HMPV

HMPV

ಚೀನಾದಲ್ಲಿ ಹೆಚ್​ಎಂಪಿವಿ ಎಂಬ ವೈರಸ್​​​ನ ಹೊಸ ರೂಪಾಂತರ ಹುಟ್ಟಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಆಂತಕ ಸೃಷ್ಟಿಯಾಗಿದೆ. ಚೀನಾದ ಜನರನ್ನು ಭಾದಿಸುತ್ತಿರುವ ಈ ಹ್ಯೂಮನ್​ ಮೆಟಾಪ್ನುಮೋವೈರಸ್​ (HMPV) ಏಷ್ಯಾದ ಕೆಲ ದೇಶಗಳಲ್ಲಿ ಕೂಡ ಹರಡುತ್ತಿದೆ. ಹೆಚ್​ಎಂಪಿವಿ ವೈರಸ್​ಗೆ ತುತ್ತಾದವರ ಸಂಖ್ಯೆ ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಅಲ್ಲಿನ ಸರ್ಕಾರ, ಯಾವುದೇ ತೊಂದರೆಯಾಗಲ್ಲ, ಭಯಪಡುವ ಅವಶ್ಯಕತೆ ಇಲ್ಲ ಎಂದು ಜಗತ್ತಿನ ಮುಂದೆ ಸಾರಿ ಸಾರಿ ಹೇಳುತ್ತಿದೆ. ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿಸಿರುವ ಹೆಚ್​ಎಂಪಿವಿ ವೈರಸ್​ ಅನ್ನು 2001ರಲ್ಲೇ ಕಂಡುಹಿಡಿಯಲಾಗಿತ್ತು ಎಂದು ವರದಿಯಾಗಿದೆ. ಆದರೆ, ಈ ಹೆಚ್​ಎಂಪಿವಿ ವೈರಸ್​ 1958ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂದು ತಜ್ಞರು ಹೇಳುತ್ತಿದ್ದಾರೆ. ಎಚ್ಎಂಪಿವಿ ವೈರಸ್​​​ನಿಂದ ಉಂಟಾಗುವ ಸೋಂಕಿನ ರೋಗಲಕ್ಷಣಗಳು ಫ್ಲೂಗೆ ಹೋಲುತ್ತವೆ. ಈ ವೈರಸ್ ಸೋಂಕಿನ ರೋಗಲಕ್ಷಣಗಳಲ್ಲಿ ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕೂಡ ಸೇರಿವೆ. ತೀವ್ರವಾದ ಸಂದರ್ಭಗಳಲ್ಲಿ, ಇದು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾಕ್ಕೆ ಕಾರಣವಾಗಬಹುದು. ವೈರಸ್ ಹೆಚ್ಚಾಗಲು 3 ರಿಂದ 6 ದಿನಗಳನ್ನು ತೆಗೆದುಕೊಳ್ಳುತ್ತದೆ, ರೋಗಲಕ್ಷಣಗಳು ತೀವ್ರತೆಯ ಆಧಾರದ ಮೇಲೆ ವಿಭಿನ್ನ ಅವಧಿಯ ವರೆಗೆ ಇರುತ್ತದೆ. ಸದ್ಯದ ಮಟ್ಟಿಗೆ ಈ ವೈರಸ್ ಸೋಂಕಿಗೆ ಯಾವುದೇ ಲಸಿಕೆ ಇಲ್ಲ

ಇನ್ನೂ ಹೆಚ್ಚು ಓದಿ

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ

ಎಚ್​ಎಂಪಿವಿ ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ, ಕರ್ನಾಟಕದಲ್ಲಿ ಈ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜ್ವರ, ಕೆಮ್ಮು ಇದ್ದು ಆಸ್ಪತ್ರೆಗೆ ಹೋದವರಿಗೆಲ್ಲ ಎಚ್​ಎಂಪಿವಿ ಟೆಸ್ಟ್ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದ್ದು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಎಚ್​ಎಂಪಿವಿ ವೈರಸ್: ಆರೋಗ್ಯ ಇಲಾಖೆ ಜತೆ ಸಿಎಂ ಸಿದ್ದರಾಮಯ್ಯ ಸಭೆ, ಜನರಿಗೆ ಅಭಯ

ಎಚ್​ಎಂಪಿವಿ ವೈರಸ್ ಇದೀಗ ಜನರಲ್ಲಿ ಭಯ ಹುಟ್ಟಿಸಿದೆ. ದೇಶದಲ್ಲಿ, ಅದರಲ್ಲೂ ಬೆಂಗಳೂರಿನಲ್ಲೇ ಮೊದಲ 2 ಕೇಸ್ ಪತ್ತೆಯಾಗಿ ಆ ಆತಂಕವನ್ನು ಮತ್ತಷ್ಟು ಹೆಚ್ಚಿಸಿತ್ತು. ಹೀಗಾಗಿಯೇ ದೇಶದ ಎಲ್ಲಾ ರಾಜ್ಯಗಳಲ್ಲೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗುತ್ತಿದೆ. ಈ ನಡುವೆ ಆರೋಗ್ಯ ಇಲಾಖೆ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಜನರಿಗೆ ಅಭಯ ನೀಡಿದ್ದಾರೆ.

ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ವೈರಸ್ ಪತ್ತೆ..!

ದೇಶದಲ್ಲಿ ಆತಂಕ ಮೂಡಿಸಿರುವ ಎಚ್‌ಎಂಪಿ ವೈರಸ್‌ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್‌ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್‌ ಪತ್ತೆಯಾಗಿದೆ. 1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.

HMPV vs Covid-19: ಎಚ್‌ಎಂಪಿವಿ ಹಾಗೂ ಕೋವಿಡ್ 19 ಹೋಲಿಕೆಗಳು ಹಾಗೂ ರೋಗಲಕ್ಷಣದಲ್ಲಿನ ವ್ಯತ್ಯಾಸಗಳೇನು? ಈ ಬಗ್ಗೆ ತಜ್ಞರು ಹೇಳುವುದೇನು?

ಚೀನಾದಲ್ಲಿ ಅಬ್ಬರಿಸುತ್ತಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ವೈರಸ್‌ ಇದೀಗ ಭಾರತಕ್ಕೂ ಕಾಲಿಟ್ಟು ಜನರಲ್ಲಿ ಆತಂಕ ಮೂಡಿಸಿದೆ. ಎಚ್‌ಎಂಪಿವಿ ವೈರಸ್ ಅಷ್ಟು ಮಾರಾಣಾಂತಿಕವಲ್ಲ ಎನಿಸಿದರೂ ದುರ್ಬಲ ರೋಗ ನಿರೋಧಕ ಶಕ್ತಿಯಿರುವವರಿಗೆ ಅಪಾಯಕಾರಿಯಾಗಿದೆ. ಹಾಗಾದ್ರೆ ಎಚ್‌ಎಂಪಿವಿ ವೈರಸ್ ಹಾಗೂ ಕೋವಿಡ್ 19 ನಡುವಿನ ಹೋಲಿಕೆಗಳು ಹಾಗೂ ರೋಗಲಕ್ಷಣದಲ್ಲಿನ ವ್ಯತ್ಯಾಸಗಳೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

HMPV Cases: ನಾಗ್ಪುರದಲ್ಲಿ ಎರಡು ಎಚ್​ಎಂಪಿವಿ ಪ್ರಕರಣಗಳು ಪತ್ತೆ, ಒಟ್ಟು ಸಂಖ್ಯೆ 7ಕ್ಕೆ ಏರಿಕೆ

HMPV Cases in India: ಚೀನಾದ ಉತ್ತರ ಭಾಗದಲ್ಲಿ ಈ ಎಚ್‌ ಎಂಪಿವಿ ವೈರಸ್‌ ವೇಗವಾಗಿ ಹರಡುತ್ತಿದೆ. ಅಲ್ಲದೇ ಸಾವಿರಾರು ಸಂಖ್ಯೆಯ ಜನರು ಉಸಿರಾಟದ ತೊಂದರೆಗೆ ಸಿಲುಕಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದೆ. ಈ ಮೈಕ್ರೋಪ್ಲಾಸ್ಮಾ ನ್ಯುಮೋನಿಯಾ ಎಲ್ಲಾ ವಯೋಮಾನದವರ ಮೇಲೂ ಪರಿಣಾಮ ಬೀರುತ್ತಿದ್ದು, ಮುಖ್ಯವಾಗಿ ಮಕ್ಕಳಿಗೆ ಹೆಚ್ಚು ಮಾರಕವಾಗಿರುವುದರಿಂದ ಸಾರ್ವಜನಿಕ ಆರೋಗ್ಯದ ಬಗ್ಗೆ ಚೀನಾ ಕಳವಳ ವ್ಯಕ್ತಪಡಿಸಿದೆ. ಅದು ಭಾರತದ ತಮಿಳುನಾಡು, ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.

HMPV in India: ಹೊಸ ವೈರಸ್ ಅಲ್ಲ, ಭಯ ಪಡಬೇಡಿ; ಭಾರತದಲ್ಲಿ ಎಚ್​ಎಂಪಿವಿ ಹರಡುವಿಕೆಗೆ ಜೆಪಿ ನಡ್ಡಾ ಹೇಳಿಕೆ

ಭಾರತದಲ್ಲಿ ಎಚ್​ಎಂಆರ್​ವಿ ಹರಡುವಿಕೆ ಹೆಚ್ಚಾಗುತ್ತಿದೆ. ಕರ್ನಾಟಕ, ಗುಜರಾತ್, ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಈ HMPV ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ, ದೇಶಾದ್ಯಂತ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಹೇಳಿಕೆ ನೀಡಿದ್ದಾರೆ. ಎಚ್​ಎಂಪಿವಿ ಸಾಮಾನ್ಯವಾಗಿ ಉಸಿರಾಟದ ಹನಿಗಳ ಮೂಲಕ ಹರಡುತ್ತದೆ, ಶೀತದ ತಿಂಗಳುಗಳಲ್ಲಿ ಇದು ಹೆಚ್ಚು ಸಕ್ರಿಯವಾಗಿರುತ್ತದೆ. ತೀವ್ರ ರೀತಿಯ ರೋಗಲಕ್ಷಣಗಳು ಕಾಣಿಸಿಕೊಂಡರೆ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ವೈದ್ಯರನ್ನು ಸಂಪರ್ಕಿಸಲು ತಜ್ಞರು ಸಲಹೆ ನೀಡುತ್ತಾರೆ.

ಭಾರತದಲ್ಲಿ ಹರಡುತ್ತಲೇ ಇದೆ ಹೊಸ ವೈರಸ್​; ಕೊಲ್ಕತ್ತಾ, ಚೆನ್ನೈನಲ್ಲೂ ಎಚ್​ಎಂಪಿವಿ ಪತ್ತೆ

ಚೀನಾದಲ್ಲಿ ಎಚ್​ಎಂಪಿವಿ ಹರಡುತ್ತಿರುವ ಸುದ್ದಿಗಳು ಎಲ್ಲೆಡೆ ಆತಂಕ ಮೂಡಿಸುತ್ತಿದ್ದಂತೆ ಇದೀಗ ಭಾರತಕ್ಕೂ ಈ ಮಾರಣಾಂತಿಕ ವೈರಸ್ ಕಾಲಿಟ್ಟಿದೆ. ನಿನ್ನೆಯವರೆಗೂ ನಿರಾಳವಾಗಿದ್ದ ಭಾರತದಲ್ಲಿ ಇಂದು ಒಂದೇ ದಿನದಲ್ಲಿ 6 ಎಚ್​ಎಂಪಿವಿ ಪ್ರಕರಣಗಳು ಪತ್ತೆಯಾಗುವ ಮೂಲಕ ಆತಂಕ ಸೃಷ್ಟಿಸಿದೆ. ಇನ್ನೂ ಆಘಾತಕಾರಿ ವಿಚಾರವೆಂದರೆ ಈ ಎಲ್ಲ 4 ಪ್ರಕರಣಗಳು ಪತ್ತೆಯಾಗಿರುವುದು ಮಕ್ಕಳಲ್ಲಿ. ಬೆಂಗಳೂರಿನಲ್ಲಿ 2, ಅಹಮದಾಬಾದ್​ನಲ್ಲಿ 1 ಮಕ್ಕಳಲ್ಲಿ ಎಚ್​ಎಂಪಿವಿ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಕೊಲ್ಕತ್ತಾದ 5 ತಿಂಗಳ ಮಗುವಿನಲ್ಲಿ ಹಾಗೂ ಚೆನ್ನೈನ ಇಬ್ಬರು ಮಕ್ಕಳಲ್ಲೂ ಈ ವೈರಸ್ ಪತ್ತೆಯಾಗಿದೆ.

ಹೆಚ್ಎಂಪಿವಿ ಸೋಂಕಿತ ಮಕ್ಕಳು ಚಿಕಿತ್ಸೆ ಪಡೆದು ಈಗಾಗಲೇ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ: ದಿನೇಶ್ ಗುಂಡೂರಾವ್

ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ, ಐಸಿಎಂಅರ್ ನಿಂದ ಗೈಡ್ ಲೈನ್ ಗಳು ಬಿಡುಗಡೆಯಾಗುತ್ತಿದ್ದಂತೆಯೇ ಕರ್ನಾಟಕ ಸರ್ಕಾರ ಅವುಗಳನ್ನು ಜಾರಿಗೊಳಿಸುತ್ತದೆ ಎಂದು ಹೇಳಿದ ಸಚಿವ ದಿನೇಶ್, ಯಾರೂ ಆತಂಕಕ್ಕೆ ಒಳಗಾಗುವುದು ಬೇಡ, ಮುನ್ನೆಚ್ಚರಿಕೆ ಕ್ರಮಗಳ ಪಟ್ಟಿಯನ್ನು ತಮ್ಮ ಇಲಾಖೆ ಈಗಾಗಲೇ ಜಾರಿ ಮಾಡಿದೆ ಎಂದರು.

ಸತೀಶ್ ಜಾರಕಿಹೊಳೆ ಮನೆಗೆ ಸಿಎಂ ಸಿದ್ದರಾಮಯ್ಯ ಊಟಕ್ಕೆ ಹೋದರೆ ಅದರಲ್ಲೇನು ತಪ್ಪು? ಡಿಕೆ ಶಿವಕುಮಾರ್

ಸಂಪುಟ ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲ್ ತೆಗೆದುಕೊಳ್ಳುತ್ತಿದ್ದಾರೆ ಎಂದ ಶಿವಕಮಾರ್ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿನ್ನರ್ ಮೀಟಿಂಗ್ ನಲ್ಲಿ ಯಾವ ಚರ್ಚೆಯೂ ನಡೆದಿಲ್ಲ, ಮಾಧ್ಯಮಗಳಿಗೆ ಯಾರೋ ತಪ್ಪು ಮಾಹಿತಿ ನೀಡುತ್ತಿದ್ದಾರೆ, ಹಾಗೆಯೇ, ಹೆಚ್ಎಂಪಿ ವೈರಸ್ ಬಗ್ಗೆ ಯಾರೂ ಆತಂಕಿತರಾಗುವ ಅವಶ್ಯಕತೆ ಇಲ್ಲ ತಮ್ಮ ಸರ್ಕಾರ ಅದರ ವಿಷಯದಲ್ಲಿ ಅಲರ್ಟ್ ಆಗಿದೆ ಎಂದರು

HMPV in India: ಬೆಂಗಳೂರಿನ ಬಳಿಕ ಗುಜರಾತ್​ನ ಅಹಮದಾಬಾದ್‌ನಲ್ಲಿ ದೇಶದ 3ನೇ ಎಚ್‌ಎಂಪಿವಿ ಪ್ರಕರಣ ಪತ್ತೆ

ಈಗಾಗಲೇ ಕರ್ನಾಟಕದ ಇಬ್ಬರು ಮಕ್ಕಳಲ್ಲಿ ಎಚ್​ಎಂಪಿವಿ ಪ್ರಕರಣ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಭಾರತದ ಮೂರನೇ ಎಚ್​ಎಂಪಿವಿ ವೈರಸ್ ಗುಜರಾತ್​ನ ಅಹಮದಾಬಾದ್‌ನಲ್ಲಿ ಪತ್ತೆಯಾಗಿದೆ. ಗುಜರಾತ್‌ನಲ್ಲಿ ಇದು ಮೊದಲ ಎಚ್‌ಎಂಪಿವಿ ಪ್ರಕರಣವಾಗಿದೆ. ಸುಮಾರು 2 ವರ್ಷದ ವಯಸ್ಸಿನ ಮಗುವಿನಲ್ಲಿ ಈ HMPV ವೈರಸ್ ಪತ್ತೆಯಾಗಿದೆ. ರೋಗಿಯನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ಮೂರೂ ಪ್ರಕರಣಗಳು ಶಿಶುಗಳಲ್ಲಿಯೇ ಪತ್ತೆಯಾಗಿದೆ ಎಂಬುದು ಗಮನಾರ್ಹ ವಿಷಯ.

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ