AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips

Health Tips

ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು

ಇನ್ನೂ ಹೆಚ್ಚು ಓದಿ

ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗಿದರೆ ಅದನ್ನು ತಿನ್ನುವುದು ಸುರಕ್ಷಿತವೇ ಅಥವಾ ವಿಷಕಾರಿಯೇ ತಿಳಿದುಕೊಳ್ಳಿ

ಆಲೂಗಡ್ಡೆ ಆರೋಗ್ಯಕರ ಆಹಾರವಾಗಿದ್ದರೂ, ಅದು ಹಸಿರು ಬಣ್ಣಕ್ಕೆ ತಿರುಗಿದಾಗ ಅಥವಾ ಹೆಚ್ಚು ಮೊಳಕೆ ಬಂದಾಗ ಎಚ್ಚರಿಕೆ ಅಗತ್ಯ. ಸೋಲನೈನ್ ಎಂಬ ವಿಷಕಾರಿ ಸಂಯುಕ್ತದ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇರುವುದರಿಂದ ಇಂತಹ ಆಲೂಗಡ್ಡೆಯನ್ನು ಸೇವಿಸುವುದನ್ನು ತಪ್ಪಿಸುವುದು ಉತ್ತಮ. ಸರಿಯಾದ ರೀತಿಯಲ್ಲಿ ಸಂಗ್ರಹಿಸಿದರೆ ಆಲೂಗಡ್ಡೆಯ ಗುಣಮಟ್ಟವೂ ಉಳಿಯುತ್ತದೆ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಪ್ರತಿದಿನ ಒಂದು ಸಣ್ಣ ತುಂಡು ಶುಂಠಿ ತಿನ್ನುವುದರಿಂದ ಸಿಗುವ ಪ್ರಯೋಜನಗಳು!

ಶುಂಠಿ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾದ ನೈಸರ್ಗಿಕ ಆಹಾರ ಪದಾರ್ಥ. ಜೀರ್ಣಕ್ರಿಯೆ ಸುಧಾರಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿ ಹೆಚ್ಚಿಸುವುದು, ಉರಿಯೂತ ಕಡಿಮೆ ಮಾಡುವುದು, ವಾಕರಿಕೆ ನಿಯಂತ್ರಿಸುವುದು ಮತ್ತು ಹೃದಯದ ಆರೋಗ್ಯಕ್ಕೆ ಬೆಂಬಲ ನೀಡುವವರೆಗೆ ಹಲವು ರೀತಿಯ ಪ್ರಯೋಜನಗಳು ಸಿಗುತ್ತದೆ. ಆದರೆ ಇದನ್ನು ಯಾವ ರೀತಿ ಸೇವಿಸಬೇಕು, ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ

ಕ್ಯಾಲೊರಿ ಬರ್ನ್‌ ಮಾಡಲು ರನ್ನಿಂಗ್ vs ಸೈಕ್ಲಿಂಗ್ ಯಾವುದು ಬೆಸ್ಟ್‌ ತಿಳಿದುಕೊಳ್ಳಿ

ಫಿಟ್ನೆಸ್ ಕಾಪಾಡಿಕೊಳ್ಳಲು ಅಥವಾ ಹೆಚ್ಚುವರಿ ತೂಕವನ್ನು ಕಡಿಮೆ ಮಾಡಿಕೊಳ್ಳಲು ಕಾರ್ಡಿಯೋ ವ್ಯಾಯಾಮ ಬಹಳ ಮುಖ್ಯ. ಇದರಲ್ಲಿ ರನ್ನಿಂಗ್ ಮತ್ತು ಸೈಕ್ಲಿಂಗ್ ಮುಖ್ಯವಾಗುತ್ತದೆ. ಆದರೆ ಈ ಎರಡರ ನಡುವೆ, ಯಾವುದು ನಿಮ್ಮ ತೂಕವನ್ನು ವೇಗವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪರಿಣಾಮಕಾರಿ ಎಂಬ ಪ್ರಶ್ನೆ ಬಹುತೇಕರನ್ನು ಕಾಡುತ್ತದೆ ಎಂಬುದಕ್ಕೆ ಉತ್ತರ ಸ್ಟೋರಿಯಲ್ಲಿದೆ.

ದೃಷ್ಟಿ ಮಸಕಾಗುವುದನ್ನು ತಡೆಯಲು ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಕಣ್ಣಿನ ಆರೋಗ್ಯ ಕಾಪಾಡುವುದು ಸವಾಲಿನ ಕೆಲಸವಾಗಿದೆ. ಅದಕ್ಕಾಗಿಯೇ ಹಲವರು ದೃಷ್ಟಿ ಮಸಕಾಗುತ್ತಿದ್ದರೆ ಅದಕ್ಕೆ ಪೂರಕವಾದ ಔಷಧಗಳ ಸೇವನೆ ಮಾಡುತ್ತಾರೆ. ಆದರೆ ನಿಯಮಿತವಾಗಿ ಈ ಬೀಜಗಳನ್ನು ತಿಂದರೆ, ಕೆಲವೇ ದಿನಗಳಲ್ಲಿ ಅವರ ದೃಷ್ಟಿ ಸುಧಾರಿಸುತ್ತದೆ. ಜೊತೆಗೆ, ಅವು ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ಸಹ ಹೊಂದಿದ್ದು ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಪದೇ ಪದೇ ಗ್ಯಾಸ್‌, ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ ಪುದೀನಾ ಎಲೆಗಳನ್ನು ಈ ರೀತಿ ಸೇವಿಸಿ

ಅಡುಗೆಮನೆಯಲ್ಲಿ ಸಿಗುವ ಮಸಾಲೆಗಳು ಮತ್ತು ಗಿಡಮೂಲಿಕೆಗಳಲ್ಲಿ, ಪುದೀನ ವಿಶೇಷ ಸ್ಥಾನ ಪಡೆದಿದೆ. ಬಿರಿಯಾನಿ ಅಥವಾ ಚಟ್ನಿಗಳಲ್ಲಿ ಸುವಾಸನೆಗಾಗಿ ಮಾತ್ರ ಬಳಸುವ ಈ ಹಸಿರು ಎಲೆಗಳಲ್ಲಿ ಔಷಧೀಯ ಪ್ರಯೋಜನಗಳು ಹೇರಳವಾಗಿದೆ. ವಿಶೇಷವಾಗಿ ಅಧಿಕ ತೂಕ ಅಥವಾ ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ, ಪುದೀನ ಅಮೃತವೆಂದರೆ ತಪ್ಪಾಗಲಾರದು. ಅಷ್ಟು ಮಾತ್ರವಲ್ಲ, ಈ ಎಲೆಗಳು ಇತರ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ.

ತೂಕ ಇಳಿಸಿಕೊಳ್ಳುವವರಿಗೆ ಬೆಲ್ಲ ಅಥವಾ ಖರ್ಜೂರ ಯಾವುದು ಬೆಸ್ಟ್‌ ತಿಳಿದುಕೊಳ್ಳಿ

ತೂಕ ಇಳಿಸಿಕೊಳ್ಳಲು ಆಹಾರಕ್ರಮವನ್ನು ಅನುಸರಿಸುವಾಗ ಅನೇಕರು ಮಾಡುವ ಮೊದಲ ಕೆಲಸವೆಂದರೆ ಚಹಾ ಅಥವಾ ಕಾಫಿಯಲ್ಲಿ ಸಕ್ಕರೆ ಬದಲಾಗಿ ಬೆಲ್ಲ ಬಳಸುವುದು ಅಥವಾ ಸಿಹಿ ತಿಂಡಿಗಳ ಬದಲಿಗೆ ಖರ್ಜೂರ ಸೇವನೆ ಮಾಡುವುದು. ಆದರೆ ಕ್ಯಾಲೊರಿಗಳ ವಿಷಯಕ್ಕೆ ಬಂದರೆ ಬೆಲ್ಲ ಮತ್ತು ಖರ್ಜೂರದ ಸೇವನೆ ದೇಹದಲ್ಲಿ ಒಂದೇ ರೀತಿಯ ಫಲಿತಾಂಶ ನೀಡುತ್ತದೆಯೇ? ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಯಾವುದು ಉತ್ತಮ? ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳಲ್ಲಿ ಹೆಚ್ಚುತ್ತಿರುವ ಕೈ, ಕಾಲು, ಬಾಯಿ ಸೋಂಕಿನ ಲಕ್ಷಣಗಳು ಹೇಗಿರುತ್ತವೆ, ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ

ಹವಾಮಾನ ವೈಪರೀತ್ಯದಿಂದ ಐದು ವರ್ಷದೊಳಗಿನ ಮಕ್ಕಳಲ್ಲಿ ಕೈ, ಕಾಲು ಮತ್ತು ಬಾಯಿ ರೋಗ (HFMD) ತೀವ್ರವಾಗಿ ಹರಡುತ್ತಿದ್ದು, ಪಾಲಕರು ಈ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ಸೋಂಕಿಗೆ ಸಂಬಂಧ ಪಟ್ಟಂತೆ ಬೆಂಗಳೂರು ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮತ್ತು ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ರೀನಾ ಕುಲಕರ್ಣಿ ಮತ್ತು ಸಹ ಪ್ರಾಧ್ಯಾಪಕರಾಗಿರುವ ಡಾ. ಶ್ರೀಲಕ್ಷ್ಮಿ ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದು ಈ ರೋಗ ಹೇಗೆ ಹರಡುತ್ತದೆ, ಇದರ ಲಕ್ಷಣಗಳೇನು, ತಡೆಗಟ್ಟಲು ಏನು ಮಾಡಬೇಕು ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದುಕೊಂಡಿದೆ.

ರಾತ್ರಿ ಊಟದ ನಂತರ ಈ ತಪ್ಪುಗಳನ್ನು ಮಾಡಬೇಡಿ; ಜೀರ್ಣಕ್ರಿಯೆ ಹಾಳಾಗಬಹುದು

ಆರೋಗ್ಯವಾಗಿರಲು ಕೇವಲ ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಆಹಾರ ಸೇವನೆ ಮಾಡಿದರೆ ಸಾಲುವುದಿಲ್ಲ. ಬದಲಾಗಿ ಊಟದ ನಂತರ ನೀವು ಅನುಸರಿಸುವ ಅಭ್ಯಾಸಗಳು ಸಹ ನಿಮ್ಮ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಊಟವಾದ ತಕ್ಷಣ ಮಲಗುವುದು, ವ್ಯಾಯಾಮ ಮಾಡುವುದು, ಹೆಚ್ಚು ನೀರು ಕುಡಿಯುವುದು ಅಥವಾ ತಮ್ಮ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಿಗೆ ಅಂಟಿಕೊಂಡಿರುವುದು ಮುಂತಾದ ಅಭ್ಯಾಸಗಳು ಜೀರ್ಣಕ್ರಿಯೆಯನ್ನು ಹಾಳುಮಾಡಬಹುದು.

ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆ: ಆರೋಗ್ಯಕ್ಕೆ ಯಾವುದು ಒಳ್ಳೆಯದು ತಿಳಿದುಕೊಳ್ಳಿ

ಗಾಣದ ಎಣ್ಣೆಯ ಬಗ್ಗೆ ವಿಶೇಷವಾಗಿ ಮಾತನಾಡುವ ಅಗತ್ಯವಿಲ್ಲ, ಏಕೆಂದರೆ ಹಳೆಯ ಕಾಲದಲ್ಲಿ ಜನ ಇದನ್ನು ಬಳಸುತ್ತಿದ್ದರು. ಇಂದು ಬದಲಾಗುತ್ತಿರುವ ಜೀವನಶೈಲಿಯಲ್ಲಿ ವಿವಿಧ ರೀತಿಯ ತೈಲಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಕವರ್‌ಗಳಲ್ಲಿ ಸಂಸ್ಕರಿಸಿದ ರೂಪಗಳಲ್ಲಿ ನಾನಾ ರೀತಿಯ ಎಣ್ಣೆಗಳು ಸಿಗುತ್ತವೆ. ಆದರೆ, ಮೊದಲು ಜನ ಎತ್ತುಗಳ ಶಕ್ತಿಯನ್ನು ಬಳಸಿ ಎಣ್ಣೆಯನ್ನು ತಯಾರಿಸುತ್ತಿದ್ದಕ್ಕೆ ಕಾರಣವೇನು, ಇದರಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ,

ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಮಾತ್ರವಲ್ಲ ಚರ್ಮದ ಕಾಂತಿಯೂ ಹೆಚ್ಚಾಗುತ್ತದೆ

ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾದಷ್ಟು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ಬೆಳಗ್ಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಕೆಲ ಆಹಾರ ಹಾಗೂ ಪಾನೀಯಗಳು ಆರೋಗ್ಯಕ್ಕೆ ನಾನಾ ರೀತಿಯ ಲಾಭಗಳನ್ನು ತಂದುಕೊಡುತ್ತದೆ. ನೀವು ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿಯುತ್ತಿದ್ದರೆ ಆರೋಗ್ಯದಲ್ಲಿ ನಾನಾ ರೀತಿಯ ಬದಲಾವಣೆಗಳನ್ನು ಕಾಣಬಹುದು. ಅಷ್ಟು ಮಾತ್ರವಲ್ಲ, ಅರಿಶಿನ ನೀರಿಗೆ ಚಿಟಿಕೆ ಕರಿಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದ ಮತ್ತಷ್ಟು ಪ್ರಯೋಜನಗಳನ್ನು ಕುಡಿಯಬಹುದು.

ಪದೇ ಪದೇ ತುಟಿ ಒಡೆಯುವುದು ಕೇವಲ ಹವಾಮಾನದಿಂದಲ್ಲ ಇದಕ್ಕೆ ಈ ವಿಟಮಿನ್ ಕೊರತೆಯೂ ಕಾರಣವಾಗಿರಬಹುದು

ಅನೇಕರಿಗೆ ತುಟಿಗಳು ಪದೇ ಪದೇ ಒಡೆಯುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುವುದು ಸರಿಯಲ್ಲ. ಇದಕ್ಕೆ ಕಾರಣ ದೇಹದಲ್ಲಿನ ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯೂ ಆಗಿರಬಹುದು. ಕೆಲವು ಸಂದರ್ಭಗಳಲ್ಲಿ ಅಲರ್ಜಿ, ಚರ್ಮದ ಸಮಸ್ಯೆಗಳು ಅಥವಾ ಇತರ ಆರೋಗ್ಯ ತೊಂದರೆಗಳೂ ಕಾರಣವಾಗಬಹುದು. ಹಾಗಾಗಿ ಈ ರೀತಿಯ ಸಮಸ್ಯೆ ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಾವು ಮಧುಮೇಹಿಗಳಿಗೆ ಮಾತ್ರವಲ್ಲ, ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ

ಮಾವಿನ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುವ ಹಣ್ಣು. ಅದರ ಅದ್ಭುತ ರುಚಿಗೆ ಎಲ್ಲರೂ ಮನಸೋಲುತ್ತಾರೆ. ಆದರೆ ಮಧುಮೇಹ ಇರುವವರು ಈ ಹಣ್ಣನ್ನು ಆದಷ್ಟು ಮಿತ ಪ್ರಮಾಣದಲ್ಲಿ ಸೇವಿಸಬೇಕು ಎಂದು ಹೇಳುತ್ತಾರೆ. ಆದರೆ ಅವರ ಹೊರತಾಗಿಯೂ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವಿಸಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.