Health Tips
ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು
ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ
ಚಳಿಗಾಲದಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯ. ಅದರಲ್ಲಿಯೂ ಇತ್ತೀಚಿನ ಸಂಶೋಧನೆಯೊಂದು ಕಡಿಮೆ ತಾಪಮಾನವು ನವಜಾತ ಶಿಶುಗಳ ಜನನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿಕೊಂಡಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಪ್ರಮುಖ ಅಂಶವಾಗಬಹುದು ಎಂದು ಸಂಶೋಧಕರು ಹೇಳುತ್ತಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Dec 25, 2025
- 6:25 pm
ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ
ಜಿಗಣೆ ಥೆರಪಿ ವಿವಿಧ ರೀತಿಯ ಕಾಯಿಲೆಗಳಿಗೆ ಅದರಲ್ಲಿಯೂ ಕೀಲು ನೋವು, ಚರ್ಮದ ಕಿರಿಕಿರಿ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಇದು ರಕ್ತದಿಂದ ಕಲ್ಮಶಗಳನ್ನು ತೆಗೆದುಹಾಕಲು, ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಇದು ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವೇ ಎಂಬ ಅನುಮಾನ ಹಲವರನ್ನು ಕಾಡುವುದು ಸುಳ್ಳಲ್ಲ. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಅನಿವಾರ್ಯ. ಅದರ ಜೊತೆಗೆ ಜಿಗಣೆ ಚಿಕಿತ್ಸೆ ಹೇಗೆ ನಡೆಯುತ್ತದೆ? ಯಾವ ಕಾಯಿಲೆಗಳಿಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ ಸಂಪೂರ್ಣ ಮಾಹಿತಿ ಇಲ್ಲಿದೆ.
- Preethi Bhat Gunavante
- Updated on: Dec 25, 2025
- 2:45 pm
ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ!
ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಚಹಾ ತಣ್ಣಗಾಯ್ತು ಅಂತಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿದರೆ ನೀವೆಂದೂ ಈ ಕೆಲಸ ಮಾಡುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ, ಯಾಕೆ ಈ ಅಭ್ಯಾಸ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 25, 2025
- 10:36 am
ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ
ಅಧಿಕ ರಕ್ತದೊತ್ತಡವು ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಈ ರೀತಿಯ ಪರಿಸ್ಥಿತಿಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಅನೇಕರು ನಿಂಬೆ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನಿಂಬೆಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ, ಇದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಇದು ನಿಜವಾಗಿಯೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದೇ... ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 24, 2025
- 7:35 pm
ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ
ಈಗ ಚಳಿಗಾಲವಾದ್ದರಿಂದ, ಈ ಸಮಯದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಅದರಲ್ಲಿಯೂ ಹೃದಯಾಘಾತ ಮತ್ತು ಹೃದಯ ವೈಫಲ್ಯದ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿಯ ಸಮಸ್ಯೆಯನ್ನು ತಡೆಯಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ಸಕಾಲಿಕವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನೂ ಮಾಡಿಸುವುದು ಬಹಳ ಮುಖ್ಯ. ಇದಕ್ಕಾಗಿ, ಡಾ. ವರುಣ್ ಬನ್ಸಾಲ್ ಮೂರು ಸಾಮಾನ್ಯ ಪರೀಕ್ಷೆಗಳ ಬಗ್ಗೆ ತಿಳಿಸಿದ್ದು ನೀವು ಕೂಡ ಈ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
- Preethi Bhat Gunavante
- Updated on: Dec 24, 2025
- 4:25 pm
ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ
ಚಳಿಗಾಲದಲ್ಲಿ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟಿದ ಅನುಭವವಾಗುತ್ತಾ? ಇದಕ್ಕೆ ಚಳಿ ಕಾರಣವೋ ಅಥವಾ ಇದು ನರಗಳ ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಈ ಸಮಸ್ಯೆಗೆ ಕಾರಣವೇನು? ಈ ರೀತಿಯಾಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ. ನಿಮಗೂ ಈ ರೀತಿಯಾಗುತ್ತಿದ್ದು, ನಿರ್ಲಕ್ಷ್ಯ ಮಾಡುತ್ತಿದ್ದರೆ ಈ ಸ್ಟೋರಿಯಲ್ಲಿ ನೀಡಲಾದ ಸಲಹೆಗಳನ್ನು ಪಾಲಿಸಿ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ.
- Preethi Bhat Gunavante
- Updated on: Dec 23, 2025
- 6:26 pm
ಊಟ ಮಾಡುವಾಗ, ಮಾಡಿದ ನಂತರದ ಈ ಕೆಲವು ತಪ್ಪುಗಳು ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು
ಮುನುಷ್ಯನ ದೇಹಕ್ಕೆ ಬೆಳಗಿನ ಉಪಾಹಾರ ಎಷ್ಟು ಮುಖ್ಯವೋ, ರಾತ್ರಿ ಸೇವಿಸುವ ಆಹಾರವೂ ಅಷ್ಟೇ ಮುಖ್ಯವಾಗಿರುತ್ತದೆ. ರಾತ್ರಿ ಊಟ ಮಾಡುವಾಗ ಮತ್ತು ಮಾಡಿದ ನಂತರ ಮಾಡುವ ತಪ್ಪುಗಳೇ ಆರೋಗ್ಯಕ್ಕೆ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ತಪ್ಪುಗಳು ಯಾವವು, ಇದರಿಂದ ದೇಹಕ್ಕಾಗುವ ತೊಂದರೆಗಳು ಯಾವವು, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿ ಬದಲಾವಣೆ ಮಾಡಿಕೊಳ್ಳಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 23, 2025
- 4:25 pm
ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು
ನೀವು ಕೂಡ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಪುರುಷ ಮತ್ತು ಮಹಿಳೆ ಇಬ್ಬರಲ್ಲಿಯೂ ಗುಲಾಬಿ ಅಥವಾ ಕೆಂಪು ಬಣ್ಣದ ಮೂತ್ರ (ಹೆಮಟುರಿಯಾ) ಕಂಡುಬರುವುದು ಆರೋಗ್ಯಕರ ಲಕ್ಷಣವಲ್ಲ. ಅದರಲ್ಲಿಯೂ ಪುರುಷರಲ್ಲಿ, ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳಲು ಹಲವು ಕಾರಣಗಳಿರುತ್ತದೆ, ಆದರೆ ಈ ಸಮಸ್ಯೆ ಪದೇ ಪದೇ ಕಂಡುಬಂದರೆ ಅದು ಸಾಮಾನ್ಯವಲ್ಲ. ಇದು ಗಂಭೀರ ಕ್ಯಾನ್ಸರ್ನ ಸಂಕೇತವಾಗಿರಬಹುದು. ಹಾಗಾದರೆ ಇದು ಯಾರ ಮೇಲೆ ಪರಿಣಾಮ ಬೀರುತ್ತದೆ, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 23, 2025
- 3:36 pm
ಕಳೆದ ವರ್ಷ ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುತ್ತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ 23,746 ರೋಗಿಗಳು!
ಕಳೆದ ವರ್ಷ ಅಂದರೆ 2024ರಲ್ಲಿ ಈ ಒಂದು ದೇಶದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಲೇ ಪ್ರಾಣ ಬಿಟ್ಟವರ ಸಂಖ್ಯೆ ಬರೋಬ್ಬರಿ 23,000 ಇದೆಯಂತೆ! ಈ ಅಂಕಿ-ಅಂಶ ನೋಡಿದರೆ ಆತಂಕವಾಗದೇ ಇರದು. ವೈದ್ಯರಿಗಾಗಿ ಕಾಯುತ್ತಾ ಕೂರುವ ಕಷ್ಟ, ಅಸಹನೆ, ಒತ್ತಡ ಅನುಭವಿಸಿದವರಿಗಷ್ಟೇ ಗೊತ್ತಿರಲು ಸಾಧ್ಯ. ಹಾಗಾದರೆ, ಈ ದೇಶ ಯಾವುದು? ಇಲ್ಲಿ ಯಾವ ರೀತಿಯ ಆರೋಗ್ಯ ವ್ಯವಸ್ಥೆಯಿದೆ? ಸರ್ಕಾರ ಯಾಕೆ ಈ ಬಗ್ಗೆ ಗಮನಹರಿಸುತ್ತಿಲ್ಲ? ಎಂಬಿತ್ಯಾದಿ ನಿಮ್ಮ ಅನುಮಾನಗಳಿಗೆ ಉತ್ತರ ಇಲ್ಲಿದೆ.
- Sushma Chakre
- Updated on: Dec 22, 2025
- 8:14 pm
World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ
ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಇತರ ಸದಸ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿಗಳು, ಪ್ರಾಚೀನ ಪದ್ಧತಿಯಾದ ಧ್ಯಾನವನ್ನು ಆಚರಿಸಲು ಒಗ್ಗೂಡಿದ್ದಾರೆ. ಜಾಗತಿಕವಾಗಿ ಸಾಮಾಜಿಕ, ರಾಜಕೀಯ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಲ್ಲಿ ಧ್ಯಾನದ ಅಗತ್ಯ ಮತ್ತು ಪಾತ್ರವನ್ನು ಅವರು ಹಂಚಿಕೊಂಡಿದ್ದಾರೆ. ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನಾಚರಣೆಯ ಅಂಗವಾಗಿ ಪ್ರಾಸ್ತಾವಿಕ ಭಾಷಣ ಮಾಡಿದ್ದಾರೆ.
- Sushma Chakre
- Updated on: Dec 20, 2025
- 6:36 pm
ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!
ಅನೇಕರು ಚಳಿಯಿಂದ ರಕ್ಷಣೆ ಪಡೆಯಲು, ಮಲಗುವಾಗ ಕಂಬಳಿ ಅಥವಾ ಬೆಡ್ ಶಿಟ್ ಅನ್ನು ಮುಖದವರೆಗೆ ಹೊದ್ದು ಮಲಗುತ್ತಾರೆ. ಈ ಅಭ್ಯಾಸ ದೇಹವನ್ನು ಬೆಚ್ಚಗಿಡುತ್ತದೆಯಾದರೂ ಕೂಡ ಇದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಹೌದು, ಇದು ನಮ್ಮ ಶ್ವಾಸಕೋಶಗಳಿಗೆ ತುಂಬಾ ಹಾನಿಕಾರಕವಾಗಿದೆ. ಅಷ್ಟೇ ಅಲ್ಲ, ಚರ್ಮದ ಆರೋಗ್ಯಕ್ಕೂ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾದರೆ ಇದು ಆರೋಗ್ಯದ ಮೇಲೆ ಯಾವ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 20, 2025
- 3:38 pm
ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ?
ನಾಲಿಗೆಯ ಬಣ್ಣ ನಮ್ಮ ಆಂತರಿಕ ಆರೋಗ್ಯದ ಬಗ್ಗೆ ಹೇಳುತ್ತದೆ ಎಂಬುದನ್ನು ನಂಬುತ್ತೀರಾ? ಹೌದು, ಗುಲಾಬಿ ಬಣ್ಣ ಆರೋಗ್ಯಕರ ನಾಲಿಗೆಯನ್ನು ಸೂಚಿಸುತ್ತದೆ, ಆದರೆ ಬಿಳಿ ಲೇಪನ, ಕೆಂಪು, ಹಳದಿ, ಬೂದು ಅಥವಾ ಗಾಢ ಬಣ್ಣಗಳಿದ್ದರೆ ಅವು ಯಾವ ರೀತಿಯ ಆರೋಗ್ಯ ಸಮಸ್ಯೆಗಳ ಲಕ್ಷಣ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ನಾಲಿಗೆಯ ಬಣ್ಣದಲ್ಲಿನ ಬದಲಾವಣೆಗಳು ವಿಟಮಿನ್ ಕೊರತೆ, ಸೋಂಕು, ಉರಿಯೂತ ಅಥವಾ ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೇಳಬಹುದು. ಹಾಗಾದರೆ ಯಾವ ಬಣ್ಣ ಯಾವ ರೋಗವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 20, 2025
- 2:50 pm