Indian Army
2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.
ಭಾರತ ಬಾಂಗ್ಲಾದೇಶದ ತಂಟೆಗೆ ಹೋದರೆ ನಾವು ಉತ್ತರ ನೀಡುತ್ತೇವೆ; ಪಾಕ್ನಿಂದ ಯುದ್ಧದ ಬೆದರಿಕೆ
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದೆ. ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶೀತಲ ಸಮರವನ್ನು ದುರುಪಯೋಗಪಡಿಸಿಕೊಳ್ಳಲು ಪಾಕ್ ಪ್ರಯತ್ನಿಸುತ್ತಿದೆ. ಪಾಕಿಸ್ತಾನದ ಯುವ ನಾಯಕರೊಬ್ಬರ ವಿಡಿಯೋ ಹೇಳಿಕೆ ಇದೀಗ ವೈರಲ್ ಆಗಿದ್ದು, ಇದರಲ್ಲಿ ಅವರು ಬಾಂಗ್ಲಾದೇಶದ ಪರವಾಗಿ ಹೇಳಿಕೆ ನೀಡಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಆದರೆ, ಈ ಹೇಳಿಕೆಗೆ ಭಾರತ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
- Sushma Chakre
- Updated on: Dec 23, 2025
- 4:47 pm
ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?
ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಈ ದಾಳಿಗಳು ಎರಡೂ ದೇಶಗಳ ನಡುವೆ 4 ದಿನಗಳ ತೀವ್ರ ಘರ್ಷಣೆಗೆ ಕಾರಣವಾಯಿತು. ಮೇ 10ರಂದು ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಒಪ್ಪಂದದೊಂದಿಗೆ ಈ ಸಂಘರ್ಷ ಕೊನೆಗೊಂಡಿತು.
- Sushma Chakre
- Updated on: Dec 22, 2025
- 9:29 pm
ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್ಡಿಒ
DRDO's secrets: ಭಾರತದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಲೆಕ್ಕವಿಲ್ಲದಷ್ಟು ಮಿಲಿಟರಿ ಟೆಕ್ನಾಲಜಿ, ಶಸ್ತ್ರಾಸ್ತ್ರಗಳನ್ನು ಆವಿಷ್ಕರಿಸಿದೆ. ಭಾರತಕ್ಕೆ ಆಮದು ವೆಚ್ಚವನ್ನು ಗಣನೀಯವಾಗಿ ತಗ್ಗಿಸಿದೆ. ಒಂದು ಮಾಹಿತಿ ಪ್ರಕಾರ 5 ವರ್ಷದಲ್ಲಿ ಅದು ಉಳಿಸಿದ ಹಣ 2.64 ಲಕ್ಷ ಕೋಟಿ ರೂ. ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ಕೊಟ್ಟರೆ ಎಷ್ಟು ಯಶಸ್ಸು ಗಳಿಸಬಹುದು ಎಂಬುದಕ್ಕೆ ಡಿಆರ್ಡಿಒ ನಿದರ್ಶನವಾಗಿದೆ.
- Vijaya Sarathy SN
- Updated on: Dec 22, 2025
- 5:38 pm
ಆಪರೇಷನ್ ಸಿಂಧೂರ್ನ ಮೊದಲ ದಿನವೇ ಭಾರತ ಸೋತಿತ್ತು; ಮಾಜಿ ಸಿಎಂ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ
Operation Sindoor: ಪಹಲ್ಗಾಮ್ ದಾಳಿಯ ವಿರುದ್ಧ ಭಾರತ ಆಪರೇಷನ್ ಸಿಂಧೂರ್ ಆರಂಭಿಸಿದ ಮೊದಲ ದಿನವೇ ಭಾರತ ಸೋತಿತ್ತು ಎಂಬ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಕ್ಕೀಡಾಗಿದ್ದಾರೆ. ಆಪರೇಷನ್ ಸಿಂಧೂರ್ನ ಮೊದಲ ದಿನದಂದು ಭಾರತೀಯ ಮಿಲಿಟರಿ ವಿಮಾನಗಳನ್ನು ಪಾಕ್ ಪಡೆಗಳು ಹೊಡೆದುರುಳಿಸಿದವು ಎಂದು ಹೇಳಿದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಬಿಜೆಪಿ ಹಾಗೂ ಎನ್ಡಿಎ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.
- Sushma Chakre
- Updated on: Dec 17, 2025
- 3:36 pm
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಪುಷ್ಅಪ್; ವಿಡಿಯೋ ವೈರಲ್
ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪಾಸಿಂಗ್ ಔಟ್ ಪೆರೇಡ್ನಲ್ಲಿ ಅಧಿಕಾರಿಗಳೊಂದಿಗೆ ಉಪೇಂದ್ರ ದ್ವಿವೇದಿ ಪುಷ್-ಅಪ್ಗಳನ್ನು ಮಾಡುತ್ತಿರುವುದನ್ನು ನೋಡಬಹುದು. ಐತಿಹಾಸಿಕ ಡ್ರಿಲ್ ಸ್ಕ್ವೇರ್ನಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್ನಲ್ಲಿ 491 ಕೆಡೆಟ್ಗಳು ಭಾಗವಹಿಸಿದ್ದರು. ಇನ್ನು ಅವರನ್ನು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ನಿಯೋಜಿಸಲಾಗುವುದು. 525 ಕೆಡೆಟ್ಗಳು ಭಾಗವಹಿಸಿದ್ದ ಈ ಪೆರೇಡ್ನಲ್ಲಿ ಉಪೇಂದ್ರ ದ್ವಿವೇದಿ ಪರಿಶೀಲನಾ ಅಧಿಕಾರಿಯಾಗಿದ್ದರು.
- Sushma Chakre
- Updated on: Dec 13, 2025
- 10:45 pm
ವಿಶ್ವದ ಅತಿದೊಡ್ಡ ಶಸ್ತ್ರಾಸ್ತ್ರ ತಯಾರಕರಲ್ಲಿ ಭಾರತದ ಮೂರು ಕಂಪನಿಗಳು
SIPRI report on 2024 top-100 arms producing companies: ಸಿಪ್ರಿ ವರದಿ ಪ್ರಕಾರ 2024ರಲ್ಲಿ ಶಸ್ತ್ರಾಸ್ತ್ರ ಆದಾಯದಲ್ಲಿ ವಿಶ್ವದ ಟಾಪ್-100 ಕಂಪನಿಗಳಲ್ಲಿ ಭಾರತದ ಮೂರು ಸಂಸ್ಥೆಗಳಿವೆ. ಎಚ್ಎಎಲ್, ಬಿಇಎಲ್ ಮತ್ತು ಮಜಗಾಂವ್ ಡಾಕ್ ಸಂಸ್ಥೆಗಳು ಕ್ರಮವಾಗಿ 44, 58 ಮತ್ತು 91ನೇ ಸ್ಥಾನದಲ್ಲಿವೆ. ಈ ಮೂರೂ ಕೂಡ ಸರ್ಕಾರಿ ಸ್ವಾಮ್ಯದ ಡಿಫೆನ್ಸ್ ಕ್ಷೇತ್ರದ ಕಂಪನಿಗಳು.
- Vijaya Sarathy SN
- Updated on: Dec 9, 2025
- 11:51 am
ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ; ಪೈಲಟ್ ಪ್ರಾಣಾಪಾಯದಿಂದ ಪಾರು
ತಮಿಳುನಾಡಿನ ಚೆನ್ನೈ ಬಳಿ IAF PC-7 ಪಿಲಾಟಸ್ ತರಬೇತಿ ವಿಮಾನ ಪತನವಾಗಿದೆ. ಅದೃಷ್ಟವಶಾತ್ ವಿಮಾನದೊಳಗಿದ್ದ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿದ್ದಾರೆ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚೆನ್ನೈನ ತಾಂಬರಂ ಬಳಿ ವಾಯುಪಡೆಯ ಈ ವಿಮಾನ ಪತನವಾಗಿದೆ. ದಿನನಿತ್ಯದ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಮಾನ ಪತನಗೊಂಡಿತು.
- Sushma Chakre
- Updated on: Nov 14, 2025
- 4:30 pm
ಭಾರತದಲ್ಲಿ ಮತ್ತೊಂದು ಉಗ್ರರ ದಾಳಿಯ ಎಚ್ಚರಿಕೆ; ಜಮ್ಮು ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅದಾಗಿ 6 ತಿಂಗಳಾಗಿವೆ. ಇದೀಗ ಮತ್ತೆ ಭಾರತದಲ್ಲಿ ಮತ್ತೊಂದು ಪ್ರಮುಖ ಭಯೋತ್ಪಾದಕ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಘಟಿತ ದಾಳಿಗಳಿಗೆ ಎಲ್ಇಟಿ, ಜೆಇಎಂ ಪ್ಲಾನ್ ಮಾಡುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಭದ್ರತೆಯನ್ನು ಹೆಚ್ಚಿಸಲಾಗಿದೆ.
- Sushma Chakre
- Updated on: Nov 6, 2025
- 5:33 pm
ಆಪರೇಷನ್ ಸಿಂಧೂರ್ ವೇಳೆ ಪ್ರಧಾನಿ ಮೋದಿ ನಮಗೆ ಪೂರ್ತಿ ಸ್ವಾತಂತ್ರ್ಯ ನೀಡಿದ್ದರು; ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ವಿವರಿಸಿದ್ದಾರೆ. ಇದನ್ನು ಮಿಲಿಟರಿ ವಿಜಯ ಮಾತ್ರವಲ್ಲದೆ ಭಾರತದ ಸಾರ್ವಭೌಮತ್ವ, ಸಮಗ್ರತೆ ಮತ್ತು ಶಾಂತಿಯನ್ನು ಪುನಃ ಸ್ಥಾಪಿಸುವ ಧ್ಯೇಯ ಎಂದೂ ಅವರು ಕರೆದಿದ್ದಾರೆ. ಈ ಕಾರ್ಯಾಚರಣೆಗೆ ಪ್ರಧಾನಿ ಮೋದಿಯವರೇ ಹೆಸರಿಟ್ಟರು ಎಂದು ಅವರು ತಿಳಿಸಿದ್ದಾರೆ.
- Sushma Chakre
- Updated on: Nov 1, 2025
- 10:38 pm
800 ಕಿಮೀ ಶ್ರೇಣಿಯ ಬ್ರಹ್ಮೋಸ್ ಕ್ಷಿಪಣಿಗಳ ಪರೀಕ್ಷೆ; ಮುಂದಿನ ವರ್ಷವೇ ಸೇನೆಯ ಬಲ ಹೆಚ್ಚಿಸಲಿವೆ ಈ ಪ್ರಬಲ ಮಿಸೈಲ್ಗಳು
India tests 800 km BrahMos: ಈಗಿರುವ ಬ್ರಹ್ಮೋಸ್ ಕ್ಷಿಪಣಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗಿದ್ದು, 450 ಕಿಮೀ ಶ್ರೇಣಿಯನ್ನು 800 ಕಿಮೀಗೆ ಹೆಚ್ಚಿಸಲಾಗಿದೆ. ಇದರ ಪರೀಕ್ಷೆಗಳು ನಡೆಯುತ್ತಿದ್ದು, ಅವು ಯಶಸ್ವಿಯಾದಲ್ಲಿ ಮುಂದಿನ ವರ್ಷಾಂತ್ಯದೊಳಗೆ ಸೇನೆಗೆ ನಿಯೋಜನೆಗೊಳ್ಳಲಿವೆ. ಅಸ್ತ್ರ ಮಾರ್ಕ್-2 ಕ್ಷಿಪಣಿಗಳನ್ನೂ ತಯಾರಿಸಲಾಗುತ್ತಿದ್ದು ಇವೂ ಕೂಡ 2027ರೊಳಗೆ ಸಿದ್ಧವಿರಲಿವೆ.
- Vijaya Sarathy SN
- Updated on: Oct 20, 2025
- 10:12 pm
ನೌಕಾಪಡೆಯ ಸಿಬ್ಬಂದಿಗೆ ಸ್ವೀಟ್ ತಿನ್ನಿಸಿ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ
ಭಾರತದ ಮೊದಲ ದೇಶೀಯವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ನಲ್ಲಿರುವ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಈ ವರ್ಷ ದೀಪಾವಳಿಯನ್ನು ಆಚರಿಸಿದರು. ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ್ ವೇಳೆ ನೌಕಾಪಡೆ ತೋರಿದ ಧೈರ್ಯ ಮತ್ತು ಸಾಹಸಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.
- Sushma Chakre
- Updated on: Oct 20, 2025
- 7:03 pm
ಭಾರತದ ಬ್ರಹ್ಮೋಸ್ ಕ್ಷಿಪಣಿಗೆ ಹೆಚ್ಚಿದ ಬೇಡಿಕೆ; ರಹಸ್ಯವಾಗಿ 4,000 ಕೋಟಿ ರೂ ಮೊತ್ತಕ್ಕೆ ಒಪ್ಪಂದ ಮಾಡಿಕೊಂಡ ಎರಡು ದೇಶಗಳು
Brahmos missiles, 2 countries ink contracts with India: ಇಡೀ ವಿಶ್ವದ ಗಮನವನ್ನು ಸೆಳೆದಿರುವ ಬ್ರಹ್ಮೋಸ್ ಕ್ಷಿಪಣಿಯನ್ನು ಪಡೆಯಲು ಎರಡು ದೇಶಗಳು ಒಪ್ಪಂದ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಎರಡು ಒಪ್ಪಂದಗಳ ಒಟ್ಟು ಮೌಲ್ಯ ಅಂದಾಜು 4,000 ಕೋಟಿ ರೂ ಆಗಿದೆ. ಆದರೆ, ಆ ಎರಡು ದೇಶಗಳ ಹೆಸರನ್ನು ಬಹಿರಂಗಪಡಿಸಲಾಗಿಲ್ಲ. ರಷ್ಯಾ ಮತ್ತು ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್ ಕ್ಷಿಪಣಿಯ ಸಾಮರ್ಥ್ಯ ಆಪರೇಷನ್ ಸಿಂದೂರ್ ವೇಳೆ ದೃಢಪಟ್ಟಿತ್ತು.
- Vijaya Sarathy SN
- Updated on: Oct 20, 2025
- 3:27 pm