ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಆದರೆ ಡಾರ್ಕ್ ಚಾಕೊಲೇಟ್‌ನ ಪ್ರಯೋಜನ ಪಡೆಯಲು ಸರಿಯಾದ ಪ್ರಮಾಣದಲ್ಲಿ ಸೇವಿಸುವುದು ಹಾಗೂ ಸರಿಯಾದ ಉತ್ಪನ್ನವನ್ನು ಆಯ್ಕೆ ಮಾಡುವುದು ಅತ್ಯಗತ್ಯ. ಹಾಗಾದರೆ ಡಾರ್ಕ್ ಚಾಕೊಲೇಟ್ ಆರೋಗ್ಯಕ್ಕೆ ಹೇಗೆ ಸಹಕಾರಿ ಮತ್ತು ಯಾರಿಗೆ ಇದು ಸೂಕ್ತವಲ್ಲ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

Rabies Vaccine: ಭಾರತದಲ್ಲಿ ಹೆಚ್ಚುತ್ತಲೇ ಇದೆ ನಾಯಿ ಕಚ್ಚುವಿಕೆ; ಲಸಿಕೆ ಪಡೆದರೂ ರೇಬೀಸ್ ಬರಲು ಸಾಧ್ಯವೇ?

ಭಾರತದಲ್ಲಿ ಬೀದಿನಾಯಿಗಳ ಹಾವಳಿ ಹಾಗೂ ನಾಯಿ ಕಚ್ಚುವಿಕೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕಾಗಿ ರೇಬೀಸ್ ನಿರೋಧಕ ಲಸಿಕೆ ಪಡೆದ ನಂತರವೂ ರೇಬೀಸ್‌ನಿಂದ ಸಂಭವಿಸುವ ಸಾವುಗಳು ಅತ್ಯಂತ ಅಪರೂಪ. ಆದರೆ, ಕೆಲವು ವಿಶೇಷ ಸನ್ನಿವೇಶಗಳಲ್ಲಿ ಲಸಿಕೆ ಪಡೆದ ನಂತರವೂ ಜೀವ ಹಾನಿಯಾಗುವ ಘಟನೆಗಳು ವರದಿಯಾಗುತ್ತಿದ್ದು, ವೈದ್ಯಕೀಯ ಅಧ್ಯಯನಗಳು ಈ ರಕ್ಷಣಾ ವ್ಯವಸ್ಥೆ ಎಲ್ಲಿ ವಿಫಲವಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿವೆ.

ಬ್ಲೂಬೆರಿ, ಸ್ಟ್ರಾಬೆರಿ, ಬ್ಲ್ಯಾಕ್‌ಬೆರಿ… ಯಾವ ಬೆರ್ರಿ ಹಣ್ಣು ಯಾವ ಆರೋಗ್ಯ ಸಮಸ್ಯೆಗೆ ಉತ್ತಮ ತಿಳಿದುಕೊಳ್ಳಿ

ಬೆರ್ರಿ ಹಣ್ಣುಗಳು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಯಾವುದೇ ಒಂದು ಆಹಾರವೇ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಲ್ಲ. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಮತ್ತು ಆರೋಗ್ಯಕರ ಜೀವನಶೈಲಿಯೊಂದಿಗೆ ಬೆರ್ರಿ ಹಣ್ಣುಗಳನ್ನು ಸೇವಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ಅದರ ಜೊತೆಗೆ ಯಾವ ಬೆರ್ರಿ ಹಣ್ಣು ಯಾವ ಆರೋಗ್ಯ ಲಾಭ ನೀಡುತ್ತದೆ ಮತ್ತು ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಜೊತೆಗೆ, ಯಾರು ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ತಲೆನೋವು ಕಡಿಮೆ ಮಾಡಲು ಕಾಫಿ ಸಹಾಯ ಮಾಡುತ್ತದೆಯೇ? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು?

ತಲೆನೋವಿನ ಸಮಯದಲ್ಲಿ ಟೀ ಅಥವಾ ಕಾಫಿ ಕುಡಿಯುವುದು ಕೆಲವರಿಗೆ ಉಪಯುಕ್ತವಾಗಬಹುದು, ಆದರೆ ಎಲ್ಲರಿಗೂ ಒಂದೇ ರೀತಿಯ ಫಲಿತಾಂಶ ನೀಡುವುದಿಲ್ಲ. ನಿಮ್ಮ ದೇಹದ ಪ್ರತಿಕ್ರಿಯೆಯನ್ನು ಗಮನಿಸಿ ಮಿತ ಪ್ರಮಾಣದಲ್ಲಿ ಕ್ಯಾಫೀನ್ ಸೇವಿಸುವುದು ಮುಖ್ಯ. ತಲೆನೋವು ಪದೇ ಪದೇ ಕಾಣಿಸಿಕೊಳ್ಳುತ್ತಿದ್ದರೆ ಅಥವಾ ತೀವ್ರವಾಗಿದ್ದರೆ ವೈದ್ಯರನ್ನು ಸಂಪರ್ಕಿಸಿ ಸರಿಯಾದ ಕಾರಣ ಪತ್ತೆಹಚ್ಚಿ ಚಿಕಿತ್ಸೆ ಪಡೆಯುವುದು ಅತ್ಯುತ್ತಮ.

ರಕ್ತ ಹೆಪ್ಪುಗಟ್ಟಲು ವಿಟಮಿನ್ ಕೆ ಏಕೆ ಮುಖ್ಯ? ಈ ಆಹಾರಗಳನ್ನು ಮಿಸ್ ಮಾಡ್ದೆ ತಿನ್ನಿ

ವಿಟಮಿನ್ ಕೆ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಎಲುಬುಗಳ ಆರೋಗ್ಯ ಮತ್ತು ಒಟ್ಟಾರೆ ದೈಹಿಕ ಕಾರ್ಯಗಳಿಗೆ ಅಗತ್ಯವಾದ ಪ್ರಮುಖ ಪೋಷಕಾಂಶವಾಗಿದೆ. ಸಮತೋಲನ ಆಹಾರದಲ್ಲಿ ಹಸಿರು ಎಲೆ ತರಕಾರಿಗಳು ಮತ್ತು ಪೌಷ್ಟಿಕ ಆಹಾರಗಳನ್ನು ಸೇರಿಸಿಕೊಳ್ಳುವುದರಿಂದ ಇದರ ಕೊರತೆಯನ್ನು ಬಹುತೇಕ ತಪ್ಪಿಸಬಹುದು. ಯಾವುದೇ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಪ್ರೋಟೀನ್ ಕೊರತೆಯಿಂದ ಕೂದಲು ಉದುರುತ್ತದೆಯೇ? ತಜ್ಞರು ನೀಡಿದ ವಿವರಣೆ ಇಲ್ಲಿದೆ

ಕೂದಲು ಉದುರುವಿಕೆಯ ಹಿಂದೆ ಪ್ರೋಟೀನ್ ಕೊರತೆ ಒಂದು ಕಾರಣವಾಗಿರಬಹುದು. ಆದರೆ ಪ್ರತಿಯೊಂದು ಪ್ರಕರಣದಲ್ಲೂ ಅದೇ ಕಾರಣ ಎಂದು ಹೇಳಲಾಗುವುದಿಲ್ಲ. ಸಮತೋಲಿತ ಆಹಾರ, ಆರೋಗ್ಯಕರ ಜೀವನಶೈಲಿ ಮತ್ತು ಸಮಯಕ್ಕೆ ಸರಿಯಾದ ವೈದ್ಯಕೀಯ ಪರೀಕ್ಷೆಯ ಮೂಲಕ ಕೂದಲು ಹಾಗೂ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ವೃದ್ಧಾಪ್ಯದಲ್ಲಿ ಸ್ನಾಯುಗಳ ಆರೋಗ್ಯ ಕಾಪಾಡಿಕೊಳ್ಳುವುದು ಏಕೆ ಮುಖ್ಯ? ವೈದ್ಯರು ಹೇಳಿರುವ ಮಹತ್ವದ ಸಲಹೆಗಳು

ವಯಸ್ಸಾಗುವುದು ಸಹಜ ಪ್ರಕ್ರಿಯೆ. ಆದರೆ ಸ್ನಾಯುಗಳ ಶಕ್ತಿ ಕಳೆದುಕೊಳ್ಳುವುದು ಅನಿವಾರ್ಯವಲ್ಲ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ಪ್ರೋಟೀನ್, ಉತ್ತಮ ನಿದ್ರೆ ಹಾಗೂ ಆರೋಗ್ಯಕರ ಜೀವನಶೈಲಿಯ ಮೂಲಕ ದೀರ್ಘಕಾಲ ಸ್ನಾಯುಗಳನ್ನು ಬಲವಾಗಿ ಕಾಪಾಡಿಕೊಳ್ಳಬಹುದು. 30–40 ವರ್ಷ ವಯಸ್ಸಿನ ನಂತರವೇ ಸ್ನಾಯುಗಳ ಆರೈಕೆಗೆ ಆದ್ಯತೆ ನೀಡುವುದು ಆರೋಗ್ಯಕರ ವೃದ್ಧಾಪ್ಯಕ್ಕೆ ಅತ್ಯಗತ್ಯ.

ಕೂದಲು ಬೇಗ ಬಿಳಿಯಾಗುವುದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು!

ಅಕಾಲಿಕವಾಗಿ ಕೂದಲು ಬಿಳಿಯಾಗುವುದು ವಯಸ್ಸಿಗೆ ಸಂಬಂಧಪಟ್ಟಿದ್ದಲ್ಲ. ಕೆಲವೊಮ್ಮೆ ಇದು ಪೋಷಕಾಂಶಗಳ ಕೊರತೆ ಅಥವಾ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು. ಆದ್ದರಿಂದ ಸ್ವಯಂ ಔಷಧಿ ಅಥವಾ ವೈಜ್ಞಾನಿಕ ಆಧಾರವಿಲ್ಲದ ಉತ್ಪನ್ನಗಳನ್ನು ಬಳಸುವುದಕ್ಕಿಂತ ಚರ್ಮರೋಗ ತಜ್ಞರ ಸಲಹೆ ಪಡೆದು ಮೂಲ ಕಾರಣವನ್ನು ಪತ್ತೆಹಚ್ಚುವುದು ಉತ್ತಮ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಸೋರೆಕಾಯಿ ಜ್ಯೂಸ್ ಕುಡಿಯುವವರೇ ಗಮನಿಸಿ! ಹೃದಯ, ಜೀರ್ಣಕ್ರಿಯೆ, ತೂಕ ಇಳಿಕೆಗೆ ಸಿಗುವ ಆರೋಗ್ಯ ಲಾಭಗಳು

ಸೋರೆಕಾಯಿ ಜ್ಯೂಸ್ ಆರೋಗ್ಯಕರ ಜೀವನಶೈಲಿಯ ಭಾಗವಾಗಬಹುದು. ಇದು ಜೀರ್ಣಕ್ರಿಯೆ, ತೂಕ ನಿಯಂತ್ರಣ, ದೇಹದ ಹೈಡ್ರೇಷನ್ ಹಾಗೂ ಹೃದಯದ ಆರೋಗ್ಯಕ್ಕೆ ನೆರವಾಗುವ ಸಾಧ್ಯತೆ ಇದ್ದರೂ, ಇದನ್ನು ಯಾವುದೇ ರೋಗಕ್ಕೆ ಔಷಧಿ ಎಂದು ಪರಿಗಣಿಸಬಾರದು. ಮಿತ ಪ್ರಮಾಣದಲ್ಲಿ, ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದೊಂದಿಗೆ ಸೇವಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ.

ಮಹಾರಾಷ್ಟ್ರದಲ್ಲಿ ಹಾಲೇತರ ಪನೀರ್ ಸಂಪೂರ್ಣ ನಿಷೇಧ; ನಿಯಮ ಉಲ್ಲಂಘಿಸಿದರೆ 6 ತಿಂಗಳು ಜೈಲು, 1 ಲಕ್ಷ ರೂ. ದಂಡ

ನಕಲಿ ಮತ್ತು ಕಲಬೆರಕೆ ಡೈರಿ ಉತ್ಪನ್ನಗಳ ಮಾರಾಟಕ್ಕೆ ತಡೆ ಒಡ್ಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಅನಲಾಗ್ ಪನೀರ್ ಅಥವಾ ಹಾಲೇತರ ಪನೀರ್ ತಯಾರಿಕೆ ಮತ್ತು ಮಾರಾಟವನ್ನು ರಾಜ್ಯದಾದ್ಯಂತ ಸಂಪೂರ್ಣವಾಗಿ ನಿಷೇಧಿಸಿದೆ. ಈ ನಿಯಮಗಳನ್ನು ಉಲ್ಲಂಘಿಸುವವರಿಗೆ 6 ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲಾಗುವುದು. ಛತ್ತೀಸ್‌ಗಢದ ನಂತರ ಇಂತಹ ಕಠಿಣ ನಿಷೇಧವನ್ನು ಜಾರಿಗೆ ತಂದ ದೇಶದ ಎರಡನೇ ರಾಜ್ಯ ಮಹಾರಾಷ್ಟ್ರವಾಗಿದೆ.

Heart-Kidney Health: ಉಗುರಿನ ಈ ಬಿಳಿ ಗುರುತು ನಿಮ್ಮ ಆರೋಗ್ಯದ ಬಗ್ಗೆ ಏನನ್ನು ಸೂಚಿಸುತ್ತದೆ?

ಉಗುರಿನ ಕೆಳಭಾಗದಲ್ಲಿ ಬಿಳಿ ಅರ್ಧಚಂದ್ರ ನಮ್ಮ ದೇಹದ ಸಾಮಾನ್ಯ ಭಾಗವಾಗಿದೆ. ಅದು ಪ್ರತಿಯೊಬ್ಬರಲ್ಲೂ ಒಂದೇ ರೀತಿಯಲ್ಲಿ ಕಾಣಿಸಬೇಕೆಂದಿಲ್ಲ. ಆದರೆ ಅದರ ಗಾತ್ರ, ಬಣ್ಣ ಅಥವಾ ಕಾಣುವ ರೀತಿಯಲ್ಲಿ ಏಕಾಏಕಿ ಬದಲಾವಣೆ ಕಂಡುಬಂದರೆ ಅದನ್ನು ನಿರ್ಲಕ್ಷಿಸದೆ ವೈದ್ಯರ ಸಲಹೆ ಪಡೆಯುವುದು ಉತ್ತಮ. ಉಗುರುಗಳು ಆರೋಗ್ಯದ ಬಗ್ಗೆ ಕೆಲವು ಸುಳಿವುಗಳನ್ನು ನೀಡಬಹುದು, ಆದರೆ ಅವು ಮಾತ್ರದಿಂದ ಯಾವುದೇ ಕಾಯಿಲೆಯನ್ನು ದೃಢಪಡಿಸಲು ಸಾಧ್ಯವಿಲ್ಲ.

ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ