AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

Dhiraj Seth ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ

ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇವರು ಭಾರತೀಯ ಸೇನೆಯ 31ನೇ ಮುಖ್ಯಸ್ಥರಾಗಿದ್ದು, ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಜನರಲ್ ಧೀರಜ್ ಸೇಠ್ ಭಾರತೀಯ ಸೇನೆಯ ಅತ್ಯಂತ ಗೌರವಾನ್ವಿತ ಮತ್ತು ಅನುಭವಿ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ಇವರು ಭಾರತೀಯ ಸೇನೆಯ 'ಆರ್ಮರ್ಡ್ ಕಾರ್ಪ್ಸ್' ವಿಭಾಗಕ್ಕೆ ಸೇರಿದವರಾಗಿದ್ದಾರೆ. 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್ ರಾಯ್ ಚೌಧರಿ ಅವರ ನಂತರ, ಕಳೆದ ಮೂರು ದಶಕಗಳಲ್ಲಿ ಭೂಸೇನೆಯ ಅತ್ಯುನ್ನತ ಹುದ್ದೆಗೇರಿದ ಮೊದಲ ಆರ್ಮರ್ಡ್ ಕಾರ್ಪ್ಸ್ ಅಧಿಕಾರಿ ಇವರಾಗಿದ್ದಾರೆ.

ಭೂಕಂಪ ಪೀಡಿತ ವೆನೆಜುವೆಲಾಗೆ ಭಾರತದ ನೆರವು; ‘ಆಪರೇಷನ್ ಅಮಿಸ್ಟಾಡ್’ ಅಡಿ ವಾಯುಪಡೆಯ 2 ವಿಮಾನ ರವಾನೆ

ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾಗಿರುವ ವೆನೆಜುವೆಲಾ ದೇಶಕ್ಕೆ ನೆರವಾಗಲು ಭಾರತ ಸರ್ಕಾರವು 'ಆಪರೇಷನ್ ಅಮಿಸ್ಟಾಡ್' (Operation Amistad) ಹೆಸರಿನಡಿ ತುರ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಕಾರ್ಯಾಚರಣೆಯನ್ನು ಆರಂಭಿಸಿದೆ. ಬುಧವಾರ ವೆನೆಜುವೆಲಾದಲ್ಲಿ ಸಂಭವಿಸಿದ ಸರಣಿ ಭೂಕಂಪಗಳಿಂದ ಭಾರಿ ಸಾವು-ನೋವು ಹಾಗೂ ಮೂಲಸೌಕರ್ಯ ಹಾನಿ ಸಂಭವಿಸಿದೆ. ಈ ಸಂಕಷ್ಟದ ಸಮಯದಲ್ಲಿ ನೆರೆಹೊರೆಯ ದೇಶವಾಗಿ ಭಾರತವು ದೊಡ್ಡ ಮಟ್ಟದ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಇದಕ್ಕೆ 'ಆಪರೇಷನ್ ಅಮಿಸ್ಟಾಡ್' ಎಂದು ಹೆಸರಿಡಲಾಗಿದೆ.

ಆಪರೇಷನ್ ಸಿಂಧೂರ್​​ ಕಾರ್ಯಾಚರಣೆ ವೇಳೆ ಹುತಾತ್ಮರಾದ ವೀರ ಯೋಧರ ಹೆಸರು ಪ್ರಕಟ

Operation Sindoor: 'ಆಪರೇಷನ್ ಸಿಂಧೂರ್'ನಲ್ಲಿ ಹುತಾತ್ಮರಾದ ಆರು ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಶತ್ರು ನೆಲದ ಉಗ್ರರ ಶಿಬಿರಗಳ ನಾಶಕ್ಕೆ ನಡೆದ ಈ ರಹಸ್ಯ ಕಾರ್ಯಾಚರಣೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಹೆಸರುಗಳನ್ನು ಇದೀಗ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಇದು ಅವರ ಅಪ್ರತಿಮ ಶೌರ್ಯಕ್ಕೆ ನಮನ.

ಇರಾನ್ ವಿರುದ್ಧ ಆತ್ಮರಕ್ಷಣೆಗೆ ಭಾರತದ ಆಕಾಶ್​ತೀರ್ ಡಿಫೆನ್ಸ್ ಸಿಸ್ಟಂ ಮತ್ತು ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಯುಎಇ ಮುಂದು

West Asia war situation moves UAE to think of buying weapons from India: ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಲ್ಲಿ ಯುಎಐ ಹಾಗೂ ಇತರ ಗಲ್ಫ್ ದೇಶಗಳೂ ಬಿಸಿ ಎದುರಿಸುತ್ತಿವೆ. ಯುಎಇಯಲ್ಲಿ ಅಮೆರಿಕದ ನೆಲೆಗಳು ಇರುವ ಹಿನ್ನೆಲೆಯಲ್ಲಿ ಇರಾನ್​ನಿಂದ ದಾಳಿಗಳಾಗಿವೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸಲು ನಿರ್ಧರಿಸಿರುವ ಯುಎಇ ಈಗ ಭಾರತದಿಂದ ಕ್ಷಿಪಣಿ ಹಾಗೂ ಡಿಫೆನ್ಸ್ ಸಿಸ್ಟಂಗಳನ್ನು ಖರೀದಿಸಲು ಆಲೋಚಿಸುತ್ತಿದೆ ಎನ್ನಲಾಗಿದೆ.

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ

India's defence production and exports see big increase in 2025-26: ಭಾರತದ ರಕ್ಷಣಾ ಕ್ಷೇತ್ರದಿಂದ 2025-26ರಲ್ಲಿ ಆದ ಒಟ್ಟು ಉತ್ಪಾದನೆ 1.78 ಲಕ್ಷ ಕೋಟಿ ರೂ ಎನ್ನಲಾಗಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ಉತ್ಪಾದನೆ ಶೇ. 15.6ರಷ್ಟು ಹೆಚ್ಚಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿದಂತೆ ರಫ್ತು ಕೂಡ ಗಣನೀಯವಾಗಿ ವೃದ್ಧಿಸಿದೆ.

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ

India's indigenous defence capabilities developed in last 12 years: ಯುದ್ಧವಿಮಾನ, ಕ್ಷಿಪಣಿ, ಫಿರಂಗಿ, ಮದ್ದುಗುಂಡುಗಳು ಇತ್ಯಾದಿ ಶಸ್ತ್ರಾಸ್ತ್ರಗಳು ಯಾವುದೇ ದೇಶಕ್ಕಾದರೂ ಬಹಳ ಮುಖ್ಯ. ಭಾರತದ ಮಿಲಿಟರಿ ಸಾಮರ್ಥ್ಯ ಕಳೆದ 12 ವರ್ಷಗಳಲ್ಲಿ ನಿರಂತರವಾಗಿ ಬೆಳವಣಿಗೆ ಆಗುತ್ತಿದೆ. ದೇಶೀಯವಾಗಿ ತಂತ್ರಜ್ಞಾನಗಳ ಅಭಿವೃದ್ಧಿಯಾಗುತ್ತಿದೆ. ದೇಶೀಯವಾಗಿ ಉತ್ಪಾದನೆಯೂ ಆಗುತ್ತಿದೆ. ಈ 12 ವರ್ಷದಲ್ಲಿ ಭಾರತದ ಸಾಧನೆಗಳ ಒಂದು ಝಲಕ ಇಲ್ಲಿದೆ.

ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಧೀರಜ್ ಸೇಠ್ ನೇಮಕ

ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರ ನಿವೃತ್ತಿಯ ನಂತರ, ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಜೂನ್ 30ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ನೇಮಕಾತಿಗೆ ಭಾರತದ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದು, ರಕ್ಷಣಾ ಸಚಿವಾಲಯವು ಇಂದು ಈ ವಿಷಯವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಎಚ್​ಎಎಲ್​ಗೆಯೇ ಚಳ್ಳೆಹಣ್ಣು ತಿನಿಸಲು ಯತ್ನಿಸಿದ ಹೈದರಾಬಾದ್ ಕಂಪನಿ; ತೇಜಸ್ ಯುದ್ಧವಿಮಾನದ ಬಿಡಿಭಾಗ ಪೂರೈಕೆಯಲ್ಲಿ ವಂಚನೆ; ದೂರು ದಾಖಲು

HAL Exposes Tejas Mark-1A Fake Parts Scam: ಭಾರತದ ಪ್ರಮುಖ ಯುದ್ಧ ವಿಮಾನ 'ತೇಜಸ್ ಮಾರ್ಕ್-1ಎ' ಯೋಜನೆಗೆ ನಕಲಿ ಬಿಡಿಭಾಗಗಳ ಗುಣಮಟ್ಟ ವರದಿಗಳನ್ನು ನೀಡಿದ ಆರೋಪದ ಮೇಲೆ ಹೆಚ್‌ಎಎಲ್ ಬೆಂಗಳೂರಿನಲ್ಲಿ ಹೈದರಾಬಾದ್‌ನ ಟೆಕ್ ಏರೋ ಡಿವೈಸಸ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದೆ. 199 ನಕಲಿ ಪ್ರಯೋಗಾಲಯ ವರದಿಗಳು ಪತ್ತೆಯಾಗಿವೆ. ಈ ಪ್ರಕರಣ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದ್ದು, ಹೆಚ್‌ಎಎಲ್ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಹುತಾತ್ಮ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಅವರ ಅಸಾಧಾರಣ ಶೌರ್ಯ, ಅದಮ್ಯ ಧೈರ್ಯ ಮತ್ತು ರಾಷ್ಟ್ರ ಸೇವೆಯಲ್ಲಿ ಅತ್ಯುನ್ನತ ತ್ಯಾಗಕ್ಕಾಗಿ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ತಾಯಿ ದೂಖ ತಡೆಯಲಾರದೆ ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಮರಣೋತ್ತರ 'ಕೀರ್ತಿ ಚಕ್ರ' ಗೌರವ ನೀಡುವಾಗ ತಾಯಿಯ ಭಾವುಕ ಕ್ಷಣಗಳ ವಿಡಿಯೋ ವೈರಲ್ ಆಗಿದೆ.

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ರಕ್ಷಣಾ ವಲಯದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದ ವೀರ ಯೋಧರಿಗೆ ಕೀರ್ತಿ ಚಕ್ರ, ವೀರ ಚಕ್ರ ಮತ್ತು ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸಶಸ್ತ್ರ ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು

IAF's Critical Fighter Jet Gap: ಭಾರತೀಯ ವಾಯುಸೇನೆ (IAF) ತನ್ನ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಯುದ್ಧವಿಮಾನಗಳ ಕೊರತೆಯನ್ನು ಎದುರಿಸುತ್ತಿದೆ. ಇದನ್ನು ನೀಗಿಸಲು ಭಾರತವು ₹3.25 ಲಕ್ಷ ಕೋಟಿ ಮೌಲ್ಯದ 114 ದಸ್ಸಾಲ್ಟ್ ರಫೇಲ್ ಯುದ್ಧವಿಮಾನಗಳನ್ನು ಫ್ರಾನ್ಸ್‌ನಿಂದ ಖರೀದಿಸುತ್ತಿದೆ. ಈ ಅತಿದೊಡ್ಡ ರಕ್ಷಣಾ ಒಪ್ಪಂದವು IAF ನ ಸಾಮರ್ಥ್ಯವನ್ನು ಹೆಚ್ಚಿಸಿ, ಚೀನಾ ಮತ್ತು ಪಾಕಿಸ್ತಾನದಂತಹ ದ್ವಿಮುಖ ಸವಾಲನ್ನು ಎದುರಿಸಲು ಸಹಕಾರಿಯಾಗಲಿದೆ. ಹಂತ ಹಂತವಾಗಿ ವಿತರಣೆಯಾಗುವ ಈ ವಿಮಾನಗಳ ಪೈಕಿ 96 ಭಾರತದಲ್ಲೇ ತಯಾರಾಗಲಿವೆ, ಇದು ಸ್ವಾವಲಂಬನೆಯೆಡೆಗಿನ ಹೆಜ್ಜೆಯಾಗಿದೆ.

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

General N.S. Raja Subramani is the new Chief of Defence Staff: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹಾಗೂ ಅತ್ಯಂತ ಪ್ರಮುಖ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (Chief of Defence Staff - CDS) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ (Gen N.S. Raja Subramani) ಅವರು ಇಂದು ಮೇ 31ರಂದು ಅಧಿಕಾರ ಸ್ವೀಕರಿಸಿದ್ದಾರೆ. ದೇಶದ ರಕ್ಷಣಾ ರಂಗದಲ್ಲಿ ಹೊಸ ಆಧ್ಯಾಯ ಬರೆದಿರುವ ಅವರ ನೇಮಕಾತಿ ಮತ್ತು ಸಶಸ್ತ್ರ ಪಡೆಗಳ ಕುರಿತಾದ ಅವರ ದೃಷ್ಟಿಕೋನ ಮತ್ತು ವಿಚಾರಗಳ ಕುರಿತು ಮಾಹಿತಿ ಇಲ್ಲಿದೆ.