Independence Day
ಸ್ವಾತಂತ್ರ್ಯ ದಿನಾಚರಣೆ: ಎಷ್ಟೋ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ಭಾರತವು ಆಗಸ್ಟ್ 15, 1947ರಲ್ಲಿ ಸ್ವಾತಂತ್ರವನ್ನು ಕಂಡಿತು. ಪ್ರಮುಖ ಸಮಾರಂಭವು ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಆರಂಭದೊಂದಿಗೆ ಪ್ರಾರಂಭವಾಗುತ್ತದೆ. ಬಳಿಕ ಪ್ರಧಾನಿ ಭಾಷಣ ಮಾಡುತ್ತಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸುತ್ತಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಜರುಗುತ್ತವೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕಾಗಿ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ. ಜೂನ್ 3, 1947 ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್ಬ್ಯಾಟನ್, ಬ್ರಿಟಿಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದ್ದರು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ 1947 ರ ಅನ್ವಯ ಆಗಸ್ಟ್ 15, 1947 ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದು ಮಧ್ಯರಾತ್ರಿ ಜವಾಹರ್ಲಾಲ್ ನೆಹರು ಅವರು ದೇಶದ ಪ್ರಥಮ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯದಿನದಂದು ಗಾಳಿಪಟವನ್ನು ಹಾರಿಸುವ ಪದ್ದತಿ ಜಾರಿಯಲ್ಲಿದೆ. ಸಂಜೆಯ ವೇಳೆ ಗಾಳಿಪಟಗಳು ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸ ಎಲ್ಲೆಲ್ಲೂ ಮೊಳಗುತ್ತವೆ
ಲಾಲ್ಬಾಗ್ ಫ್ಲವರ್ ಶೋಗೆ ಮನಸೋತ ಸಿಟಿ ಮಂದಿ: 9.5 ಲಕ್ಷ ಜನ ಭೇಟಿ; ನಾಳೆ ಕೊನೆ ದಿನ
Lalbagh Flower Show: ಬೆಂಗಳೂರಿನ ಲಾಲ್ ಬಾಗ್ನಲ್ಲಿ ನಡೆಯುತ್ತಿರುವ 220ನೇ ಫಲ ಪುಷ್ಪ ಪ್ರದರ್ಶನವು ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದೆ. 11 ದಿನದಲ್ಲಿ 9.5 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದು, 3 ಕೋಟಿ ರೂ ಆದಾಯ ಗಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದು, ಗಂಗಾ ಸಾಮ್ರಾಜ್ಯದ ಇತಿಹಾಸವನ್ನು ಹೂವಿನ ಚಿತ್ತಾರಗಳಲ್ಲಿ ಕಣ್ತುಂಬಿಕೊಂಡರು.
- Lakshmi Narasimha Swamy L
- Updated on: Aug 16, 2026
- 8:54 pm
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್
ಉದ್ದೇಶಪೂರ್ವಕವಾಗಿ ಶಾಂತಿಭಂಗ ಮಾಡಿದ್ದಾರೆ ಎಂದು ಆರೋಪಿಸಿ ಮಂಗಳೂರು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎಂಬುವರು ಸೋನಿಯಾ ಗಾಂಧಿ ವಿರುದ್ಧ ಉರ್ವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿಕಾಸ್, 'ವಂದೇ ಮಾತರಂ' ನಮ್ಮ ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾಗಿದೆ. ಯಾರೇ ಆಗಲಿ ಅವರ ಹುದ್ದೆ ಅಥವಾ ಅಧಿಕಾರ ಏನೇ ಇರಲಿ ಇದನ್ನು ಅವಮಾನಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ, ಸೋನಿಯಾ ಗಾಂಧಿ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳುವಂತೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಾನು ಉರ್ವ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ನೀಡಿದ್ದೇನೆ' ಎಂದಿದ್ದಾರೆ.
- Pruthviraj
- Updated on: Aug 16, 2026
- 6:17 pm
ಕರ್ನಾಟಕಕ್ಕೆ 2047ಕ್ಕೆ 3 ಟ್ರಿಲಿಯನ್ ಆರ್ಥಿಕತೆ ಗುರಿ; ಉದ್ಯೋಗ ಸಂಕಲ್ಪ, ಉದ್ಯೋಗ ನಿಧಿ, ಶಿಕ್ಷಣದಲ್ಲಿ ಎಐ ಇತ್ಯಾದಿ ಯೋಜನೆ ಪ್ರಕಟ
On India's 80th independence day, Karnataka CM DK Shivakumar announces various programmes for development: 2047ಕ್ಕೆ ಕರ್ನಾಟಕವನ್ನು ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ಮಾಡುವ ಮಹತ್ವಾಕಾಂಕ್ಷಿ ಗುರಿಯನ್ನು ಸಿಎಂ ಪ್ರಕಟಿಸಿದ್ದಾರೆ. ಉದ್ಯೋಗ ಸಂಕಲ್ಪ, ಉದ್ಯೋಗ ನಿಧಿ ಯೋಜನೆಗಳನ್ನು ಘೋಷಿಸಿರುವ ಡಿಕೆ ಶಿವಕುಮಾರ್, ಇವುಗಳಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ನಿರೀಕ್ಷೆ ಇಟ್ಟಿದ್ದಾರೆ. ಶಿಕ್ಷಣದಲ್ಲಿ ಎಐ ಸೇರಿದಂತೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ರಾಜ್ಯದ ಕೊಡುಗೆ ಹೆಚ್ಚಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.
- Vijaya Sarathy SN
- Updated on: Aug 16, 2026
- 4:18 pm
ಸ್ವಾತಂತ್ರ್ಯೋತ್ಸವ ಅಂಗವಾಗಿ HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹೆಚ್ಎಂಟಿ ಸಂಸ್ಥೆಯು ಗಂಡಭೇರುಂಡ ಚಿಹ್ನೆ ಮತ್ತು ಕನ್ನಡ ಅಂಕಿಗಳಿರುವ ವಿಶೇಷ ವಾಚ್ಗಳನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜಾಲಹಳ್ಳಿ ಕೇಂದ್ರದಲ್ಲಿ ಈ ಅನನ್ಯ ವಾಚ್ಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. 2 ಕಿಲೋಮೀಟರ್ ಉದ್ದದ ಕ್ಯೂನಲ್ಲಿ ನಿಂತು ಜನ ತಮ್ಮ ಮೆಚ್ಚಿನ ಮೇಡ್ ಇನ್ ಇಂಡಿಯಾ ವಾಚ್ಗಳನ್ನು ಖರೀದಿಸುತ್ತಿದ್ದಾರೆ, ಇದು ಭಾರತೀಯ ಸಂಸ್ಕೃತಿಯ ಹೆಮ್ಮೆಯನ್ನು ಸಾರುತ್ತಿದೆ.
- Vinay Kashappanavar
- Updated on: Aug 15, 2026
- 10:13 pm
ಕೋಲಾರ: ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ; ಓರ್ವನ ಬಂಧನ
ಕೋಲಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿದ ಆರೋಪದಲ್ಲಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ಬಡಾವಣೆಯಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಮುಸ್ತಫಾ ಎಂಬುವರಿಗೆ ಉಡುಗೊರೆ ನೀಡಲು ತಂದಿದ್ದ ಖಡ್ಗವನ್ನು ಪ್ರದರ್ಶಿಸಲಾಗಿತ್ತು. ಈ ಘಟನೆಯು ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪಕ್ಕೆ ಗುರಿಯಾಗಿದ್ದು, ಕೋಲಾರ ನಗರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
- Rajendra Simha BL
- Updated on: Aug 15, 2026
- 5:28 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ‘ವಂದೇ ಮಾತರಂ’ ಗೀತೆಗೆ ಅವಮಾನಿಸಿದರೇ ಸೋನಿಯಾ ಗಾಂಧಿ?
ಕಾಂಗ್ರೆಸ್ ನಾಯಕರಿಗೆ ರಾಷ್ಟ್ರೀಯ ಗೀತೆ ಎಂದರೆ ಅಸಹನೆ, ಇದು ವಂದೇ ಮಾತರಂ ಗೀತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕ್ರಮದ ಈ ವಿಡಿಯೋದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಇತರ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿರುವುದನ್ನು ನೋಡಬಹುದು. ಆಗ ವಂದೇ ಮಾತರಂ ಗೀತೆಯ ಗಾಯನ ಶುರುವಾಗುತ್ತಿದ್ದಂತೆ, ಸೋನಿಯಾ ಗಾಂಧಿ ಮತ್ತು ಖರ್ಗೆ ಅವರು ತಮ್ಮ ಸುತ್ತಮುತ್ತಲಿದ್ದವರಿಗೆ ಕೈಸನ್ನೆ ಮಾಡುವ ಮೂಲಕ ಹಾಡುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.
- Sushma Chakre
- Updated on: Aug 15, 2026
- 3:58 pm
ಸ್ವಾತಂತ್ರ್ಯ ದಿನಾಚರಣೆಯಂದು ನೋಡಬೇಕಾದ ಕನ್ನಡ ಸಿನಿಮಾಗಳಿವು
ಇಂದು ದೇಶ 80ನೇ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಿಂದ ಭಾಷಣ ಮಾಡಿದ್ದಾರೆ. ದೇಶದಾದ್ಯಂತ ಪ್ರತಿ ರಾಜ್ಯ, ಪಟ್ಟಣ, ಹಳ್ಳಿಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಿನಿಮಾಗಳು ಸಹ ಪ್ರಮುಖವಾದ ಪಾತ್ರ ನಿರ್ವಹಿಸಿದ್ದರು. ಸಿನಿಮಾಗಳ ಮೂಲಕ ದೇಶಪ್ರೇಮವನ್ನು ಬಿತ್ತುವ ಕೆಲಸಗಳನ್ನು ಮಾಡಲಾಗಿತ್ತು. ಕನ್ನಡದಲ್ಲಿಯೂ ಸಹ ಸಾಕಷ್ಟು ದೇಶ ಪ್ರೇಮ ಜಾಗೃತಗೊಳಿಸುವ ಸಿನಿಮಾಗಳು ಬಂದಿವೆ. ಸ್ವಾತಂತ್ರ್ಯ ದಿನಾಚರಣೆಯಂದು ನೋಡಬಹುದಾದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...
- Manjunatha C
- Updated on: Aug 15, 2026
- 3:07 pm
Video: 6ನೇ ತರಗತಿಯಿಂದ AI ಶಿಕ್ಷಣ, ಬೆಂಗಳೂರಿನಲ್ಲಿ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಮಹತ್ವದ ಘೋಷಣೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಯುವಶಕ್ತಿಗೆ ಆದ್ಯತೆ ನೀಡಿ ಮಾತನಾಡಿದ್ದಾರೆ. ಪರೀಕ್ಷಾ ಪದ್ಧತಿಯ ಸುಧಾರಣೆ, ಎಐ ಮತ್ತು ಕೋಡಿಂಗ್ ಶಿಕ್ಷಣ, ಉಚಿತ ಬಸ್ ಪಾಸ್, ಭಾರತ ಜೋಡೋ ಯುವ ಸಂಘಗಳ ಸ್ಥಾಪನೆ, ಯುವ ನಿಧಿ ಮೂಲಕ ಉದ್ಯೋಗ ಮತ್ತು ಹಿಂದುಳಿದ ತಾಲ್ಲೂಕುಗಳಲ್ಲಿ ಕೈಗಾರಿಕಾ ಅಭಿವೃದ್ಧಿಯಂತಹ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಗುರಿ ಹೊಂದಿದ್ದಾರೆ.
- Akshatha Vorkady
- Updated on: Aug 15, 2026
- 1:13 pm
ಈ ಬಾರಿಯೂ ಕೆಂಪು ಕೋಟೆಯ ಸ್ವಾತಂತ್ರ್ಯ ದಿನಾಚರಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗೈರು; ಕಾರಣವೇನು?
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೆಂಪು ಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸತತ ಎರಡನೇ ವರ್ಷವೂ ಗೈರುಹಾಜರಾಗಿದ್ದಾರೆ. 2024ರ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಯ ಸಮಯದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು ಕ್ಯಾಬಿನೆಟ್ ಸಚಿವ ಸ್ಥಾನಮಾನವನ್ನು ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಕೆಂಪು ಕೋಟೆಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಶಿಷ್ಟಾಚಾರವನ್ನು (ಪ್ರೋಟೋಕಾಲ್) ಮೀರಿ ಹಿಂಭಾಗದ ಸಾಲಿನಲ್ಲಿ ಆಸನ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು.
- Sushma Chakre
- Updated on: Aug 15, 2026
- 1:12 pm
Independence day 2026: ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಸರ್ಕಾರದ ಪ್ರಗತಿಯ ಕುರಿತು ಪ್ರಮುಖ ಭಾಷಣ ಮಾಡಿದ್ದಾರೆ. ಕೃಷಿ, ಸಾಮಾಜಿಕ ಕಲ್ಯಾಣ, ಆರೋಗ್ಯ, ಜಲ ಭದ್ರತೆ ಮತ್ತು ಮೂಲಸೌಕರ್ಯ ವಲಯಗಳಲ್ಲಿ ರಾಜ್ಯ ಸರ್ಕಾರವು ಕೈಗೊಂಡಿರುವ ಹತ್ತು ಹಲವು ಉಪಕ್ರಮಗಳನ್ನು ಅವರು ವಿವರಿಸಿದ್ದಾರೆ.
- Bhavana Hegde
- Updated on: Aug 15, 2026
- 12:35 pm
Video: ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗಿ
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ವಸತಿ ಸಚಿವರು ಹಾಗೂ ಚಾಮರಾಜಪೇಟೆ ಶಾಸಕ ಬಿ.ಝೆಡ್. ಜಮೀರ್ ಅಹಮದ್ ಖಾನ್, ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮಹನೀಯರಿಗೆ ಗೌರವ ಸಲ್ಲಿಸಲಾಯಿತು.
- Akshatha Vorkady
- Updated on: Aug 15, 2026
- 12:11 pm
ವಿಧಾನಸೌಧದ ಮುಂದೆ ಫ್ರೀಡಂ ಹಬ್ಬ: ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ಸ್ವಾತಂತ್ರ್ಯ ದಿನಾಚರಣೆ 2026ರ ಅಂಗವಾಗಿ ವಿಧಾನಸೌಧದ ಮುಂದೆ ಮಧ್ಯಾಹ್ನ 12 ರಿಂದ ರಾತ್ರಿ 10 ಗಂಟೆಯವರೆಗೆ ಫ್ರೀಡಂ ಹಬ್ಬ ಆಯೋಜಿಸಲಾಗಿದೆ. ಸಾವಿರಾರು ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ, ಅಂಬೇಡ್ಕರ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಈ 80ನೇ ಸ್ವಾತಂತ್ರ್ಯೋತ್ಸವಕ್ಕೆ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ.
- Akshay Pallamajalu
- Updated on: Aug 15, 2026
- 12:05 pm