Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Trap

Honey Trap

ಹನಿ ಟ್ರ್ಯಾಪಿಂಗ್ ಎನ್ನುವುದು ಬೇಹುಗಾರಿಕೆ ಅಥವಾ ಗುಪ್ತಚರ ಕಾರ್ಯಾಚರಣೆಗಳಲ್ಲಿ ಬಳಸಲಾಗುವ ರಹಸ್ಯ ತಂತ್ರವಾಗಿದೆ. ರಹಸ್ಯಗಳನ್ನು ಹೊರತೆಗೆಯಲು ಮಹಿಳೆಯರನ್ನು ಮುಂದಿಟ್ಟುಕೊಂಡು ಕಾರ್ಯಾಚರಣೆ ನಡೆಸುವುದನ್ನು ಹನಿ ಟ್ರ್ಯಾಪ್ ಎಂದು ಕರೆಯಲಾಗುತ್ತದೆ. ರಾಜಕೀಯದಲ್ಲಿ ಇತ್ತೀಚೆಗೆ ಇದು ಹೆಚ್ಚಾಗಿ ಕೇಳಿಬರುತ್ತಿದೆ. ಮಹಿಳೆಯರು ತಮ್ಮ ಟಾರ್ಗೆಟ್ ವ್ಯಕ್ತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ, ನಂತರ ಬ್ಲಾಕ್ಮೇಲ್ ಮಾಡಿ ತಮ್ಮ ಉದ್ದೇಶ ಈಡೇರಿಸಿಕೊಳ್ಳುವುದು ಇತ್ತೀಚೆಗೆ ಹೆಚ್ಚಾಗಿದೆ. ಶ್ರೀಮಂತ ಮತ್ತು ಪ್ರಭಾವಿ ವ್ಯಕ್ತಿಗಳನ್ನು ಈ ಹನಿ ಟ್ರ್ಯಾಪ್ ತಂತ್ರದ ಮೂಲಕ ಬಲೆಗೆ ಕೆಡವಲಾಗುತ್ತದೆ. ಕರ್ನಾಟಕದ ರಾಜಕೀಯದಲ್ಲಿ ಆಗಾಗ ಹನಿ ಟ್ರ್ಯಾಪಿಂಗ್ ಪ್ರಕರಣ ಬೆಳಕಿಗೆ ಬರುತ್ತಲೇ ಇರುತ್ತದೆ

ಇನ್ನೂ ಹೆಚ್ಚು ಓದಿ

Karnataka Budget Session: ಬಜೆಟ್ ಮೇಲಿನ ಚರ್ಚೆಗಳಿಗೆ ಉತ್ತರಿಸುವಾಗ ತಾಳ್ಮೆ ಕಳೆದುಕೊಂಡ ಸಿದ್ದರಾಮಯ್ಯ

ತಮ್ಮ ಉತ್ತರವನ್ನು ಸಿದ್ದರಾಮಯ್ಯ ಕುಳಿತು ಓದುತ್ತಿದ್ದರೆ, ಹನಿ ಟ್ರ್ಯಾಪ್ ಕೆಲಸಗಳಿಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ ಹೇಳಿ ಎಂದು ವಿರೋಧ ಪಕ್ಷದ ಶಾಸಕರು ಪ್ರಶ್ನಿಸುತ್ತಾರೆ. ತಮ್ಮ ಉತ್ತರವನ್ನು ಮುಂದುವರಿಸುವ ಸಿಎಂ, ಬಜೆಟ್ ಮೇಲಿನ ಚರ್ಚೆಯಲ್ಲಿ 80 ಸದಸ್ಯರು ಭಾಗಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಸದನದ ಹೊರಗೂ ಬಜೆಟ್​ಗೆ ವಿವಿಧ ಕ್ಷೇತ್ರಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಹೇಳುತ್ತಾರೆ.

ವಿಧಾನಸಭೆಯಲ್ಲಿ ಹೈಡ್ರಾಮಾ: ಸ್ಪೀಕರ್ ಮೇಲೆ ಕಾಗದ ಚೂರು ಎಸೆದ ಶಾಸಕರು!

‘‘ಹನಿಟ್ರ್ಯಾಪ್ ಸರ್ಕಾರ, ಹನಿಟ್ರ್ಯಾಪ್ ಸರ್ಕಾರ’’ ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷ ನಾಯಕರು ಮುಸ್ಲಿಂ ಮೀಸಲಾತಿ ವಿಧೇಯಕದ ಪ್ರತಿಗಳನ್ನು ಹರಿದು ಕಾಗದ ಚೂರುಗಳನ್ನು ಸ್ಪೀಕರ್ ಮೇಲೆ ಎಸೆದ ಕರಾಳ ಇತಿಹಾಸಕ್ಕೆ ಕರ್ನಾಟಕ ವಿಧಾನಸಭೆ ಶುಕ್ರವಾರ ಸಾಕ್ಷಿಯಾಯಿತು. ವಿಧಾನಸಭೆ ಹೈಡ್ರಾಮಾದ ವಿಡಿಯೋ ಇಲ್ಲಿದೆ ನೋಡಿ.

ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ಸಚಿವರು ಮತ್ತು ಶಾಸಕರ ಮೇಲಿನ ಹನಿಟ್ರ್ಯಾಪ್ ಪ್ರಯತ್ನದ ಆರೋಪಗಳು ಕರ್ನಾಟಕ ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಪ್ರಕರಣವು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕರು ಸಿಎಂ ಉತ್ತರಕ್ಕೆ ಆಗ್ರಹಿಸಿದ್ದರು. ಇದೀಗ, ಪ್ರಕರಣದಲ್ಲಿ ಯಾರೇ ಇದ್ದರೂ ರಕ್ಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಹನಿ ಟ್ರ್ಯಾಪ್ ಪ್ರಕರಣ ಹಿಟ್ ಅಂಡ್ ರನ್ ಆಗಬಾರದು, ಟಾರ್ಗೆಟ್ ಆಗಿರುವವರು ದೂರು ಸಲ್ಲಿಸಲಿ: ಡಿಕೆ ಶಿವಕುಮಾರ್

ನಿನ್ನೆ ಸದನದಲ್ಲಿ ಹನಿ ಟ್ರ್ಯಾಪ್ ವಿಷಯ ಚರ್ಚೆಯಾತ್ತಿದ್ದಾಗ ಮುನಿರತ್ನ 5-ವರ್ಷದ ಹಿಂದೆ ತನ್ನನ್ನು ಸುಳ್ಳು ಅತ್ಯಾಚಾರದ ಪ್ರಕರಣನದಲ್ಲಿ ಸಿಕ್ಕಿಸಲಾಗಿತ್ತು ಎಂದು ಆವೇಶದಲ್ಲಿ ಕೂಗಾಡಿದ್ದರು. ನೀವು ಹೇಳುತ್ತಿರುವ ಪ್ರಕರಣ ನ್ಯಾಯಾಲಯದಲ್ಲಿದೆ ಅಂತ ಸ್ಪೀಕರ್ ಯುಟಿ ಖಾದರ್​ ಮತ್ತು ಬೇರೆ ಸದಸ್ಯರು ಹೇಳಿದರೂ ಮುನಿರತ್ನ ಪಟ್ಟುಹಿಡಿದವರವರ ಹಾಗೆ ಸದನದಲ್ಲಿ ಮಾತಾಡಿದ್ದರು.

ರಾಜಣ್ಣ ಮಾತ್ರವಲ್ಲಇನ್ನೂ ಮೂರು ಮಂತ್ರಿಗಳಿಗೂ ಹನಿಟ್ರ್ಯಾಪ್​: ಗ್ಯಾಂಗ್​​ನ ಹಿಡಿದು ಬಾಯ್ಬಿಡಿಸಿದ ಸಚಿವ!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸುದ್ದಿ ಸಂಚಲನ ಸೃಷ್ಟಿಸಿದೆ. ರಾಜಕೀಯವಾಗಿ ಮುಗಿಸುವ ಹುನ್ನಾರದಿಂದ ಹನಿಟ್ರ್ಯಾಪ್​ಗೆ ಯತ್ನಿಸಿದ್ದಾರೆ ಎನ್ನುವುದು ಸದ್ದು ಮಾಡುತ್ತಿದೆ. ಈ ಹಿಂದೆಯೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಕೆಲ ರಾಜಕೀಯ ನಾಯಕರು, ತಮ್ಮ ಅಸ್ತಿತ್ವವೇ ಕಳೆದುಕೊಂಡಿರೋ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ಇದರ ಮಧ್ಯೆಯೇ ಇದೀಗ ಶಕ್ತಿ ಸೌಧ, ವಿಧಾನಸೌಧದ ಕಚೇರಿಯಲ್ಲೇ ಕೆಲ ಸಚಿವರನ್ನ ಹನಿಟ್ರ್ಯಾಪ್​ಗೆ ಯತ್ನಿಸಿರುವುದು ಸಂಚಲನ ಸೃಷ್ಟಿಸಿದೆ. ಹನಿಟ್ರ್ಯಾಪ್​ಗೆ ಯತ್ನಿಸಿದ್ದ ತಂಡವನ್ನೇ ಸಚಿವರೊಬ್ಬರು ಹಿಡಿದು ಎಲ್ಲಾ ಬಾಯ್ಬಿಡಿಸಿದ್ದಾರೆ.

ಸದನದಲ್ಲಿ ಹನಿಟ್ರ್ಯಾಪ್​ ಚರ್ಚೆ ವೇಳೆ ಪರಸ್ಪರ ಕಿತ್ತಾಡಿಕೊಂಡ ಬಿಜೆಪಿ ನಾಯಕರು..!

ಹನಿಟ್ರ್ಯಾಪ್ ಪ್ರಕರಣದಲ್ಲಿ ಕೆಲ ರಾಜಕೀಯ ನಾಯಕರು, ತಮ್ಮ ಅಸ್ತಿತ್ವವೇ ಕಳೆದುಕೊಂಡಿರೋ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ಇದರ ಮಧ್ಯೆಯೇ ಇದೀಗ ಹಿರಿಯ ಸಚಿವ ಕೆಎನ್ ರಾಜಣ್ಣ ಅವರನ್ನ ಹನಿಟ್ರ್ಯಾಪ್​ಗೆ ಯತ್ನಿಸಿದ್ದು, ಈ ಸಂಬಂಧ ವಿಧಾನಸಭೆ ಸದನದಲ್ಲಿ ಭಾರೀ ಚರ್ಚೆಯಾಯಿತು. ಮತ್ತೊಂದೆಡೆ ಹನಿಟ್ರ್ಯಾಪ್ ಚರ್ಚೆ​ ಮಧ್ಯೆಯೇ ವಿರೋಧ ಪಕ್ಷ ಬಿಜೆಪಿ ಪಾಳೆಯದಲ್ಲಿ ಜೋರು ಗಲಾಟೆಯಾಗಿದೆ.

ರಾಜಣ್ಣ ಹೇಳುತ್ತಿರುವ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ತನಗೇನೂ ಗೊತ್ತಿಲ್ಲವೆಂದ ಸಚಿವ ಎಂಬಿ ಪಾಟೀಲ್

ರಾಜಣ್ಣ ಹಿರಿಯರಿದ್ದಾರೆ, ಸಚಿವರಾಗಿ ಜಬಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಹಾಗಾಗಿ ಅವರು ಸತ್ಯವನ್ನೇ ಹೇಳಿರುತ್ತಾರೆ, ಹಾಗಾಗಿ ಹನಿ ಟ್ರ್ಯಾಪ್ ಪ್ರಕರಣದ ಬಗ್ಗೆ ಅವರನ್ನು ಕೇಳುವುದೇ ಒಳಿತು ಎಂದು ಪಾಟೀಲ್ ಹೇಳಿದರು. ಅಥವಾ ಏನು ನಡೆದಿದೆ, ಯಾಕೆ ನಡೆದಿದೆ ಅಂತ ಮಾಧ್ಯಮದವರೆಲ್ಲ ತನ್ನನ್ನು ಎಜುಕೇಟ್ ಮಾಡಲಿ, ಆಮೇಲೆ ತಾನು ಹನಿ ಟ್ರ್ಯಾಪ್ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಪಾಟೀಲ್ ಹೇಳಿದರು.

ಹನಿಟ್ರ್ಯಾಪ್​ ಕೇಸ್: ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ

ಇವತ್ತಿನ ಸದನ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡಿದೆ. ಶಾಸಕ ಯತ್ನಾಳ್​ ಸಿಡಿಸಿದ ಹನಿಟ್ರ್ಯಾಪ್​ ಬಾಂಬ್,​ ಸಂಚಲನವನ್ನೇ ಸೃಷ್ಟಿಸಿದೆ. ಸಹಕಾರಿ ಸಚಿವ ಕೆಎನ್​ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಆಗಿದೆ ಎಂದು ಸದನದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರ ಬೆನ್ನಲ್ಲೇ ಸ್ವತಃ ರಾಜಣ್ಣ ಎದ್ದು ನಿಂತ ತಮ್ಮ ಮೇಲೆ ಹನಿಟ್ರ್ಯಾಪ್​ ಯತ್ನ ನಡೆದಿದೆ ಎಂದು ಸ್ಪಷ್ಟಪಡಿಸಿದರು. ಬಳಿಕ ಬಿಜೆಪಿ ಶಾಸಕ ಮುನಿರತ್ನ ರದ್ದು ನಿಂತು ಈ ಬಗ್ಗೆ ರೋಷಾವೇಶವಾಗಿ ಮಾತನಾಡಿದರು.

ಹನಿಟ್ರ್ಯಾಪ್​ ಷಡ್ಯಂತ್ರ: ವಿಧಾನಸೌಧದಲ್ಲೇ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕ

ಸದ್ಯ ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸುದ್ದಿ ಸಂಚಲನ ಸೃಷ್ಟಿಸಿದೆ. ರಾಜಕೀಯವಾಗಿ ಮುಗಿಸುವ ಹುನ್ನಾರದಿಂದ ಹನಿಟ್ರ್ಯಾಪ್​ಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ವಿಧಾನಸೌಧದಲ್ಲಿ ದೇವರ ಫೋಟೋ ತೋರಿಸಿ ಶಾಸಕ ಮುನಿರತ್ನ ಭಾವುಕರಾದರು.

Karnataka Budget Session; ಅತ್ಯಾಚಾರದ ಸುಳ್ಳು ಆರೋಪ ಹೊರೆಸಿ ನನ್ನ ಬದುಕನ್ನೇ ಹಾಳು ಮಾಡಲಾಯಿತು: ಮುನಿರತ್ನ

ನೀವು ಯಾರ ಮೇಲೆ ಆಪಾದನೆ ಮಾಡುತ್ತಿದ್ದೀರಿ, ಅದನ್ನಾದರೂ ಹೇಳಿ ಅಂತ ಬಾಲಕೃಷ್ಣ ಹೇಳುತ್ತಾರೆ. ಮುನಿರತ್ನ ಮುಂದೆ ಕೂತಿದ್ದ ಸುನೀಲ ಕುಮಾರ್ ಸುಮ್ಮನಿರಿ ಅಂತ ಸನ್ನೆ ಮಾಡಿದರೂ ಆರ್ ಆರ್ ನಗರ ಶಾಸಕ ಸುಮ್ಮನಾಗಲ್ಲ. ನೀವು ಹೇಳುತ್ತಿರುವ ಪ್ರಕರಣ ನ್ಯಾಯಾಲಯಲ್ಲಿದೆ, ಮಾತಾಡುವುದು ಸರಿಯಲ್ಲ ಎಂದು ಖಾದರ್ ಮತ್ತು ಬಾಲಕೃಷ್ಣ ಹೇಳುತ್ತಾರೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ