AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಮೊಟ್ಟೆ ತಿಂದರೆ ಕ್ಯಾನ್ಸರ್ ಬರುತ್ತಾ? ಮೊಟ್ಟೆ ರಹಸ್ಯ ಬಿಚ್ಚಿಟ್ಟ ತಜ್ಞ ವೈದ್ಯರು, ಎಲ್ಲಾ ಗೊಂದಲಗಳಿಗೆ ತೆರೆ!

ಮೊಟ್ಟೆ ಮೇಲೆ ಸದ್ಯ ಅನುಮಾನ ‌ಮೂಡಿದೆ. ಮೊಟ್ಟೆಗಳಲ್ಲಿ AOZ (ನೈಟ್ರೋಫ್ಯುರಾನ್) ಎಂಬ ಕ್ಯಾನ್ಸರ್ ಕಾರಕ ಅಂಶ ಪತ್ತೆ ಎಂಬ ಸುದ್ದಿ ವೈರಲ್ ಆಗಿದೆ. ಹೀಗಾಗಿ ಹೆದರಿದ ಜನರು ಮೊಟ್ಟೆ ಸೇವಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಆದ್ರೆ, ಇದುವರೆಗೂ ಅಧಿಕೃತವಾಗಿ ಯಾವುದೇ ಅಂಶ ಬೆಳಕಿಗೆ ಬಂದಿಲ್ಲ. ಹೀಗಾಗಿ ಜನ ಗೊಂದಲದಲ್ಲಿದ್ದಾರೆ. ಮೊಟ್ಟೆ ಸೇವಿಸೋದ್ರಿಂದ ಆರೋಗ್ಯಕ್ಕೆ ಕಂಟಕನಾ? ಮೊಟ್ಟೆಯಲ್ಲಿ ಕ್ಯಾನ್ಸರ್​ ಕಾರಕ ಪತ್ತೆಯಾಗಿದ್ಯಾ? ಮೊಟ್ಟೆ ತಿಂದರೇ ಮಾರಕ ಕ್ಯಾನ್ಸರ್​ ಬರುತ್ತಾ? ಹೀಗೊಂದು ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಆಗುತ್ತಿದ್ದು, ಇದರ ನಡುವೆ ಇದೀಗ ಕ್ಯಾನ್ಸರ್ ತಜ್ಞರು, ಮೊಟ್ಟೆ ಕ್ಯಾನ್ಸರ್ ರಹಸ್ಯ ಬಿಚ್ಚಿಟ್ಟಿದ್ದಾರೆ.

ಈಗಲೂ ನ್ಯೂಸ್ ಪೇಪರ್ ನಲ್ಲಿ ಕಟ್ಟಿಕೊಟ್ಟ ಬಜ್ಜಿ, ಬೋಂಡಾ ತಿಂತೀರಾ ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಚಹಾ ಅಂಗಡಿಗಳಲ್ಲಿ, ರಸ್ತೆಬದಿಯ ಸಣ್ಣ ಹೋಟೆಲ್‌ಗಳಲ್ಲಿ ಸಂಜೆಯಾಗುತ್ತಿದ್ದಂತೆ ಬಿಸಿ ಬಿಸಿಯಾಗಿ ಬಜ್ಜಿ, ಬೋಂಡಾ ಇತ್ಯಾದಿ ಕರಿದ ಆಹಾರಗಳನ್ನು ಮಾರಾಟ ಮಾಡುತ್ತಾರೆ. ಇದು ಎಲ್ಲಾ ಕಡೆಗಳಲ್ಲಿಯೂ ಸಾಮಾನ್ಯ. ಆದರೆ ಕೆಲವು ಅಂಗಡಿಗಳಲ್ಲಿ ಈ ರೀತಿ ಬಿಸಿ ತಿಂಡಿಗಳನ್ನು ಹಳೆಯ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುತ್ತಾರೆ. ಹೌದು, ಇದರಿಂದ ಬರುವ ಅಪಾಯ ತುಂಬಾ ಗಂಭೀರವಾಗಿರಬಹುದು. ಹಾಗಾದರೆ ಈ ರೀತಿ ದಿನ ಪತ್ರಿಕೆಗಳಲ್ಲಿ ಸುತ್ತಿ ಕೊಡುವಂತಹ ಆಹಾರ ಸೇವನೆ ಮಾಡುವುದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಾರಕ್ಕೆ ಎರಡು ಬಾರಿ ಈ ತರಕಾರಿ ಸೇವನೆ ಮಾಡಿದ್ರೆ ಕ್ಯಾನ್ಸರ್ ಬರೋದಿಲ್ವಂತೆ!

ಕ್ಯಾರೆಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ಸಲಾಡ್‌ಗಳಿಂದ ಹಿಡಿದು ಜ್ಯೂಸ್‌ಗಳವರೆಗೆ ಹಲವು ವಿಧಗಳಲ್ಲಿ ಸೇವನೆ ಮಾಡಬಹುದಾಗಿದೆ. ಆದರೆ ನಿಮಗೆ ಗೊತ್ತಾ? ಕೇವಲ ಈ ಒಂದು ತರಕಾರಿಯನ್ನು ವಾರಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಯಬಹುದಾಗಿದೆ. ಹೌದು, ಈ ತರಕಾರಿಯಲ್ಲಿ ಅಷ್ಟು ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಹಾಗಾದರೆ ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳೇನು? ಯಾವ ರೀತಿಯ ಕ್ಯಾನ್ಸರ್ ತಡೆಯಲು ಸಹಕಾರಿ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಇತರರಿಗಿಂತ ತುಸು ಹೆಚ್ಚೆ ನಿಮ್ಗೆ ಚಳಿಯಾಗುತ್ತಾ? ಇದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ

ಮನೆಯೊಳಗಿದ್ದರೂ ಬೆಚ್ಚಗಿನ ಬಟ್ಟೆ, ಸಾಕ್ಸ್ ಮತ್ತು ಕಂಬಳಿ ಹೊದ್ದು ಕುಳಿತುಕೊಳ್ಳುತ್ತೀರಾ, ಹಾಗಿದ್ದಲ್ಲಿ ಚಳಿಯಾಗುತ್ತಿರುವುದು ಬಾಹ್ಯ ಹವಾಮಾನದಿಂದ ಮಾತ್ರವಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಿ. ಹೌದು, ದೇಹದೊಳಗಿನ ಕೆಲವು ಅಸಮತೋಲನ ಮತ್ತು ದೈಹಿಕ ಬದಲಾವಣೆಗಳು ಸಹ ಈ ರೀತಿಯಾಗುವುದಕ್ಕೆ ಕಾರಣವಾಗಿರುತ್ತವೆ. ಇನ್ನು, ಶೀತ ವಾತಾವರಣದಲ್ಲಿ ಅತಿಯಾಗಿ ಚಳಿಯಾಗುವುದು ಒಳ್ಳೆಯದಲ್ಲ. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಚಳಿಗಾಲದಲ್ಲಿ ಕೈ, ಕಾಲು ತಂಪಗಾಗುವುದನ್ನು ತಡೆಯುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಣ್ಣ ತಲೆನೋವು ಎಂದು ನಿರ್ಲಕ್ಷ್ಯ ಮಾಡಿದರೆ ದೃಷ್ಟಿ ಕಳೆದುಕೊಳ್ಳಬೇಕಾದೀತು ಎಚ್ಚರ!

ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳು ದೊಡ್ಡದಾಗಿಬಿಡುತ್ತವೆ. ತಲೆನೋವು ನೋಡಲು ಸಣ್ಣ ಸಂಗತಿ. ಆದರೆ, ಆ ತಲೆನೋವಿನಿಂದ ಕೆಲವೊಮ್ಮೆ ಸಹಿಸಲಾಗದಂತಾಗುತ್ತದೆ. ತಲೆನೋವು, ಶೀತ ಮುಂತಾದ ಆರೋಗ್ಯ ಸಮಸ್ಯೆಗಳು ಆಗಾಗ ಬರುತ್ತಲೇ ಇರುವುದರಿಂದ ಬಹುತೇಕ ಜನರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ, ತಲೆನೋವು ಕೂಡ ಕೆಲವೊಮ್ಮೆ ಬಹಳ ಗಂಭೀರ ಆರೋಗ್ಯ ಸಮಸ್ಯೆಯಾಗಬಹುದು ಎಚ್ಚರ! ಈ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ.

ನಿಮಗೆ ಪದೇ ಪದೇ ಶೀತವಾಗುತ್ತಾ? ಹಾಗಿದ್ರೆ ಈ ತರಕಾರಿ ಸೇವನೆ ಮಾಡುವುದನ್ನು ತಪ್ಪಿಸಿ

ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆಲವರ ದೇಹಕ್ಕೆ ಒಳ್ಳೆಯದಲ್ಲ. ಏಕೆಂದರೆ ಇದರ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುವ ಅಪಾಯ ಹೆಚ್ಚಾಗಿರುತ್ತದೆ ಎನ್ನುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯವನ್ನು ಆರೋಗ್ಯವಾಗಿಟ್ಟುಕೊಂಡು ತೂಕ ಕಡಿಮೆ ಮಾಡಿಕೊಳ್ಳಲು ಇದಕ್ಕಿಂತ ಸುಲಭ ಉಪಾಯ ಮತ್ತೊಂದಿಲ್ಲ!

ಹಸಿ ಬಟಾಣಿಗಳು ಅನೇಕ ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳನ್ನು ಸಹ ನೀಡುತ್ತದೆ. ಹೌದು, ಅದರಲ್ಲಿಯೂ ಚಳಿಗಾಲದಲ್ಲಿ, ಹಸಿ ಬಟಾಣಿ ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ನಿಯಮಿತವಾಗಿ ಸೇವನೆ ಮಾಡಬಹುದು. ಹಾಗಾದರೆ, ಪ್ರತಿದಿನ ಹಸಿರು ಬಟಾಣಿ ಸೇವಿಸುವುದರಿಂದ ದೇಹಕ್ಕೆ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ತರಕಾರಿಗಳನ್ನು ಬೇಯಿಸುವುದು ಬೇಕಾಗಿಲ್ಲ ಹಸಿಯಾಗಿ ತಿನ್ನುವುದೇ ಪ್ರಯೋಜನಕಾರಿ

ಪ್ರತಿನಿತ್ಯ ಹಣ್ಣು, ಸೊಪ್ಪು ತರಕಾರಿಗಳ ಸೇವನೆ ಮಾಡಬೇಕು. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅವುಗಳಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳನ್ನು ಒದಗಿಸುತ್ತವೆ. ಇನ್ನು, ತರಕಾರಿಗಳನ್ನು ಬೇಯಿಸುವುದರಿಂದ ಅವುಗಳಲ್ಲಿರುವ ಹಾನಿಕಾರಕ ಪದಾರ್ಥಗಳು ನಾಶವಾಗುತ್ತವೆ, ಅವು ತಿನ್ನುವುದಕ್ಕೆ ಸುರಕ್ಷಿತವಾಗಿರುತ್ತವೆ. ಅವು ಬೇಗನೆ ಜೀರ್ಣವಾಗುತ್ತವೆ. ಆದರೆ ನಿಮಗೆ ಗೊತ್ತಾ, ಕೆಲವು ತರಕಾರಿಗಳನ್ನು, ಬೇಯಿಸುವ ಬದಲು ಹಸಿಯಾಗಿಯೇ ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ತರಕಾರಿಗಳು ಯಾವವು, ಯಾಕೆ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸಿಟಿ ಜನರೇ ಜೋಪಾನ! ನಿಮ್ಮ ಜೀವಕ್ಕೆ ಕುತ್ತಾಗಬಹುದು ವಾಯುಮಾಲಿನ್ಯ

ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ವಾಯು ಗುಣಮಟ್ಟ ಭಾರೀ ಮಟ್ಟದಲ್ಲಿ ಹದಗೆಟ್ಟಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಯು ಮಾಲಿನ್ಯ ದಿನನಿತ್ಯದ ಬದುಕಿನ ಭಾಗವಾಗಿ, ಮಾನವನ ಆರೋಗ್ಯದ ಮೇಲೆ ಸದ್ದಿಲ್ಲದೆ ಹಾನಿಯನ್ನುಂಟುಮಾಡುತ್ತಿದೆ. ಹಾಗಾಗಿ ಇವುಗಳ ಬಗೆಗಿನ ಮಾಹಿತಿ ಮತ್ತು ಇವುಗಳಿಂದ ಉಂಟಾಗುವ ಪರಿಣಾಮದ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಇದಕ್ಕೆ ಪೂರಕವಾಗಿ ಡಾ. ಪ್ರತಿಭಾ ನಾಗ್ ಅವರು ಕೆಲವು ವಿಷಯಗಳನ್ನು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಇತ್ತೀಚಿನ ದಿನಗಳಲ್ಲಿ ಅನೇಕರು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಕೂದಲು ಉದುರುವುದು ಕೂಡ ಒಂದು. ಹೆಚ್ಚುವರಿ ಎಣ್ಣೆ, ರಾಸಾಯನಿಕ ಶಾಂಪೂಗಳ ಬಳಕೆ, ಒತ್ತಡ ಮತ್ತು ದುರ್ಬಲ ಜೀವನಶೈಲಿ ಇವೆಲ್ಲವೂ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಇದರ ಜೊತೆಗೆ, ನಾವು ಸೇವಿಸುವ ಆಹಾರವೂ ಕೂದಲು ಉದುರುವಿಕೆಗೆ ಕಾರಣವಾಗಿದೆ. ಹೌದು, ಕೆಲವು ಆಹಾರ ಪದಾರ್ಥಗಳನ್ನು ಅತಿಯಾಗಿ ಸೇವಿಸುವುದರಿಂದಲೂ ಕೂದಲು ಉದುರಬಹುದು. ಹಾಗಾದರೆ ಆ ಆಹಾರಗಳು ಯಾವುವು, ಇದನ್ನು ತಡೆಯುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮಗೂ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬರುತ್ತಾ, ಹಾಗಿದ್ರೆ ನಿರ್ಲಕ್ಷ್ಯ ಮಾಡದೆಯೇ ತಜ್ಞರ ಈ ಸಲಹೆ ಪಾಲಿಸಿ

ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಶುರುವಾಗುತ್ತದೆ. ಆದರೆ ಇದರಿಂದ ಪರಿಹಾರ ಕಂಡುಕೊಳ್ಳುವ ಬದಲು ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಸಾಮಾನ್ಯವಾಗಿ ಈ ರೀತಿ ಆಗುವುದಕ್ಕೆ ದೇಹದಲ್ಲಿನ ಅಗತ್ಯ ಪೋಷಕಾಂಶಗಳ ಕೊರತೆಯೇ ಕಾರಣವಾಗಿರುತ್ತದೆ. ಆದಕಾರಣ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಬಂದರೆ, ಅದನ್ನು ಹಗುರವಾಗಿ ಪರಿಗಣಿಸಬೇಡಿ. ಹಾಗಾದರೆ ಈ ರೀತಿ ತಲೆನೋವು ಬಂದಾಗ ಏನು ಮಾಡಬೇಕು? ಇದನ್ನು ತಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ನೀವು ಕೂಡ ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ. ಅದರಲ್ಲಿಯೂ ನೀವು ಸಸ್ಯಹಾರಿಗಳಾಗಿದ್ದರೆ ಈ ನಾಲ್ಕು ಸೊಪ್ಪುಗಳನ್ನು ಸೇವನೆ ಮಾಡಲೇಬೇಕು. ಇವು ನಿಮ್ಮ ದೇಹದಲ್ಲಿ ಉಂಟಾದ ಬಿ 12 ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಹಾಗಾದರೆ ಆ ಸೊಪ್ಪುಗಳು ಯಾವವು? ಅವುಗಳಿಂದ ಸಿಗುವ ಮತ್ತಷ್ಟು ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್