Indian Army
2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.
ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ
ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನಿ ಡ್ರೋನ್ಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ. ಕಾಶ್ಮೀರದ ಕೇರನ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಡ್ರೋನ್ಗಳು ಕಂಡುಬಂದವು. ಹೀಗಾಗಿ, ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆಸಲಾಯಿತು. ಉತ್ತರ ಕಾಶ್ಮೀರದ ಕುಪ್ವಾರಾದ ನಿಯಂತ್ರಣ ರೇಖೆಯ ಉದ್ದಕ್ಕೂ ಸುಮಾರು 15 ಪಾಕಿಸ್ತಾನಿ ಡ್ರೋನ್ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳಿಂದ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿದೆ.
- Sushma Chakre
- Updated on: Jan 30, 2026
- 3:54 pm
ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ
ಪಹಲ್ಗಾಮ್ ದಾಳಿಯ ನಂತರ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ, ಉಗ್ರರ ಸೇನಾ ನೆಲೆಗಳನ್ನು ಧ್ವಂಸಗೊಳಿಸಿತ್ತು. ಆದರೆ, ಈ ದಾಳಿಯಿಂದ ಪಾಕಿಸ್ತಾನಕ್ಕೆ ಆದ ನಷ್ಟವನ್ನು ಪಾಕಿಸ್ತಾನ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ. ಈ ದಾಳಿ ನಡೆದು 8-10 ತಿಂಗಳುಗಳೇ ಕಳೆದಿವೆ. ಇದೀಗ ಪಾಕಿಸ್ತಾನದ ಒಂದೊಂದೇ ನಿಜರೂಪ ಜಗತ್ತಿನೆದುರು ಹೊರಬೀಳತೊಡಗಿದೆ.
- Sushma Chakre
- Updated on: Jan 26, 2026
- 9:11 pm
ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ!
ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಎಲ್ಒಸಿಯಲ್ಲಿ ಡ್ರೋನ್ಗಳು ಕಾಣಿಸಿಕೊಂಡಿವೆ. ಕಳೆದ 48 ಗಂಟೆಗಳಲ್ಲಿ ಭಾರತದ ಗಡಿಯೊಳಗೆ ಕಾಣಿಸಿಕೊಂಡ ಪಾಕಿಸ್ತಾನದ 2ನೇ ಡ್ರೋನ್ ಇದಾಗಿದೆ.
- Sushma Chakre
- Updated on: Jan 13, 2026
- 10:46 pm
ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ
ನೆರೆಯ ದೇಶ ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳಿದೆ ಎಂದು ಭಾರತ ಹೇಳಿದೆ. ಈ ಬಗ್ಗೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಭಾರತೀಯ ಸೇನೆಯ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ, ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳುವಿಕೆಯನ್ನು ನಿಯಂತ್ರಿಸಲು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
- Sushma Chakre
- Updated on: Jan 13, 2026
- 5:51 pm
ರಾಮ್ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ?
Indian Army to deploy ramjet powered 155 mm artillery shells: ಡಿಆರ್ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ರಾಮ್ಜೆಟ್ ಶಕ್ತ ಆರ್ಟಿಲರಿ ಶೆಲ್ಗಳನ್ನು ಅಭಿವೃದ್ಧಿಪಡಿಸಿವೆ. ಈ ಶೆಲ್ಗಳನ್ನು ಭಾರತದ ಸೇನೆಯ 155 ಎಂಎಂ ಗನ್ಗಳಿಗೆ ನಿಯೋಜಿಸಲಾಗಿದೆ. ರಾಮ್ಜೆಟ್ ಶಕ್ತಿಯ ಆರ್ಟಿಲರಿ ಶೆಲ್ಗಳನ್ನು ನಿಯೋಜಿಸಿರುವ ವಿಶ್ವದ ಮೊದಲ ಸಶಸ್ತ್ರ ಪಡೆ ಎನ್ನುವ ದಾಖಲೆ ಭಾರತದ್ದಾಗಿದೆ.
- Vijaya Sarathy SN
- Updated on: Jan 6, 2026
- 12:21 pm
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ; ವಿಡಿಯೋ ವೈರಲ್
ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ನಡುವಿನ ತ್ವರಿತ ಸಮನ್ವಯದಿಂದಾಗಿ ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.
- Sushma Chakre
- Updated on: Jan 2, 2026
- 7:11 pm
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಪ್ರಲೇ ಕ್ಷಿಪಣಿಯು ಅದರ ಹೆಚ್ಚಿನ ನಿಖರತೆಗೆ ಹೆಸರುವಾಸಿಯಾದ ಘನ ಪ್ರೊಪೆಲ್ಲಂಟ್ ಅರೆ-ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ವಿವಿಧ ರೀತಿಯ ಸಿಡಿತಲೆಗಳನ್ನು ಹೊತ್ತೊಯ್ಯುವ ಮತ್ತು ಬಹು ವಿಧದ ಉದ್ದೇಶಗಳನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷಿಪಣಿ ಭಾರತದ ಬೆಳೆಯುತ್ತಿರುವ ರಕ್ಷಣಾ ಸಾಮರ್ಥ್ಯಗಳ ಪ್ರಮುಖ ಭಾಗವಾಗಿದೆ. ಇದನ್ನು ಒಂದು ಒಡಿಶಾದಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
- Sushma Chakre
- Updated on: Dec 31, 2025
- 6:44 pm
ಈ ಬಾರಿಯ ಗಣರಾಜ್ಯೋತ್ಸವ ಬಹಳ ಡಿಫರೆಂಟ್; ಸೇನೆಯಿಂದ ಒಂಟೆ, ಭಾರತೀಯ ತಳಿಯ ನಾಯಿಗಳ ಮೆರವಣಿಗೆ
ದೆಹಲಿಯ ಕರ್ತವ್ಯ ಪಥದಲ್ಲಿ ಈ ಬಾರಿಯ ಗಣರಾಜ್ಯೋತ್ಸವದಂದು ಒಂಟೆಗಳು, ಭಾರತೀಯ ತಳಿಯ ನಾಯಿಗಳನ್ನು ಭಾರತೀಯ ಸೇನೆ ಪ್ರದರ್ಶಿಸಲಿದೆ. ಈ ಮೂಲಕ ಭಾರತವು ಗಣರಾಜ್ಯೋತ್ಸವದಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗಲಿದೆ. ಭಾರತೀಯ ಸೇನೆಯ ಪ್ರಾಣಿಗಳು ಕರ್ತವ್ಯ ಪಥದಲ್ಲಿ ಹೆಮ್ಮೆಯಿಂದ ಮೆರವಣಿಗೆ ನಡೆಸಲಿವೆ. ಇದು ಸಹಿಷ್ಣುತೆ, ತ್ಯಾಗ ಮತ್ತು ಭಾರತದ ವಿಶಿಷ್ಟವಾದ ಮಿಲಿಟರಿ ಸಾಮರ್ಥ್ಯದ ಸಂಕೇತವಾಗಿದೆ. ಆತ್ಮನಿರ್ಭರ ಭಾರತ್ ಉಪಕ್ರಮದಡಿಯಲ್ಲಿ ಮುಧೋಳ ಹೌಂಡ್, ರಾಂಪುರ್ ಹೌಂಡ್, ಚಿಪ್ಪಿಪರೈ, ಕೊಂಬೈ ಮತ್ತು ರಾಜಪಾಳಯಂನಂತಹ ಸ್ಥಳೀಯ ನಾಯಿಗಳ ತಳಿಗಳನ್ನು ಸಹ ಪ್ರದರ್ಶಿಸಲಾಗುವುದು.
- Sushma Chakre
- Updated on: Dec 31, 2025
- 5:31 pm
ದೆಹಲಿ ರಕ್ಷಣೆಗೆ ‘ಸುದರ್ಶನ ಚಕ್ರ’; ಐಎಡಿಎಫ್ಎಸ್ ಖರೀದಿಗೆ ಸರ್ಕಾರ ಅನುಮೋದನೆ
Govt buying Rs 5,181 crore worth Integrated Air Defence Weapon System: ದೆಹಲಿ ಎನ್ಸಿಆರ್ ಪ್ರದೇಶವನ್ನು ವಾಯು ದಾಳಿಗಳಿಂದ ರಕ್ಷಿಸಲು ಸರ್ಕಾರ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಖರೀದಿಸಲಿದೆ. 2035ರ ಮಿಷನ್ ಸುದರ್ಶನ ಚಕ್ರದ ಗುರಿ ಮುಟ್ಟುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆಯಾಗಿದೆ. ಡಿಆರ್ಡಿಒ ಅಭಿವೃದ್ದಿಪಡಿಸಿರುವ ಐಎಡಿಎಫ್ಡಬ್ಲ್ಯುಎಸ್ ಅನ್ನು 5,181 ಕೋಟಿ ರೂಗೆ ಸರ್ಕಾರ ಖರೀದಿಸುತ್ತಿದೆ.
- Vijaya Sarathy SN
- Updated on: Dec 30, 2025
- 3:14 pm
ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ
ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ನೆನಪುಗಳನ್ನು ಪದೇ ಪದೇ ಚರ್ಚಿಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಅದರ ನಡುವೆ ಅಸಿಮ್ ಮುನೀರ್ ಅವರ ಈ ವರ್ತನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
- Sushma Chakre
- Updated on: Dec 29, 2025
- 10:51 pm
ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ?
Europe, Israel interested in making India as their defence partner: ಯುದ್ಧಕಾಲದಲ್ಲಿ ಕ್ಷಿಪ್ರವಾಗಿ ಮತ್ತು ಅಧಿಕ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳ ಪೂರೈಕೆ ಬೇಕು. ಯೂರೋಪ್ ಮತ್ತು ಇಸ್ರೇಲ್ ದೇಶಗಳು ಭಾರತವನ್ನು ಡಿಫೆನ್ಸ್ ಪಾರ್ಟ್ನರ್ ಆಗಿ ಮಾಡಿಕೊಳ್ಳಲು ಆಸಕ್ತಿ ತೋರುತ್ತಿವೆ. ಭಾರತದಲ್ಲಿ ಕೈಗಾರಿಕೋದ್ಯಮ ಪ್ರಬಲವಾಗಿರುವುದು, ಕೌಶಲ್ಯವಂತ ಕಾರ್ಮಿಕರು ಲಭ್ಯ ಇರುವುದು, ಖಾಸಗಿ ಕಂಪನಿಗಳೂ ಪ್ರೊಡಕ್ಷನ್ನಲ್ಲಿ ಇರುವುದು ಎಲ್ಲರ ಚಿತ್ತ ಹರಿಯಲು ಕಾರಣ.
- Vijaya Sarathy SN
- Updated on: Dec 29, 2025
- 3:43 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂಲಕ ಶತ್ರುಗಳ ಪ್ರದೇಶದೊಳಗೆ ನುಗ್ಗಿ ದಾಳಿ ಮಾಡುವ ಸಾಮರ್ಥ್ಯ ಪ್ರದರ್ಶಿಸಿತು. ರಕ್ಷಣಾ ಉತ್ಪಾದನೆ, ಬಜೆಟ್ ಹೆಚ್ಚಳ, ಸ್ವದೇಶಿ ತಂತ್ರಜ್ಞಾನ ಬಳಕೆಯಿಂದ ಭಾರತದ ಸೇನಾ ಶಕ್ತಿ ಮತ್ತು ಸ್ವಾವಲಂಬನೆ ಗಣನೀಯವಾಗಿ ಬೆಳೆದಿದೆ. ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಆತ್ಮವಿಶ್ವಾಸ ಎದ್ದು ಕಾಣುತ್ತದೆ.
- Vijaya Sarathy SN
- Updated on: Dec 26, 2025
- 10:26 pm