
Independence Day
ಸ್ವಾತಂತ್ರ್ಯ ದಿನಾಚರಣೆ: ಎಷ್ಟೋ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಫಲವಾಗಿ ಭಾರತವು ಆಗಸ್ಟ್ 15, 1947ರಲ್ಲಿ ಸ್ವಾತಂತ್ರವನ್ನು ಕಂಡಿತು. ಪ್ರಮುಖ ಸಮಾರಂಭವು ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ ಆರಂಭದೊಂದಿಗೆ ಪ್ರಾರಂಭವಾಗುತ್ತದೆ. ಬಳಿಕ ಪ್ರಧಾನಿ ಭಾಷಣ ಮಾಡುತ್ತಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸುತ್ತಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಜರುಗುತ್ತವೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕಾಗಿ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ. ಜೂನ್ 3, 1947 ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್ಬ್ಯಾಟನ್, ಬ್ರಿಟಿಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದ್ದರು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ 1947 ರ ಅನ್ವಯ ಆಗಸ್ಟ್ 15, 1947 ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದು ಮಧ್ಯರಾತ್ರಿ ಜವಾಹರ್ಲಾಲ್ ನೆಹರು ಅವರು ದೇಶದ ಪ್ರಥಮ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಅನೇಕ ಪ್ರದೇಶಗಳಲ್ಲಿ ಸ್ವಾತಂತ್ರ್ಯದಿನದಂದು ಗಾಳಿಪಟವನ್ನು ಹಾರಿಸುವ ಪದ್ದತಿ ಜಾರಿಯಲ್ಲಿದೆ. ಸಂಜೆಯ ವೇಳೆ ಗಾಳಿಪಟಗಳು ಮೇಲೇರುತ್ತಿದ್ದಂತೆ ಮಕ್ಕಳ ಹರ್ಷೋಲ್ಲಾಸ ಎಲ್ಲೆಲ್ಲೂ ಮೊಳಗುತ್ತವೆ
ಒಂದು ಕಾಲದಲ್ಲಿ ಇಡೀ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಯನ್ನೇ ಖರೀದಿಸಿದ ಭಾರತೀಯ ವ್ಯಕ್ತಿಯ ಕಥೆ
Relaunch of East India Company: 18ನೇ ಶತಮಾನದಿಂದ 19ನೇ ಶತಮಾನದ ಮಧ್ಯಭಾಗದವರೆಗೂ ಭಾರತವನ್ನು ಆಳಿದ್ದ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಯನ್ನು 2005ರಲ್ಲಿ ಭಾರತೀಯ ಉದ್ಯಮಿ ಸಂಜೀವ್ ಮೆಹ್ತಾ ಖರೀದಿಸಿದ್ದರು. ವಜ್ರದ ವ್ಯಾಪಾರಿಯ ಮಗನಾದ ಸಂಜೀವ್ ಮೆಹ್ತಾ ಈ ಈಸ್ಟ್ ಇಂಡಿಯಾ ಕಂಪನಿ ಮೂಲಕ ಉತ್ಕೃಷ್ಟ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ. ಭಾರತವನ್ನು ಆಳಿದ ಸಂಸ್ಥೆಯನ್ನು ಭಾರತೀಯನಾಗಿ ಖರೀದಿಸಿದ್ದಕ್ಕೆ ಅವರು ಹೆಮ್ಮೆ ಪಟ್ಟಿದ್ದಾರೆ.
- Vijaya Sarathy SN
- Updated on: Aug 16, 2024
- 11:35 am
ಸಾಲು ಸಾಲು ರಜೆ ಹಿನ್ನಲೆ ಫ್ಲವರ್ ಶೋ ನೋಡಲು ಮುಗಿಬಿದ್ದ ಜನ: 8 ದಿನದಲ್ಲಿ ಒಂದು ಕೋಟಿಗೂ ಹೆಚ್ಚು ಆದಾಯ
ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಿನ್ನಲೆ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ಗೆ ಸಿಲಿಕಾನ್ ಸಿಟಿಯ ಸಾಕಷ್ಟು ಜನರು ಭೇಟಿ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧರಿಸಿ ಫ್ಲವರ್ ಶೋ 8ನೇ ದಿನಕ್ಕೆ ಕಾಲಿಟ್ಟಿದ್ದು, ನಿನ್ನೆವರೆಗೆ 1 ಕೋಟಿ 3 ಲಕ್ಷ 76 ಸಾವಿರ ರೂಪಾಯಿ ಆದಾಯ ಹರಿದು ಬಂದಿದೆ.
- Vinayak Hanamant Gurav
- Updated on: Aug 16, 2024
- 8:16 am
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್ವುಡ್ ತಾರೆಯರು
ದೇಶದೆಲ್ಲೆಡೆ ಇಂದು (ಆಗಸ್ಟ್ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...
- Madan Kumar
- Updated on: Aug 15, 2024
- 8:51 pm
ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಅಮರ ಈ ಹಲಗಲಿ ಬೇಡರು; ಇವರ ಬಗ್ಗೆ ನಿಮಗೆಷ್ಟು ಗೊತ್ತು?
1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಬಳಿಕ ಭಾರತೀಯ ವೀರರ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಳ್ಳುವ ಹುನ್ನಾರದಿಂದ ಬ್ರಿಟಿಷರು ನಿಶ್ಯಸ್ತ್ರೀಕರಣ ಕಾಯ್ದೆ ಜಾರಿಗೆ ತಂದರು. ಈ ಕಾಯ್ದೆಯನ್ನು ವಿರೋಧಿಸಿದ್ದ ಆ ಒಂದು ಪುಟ್ಟ ಗ್ರಾಮ, ಕಂಪನಿ ಸರ್ಕಾರದ ನಿದ್ದೆಗೆಡಿಸಿತ್ತು. ಸ್ವಾತಂತ್ರ್ಯ, ಸ್ವಾಭಿಮಾನಕ್ಕಾಗಿ ಕಂಪನಿ ಸರ್ಕಾರದ ವಿರುದ್ಧ ಸೆಡ್ಡು ಹೊಡೆದು ನಿಂತಿದ್ದರು ಆ ಗ್ರಾಮದ ವೀರ ಕಲಿಗಳು. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.
- Ravi H Mooki
- Updated on: Aug 15, 2024
- 8:13 pm
ಸ್ವಾತಂತ್ರ್ಯ ದಿನವೂ ಹುಬ್ಬಳ್ಳಿಯಲ್ಲಿ ವಿವಾದ: ಹೆಚ್ಎಸ್ಎಫ್ ಬೋರ್ಡ್ ಹಾಕಿ ಧ್ವಜಾರೋಹಣ, ಶ್ರೀರಾಮಸೇನೆ ದೂರು
ಹಳೇ ಹುಬ್ಬಳ್ಳಿಯ ಸರ್ಕಲ್ನಲ್ಲಿ ಬ್ಯಾರಲ್ ಮೇಲೆ ‘ಹೆಚ್ಎಸ್ಎಫ್’ ಬೋರ್ಡ್ ಹಾಕಿ ಧ್ವಜಾರೋಹಣ ಮಾಡಿರುವಂತಹ ಘಟನೆ ನಡೆದಿದೆ. ಶಾಂತಿ ಕದಡಲು ಯತ್ನಿಸಿದ ಆರೋಪದಡಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ನಂದಗಾವಿಗೆ ಶ್ರೀರಾಮಸೇನೆ ದೂರು ನೀಡಿದ್ದು, ಧ್ವಜಾರೋಹಣ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
- Shivakumar Pattar
- Updated on: Aug 15, 2024
- 6:54 pm
ಪ್ರೆಸಿಡೆನ್ಸಿ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಬಿಡಿಎ ಮಾಜಿ ಅಧ್ಯಕ್ಷ ರಾಕೇಶ್ ಸಿಂಗ್ ಧ್ವಜಾರೋಹಣ
ಬೆಂಗಳೂರಿನ ಪ್ರೆಸಿಡೆನ್ಸಿ ಯೂನಿವರ್ಸಿಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದ್ದು, ಬಿಡಿಎ ಮಾಜಿ ಅಧ್ಯಕ್ಷ ರಾಕೇಶ್ ಸಿಂಗ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ದೇಶವನ್ನು ಉನ್ನತಮಟ್ಟಕ್ಕೇರಿಸಬೇಕೆಂದು ಕರೆ ನೀಡಿದ್ದಾರೆ. ಪ್ರೆಸಿಡೆನ್ಸಿ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ನಿಸಾರ್ ಅಹ್ಮದ್ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.
- Gangadhar Saboji
- Updated on: Aug 15, 2024
- 5:30 pm
ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸದವರು ಕಾಂಗ್ರೆಸ್ಗೆ ಸಲಹೆ ನೀಡುತ್ತಿದ್ದಾರೆ; ಮಲ್ಲಿಕಾರ್ಜುನ ಖರ್ಗೆ ಆರೋಪ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಭಾಷಣ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಮ್ಮ ಕೊನೆಯ ಉಸಿರು ಇರುವವರೆಗೂ ನಾವು ರಕ್ಷಿಸುತ್ತೇವೆ ಎಂದು ಪ್ರತಿಜ್ಞೆ ಮಾಡಿದ್ದಾರೆ.
- Sushma Chakre
- Updated on: Aug 15, 2024
- 4:01 pm
ರಾಜ್ಯದ ಜನತೆ ಶಾಂತಿಪ್ರಿಯರು, ಇಲ್ಲಿ ಬುಲ್ಲೆಟ್ ಪ್ರೂಫ್ ಜಾಕೆಟ್ ಅಗತ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ
ಉಡುಪಿಯಲ್ಲಿ ಕಡಲ್ಕೊರೆತದಿಂದ ಉಂಟಾಗುತ್ತಿರುವ ಸಮಸ್ಯೆಯ ಪರಿಹಾರಕ್ಕಾಗಿ ₹ 5 ರಿಂದ ₹10 ಕೋಟಿ ಬಿಡುಗಡೆ ಮಾಡಿಸಿಕೊಂಡು ಬರೋದಾಗಿ ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗೆ ಉನ್ನತೀಕರಿಸುವ ಪ್ರಕ್ರಿಯೆ ಜಾರಿಯಲ್ಲಿದೆ, ವರದಿ ಬಂದ ತಕ್ಷಣ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.
- Arun Belly
- Updated on: Aug 15, 2024
- 3:54 pm
ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಧ್ವಜಾರೋಹಣ: ರಂಗೇರಿದ ರಾಜಕಾರಣ!
ಸ್ವಾತಂತ್ರ್ಯ ದಿನಾಚರಣೆಯಂದೇ ಚನ್ನಪಟ್ಟಣದ ರಾಜಕಾರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಳೆದೊಂದು ತಿಂಗಳಿನಿಂದ ಚನ್ನಪಟ್ಟಣದಲ್ಲಿ ಸುತ್ತಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಡಿಕೆ ಜೊತೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಣಿಸಿಕೊಂಡು ಕುತೂಹಲ ಹೆಚ್ಚಿಸಿದ್ದಾರೆ.
- Syed Nizamuddin
- Updated on: Aug 15, 2024
- 2:47 pm
ಅಬ್ಬಾ! ಮೈನವಿರೇಳಿಸುತ್ತೆ ಮರಾಠ ರೆಜಿಮೆಂಟ್ ಯೋಧರ ಮಲ್ಲಗಂಬ ಕಸರತ್ತು; ವಿಡಿಯೋ ನೋಡಿ
ಮಾಣಿಕ್ ಷಾ ಮೈದಾನದಲ್ಲಿ ಅದ್ದೂರಿಯಾಗಿ 78ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆ ಮಾಣಿಕ್ ಷಾ ಮೈದಾನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರಂತೆ ಮರಾಠ ರೆಜಿಮೆಂಟ್ ಯೋಧರ ಮಲ್ಲಗಂಬ ಕಸರತ್ತು ಎಲ್ಲರ ಗಮನಸೆಳೆದಿದೆ.
- Kiran Hanumant Madar
- Updated on: Aug 15, 2024
- 2:47 pm