AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!

ಗರ್ಭಪಾತದ ನಂತರ ಮಹಿಳೆಯರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಈ ಸಮಯದಲ್ಲಿ, ದೇಹವು ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ಗರ್ಭಪಾತದ ನಂತರ ಸರಿಯಾದ ಆರೈಕೆ ಮಾಡುವುದರಿಂದ ಚೇತರಿಕೆ ವೇಗಗೊಳ್ಳುವುದಲ್ಲದೆ, ಭವಿಷ್ಯದಲ್ಲಿ ಬರುವ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಆದರೆ ಈ ಅವಧಿಯಲ್ಲಿ ಮಾಡುವ ನಿರ್ಲಕ್ಷ್ಯವು ಆರೋಗ್ಯದ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ, ಗರ್ಭಪಾತದ ನಂತರ ಮಹಿಳೆಯರು ಯಾವುದನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಕಣ್ಣುಗಳ ಮೇಲ್ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಇದು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯ ಸಂಕೇತವೇ?

ಕಣ್ಣುಗಳ ಮೇಲೆ ನೋವು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿ ಕಂಡುಬರುವ ನೋವು ಮೆದುಳಿಗೆ ಸಂಬಂಧಿಸಿದ ಸಮಸ್ಯೆಯಾಗಿರಬಹುದೇ? ಅಥವಾ ಅದು ಕಣ್ಣಿಗೆ ಸಂಬಂಧಿಸಿದ ಕಾಯಿಲೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹ ಮುಖ್ಯವಾಗುತ್ತದೆ. ವೈದ್ಯರು ಹೇಳುವ ಪ್ರಕಾರ, ಕಣ್ಣುಗಳ ಮೇಲೆ ಕಂಡುಬರುವ ನೋವು ದುರ್ಬಲ ಕಣ್ಣುಗಳಿಂದ ಹಿಡಿದು ಮೈಗ್ರೇನ್‌ವರೆಗೆ ಯಾವುದರ ಲಕ್ಷಣ ಕೂಡ ಆಗಿರಬಹುದು ಎಂದು ವೈದ್ಯರು ಹೇಳುತ್ತಾರೆ. ಹಾಗಾಗಿ ಯಾರಿಗಾದರೂ ಈ ರೀತಿಯ ಸಮಸ್ಯೆ ಕಂಡುಬರುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇವುಗಳ ಬಗ್ಗೆ ತಿಳಿದುಕೊಂಡು ಮೊದಲ ಹಂತದಲ್ಲಿಯೇ ಅದನ್ನು ತಡೆಗಟ್ಟುವ ಮಾರ್ಗವನ್ನು ಕಂಡುಕೊಳ್ಳಿ.

ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. 'ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿ ಯಾನ'ದಡಿ ಈ ಲಸಿಕೆ ಕಾರ್ಯಕ್ರಮ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಬಾಲಕಿಯರು ಇದರ ಫಲಾನುಭವಿದರಗಳಾಗಲಿದ್ದು, ಇದರ ಭಾಗವಾಗಿ ಮೆರ್ಕ್ ಸಂಸ್ಥೆಯು ತಯಾರಿಸಿರುವ 'ಗಾರ್ಡಾಸಿಲ್' ಚುಚ್ಚುಮದ್ದನ್ನು ದೇಶಾದ್ಯಂತ ಉಚಿತವಾಗಿ ನೀಡಲಾಗುವುದು. ಯಾಕೆ ಈ ನಿರ್ಧಾರ? 14ನೇ ವಯಸ್ಸಿಗೇ ಏಕೆ? ಇಲ್ಲಿದೆ ವಿವರ

ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ

ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿಗೂ ಸರಿಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿರುತ್ತದೆ. ಸರಿಯಾದ ಮಾಹಿತಿಯಿಲ್ಲದೆ ಯಾವುದೇ ಅಭ್ಯಾಸವನ್ನು ಅಳವಡಿಸಿಕೊಳ್ಳುವುದು ಒಳ್ಳೆಯದಲ್ಲ. ಆದ್ದರಿಂದ, ವಾಕಿಂಗ್ ಮಾಡಲು ಸರಿಯಾದ ಸಮಯ ಯಾವುದು? ಊಟ ಮಾಡಿದ ಮೇಲೆ ವಾಕಿಂಗ್ ಹೋಗುವುದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಹೊರದೇಶಕ್ಕೆ ಹೋದ ವಿದ್ಯಾರ್ಥಿಗಳು ಹೆಚ್ಚು ಖಿನ್ನತೆಗೆ ಒಳಗಾಗುವುದು ಯಾಕೆ? ಇದರಿಂದ ಹೊರಬರುವುದು ಹೇಗೆ? ಇಲ್ಲಿದೆ ಡಾ. ಕೃತಿಶ್ರೀ ಸಲಹೆ

ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ದೂರದ ದೇಶಗಳಿಗೆ ಹೋಗುವ ಇಂದಿನ ಯುವಜನತೆಗೆ ಮಾನಸಿಕ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಿದೆ. ಸಾಮಾನ್ಯವಾಗಿ ಇಂತಹ ಘಟನೆಗಳನ್ನು ಕೇಳಿದಾಗ ಸಾಮಾಜಿಕ ವ್ಯವಸ್ಥೆಯನ್ನು ದೂಷಿಸಿ ನಂತರ ಕೆಲವೇ ಸಮಯದಲ್ಲಿ ಮರೆತುಬಿಡುತ್ತೇವೆ. ಆದರೆ ಹಾಗಾಗಬಾರದು. ಅದಕ್ಕಾಗಿಯೇ ಈ ಬಗ್ಗೆ ಮಂಗಳೂರು ಕೆಎಂಸಿ ಆಸ್ಪತ್ರೆಯ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್, ಡಾ. ಕೃತಿಶ್ರೀ ಸೋಮಣ್ಣ (Dr. Krithishree S.S.) ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿ ಹಂಚಿಕೊಂಡಿದ್ದು, ಮತ್ತಷ್ಟು ಮಾಹಿತಿ ಪಡೆಯಲು ಈ ಸ್ಟೋರಿ ಓದಿ.

ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಕ್ಯಾನರ್ ಸಂಶೋಧನೆಗೆ ಸಂದಿದೆ ಅಂತರಾಷ್ಟ್ರೀಯ ಮನ್ನಣೆ

ಡಾ. ಕಟ್ಟೇಶ್ ವಿ. ಕಟ್ಟಿ ಅವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ. ಗ್ರೀನ್ ನ್ಯಾನೋಟೆಕ್ನಾಲಜಿ ಕ್ಷೇತ್ರದಲ್ಲಿ ಇವರ ಸಾಧನೆ ಅಪಾರವಾಗಿದ್ದು, ಸಾಂಪ್ರದಾಯಿಕ ಆಯುರ್ವೇದ ಔಷಧಿಗಳನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ 'ನ್ಯಾನೋ-ಆಯುರ್ವೇದ' ಪರಿಕಲ್ಪನೆಯನ್ನು ಪರಿಚಯಿಸಿದ್ದು, ಈ ಸಾಧನೆಗಾಗಿ ಡಾ. ಕಟ್ಟಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿದೆ. ಹಾಗಾದರೆ ಏನಿದು ಗ್ರೀನ್ ನ್ಯಾನೋಟೆಕ್ನಾಲಜಿ, ಇದರಿಂದ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಿಟಮಿನ್ ಡಿ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ವಿಟಮಿನ್ ಡಿ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದ್ದು, ಇದರ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇದರ ಕೊರತೆಯಾದಾಗ ಜನ ತಮ್ಮ ಅಗತ್ಯಗಳನ್ನು ಪೂರೈಸಲು ಪೂರಕ ಅಂದರೆ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಾರೆ. ಆದರೆ ಟಮಿನ್ ಡಿ ಸಪ್ಲಿಮೆಂಟ್ ಹಾಲಿನೊಂದಿಗೆ ಅಥವಾ ನೀರಿನೊಂದಿಗೆ ಯಾವುದರೊಂದಿಗೆ ತೆಗೆದುಕೊಳ್ಳುವುದು ಉತ್ತಮ ಮತ್ತು ಯಾವ ಸಮಯದಲ್ಲಿ ಸೇವನೆ ಮಾಡುವುದರಿದ ಹೆಚ್ಚು ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ

ಊಟ ಮಾಡಿದ ಮೂರ್ನಾಲ್ಕು ಗಂಟೆಗಳ ನಂತರ ಹಸಿವಾಗುವುದು ಸಹಜ, ಆದರೆ ಊಟ ಮಾಡಿದ ಕೂಡಲೇ ಹಸಿವಾಗುವುದು ಸಾಮಾನ್ಯವಲ್ಲ. ಹೌದು, ಇದು ಮಧುಮೇಹದ ಸೂಚನೆಯೂ ಆಗಿರಬಹುದು. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಆಗಾಗ ಹಸಿವಾಗುವುದು ದೇಹದಲ್ಲಿನ ಸಕ್ಕರೆ ಮಟ್ಟದಲ್ಲಿ ವ್ಯತ್ಯಾಸ ಉಂಟಾಗಿ ಇನ್ಸುಲಿನ್ ಕಾರ್ಯ ದುರ್ಬಲಗೊಂಡಿದೆ ಎಂಬುದರ ಸಂಕೇತ ಎಂದು ಹೇಳುತ್ತದೆ. ಹಾಗಾದರೆ ಯಾವ ಯಾವ ಲಕ್ಷಣಗಳು ಮಧುಮೇಹದ ಎಚ್ಚರಿಕೆಯ ಸೂಚನೆಗಳಾಗಿರುತ್ತವೆ, ಈ ರೀತಿಯ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈಬಿಪಿ, ಡಯಾಬಿಟಿಸ್ ಕಿಡ್ನಿಗೆ ಹಾನಿ ಮಾಡುತ್ತದೆಯೇ? ನೀವು ತಿಳಿಯಬೇಕಾದ ವಿಷಯಗಳಿವು!

ಇತ್ತೀಚಿನ ದಿನಗಳಲ್ಲಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಕಾಣಬಹುದು. ಹಾಗಾಗಿ ಈ ರೋಗಗಳನ್ನು ಹಗುರವಾಗಿ ಪರಿಗಣಿಸುವುದು ಅಪಾಯಕಾರಿಯಾಗಿದ್ದು ಮುಂದೊಂದು ದಿನ ಅದು ಕಿಡ್ನಿಯನ್ನು ಶಾಶ್ವತವಾಗಿ ಹಾನಿ ಮಾಡುವ ಮೊದಲು ಅವುಗಳ ಲಕ್ಷಣ ಮತ್ತು ತಡೆಗಟ್ಟುವ ಕ್ರಮಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳುವುದು ಒಳ್ಳೆಯದು. ಹಾಗಾದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ

ತರಕಾರಿಗಳು ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು... ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿವೆ. ಕೆಲ ತರಕಾರಿಗಳಲ್ಲಿ 20 ಪಟ್ಟು ಹೆಚ್ಚು ಸೀಸ, ನಿಷಿದ್ಧ ಕೀಟನಾಶಕಗಳು ಪತ್ತೆಯಾಗಿವೆ.

ಮಹಿಳೆಯರೇ… 35 ಆಯ್ತಾ? ಹಾಗಿದ್ರೆ ನಿಮ್ಮ ಊಟದ ಪ್ಲೇಟ್ ನಲ್ಲಿ ಇವು ಇರಲೇಬಾರದು!

35ರ ನಂತರ ಮಹಿಳೆಯರ ದೇಹದಲ್ಲಿ ಅನೇಕ ರೀತಿಯ ಬದಲಾವಣೆಗಳಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಪ್ರತಿನಿತ್ಯ ಸೇವನೆ ಮಾಡುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಆಹಾರದಿಂದ ಈ ರೀತಿ ಕಂಡುಬರುವ ಸಮಸ್ಯೆಗಳನ್ನು ತಡೆಗಟ್ಟಬಹುದು. ಹಾಗಾದರೆ ಯಾವ ಆಹಾರಗಳ ಸೇವನೆ ಮಾಡಬೇಕು ಮತ್ತು ಮಾಡಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೇಸಿಗೆ ಅಂತ ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಬಿ ಕೇರ್​ಫುಲ್ ಎಂದ ಆರೋಗ್ಯ ಇಲಾಖೆ: ಏಕೆ?

ಬೆಂಗಳೂರಿನಲ್ಲಿ ಬೇಸಿಗೆ ಆರಂಭದಲ್ಲೇ ಕಲ್ಲಂಗಡಿ, ಐಸ್ ಕ್ರೀಂ ಹಾಗೂ ಜ್ಯೂಸ್‌ಗಳ ಸುರಕ್ಷತೆ ಬಗ್ಗೆ ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಕಲ್ಲಂಗಡಿ ಹಣ್ಣುಗಳಲ್ಲಿ ಕೃತಕ ಬಣ್ಣಗಳು ಮತ್ತು ರಾಸಾಯನಿಕಗಳ (ಎರಿಥ್ರೋಸಿನ್, ನೈಟ್ರೇಟ್) ಬಳಕೆಯಾಗುವ ಸಾಧ್ಯತೆ ಇದೆ. ಇದು ಆರೋಗ್ಯಕ್ಕೆ ಅಪಾಯಕಾರಿ. ಮಾರ್ಚ್‌ನಲ್ಲಿ ಈ ಆಹಾರಗಳ ಮಾದರಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಗ್ರಾಹಕರು ಎಚ್ಚರದಿಂದಿರಲು ಸೂಚಿಸಲಾಗಿದೆ.