AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಚಳಿಗಾಲದಲ್ಲಿ, ಪ್ಲೇಟ್‌ಲೆಟ್ ಕಡಿಮೆಯಾಗುವುದಕ್ಕೆ ಕಾರಣವೇನು ಗೊತ್ತಾ? ತಡೆಯಲು ಇಲ್ಲಿದೆ ಸಲಹೆ

ದೇಹದಲ್ಲಿ ಪ್ಲೇಟ್‌ಲೆಟ್‌ ಕಡಿಮೆಯಾಗುವುದರ ಬಗ್ಗೆ ನೀವು ಕೇಳಿರಬಹುದು. ಇದು ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ. ಆದರೆ ಇದರ ಕೊರತೆಯನ್ನು ಹಗುರವಾಗಿ ಪರಿಗಣಿಸಬಾರದು, ಏಕೆಂದರೆ ಇದರ ಲಕ್ಷಣಗಳು ಗಂಭೀರವಾಗಿರಬಹುದು. ಅಷ್ಟೇ ಅಲ್ಲ, ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾದರೆ, ಸಣ್ಣಪುಟ್ಟ ಗಾಯಗಳು ಸಹ ಗಂಭೀರವಾಗುತ್ತದೆ. ಹಾಗಾದರೆ ದೇಹದಲ್ಲಿ ಪ್ಲೇಟ್‌ಲೆಟ್‌ ಕಡಿಮೆಯಾಗುವುದಕ್ಕೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ!

ಇತ್ತೀಚಿನ ದಿನಗಳಲ್ಲಿ ಹಲವರ ಜೀವನಶೈಲಿ ಬದಲಾಗಿದೆ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಸಾಕಷ್ಟು ನಿದ್ರೆ ಮಾಡದಿರುವುದು, ವ್ಯಾಯಾಮದ ಕೊರತೆ ಹೀಗೆ ಅನೇಕ ಅನಾರೋಗ್ಯಕರ ಅಭ್ಯಾಸಗಳು ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಹಾಗಾಗಿ ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಅಥವಾ ಹಗ್ಗದ ಸಹಾಯದಿಂದ ಜಿಗಿಯುವ ವ್ಯಾಯಾಮವನ್ನು ಮಾಡಬಹುದು. ಈ ಒಂದು ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಕ್ಯಾಸ್ಟರ್ ಆಯಿಲ್ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕರು ಇದನ್ನು ಜೀರ್ಣಕ್ರಿಯೆಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಬಳಸುತ್ತಾರೆ. ಅದರಲ್ಲಿಯೂ ಕರುಳಿನ ಕಾರ್ಯ ಸರಿಯಾಗಿ ನಡೆಯದಿದ್ದಾಗ, ಮಲಬದ್ಧತೆ, ಅನಿಲ ಮತ್ತು ಹೊಟ್ಟೆ ಭಾರವಾದ ಸಮಸ್ಯೆಗಳು ಉದ್ಭವಿಸಬಹುದು. ಅಂತಹ ಸಂದರ್ಭಗಳಲ್ಲಿ, ಅನೇಕರು ಹರಳೆಣ್ಣೆ ಉಪಯೋಗ ಮಾಡುತ್ತಾರೆ. ಆದರೆ ಕ್ಯಾಸ್ಟರ್ ಆಯಿಲ್ ನಿಜವಾಗಿಯೂ ಕರುಳನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆಯೇ ಅಥವಾ ಇಲ್ಲವೇ ಎಂಬ ಸಂಶಯ ಹಲವರನ್ನು ಕಾಡುತ್ತದೆ. ಈ ಗೊಂದಲಕ್ಕೆ ಉತ್ತರ ಸ್ಟೋರಿಯಲ್ಲಿದೆ.

ನೀವು ಮೊಬೈಲ್, ಲ್ಯಾಪ್‌ಟಾಪ್‌ ಹೆಚ್ಚಾಗಿ ಬಳಸುತ್ತೀರಾ? ಹಾಗಿದ್ರೆ ಈ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಲೇಬೇಕು!

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಸಾಧನಗಳ ದೀರ್ಘಕಾಲೀನ ಬಳಕೆಯು ಕುತ್ತಿಗೆ ಮತ್ತು ಕಣ್ಣು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ತಡೆಗಟ್ಟುವಿಕೆಗಾಗಿ ಕೆಲವು ಅಭ್ಯಾಸಗಳನ್ನು ಪಾಲಿಸುವುದು ಬಹಳ ಮುಖ್ಯವಾಗುತ್ತದೆ. ಸಮಯಕ್ಕೆ ಸರಿಯಾಗಿ ಪರಿಹರಿಸಿಕೊಳ್ಳದಿದ್ದರೆ, ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದರೆ ಈ ರೀತಿಯ ಸಮಸ್ಯೆ ತಡೆಯಲು ಯಾವ ಅಭ್ಯಾಸಗಳನ್ನು ಸರಿಪಡಿಸಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಗುರು ಕಚ್ಚುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಅನೇಕರಿಗೆ ಪದೇ ಪದೇ ಉಗುರು ಕಚ್ಚುವ ಅಭ್ಯಾಸವಿರುತ್ತದೆ. ಸಾಮಾನ್ಯವಾಗಿ ಈ ರೀತಿಯ ಅಭ್ಯಾಸಗಳ ಬಗ್ಗೆ ಯಾರೂ ಕೂಡ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಅದರ ಬದಲಾಗಿ ಕಡೆಗಣಿಸಲಾಗುತ್ತದೆ, ಆದರೆ ಕಾಲಾನಂತರದಲ್ಲಿ ಇದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಉಗುರು ಕಚ್ಚುವುದರಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಮತ್ತು ಅವುಗಳನ್ನು ತಡೆಯುವುದು ಹೇಗೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಿಣಿಯರಲ್ಲಿ ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾಗುತ್ತದೆ. ಹಾಗಾಗಿ ಜನ ನೀರು ಕುಡಿಯುವ ಪ್ರಮಾಣವನ್ನು ಕಡಿಮೆ ಮಾಡುತ್ತಾರೆ. ಆದರೆ ದೇಹಕ್ಕೆ ನೀರಿನ ಅವಶ್ಯಕತೆ ಇರುತ್ತದೆ ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಚಳಿಗಾಲದಲ್ಲಿ ಗರ್ಭಿಣಿಯರು ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಕುಡಿಯಬೇಕು. ಈ ವಿಷಯವಾಗಿ ಆರ್‌ಎಂಎಲ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಡಾ. ಸಲೋನಿ ಚಡ್ಡಾ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಗರ್ಭಿಣಿಯರು ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು, ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ ಎಂಬುದರ ಬಗ್ಗೆ ತಿಳಿಸಿದ್ದಾರೆ.

ಆರೋಗ್ಯವಾಗಿರಲು ಮಾತ್ರೆ ತಗೋಳೋದು ಬಿಟ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಗಮನಕೊಡಿ!

ಆರೋಗ್ಯವಾಗಿರಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆ ಸರಿಯಾಗಿರುವುದು ಬಹಳ ಮುಖ್ಯ. ನಿಮ್ಮ ರೋಗನಿರೋಧಕ ಶಕ್ತಿ ಬಲವಾಗಿದ್ದಷ್ಟೂ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ರೋಗನಿರೋಧಕ ಶಕ್ತಿ ದುರ್ಬಲಗೊಂಡರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ಹಾಗಾಗಿ ಸೇವಿಸುವ ಆಹಾರವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ರೋಗನಿರೋಧಕ ಶಕ್ತಿ ಬಲವಾಗಿದ್ದಷ್ಟೂ ಆರೋಗ್ಯ ಸಮಸ್ಯೆಗಳು ದೂರ ಉಳಿಯುತ್ತವೆ. ಹಾಗಾದರೆ ಇದನ್ನು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಈ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ

ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಈ ರೀತಿಯಾದಾಗ ಇದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾದರೆ ಒಸಡುಗಳಲ್ಲಿ ರಕ್ತಸ್ರಾವವಾಗುವುದಕ್ಕೆ ಕಾರಣವೇನು, ಈ ರೀತಿಯಾಗುವುದಕ್ಕೂ ಡಯಾಬಿಟಿಸ್ ಗೂ ಸಂಬಂಧವಿದೆಯೇ, ಇದು ಹೃದಯ ಸಂಬಂಧಿ ಕಾಯಿಲೆಯ ಸಂಕೆತವೇ ತಿಳಿದುಕೊಳ್ಳಿ.

ಚಳಿಗಾಲದಲ್ಲಿ ನೀರು ಕಡಿಮೆ ಕುಡಿಯುತ್ತೀರಾ? ಹಾಗಿದ್ರೆ ಈ ಸಮಸ್ಯೆ ಕಟ್ಟಿಟ್ಟ ಬುತ್ತಿ

ನೀರು ಕಡಿಮೆ ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನ, ಕೆಲಸದ ಚಿಂತೆ ಮತ್ತು ಬಾಯಾರಿಕೆಯಾಗದಿರುವುದರಿಂದ ನೀರು ಕುಡಿಯುವುದನ್ನೇ ಕಡಿಮೆ ಮಾಡಿದ್ದಾರೆ. ಆದರೆ ನಿಮಗೆ ಗೊತ್ತಾ ಈ ರೀತಿಯ ಅಭ್ಯಾಸ ಕಿಡ್ನಿ ಸ್ಟೋನ್ ಅಪಾಯವನ್ನು ಹೆಚ್ಚಿಸುತ್ತದೆ. ಈ ವಿಷಯದ ಕುರಿತು ಡಾ. ಹಿಮಾಂಶು ವರ್ಮಾ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ನೀರು ಕಡಿಮೆ ಕುಡಿಯುವ ಅಭ್ಯಾಸ ಕಿಡ್ನಿ ಸ್ಟೋನ್ ಗೆ ಹೇಗೆ ಕಾರಣವಾಗುತ್ತದೆ, ಅದರ ಲಕ್ಷಣಗಳು ಹೇಗಿರುತ್ತದೆ ಮತ್ತು ಅದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ನೀವು ಕೆಲಸ ಮಾಡುವಾಗ ಕುಳಿತುಕೊಳ್ಳುವಂತಹ ಭಂಗಿಯಿಂದಲೂ ಬರಬಹುದು ಬೆನ್ನು ನೋವು ಎಚ್ಚರಿಕೆ ನೀಡಿದ ಡಾ ಅಜಯ್‌ ಹೆಗ್ಡೆ

ಇತ್ತೀಚಿನ ದಿನಗಳಲ್ಲಿ ಕುತ್ತಿಗೆ, ಬೆನ್ನು ನೋವಿನಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕುಳಿತುಕೊಳ್ಳುವ ಭಂಗಿ ಸರಿಯಾಗಿ ಇಲ್ಲದಿರುವುದು. ಹಾಗಾಗಿ ಈ ರೀತಿಯಾದಾಗ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದರ ಬಗ್ಗೆ ಸರ್ಜಾಪುರ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್‌- ನ್ಯೂರೊ ಸ್ಪೈನ್‌ ಸರ್ಜರಿ ಡಾ ಅಜಯ್‌ ಹೆಗ್ಡೆ ಅವರು ಈ ಕುರಿತು ಕೆಲವು ವಿಷಯಗಳನ್ನು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ದೇಹದಲ್ಲಿರುವ ಮಚ್ಚೆಗಳಲ್ಲಿ ಈ ಬದಲಾವಣೆ ಆದ್ರೆ ನಿರ್ಲಕ್ಷ್ಯ ಮಾಡಬೇಡಿ

ಚರ್ಮದ ಮೇಲೆ ಸಣ್ಣ ಚುಕ್ಕೆಯಂತೆ ಕಾಣುವ ಸಣ್ಣ ಮಚ್ಚೆ ಕೆಲವೊಮ್ಮೆ ದೇಹಕ್ಕೆ ಹಾನಿ ಮಾಡಬಹುದು. ಹೌದು, ಮಚ್ಚೆ ಎಂದು ನಿರ್ಲಕ್ಸ್ಯ ಮಾಡುವ ಮೊದಲು ಕೆಲವು ವಿಷಯಗಳನ್ನು ತಿಳಿದುಕೊಂಡಿರಬೇಕಾಗುತ್ತದೆ. ಸಾಮಾನ್ಯವಾಗಿ ಮಚ್ಚೆಗಳು ಕೆಲವರಿಗೆ ಹುಟ್ಟಿನಿಂದಲೇ ಇರುತ್ತವೆ, ಇನ್ನು ಕೆಲವರಿಗೆ ಅವು ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುತ್ತದೆ ಅಥವಾ ಅದೇ ಗಾತ್ರದಲ್ಲಿ ಬೆಳವಣಿಗೆಯಾಗುತ್ತದೆ. ಆದರೆ ಎಲ್ಲಾ ಮಚ್ಚೆಗಳು ಸಾಮಾನ್ಯವಲ್ಲ. ದೇಹದ ಮೇಲಿನ ಮಚ್ಚೆಯ ಬಣ್ಣ ಬದಲಾದರೆ ಅಥವಾ ಗಾತ್ರದಲ್ಲಿ ಹೆಚ್ಚಾದರೆ, ಅದು ಅಪಾಯದ ಸಂಕೇತವಾಗಿರಬಹುದು.

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.