Health Tips
ಇತ್ತೀಚಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಿನ ದಿನದಲ್ಲಿ ಆರೋಗ್ಯ ಚೆನ್ನಾಗಿದ್ದರೆ ಅದಕ್ಕಿಂತ ಬೇರೆ ಸಂಪತ್ತು ಬೇಕಾಗಿಲ್ಲ ಎನ್ನುವವರೇ ಹೆಚ್ಚಾಗಿದ್ದಾರೆ. ಹಾಗಾಗಿ ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರೆ ನಾವು ಸೇವಿಸುವ ಆಹಾರವೂ ಸರಿಯಾಗಿ ಇರಬೇಕಾಗುತ್ತದೆ. ಅನಾರೋಗ್ಯವನ್ನು ದೂರವಿಡುವುದು ಮತ್ತು ಬರಮಾಡಿಕೊಳ್ಳುವುದು ಎರಡು ನಮ್ಮ ಕೈಯಲ್ಲಿ ಇರುವುದರಿಂದ ನಮ್ಮ ದೈನಂದಿನ ಅಭ್ಯಾಸಗಳು ಆರೋಗ್ಯಕರವಾಗಿ ಇರುವುದು ಬಹಳ ಒಳಿತು. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಮಾತ್ರೆ, ಮತ್ತಿಷ್ಟು ಔಷಧಿಗಳ ಮೊರೆ ಹೋಗುವ ಬದಲು ನಾವು ನೀಡುವ ಸರಳ ಆರೋಗ್ಯಕರ ಸಲಹೆಗಳನ್ನು ಪಾಲನೆ ಮಾಡಬಹುದು. ಇದರಿಂದ ನಿಮ್ಮ ದಿನನಿತ್ಯದ ಅಭ್ಯಾಸಗಳಲ್ಲಿ ಆರೋಗ್ಯಕರವಾದ ಸಲಹೆಗಳನ್ನು ರೂಢಿಸಿಕೊಳ್ಳಬಹುದು. ಇದು ನಿಮಗೆ ಅನಾರೋಗ್ಯದಿಂದ ದೂರವಿರಿಸುವುದು ಮಾತ್ರವಲ್ಲ. ನಾನಾ ರೀತಿಯ ಕಾಯಿಲೆಗಳು ಬರುವುದನ್ನು ಕೂಡ ತಡೆಯುತ್ತದೆ. ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಕಾಯಿಲೆಗಳ ವಿರುದ್ಧ ನಿಮ್ಮನ್ನು ನೀವು ಬಲಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಆರೋಗ್ಯಕರ ಸಲಹೆಗಳು ರೋಗಿಗಳಿಗೆ ಮಾತ್ರವಲ್ಲ ಆರೋಗ್ಯವಂತರಿಗೂ ಇದು ಸಹಕಾರಿಯಾಗಿರುತ್ತದೆ ಎಂಬುದನ್ನು ಮರೆಯಬಾರದು
ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ
ಹೆಚ್ಚು ಉಪ್ಪಿರುವ ಆಹಾರ ಸೇವನೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ತಿಳಿದ ವಿಚಾರ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಇರುವ ರೋಗಿಗಳಿಗೆ ಉಪ್ಪಿನಂಶ ಕಡಿಮೆ ಇರುವ ಆಹಾರ ತಿನ್ನಲು ಸಲಹೆ ನೀಡುತ್ತಾರೆ. ಆದರೆ ನಿಮಗೆ ಗೊತ್ತಾ? ಉಪ್ಪಿನ ಅಂಶ ಇಲ್ಲ ಎಂದು ನಾವು ಭಾವಿಸಿ ಸೇವಿಸುವ ಹಲವಾರು ಪದಾರ್ಥಗಳಲ್ಲಿ ಹಿಡನ್ ಸೋಡಿಯಂ ಇರಬಹುದು. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 8:48 pm
ಶೀಘ್ರವೇ ಬರಲಿದೆ ಡೆಂಗ್ಯೂ ಲಸಿಕೆ! ಏನಿದರ ವಿಶೇಷತೆ? ಹೇಗೆ ಕಾರ್ಯನಿರ್ವಹಿಸುತ್ತೆ ತಿಳಿದುಕೊಳ್ಳಿ
ಭಾರತದಲ್ಲಿ ಶೀಘ್ರದಲ್ಲೇ ಡೆಂಗ್ಯೂ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದೆ. ಇಲ್ಲಿಯವರೆಗೆ, ಡೆಂಗ್ಯೂಗೆ ಯಾವುದೇ ಲಸಿಕೆ ಇರಲಿಲ್ಲ. ಆದ್ರೆ ಈಗ ‘Qdenga’ ಲಸಿಕೆಯ ಅಂತಿಮ ಹಂತದ ಟ್ರಯಲ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಲಸಿಕೆಯನ್ನು ಜಪಾನ್ನ ಪ್ರಸಿದ್ಧ ಔಷಧ ಕಂಪನಿ ಟಕೆಡಾ ಫಾರ್ಮಾಸ್ಯುಟಿಕಲ್ಸ್ ಅಭಿವೃದ್ಧಿಪಡಿಸಿದೆ. ಹಾಗಾದರೆ ಈ ಲಸಿಕೆ ಹೇಗೆ ಕಾರ್ಯ ನಿರ್ವಹಿಸುತ್ತದೆ, ಯಾರು ಯಾವಾಗ ತೆಗೆದುಕೊಳ್ಳಬೇಕು, ನಿಜವಾಗಿಯೂ ಇದು ಕೆಲಸ ಮಾಡುತ್ತದೆಯೇ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 7:03 pm
Cold Water Vs Warm Water: ಬಿಸಿ ನೀರು ಅಥವಾ ತಣ್ಣೀರು; ಬೇಸಿಗೆಯಲ್ಲಿ ಕುಡಿಯಲು ಯಾವುದು ಬೆಸ್ಟ್?
ಬೇಸಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಅದರಲ್ಲಿಯೂ ನಾವು ಕುಡಿಯುವ ನೀರು ಈ ಸಮಯದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಸರಿಯಾಗಿ ನೀರು ಕುಡಿಯುವುದರಿಂದಲೇ ಬೇಸಿಗೆಯಲ್ಲೂ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಆದರೆ ಹೆಚ್ಚಿನವರಿಗೆ ಈ ಸಮಯದಲ್ಲಿ ಯಾವ ರೀತಿಯ ನೀರನ್ನು ಕುಡಿಯಬೇಕು ಎಂಬುದೇ ತಿಳಿದಿರುವುದಿಲ್ಲ. ಅದಕ್ಕಾಗಿಯೇ ಈ ಸಮಯದಲ್ಲಿ ಯಾವ ರೀತಿಯ ನೀರು ಆರೋಗ್ಯಕ್ಕೆ ಒಳ್ಳೆಯದು, ಬಿಸಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನವೇನು ಹೀಗೆ ಸಾಕಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 4:03 pm
ಕರಿಬೇವಿನ ಎಲೆ ಇಲ್ಲದೆಯೇ ಅಡುಗೆ ಆಗಲ್ವಾ? ಆದ್ರೆ ಈ ಸಮಸ್ಯೆ ಇದ್ದಲ್ಲಿ ಇದನ್ನು ಬಳಸದಿರುವುದೇ ಒಳ್ಳೆಯದು
ಕರಿಬೇವು ಇಲ್ಲದೆಯೇ ಮಾಡುವ ಅಡುಗೆ ಅಪೂರ್ಣ ಎನಿಸಿಕೊಳ್ಳುತ್ತದೆ. ಇದನ್ನು ರುಚಿಗೆ ಮಾತ್ರವಲ್ಲ, ಇದರಲ್ಲಿರುವ ಔಷಧೀಯ ಗುಣಗಳಿಂದಲೂ ಬಳಕೆ ಮಾಡಲಾಗುತ್ತದೆ. ಅಷ್ಟು ಮಾತ್ರವಲ್ಲ, ಆಯುರ್ವೇದದಲ್ಲಿಯೂ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ನಿಮಗೆ ಗೊತ್ತಾ? ಕರಿಬೇವು ಎಲ್ಲರಿಗೂ ಸೂಕ್ತವಲ್ಲ. ಹಾಗಾದರೆ ಈ ಕರಿಬೇವಿನ ಎಲೆ ಯಾರಿಗೆ ಒಳ್ಳೆಯದಲ್ಲ, ಯಾಕೆ ಸೇವನೆ ಮಾಡಬಾರದು, ಇದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಈ ಕುರಿತ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 7, 2026
- 5:46 pm
ಊಟ ಮಾಡುವಾಗ ಫೋನ್ ಬಳಸುವ ಅಭ್ಯಾಸ ನಿಮಗಿದ್ಯಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!
ನಿಮ್ಮ ಆಹಾರ ಕ್ರಮ ಸರಿಯಾಗಿ ಇಲ್ಲದಿದ್ದರೆ, ಆರೋಗ್ಯ ಚೆನ್ನಾಗಿರಲು ಸಾಧ್ಯವೇ ಇಲ್ಲ ಎಂಬುದು ನಿಮಗೆ ತಿಳಿದಿರಬಹುದು. ಅದರ ಜೊತೆಗೆ ಒಳ್ಳೆಯ ಊಟವನ್ನು ಸರಿಯಾಗಿ ಮಾಡದಿದ್ದರೆ ಅದು ಕೂಡ ಆರೋಗ್ಯಕ್ಕೆ ಹಾನಿಯುಂಟುಮಾಡಬಹುದು. ಹೌದು, ಊಟ ಮಾಡುವಾಗ ಫೋನ್ ಬಳಸಿದರೆ, ಅದು ನಿಮ್ಮ ಆರೋಗ್ಯಕ್ಕೂ ಹಾನಿ ಮಾಡುತ್ತದೆ. ಫೋನ್ ಬಳಸುವುದರಿಂದ ಕರುಳು ಹಾಳಾಗುತ್ತದೆ. ಹಾಗಾದರೆ ಫೋನ್ ಬಳಕೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆಯೇ, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 7, 2026
- 4:51 pm
ಸಿಹಿಯಾಗಿರುವ ಆಹಾರವೊಂದೇ ಅಲ್ಲ ನೀವು ಇಷ್ಟಪಟ್ಟು ತಿನ್ನುವ ಉಪ್ಪು ಉಪ್ಪಾಗಿರುವ ಆಹಾರ ಕೂಡ ಶುಗರ್ ಲೆವೆಲ್ ಹೆಚ್ಚಿಸಬಹುದು!
ಸಾಮಾನ್ಯವಾಗಿ ಎಲ್ಲರು ನಂಬಿರುವುದು ಹೆಚ್ಚು ಸಿಹಿ ಆಹಾರವನ್ನು ಸೇವಿಸುವುದರಿಂದ ಮಧುಮೇಹ ಬರುತ್ತದೆ ಎಂದು. ಅದಕ್ಕಾಗಿಯೇ ಮಧುಮೇಹ ರೋಗಿಗಳು ಸಿಹಿಯಾಗಿರುವ ಆಹಾರವನ್ನು ಅತಿಯಾಗಿ ಸೇವಿಸದಂತೆ ಸಲಹೆ ನೀಡಲಾಗುತ್ತದೆ, ಆದರೆ ನಿಮಗೆ ಗೊತ್ತಾ? ಕೆಲವು ಉಪ್ಪಿರುವ ಆಹಾರಗಳು ಕೂಡ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರಬಹುದು. ಹಾಗಾದರೆ ಉಪ್ಪಿರುವ ಆಹಾರ ಹೇಗೆ ಶುಗರ್ ಲೆವೆಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ, ಯಾವ ಆಹಾರಗಳು ಆರೋಗ್ಯಕ್ಕೆ ಅಪಾಯಕಾರಿ, ಡಯಾಬಿಟಿಸ್ ರೋಗಿಗಳು ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 6, 2026
- 9:25 pm
ಕೊಲನ್ ಕ್ಯಾನ್ಸರ್ ಎಷ್ಟು ಅಪಾಯಕಾರಿ ಗೊತ್ತಾ? ಹೇಗಿರುತ್ತೆ ಇದರ ಲಕ್ಷಣಗಳು? ಡಾ ಅನುರಾಗ್ ಶೆಟ್ಟಿ ನೀಡಿರುವ ಮಾಹಿತಿ ಇಲ್ಲಿದೆ
ಮೊದಲೆಲ್ಲಾ ಕ್ಯಾನ್ಸರ್ ಎಂಬ ಪದವೇ ಭಯ ಹುಟ್ಟಿಸುತ್ತಿತ್ತು. ಆದರೆ ಈಗ ಈ ಆರೋಗ್ಯ ಸಮಸ್ಯೆ ಅತಿ ಹೆಚ್ಚಿನ ಜನರಲ್ಲಿ ಕಾಣಿಸಿಕೊಳ್ಳುತ್ತಿದ್ದು ಜನ ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಾ ತಿಳಿದುಕೊಳ್ಳುವುದಕ್ಕೆ ಆರಂಭ ಮಾಡಿದ್ದಾರೆ. ಆದರೆ ಕೆಲವು ಕ್ಯಾನ್ಸರ್ ಬಗ್ಗೆ ತಿಳಿದುಕೊಂಡಷ್ಟು ಸಾಲುವುದಿಲ್ಲ. ಅಂತವುಗಳಲ್ಲಿ ಕೊಲನ್ ಕ್ಯಾನ್ಸರ್ ಅಥವಾ ದೊಡ್ಡ ಕರುಳಿನ ಕ್ಯಾನ್ಸರ್ ಕೂಡ ಒಂದು. ಅತಿ ಹೆಚ್ಚು ಕಾಣಿಸಿಕೊಳ್ಳುವ ಕ್ಯಾನ್ಸರ್ ಗಳಲ್ಲಿ ಇದು ಒಂದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಡಾ ಅನುರಾಗ್ ಶೆಟ್ಟಿ ಅವರು ನೀಡಿದ್ದು, ಲಕ್ಷಣಗಳು, ರೋಗ ಪತ್ತೆ ಮಾಡುವುದು ಹೇಗೆ ಎಂಬುದನ್ನು ಹೇಳಿದ್ದಾರೆ.
- Preethi Bhat Gunavante
- Updated on: Apr 6, 2026
- 6:50 pm
ಅತಿಯಾಗಿ ಯೋಚನೆ ಮಾಡುವ ಅಭ್ಯಾಸ ನಿಮಗಿದ್ರೆ ಮುಂದೊಂದು ದಿನ ಈ ರೋಗಗಳು ಬರುವುದು ಗ್ಯಾರೆಂಟಿ!
ಸಾಮಾನ್ಯವಾಗಿ ಅತಿಯಾಗಿ ಯೋಚಿಸುವ ಅಭ್ಯಾಸ ಹಲವರಿಗಿರುತ್ತದೆ. ಆದರೆ ಇದು ಕೆಲವರ ಅರಿವಿಗೆ ಬಂದಿರುವುದಿಲ್ಲ, ತಾವು ಅತಿಯಾಗಿ ಯೋಚನೆ ಮಾಡುತ್ತಿದ್ದೇವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಆದರೆ ಈ ರೀತಿ ಆಗುವುದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸಬಾರದು, ಏಕೆಂದರೆ ಈ ಅಭ್ಯಾಸವು ಕ್ರಮೇಣ ಅನೇಕ ರೋಗಗಳಿಗೆ ಕಾರಣವಾಗಬಹುದು ಎಂಬುದು ನಿಮಗೆ ತಿಳಿದಿದೆಯೇ? ಹೌದು, ಇದು ಮುಂದೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಹಾಗಾಗಿ ಈ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ, ಯಾವಾಗ ವೈದ್ಯರ ಸಲಹೆ ಪಡೆಯಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಆರೋಗ್ಯ ಕಾಪಾಡಿಕೊಳ್ಳಿ.
- Preethi Bhat Gunavante
- Updated on: Apr 6, 2026
- 4:16 pm
ಗರ್ಭಿಣಿಯರು ಹೆರಿಗೆಗೆ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ
ಗರ್ಭಿಣಿಯರು ಹೆರಿಗೆಗೆ ಮುನ್ನ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ತ್ವರಿತ ಹಾರ್ಮೋನುಗಳ ಬದಲಾವಣೆಗಳು ಕಂಡುಬರುತ್ತವೆ. ಹೀಗಾಗಿ ಸರಿಯಾದ ಆರೈಕೆ, ಪೌಷ್ಟಿಕ ಆಹಾರ ಮತ್ತು ಉತ್ತಮ ಜೀವನಶೈಲಿ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಡಿಲಿವರಿ ಮೊದಲು ಯಾವ ರೀತಿಯ ವಿಷಯಗಳು ಮುಖ್ಯವಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 8, 2026
- 8:00 pm
ಥೈರಾಯ್ಡ್ ಸಮಸ್ಯೆ ಇದ್ಯಾ? ಚಿಂತೆ ಬೇಡ, ಈ ಸಲಹೆಗಳನ್ನು ಪಾಲಿಸಿ ಸಮಸ್ಯೆಯನ್ನು ನಿಯಂತ್ರಿಸಿ
ಇಂದಿನ ಯುಗದಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಈ ಕಾಯಿಲೆಯಲ್ಲಿ, ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ, ಏಕೆಂದರೆ ಸೇವನೆ ಮಾಡುವ ಆಹಾರ ಸರಿಯಾಗಿ ಇಲ್ಲದಿದ್ದರೆ ಈ ಸಮಸ್ಯೆ ಇನ್ನಷ್ಟು ಹದಗೆಡಬಹುದು. ಹಾಗಾಗಿ ಅಂತಹ ಸಂದರ್ಭಗಳಲ್ಲಿ ಯಾವ ರೀತಿಯ ಆಹಾರಗಳನ್ನು ಸೇವಿಸಬಾರದು, ಯಾವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಯುವುದು ಬಹಳ ಒಳ್ಳೆಯದು. ಈ ಬಗೆಗಿನ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 4, 2026
- 7:03 pm
ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದು ಗಂಭೀರ ರೋಗದ ಮುನ್ಸೂಚನೆಯೇ? ಇಲ್ಲಿದೆ ಉತ್ತರ
ಅನೇಕರಿಗೆ ಪದೇ ಪದೇ ನಾಲಿಗೆ ಮೇಲೆ ಹುಣ್ಣಾಗುವುದನ್ನು ಗಮನಿಸಿರಬಹುದು. ಆದರೆ ಈ ಸಮಸ್ಯೆಯ ಬಗ್ಗೆ ಚಿಂತೆ ಮಾಡುವವರಿಗಿಂತ ಅದನ್ನು ಅಸಡ್ಡೆ ಮಾಡುವವರ ಸಂಖ್ಯೆಯೇ ಹೆಚ್ಚು. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸಬಾರದು, ಏಕೆಂದರೆ ಇದು ಕೆಲವು ರೋಗಗಳ ಸಂಕೇತವಾಗಿರಬಹುದು. ಹೌದು, ಈ ರೀತಿಯಾಗುವುದು ದೇಹದ ಒಳಗಿನ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ನಾಲಿಗೆಯಲ್ಲಿ ಹುಣ್ಣುಗಳಾಗುವುದಕ್ಕೆ ಕಾರಣ, ಪದೇ ಪದೇ ಕಂಡುಬಂದರೆ ಅದು ಯಾವ ರೋಗದ ಲಕ್ಷಣ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 4, 2026
- 5:20 pm
ದೇಹದಲ್ಲಿ ಪ್ಲೇಟ್ಲೆಟ್ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?
ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಪ್ಲೇಟ್ಲೆಟ್ಗಳು ಬಹಳ ಮುಖ್ಯ ಎಂಬುದು ತಿಳಿದ ವಿಚಾರ. ಆದರೆ ಕೆಲವು ಕಾಯಿಲೆಗಳಿಂದಾಗಿ ಅವುಗಳ ಮಟ್ಟವು ವೇಗವಾಗಿ ಕಡಿಮೆಯಾಗಬಹುದು ಎಂಬುದು ತಿಳಿದಿದೆಯೇ? ಹೌದು, ಕೆಲವೊಮ್ಮೆ ಪ್ಲೇಟ್ಲೆಟ್ ಕಡಿಮೆಯಾಗಲು ಕೆಲವು ರೋಗಗಳು ಕಾರಣವಾಗಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು, ಪ್ಲೇಟ್ಲೆಟ್ಗಳ ಕೊರತೆಯಾದಾಗ ಕಂಡುಬರುವ ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಈ ಬಗೆಗಿನ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 3, 2026
- 8:22 pm