Health Tips
ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು
ಮಳೆಗಾಲದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸೋದು ಹೇಗೆ? ಇಲ್ಲಿವೆ ಸುಲಭ ಮಾರ್ಗಗಳು
ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆಯಿಡುತ್ತವೆ. ಆದ್ದರಿಂದ ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಿ. ಮನೆಯ ಟೆರೇಸ್, ಬಾಲ್ಕನಿ ಅಥವಾ ಗಾರ್ಡನ್ನಲ್ಲಿರುವ ಹಳೆಯ ಟೈರ್ಗಳು, ಖಾಲಿ ಕುಂಡಗಳು, ಪ್ಲಾಸ್ಟಿಕ್ ಕಪ್ಗಳು, ಮತ್ತು ತೆಂಗಿನ ಚಿಪ್ಪುಗಳಲ್ಲಿ ನೀರು ತುಂಬಿಕೊಳ್ಳದಂತೆ ತಕ್ಷಣ ಅವುಗಳನ್ನು ವಿಲೇವಾರಿ ಮಾಡಿ. ಏರ್ ಕೂಲರ್ಗಳಲ್ಲಿರುವ ನೀರನ್ನು ವಾರಕ್ಕೊಮ್ಮೆಯಾದರೂ ಬದಲಾಯಿಸಿ. ಫ್ರಿಡ್ಜ್ ಹಿಂಭಾಗದ ನೀರಿನ ಟ್ರೇ ಅನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ.
- Sushma Chakre
- Updated on: Jun 5, 2026
- 9:15 pm
ಮೊಬೈಲ್ನಲ್ಲಿ ಸದಾ ಸ್ಕ್ರೋಲಿಂಗ್ ಮಾಡ್ತೀರಾ? ಹಾಗಿದ್ರೆ ನಿಮಗೂ ಬರತ್ತೆ ಈ ಕಾಯಿಲೆ!
ಸ್ಮಾರ್ಟ್ಫೋನ್ಗಳ ಅತಿಯಾದ ಬಳಕೆ ಮತ್ತು ನಿರಂತರ ಸ್ಕ್ರೋಲಿಂಗ್ ಮಾಡುವುದರಿಂದ ಬೆಂಗಳೂರಿನ ಯುವಜನರಲ್ಲಿ ‘ಟೆಕ್ಸ್ಟ್ ನೆಕ್’ ಕಾಯಿಲೆ ಸಾಂಕ್ರಾಮಿಕದಂತೆ ಹೆಚ್ಚುತ್ತಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ನಿರಂತರವಾಗಿ ತಲೆ ಬಾಗಿಸಿ ಮೊಬೈಲ್ ನೋಡುವುದರಿಂದ ಕುತ್ತಿಗೆಯ ಬೆನ್ನುಮೂಳೆ ಮತ್ತು ನರಗಳಿಗೆ ಹಾನಿಯಾಗಿ ತೀವ್ರ ಕುತ್ತಿಗೆ ನೋವು, ಭುಜದ ನೋವು ಹಾಗೂ ಕೈಗಳು ಮರಗಟ್ಟುವ ಸಮಸ್ಯೆ ಕಾಡುತ್ತಿದ್ದು, ಪ್ರತಿ 20 ನಿಮಿಷಕ್ಕೊಮ್ಮೆ ವಿರಾಮ ಪಡೆಯಲು ಸೂಚಿಸಲಾಗಿದೆ.
- Bhavana Hegde
- Updated on: May 31, 2026
- 11:02 am
ಗುಜರಾತ್ನಲ್ಲಿ ಎಬೋಲಾ ಭೀತಿ; ಕಾಂಗೋದಿಂದ ಬಂದ ವ್ಯಕ್ತಿ ಅಹಮದಾಬಾದ್ನಲ್ಲಿ ಕ್ವಾರಂಟೈನ್
Ebola Outbreak: ಆಫ್ರಿಕಾದ ಕಾಂಗೋ ದೇಶದಿಂದ ಗುಜರಾತ್ಗೆ ಬಂದಿದ್ದ 37 ವರ್ಷದ ಬ್ಯಾಂಕ್ ಉದ್ಯೋಗಿಯೊಬ್ಬರಲ್ಲಿ ಎಬೋಲಾ ವೈರಸ್ ರೀತಿಯ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸದ್ಯಕ್ಕೆ ಅವರ ಮೊದಲ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆತಂಕ ಮೂಡಿಸಿದ್ದ ಉಗಾಂಡಾ ಮಹಿಳೆಯ ಎಬೋಲಾ ಪರೀಕ್ಷಾ ವರದಿ ನೆಗೆಟಿವ್ ಬಂದ ಬೆನ್ನಲ್ಲೇ ಗುಜರಾತ್ನಲ್ಲಿ ಈ ಮೊದಲ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.
- Sushma Chakre
- Updated on: May 27, 2026
- 8:38 pm
Skin Cancer: ಟ್ಯಾಟೂ ಮೂಲಕವೂ ಚರ್ಮದ ಕ್ಯಾನ್ಸರ್ ಪತ್ತೆಹಚ್ಚಬಹುದಂತೆ!
ಚರ್ಮದ ಮೇಲ್ಮೈಯಲ್ಲಿ ಕಂಡುಬರುವ ಅತಿ ಸೂಕ್ಷ್ಮವಾದ ಉಷ್ಣಾಂಶದ ವ್ಯತ್ಯಾಸಗಳನ್ನು ಅಳೆಯುವ ಮೂಲಕ ಅತ್ಯಂತ ಆರಂಭಿಕ ಹಂತಗಳಲ್ಲೇ ಚರ್ಮದ ಕ್ಯಾನ್ಸರ್ಗಳನ್ನು ಪತ್ತೆಹಚ್ಚಬಲ್ಲ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದನ್ನು ಕೆನಡಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಇದರಿಂದ ಚರ್ಮದ ಕ್ಯಾನ್ಸರ್ ಅನ್ನು ಆರಂಭದಲ್ಲೇ ಪತ್ತೆಹಚ್ಚಬಹುದು. ಚರ್ಮರೋಗ ಶಾಸ್ತ್ರದಲ್ಲಿ ಮೆಲನೋಮಾವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ರೋಗಿಗಳು ಬದುಕುಳಿಯುವ ಪ್ರಮಾಣವನ್ನು ಸುಧಾರಿಸಲು ಅತ್ಯಂತ ನಿರ್ಣಾಯಕವಾಗಿದೆ.
- Sushma Chakre
- Updated on: May 25, 2026
- 9:37 pm
ಚಿಕ್ಕ ಮಕ್ಕಳಲ್ಲಿ ಕೂದಲು ಬಿಳಿಯಾಗುವುದಕ್ಕೆ ಕಾರಣವೇನು? ವಿಟಮಿನ್ ಕೊರತೆಯೇ ಅಥವಾ ರೋಗದ ಲಕ್ಷಣವೇ?
ಇತ್ತೀಚಿನ ದಿನಗಳಲ್ಲಿ ಬಿಳಿ ಕೂದಲು ವಯಸ್ಸಾದವರಲ್ಲಿ ಮಾತ್ರವಲ್ಲ, ಚಿಕ್ಕ ಮಕ್ಕಳಲ್ಲಿಯೂ ಕಂಡುಬರುತ್ತಿದೆ. ಈ ರೀತಿಯ ಸಮಸ್ಯೆ ಹಲವು ಪೋಷಕರ ಕಳವಳಕ್ಕೆ ಕಾರಣವಾಗಿದೆ. ಆದರೆ ಕೆಲವರು ಮಾತ್ರ ಇದು ಸಮಸ್ಯೆಯೇ ಅಲ್ಲ ಎಂಬಂತೆ ನಿರ್ಲಕ್ಷಿಸುತ್ತಾರೆ, ಈ ರೀತಿ ಮಾಡುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಇದು ವಿಟಮಿನ್ ಕೊರತೆ ಅಥವಾ ದೇಹದಲ್ಲಿನ ಕೆಲವು ಕಾಯಿಲೆಗಳ ಸೂಚಕವಾಗಿರಬಹುದು. ಹಾಗಾದರೆ ಈ ರೀತಿಯಾಗುವುದಕ್ಕೆ ನಿಜವಾದ ಕಾರಣವೇನು, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 9, 2026
- 4:00 pm
ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ
ಹೆಚ್ಚು ಉಪ್ಪಿರುವ ಆಹಾರ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ತಿಳಿದ ವಿಚಾರ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಇರುವ ರೋಗಿಗಳಿಗೆ ಉಪ್ಪಿನಂಶ ಕಡಿಮೆ ಇರುವ ಆಹಾರ ತಿನ್ನಲು ಸಲಹೆ ನೀಡುತ್ತಾರೆ. ಆದರೆ ನಿಮಗೆ ಗೊತ್ತಾ? ಉಪ್ಪಿನ ಅಂಶ ಇಲ್ಲ ಎಂದು ನಾವು ಭಾವಿಸಿ ಸೇವಿಸುವ ಹಲವಾರು ಪದಾರ್ಥಗಳಲ್ಲಿ ಹಿಡನ್ ಸೋಡಿಯಂ ಇರಬಹುದು. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 8:48 pm
ಶೀಘ್ರವೇ ಬರಲಿದೆ ಡೆಂಗ್ಯೂ ಲಸಿಕೆ! ಏನಿದರ ವಿಶೇಷತೆ? ಹೇಗೆ ಕಾರ್ಯನಿರ್ವಹಿಸುತ್ತೆ ತಿಳಿದುಕೊಳ್ಳಿ
ಭಾರತದಲ್ಲಿ ಶೀಘ್ರದಲ್ಲೇ ಡೆಂಗ್ಯೂ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ. ಇಲ್ಲಿಯವರೆಗೆ, ಡೆಂಗ್ಯೂಗೆ ಯಾವುದೇ ಲಸಿಕೆ ಇರಲಿಲ್ಲ. ಆದ್ರೆ ಈಗ ‘Qdenga’ ಲಸಿಕೆಯ ಅಂತಿಮ ಹಂತದ ಟ್ರಯಲ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಲಸಿಕೆಯನ್ನು ಜಪಾನ್ನ ಪ್ರಸಿದ್ಧ ಔಷಧ ಕಂಪನಿ ಟಕೆಡಾ ಫಾರ್ಮಾಸ್ಯುಟಿಕಲ್ಸ್ ಅಭಿವೃದ್ಧಿಪಡಿಸಿದೆ. ಹಾಗಾದರೆ ಈ ಲಸಿಕೆ ಹೇಗೆ ಕಾರ್ಯ ನಿರ್ವಹಿಸುತ್ತದೆ, ಯಾರು ಯಾವಾಗ ತೆಗೆದುಕೊಳ್ಳಬೇಕು, ನಿಜವಾಗಿಯೂ ಇದು ಕೆಲಸ ಮಾಡುತ್ತದೆಯೇ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 7:03 pm
Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?
ಬೇಸಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಅದರಲ್ಲಿಯೂ ನಾವು ಕುಡಿಯುವ ನೀರು ಈ ಸಮಯದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಸರಿಯಾಗಿ ನೀರು ಕುಡಿಯುವುದರಿಂದಲೇ ಬೇಸಿಗೆಯಲ್ಲೂ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆದರೆ ಹೆಚ್ಚಿನವರಿಗೆ ಈ ಸಮಯದಲ್ಲಿ ಯಾವ ರೀತಿಯ ನೀರನ್ನು ಕುಡಿಯಬೇಕು ಎಂಬುದೇ ತಿಳಿದಿರುವುದಿಲ್ಲ. ಅದಕ್ಕಾಗಿಯೇ ಈ ಸಮಯದಲ್ಲಿ ಯಾವ ರೀತಿಯ ನೀರು ಆರೋಗ್ಯಕ್ಕೆ ಒಳ್ಳೆಯದು, ಬಿಸಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನವೇನು ಹೀಗೆ ಸಾಕಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 4:03 pm
ಕರಿಬೇವಿನ ಎಲೆ ಇಲ್ಲದೆಯೇ ಅಡುಗೆ ಆಗಲ್ವಾ? ಆದ್ರೆ ಈ ಸಮಸ್ಯೆ ಇದ್ದಲ್ಲಿ ಇದನ್ನು ಬಳಸದಿರುವುದೇ ಒಳ್ಳೆಯದು
ಕರಿಬೇವು ಇಲ್ಲದೆಯೇ ಮಾಡುವ ಅಡುಗೆ ಅಪೂರ್ಣ ಎನಿಸಿಕೊಳ್ಳುತ್ತದೆ. ಇದನ್ನು ರುಚಿಗೆ ಮಾತ್ರವಲ್ಲ, ಇದರಲ್ಲಿರುವ ಔಷಧೀಯ ಗುಣಗಳಿಂದಲೂ ಬಳಕೆ ಮಾಡಲಾಗುತ್ತದೆ. ಅಷ್ಟು ಮಾತ್ರವಲ್ಲ, ಆಯುರ್ವೇದದಲ್ಲಿಯೂ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಕರಿಬೇವು ಎಲ್ಲರಿಗೂ ಸೂಕ್ತವಲ್ಲ. ಹಾಗಾದರೆ ಈ ಕರಿಬೇವಿನ ಎಲೆ ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವನೆ ಮಾಡಬಾರದು, ಇದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಈ ಕುರಿತ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 7, 2026
- 5:46 pm
ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!
ನಿಮ್ಮ ಆಹಾರ ಕ್ರಮ ಸರಿಯಾಗಿ ಇಲ್ಲದಿದ್ದರೆ, ಆರೋಗ್ಯ ಚೆನ್ನಾಗಿರಲು ಸಾಧ್ಯವೇ ಇಲ್ಲ ಎಂಬುದು ನಿಮಗೆ ತಿಳಿದಿರಬಹುದು. ಅದರ ಜೊತೆಗೆ ಒಳ್ಳೆಯ ಊಟವನ್ನು ಸರಿಯಾಗಿ ಮಾಡದಿದ್ದರೆ ಅದು ಕೂಡ ಆರೋಗ್ಯಕ್ಕೆ ಹಾನಿಯುಂಟುಮಾಡಬಹುದು. ಹೌದು, ಊಟ ಮಾಡುವಾಗ ಫೋನ್ ಬಳಸಿದರೆ, ಅದು ನಿಮ್ಮ ಆರೋಗ್ಯಕ್ಕೂ ಹಾನಿ ಮಾಡುತ್ತದೆ. ಫೋನ್ ಬಳಸುವುದರಿಂದ ಕರುಳು ಹಾಳಾಗುತ್ತದೆ. ಹಾಗಾದರೆ ಫೋನ್ ಬಳಕೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆಯೇ, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 7, 2026
- 4:51 pm
ಸಿಹಿಯಾಗಿರುವ ಆಹಾರವೊಂದೇ ಅಲ್ಲ ನೀವು ಇಷ್ಟಪಟ್ಟು ತಿನ್ನುವ ಉಪ್ಪು ಉಪ್ಪಾಗಿರುವ ಆಹಾರ ಕೂಡ ಶುಗರ್ ಲೆವೆಲ್ ಹೆಚ್ಚಿಸಬಹುದು!
ಸಾಮಾನ್ಯವಾಗಿ ಎಲ್ಲರು ನಂಬಿರುವುದು ಹೆಚ್ಚು ಸಿಹಿ ಆಹಾರವನ್ನು ಸೇವಿಸುವುದರಿಂದ ಮಧುಮೇಹ ಬರುತ್ತದೆ ಎಂದು. ಅದಕ್ಕಾಗಿಯೇ ಮಧುಮೇಹ ರೋಗಿಗಳು ಸಿಹಿಯಾಗಿರುವ ಆಹಾರವನ್ನು ಅತಿಯಾಗಿ ಸೇವಿಸದಂತೆ ಸಲಹೆ ನೀಡಲಾಗುತ್ತದೆ, ಆದರೆ ನಿಮಗೆ ಗೊತ್ತಾ? ಕೆಲವು ಉಪ್ಪಿರುವ ಆಹಾರಗಳು ಕೂಡ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಹಾಗಾದರೆ ಉಪ್ಪಿರುವ ಆಹಾರ ಹೇಗೆ ಶುಗರ್ ಲೆವೆಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ, ಯಾವ ಆಹಾರಗಳು ಆರೋಗ್ಯಕ್ಕೆ ಅಪಾಯಕಾರಿ, ಡಯಾಬಿಟಿಸ್ ರೋಗಿಗಳು ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 6, 2026
- 9:25 pm
ಕೊಲನ್ ಕ್ಯಾನ್ಸರ್ ಎಷ್ಟು ಅಪಾಯಕಾರಿ ಗೊತ್ತಾ? ಹೇಗಿರುತ್ತೆ ಇದರ ಲಕ್ಷಣಗಳು? ಡಾ ಅನುರಾಗ್ ಶೆಟ್ಟಿ ನೀಡಿರುವ ಮಾಹಿತಿ ಇಲ್ಲಿದೆ
ಮೊದಲೆಲ್ಲಾ ಕ್ಯಾನ್ಸರ್ ಎಂಬ ಪದವೇ ಭಯ ಹುಟ್ಟಿಸುತ್ತಿತ್ತು. ಆದರೆ ಈಗ ಈ ಆರೋಗ್ಯ ಸಮಸ್ಯೆ ಅತಿ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದ್ದು ಜನ ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಾ ತಿಳಿದುಕೊಳ್ಳುವುದಕ್ಕೆ ಆರಂಭ ಮಾಡಿದ್ದಾರೆ. ಆದರೆ ಕೆಲವು ಕ್ಯಾನ್ಸರ್ ಬಗ್ಗೆ ತಿಳಿದುಕೊಂಡಷ್ಟು ಸಾಲುವುದಿಲ್ಲ. ಅಂತವುಗಳಲ್ಲಿ ಕೊಲನ್ ಕ್ಯಾನ್ಸರ್ ಅಥವಾ ದೊಡ್ಡ ಕರುಳಿನ ಕ್ಯಾನ್ಸರ್ ಕೂಡ ಒಂದು. ಅತಿ ಹೆಚ್ಚು ಕಾಣಿಸಿಕೊಳ್ಳುವ ಕ್ಯಾನ್ಸರ್ ಗಳಲ್ಲಿ ಇದು ಒಂದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಡಾ ಅನುರಾಗ್ ಶೆಟ್ಟಿ ಅವರು ನೀಡಿದ್ದು, ಲಕ್ಷಣಗಳು, ರೋಗ ಪತ್ತೆ ಮಾಡುವುದು ಹೇಗೆ ಎಂಬುದನ್ನು ಹೇಳಿದ್ದಾರೆ.
- Preethi Bhat Gunavante
- Updated on: Apr 6, 2026
- 6:50 pm