AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax

Income Tax

ಆದಾಯ ತೆರಿಗೆ ಎಂಬುದು ವ್ಯಕ್ತಿ ಹಾಗೂ ಸಂಸ್ಥೆಗಳು ಗಳಿಸುವ ಆದಾಯಕ್ಕೆ ಸರ್ಕಾರ ವಿಧಿಸುವ ತೆರಿಗೆಯಾಗಿದೆ. ಇದು ನೇರ ತೆರಿಗೆಗಳ ಗುಂಪಿಗೆ ಸೇರುತ್ತದೆ. ಪರ್ಸನಲ್ ಇನ್ಕಮ್ ಟ್ಯಾಕ್ಸ್ ಮತ್ತು ಕಾರ್ಪೊರೇಟ್ ಇನ್ಕಮ್ ಟ್ಯಾಕ್ಸ್ ಎಂದು ವರ್ಗೀಕರಿಸಬಹುದು. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಇದೂ ಒಂದು. 2023-24ರ ಸಾಲಿನ ವರ್ಷದಲ್ಲಿ ಭಾರತದಲ್ಲಿ ಆದಾಯ ತೆರಿಗೆ ಸೇರಿದಂತೆ ಒಟ್ಟಾರೆ ನೇರ ತೆರಿಗೆಗಳ ಪ್ರಮಾಣ 18.90 ಲಕ್ಷ ಕೋಟಿ ರೂ ಇತ್ತು. ಸರ್ಕಾರ ಆದಾಯ ತೆರಿಗೆಯನ್ನು ಸ್ಲ್ಯಾಬ್ ದರಗಳಲ್ಲಿ ವಿಧಿಸುತ್ತದೆ. ಹೆಚ್ಚು ಆದಾಯ ಹೊಂದಿರುವವರಿಗೆ ಹೆಚ್ಚಿನ ತೆರಿಗೆ ದರ ಇರುತ್ತದೆ. ತೀರಾ ಕಡಿಮೆ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಇರುತ್ತದೆ. ಆದಾಯ ಹೆಚ್ಚಿದಂತೆ ತೆರಿಗೆಯೂ ಹೆಚ್ಚುತ್ತಾ ಹೋಗುತ್ತದೆ. ಸಮಾಜದಲ್ಲಿ ಆರ್ಥಿಕ ಬೆಳವಣಿಗೆಯ ಅಸಮತೋಲನ ಕಡಿಮೆ ಮಾಡಲು ಈ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುತ್ತದೆ.

ಇನ್ನೂ ಹೆಚ್ಚು ಓದಿ

ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

Accepted 41pc tax devolution to states, says Nirmala Sitharaman in her budget speech: 16ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಗಳಿಗೆ ಶೇ. 41 ಟ್ಯಾಕ್ಸ್ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ 2026-27ರ ವರ್ಷಕ್ಕೆ 1.4 ಲಕ್ಷ ಕೋಟಿ ರೂ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಜಿಎಸ್​ಟಿ, ಕಾರ್ಪೊರೇಶನ್ ಟ್ಯಾಕ್ಸ್, ಇನ್ಕಮ್ ಟ್ಯಾಕ್ಸ್ ಇತ್ಯಾದಿಗಳಿಂದ ಬರುವ ತೆರಿಗೆ ಆದಾಯವನ್ನು ಕೇಂದ್ರವು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ.

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸು ಮಾರುಕಟ್ಟೆ, ಬ್ಯಾಂಕ್, ಕೃಷಿ, ಎಂಎಸ್​ಎಂಇ ಕ್ಷೇತ್ರದವರು ಈ ಬಜೆಟ್​ನಿಂದ ಏನೇನು ಅಪೇಕ್ಷಿಸುತ್ತಿದ್ದಾರೆ ಎನ್ನುವ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.

ಕೇಂದ್ರ ಬಜೆಟ್ 2026: ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

Budget 2026 - Income Tax Expectations: ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಹಲವು ನಿರೀಕ್ಷೆಗಳಿವೆ. ಆದಾಯ ತೆರಿಗೆಯಲ್ಲಿ ಕಳೆದ ಬಜೆಟ್​ನಲ್ಲಿ ಗಣನೀಯ ಇಳಿಕೆ ಮಾಡಲಾಗಿದೆ. ಈ ಬಾರಿ ಮತ್ತಷ್ಟು ಟ್ಯಾಕ್ಸ್ ಇಳಿಸುವ ನಿರೀಕ್ಷೆ ಇಲ್ಲ. ಆದರೆ, ಹಳೆಯ ಟ್ಯಾಕ್ಸ್ ರೆಜಿಮ್ ಮುಂದುವರಿಯುತ್ತದಾ ಇಲ್ಲವಾ ಎನ್ನುವ ಪ್ರಶ್ನೆ ಇದೆ. ಅದಕ್ಕೆ ಬಜೆಟ್​ನಲ್ಲಿ ಉತ್ತರ ಸಿಗುತ್ತಾ ಎಂದು ಕಾದು ನೋಡಬೇಕು.

ಕೇಂದ್ರ ಬಜೆಟ್ 2026: ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

Union Budget 2026, Investment Expectations: 2026ರ ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಸಾಮಾನ್ಯ ಹೂಡಿಕೆದಾರರು ಗಮನಿಸಬೇಕಾದ ಹಲವು ಸಂಗತಿಗಳಿವೆ. ಈ ಬಜೆಟ್​ನಲ್ಲಿ ಎಲ್​ಟಿಸಿಜಿ ಅಥವಾ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಸರಳೀಕರಿಸುವ ಸಾಧ್ಯತೆ ಇದೆ. ಫಿಸ್ಕಲ್ ಡೆಫಿಸಿಟ್ ಮತ್ತು ಸಾಲದ ಪರಿಮಾಣವನ್ನು ಕಡಿಮೆ ಮಾಡಲು ಸರ್ಕಾರ ಗುರಿ ಇಡುತ್ತಾ ನೋಡಬೇಕು.

ಕೇಂದ್ರ ಬಜೆಟ್ 2026ರಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ?

Union Budget 2026, Central Government on joint taxation system for married couples: 2026-27ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಘೋಷಿಸುವ ನಿರೀಕ್ಷೆ ಇದೆ. ಹಿಂದಿನ ವರ್ಷದ ಬಜೆಟ್​ನಲ್ಲಿ ಸಾಕಷ್ಟು ಟ್ಯಾಕ್ಸ್ ತಗ್ಗಿಸಿದ್ದ ಸರ್ಕಾರ ಈ ಬಜೆಟ್​ನಲ್ಲೂ ಮಧ್ಯಮವರ್ಗದವರಿಗೆ ರಿಲೀಫ್ ಮುಂದುವರಿಸಬಹುದು. ಅಮೆರಿಕ, ಜರ್ಮನಿ ಮೊದಲಾದ ಕೆಲವೆಡೆ ಇಂಥ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಇದೆ. ಅದರಲ್ಲಿ ಗಂಡ ಮತ್ತು ಹೆಂಡಗಿ ಜಂಟಿಯಾಗಿ ಟ್ಯಾಕ್ಸ್ ಫೈಲ್ ಮಾಡಬಹುದು.

Year of Reforms: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

2025, Year of Reforms: 2025ನ್ನು ಒಮ್ಮೆ ತಿರುಗಿ ನೋಡಿದರೆ ಸಾಕು, ಸುಧಾರಣೆಗಳ ಪರ್ವವೇ ಕಣ್ಣಮುಂದೆ ಬರುತ್ತದೆ. ದೇಶದ ಆರ್ಥಿಕತೆ, ಆಡಳಿತ ಹಾಗೂ ಸಾಮಾಜಿಕ ಭದ್ರತೆ ಬಲಪಡಿಸುವ ಉದ್ದೇಶದಿಂದ ದೊಡ್ಡ ಬದಲಾವಣೆಗಳನ್ನು ಕಂಡ ವರ್ಷ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನ, ಅಭಿವೃದ್ಧಿಗಾಗಿ ಇರುವ ತುಡಿತದಿಂದ ದೇಶದಲ್ಲಿ ಸಾಕಷ್ಟು ಬದಲಾವಣೆಗಳು ಆದವು.

Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ?

Income tax payers in Pakistan: ಪಾಕಿಸ್ತಾನದಲ್ಲಿ ನೊಂದಾಯಿತ ಟ್ಯಾಕ್ಸ್ ಪೇಯರ್ಸ್ ಸಂಖ್ಯೆ 59 ಲಕ್ಷದಷ್ಟಿದೆ ಎಂದು ಹೇಳಲಾಗುತ್ತಿದೆ. ಇವರ ಪೈಕಿ 3 ಲಕ್ಷ ರೂ (ಪಿಕೆಆರ್) ಮೇಲ್ಪಟ್ಟ ಮಾಸಿಕ ಸಂಬಳದ ಆದಾಯದವರ ಸಂಖ್ಯೆ ಕೆಲವೇ ಲಕ್ಷ ಇರಬಹುದು. ಪಾಕಿಸ್ತಾನದಲ್ಲಿ ಆದಾಯ ತೆರಿಗೆಗಳಿಂದ ಸುಮಾರು 9 ಲಕ್ಷ ಕೋಟಿ ರೂ ಆದಾಯ ಸಿಗುತ್ತಿರಬಹುದು.

ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

Reasons why many tax payers not yet received refunds: 2024-25ರ ಹಣಕಾಸು ವರ್ಷಕ್ಕೆ ಸಲ್ಲಿಸಲಾದ ಐಟಿ ರಿಟರ್ನ್​ನಲ್ಲಿ ಬಹಳ ಜನರಿಗೆ ಕ್ಲೇಮ್ ಮಾಡಿರುವ ರೀಫಂಡ್ ಇನ್ನೂ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಹೆಚ್ಚಿನ ಮೌಲ್ಯದ ರೀಫಂಡ್ ಕ್ಲೇಮ್ ಮಾಡಿದ್ದರೆ, ಅಥವಾ ಐಟಿಆರ್​ನಲ್ಲಿ ದೋಷ ಮತ್ತು ವ್ಯತ್ಯಾಸಗಳು ಕಂಡುಬಂದಲ್ಲಿ ಇಲಾಖೆ ಪರಿಶೀಲಿಸುತ್ತದೆ. ಈ ಕಾರಣಕ್ಕೆ ರೀಫಂಡ್ ವಿಳಂಬವಾಗುತ್ತಿರಬಹುದು ಎನ್ನಲಾಗಿದೆ.

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್​ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕಾಯ್ದೆಗೆ ಸಂಸತ್ತಿನ ಅನುಮೋದನೆ ಇದೆ. ಹೊಸ ಕಾಯ್ದೆಯಲ್ಲಿ ನಿಯಮಗಳು ಸರಳಗೊಂಡಿವೆ.

ಆಸ್ತಿ ಮಾರಾಟ; ತೆರಿಗೆ ಉಳಿಸಲು ಸೆಕ್ಷನ್ 54 ಮತ್ತು 54ಎಫ್ ಅವಕಾಶ ಬಳಸಿ

Use sections 54 and 54f when selling assets for buying a home: ಚಿನ್ನ, ಷೇರು, ಮ್ಯೂಚುವಲ್ ಫಂಡ್ ಇತ್ಯಾದಿ ಆಸ್ತಿಗಳನ್ನು ಮಾರಿದಾಗ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ. ಇದನ್ನು ತಪ್ಪಿಸಲು ಸೆಕ್ಷನ್ 54 ಮತ್ತು ಸೆಕ್ಷನ್ 54ಎಫ್ ಅವಕಾಶ ಕೊಡುತ್ತದೆ. ನೀವು ಆಸ್ತಿ ಮಾರಿದ ಹಣವನ್ನು ಮನೆ ಖರೀದಿಸಲು ಅಥವಾ ನಿರ್ಮಿಸಲು ಬಳಸಿದರೆ ಆಗ ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಿಂದ ವಿನಾಯಿತಿ ಪಡೆಯಬಹುದು.

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು?

PAN and Aadhaar linking Dec 31st Deadline over, know what happens now: ಆಧಾರ್ ಜೊತೆ ಪ್ಯಾನ್ ಅನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೆ ನೀಡಿದ್ದ ಗಡುವು ಮುಗಿದಿದೆ. ಜನವರಿ 1ರಿಂದ ಲಿಂಕ್ ಆಗದ ಪ್ಯಾನ್ ನಂಬರ್​ಗಳು ಇನಾಪರೇಟಿವ್ ಆಗುತ್ತವೆ. ಹೀಗೆ ನಿಷ್ಕ್ರಿಯಗೊಂಡ ಪ್ಯಾನ್ ಇದ್ದರೆ ಹಲವು ಹಣಕಾಸು ವಹಿವಾಟು ಸಮಸ್ಯೆಗಳು ಕಾಣಿಸಬಹುದು. ಈ ಬಗ್ಗೆ ಒಂದು ವರದಿ:

ಆಸ್ತಿ ಮಾರಿ ಬಂದ 94 ಲಕ್ಷ ರೂನಲ್ಲಿ 38 ಲಕ್ಷ ರೂ ಕ್ಯಾಷ್; ಅಘೋಷಿತ ಆದಾಯವೆಂದು ಟ್ಯಾಕ್ಸ್ ನೋಟೀಸ್; ಕೇಸ್ ಗೆದ್ದ ಮಹಿಳೆ

Registered sale deed and tax notice: ಆಸ್ತಿ ಮಾರಿ ಬಂದ ಸ್ವಲ್ಪ ಕ್ಯಾಷ್ ಹಣದಲ್ಲಿ 13 ಲಕ್ಷ ರೂ ಅನ್ನು ಬ್ಯಾಂಕ್ ಅಕೌಂಟ್​ಗೆ ಡೆಪಾಸಿಟ್ ಮಾಡಿದ್ದ ಮಹಿಳೆಗೆ ಟ್ಯಾಕ್ಸ್ ನೋಟೀಸ್ ಬಂದಿತ್ತು. ಆ ವರ್ಷ ಮಹಿಳೆ ಐಟಿಆರ್ ಫೈಲ್ ಮಾಡದ್ದರಿಂದ 13 ಲಕ್ಷ ರೂ ಕ್ಯಾಷ್ ಅನ್ನು ಅಘೋಷಿತ ಆಸ್ತಿ ಎಂದು ಪರಿಗಣಿಸಲಾಗಿತ್ತು. ಆದರೆ, ಮುಂಬೈನ ಐಟಿ ಟ್ರಿಬ್ಯುನಲ್ ಆ ಮಹಿಳೆ ಪರವಾಗಿ ತೀರ್ಪು ಕೊಟ್ಟಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್