AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

Indonesia Inks $200-$350 Million Deal To Buy BrahMos Missiles From India Amid Defence Boost: ಭಾರತ ಮತ್ತು ರಷ್ಯಾದ ಜಂಟಿ ನಿರ್ಮಾಣದ ಬ್ರಹ್ಮೋಸ್ ಕ್ಷಿಪಣಿಗಳನ್ನು ಇಂಡೋನೇಷ್ಯಾ ಖರೀದಿಸುತ್ತಿದೆ. 200ರಿಂದ 350 ಮಿಲಿಯನ್ ಡಾಲರ್ ಮೊತ್ತದ ಡೀಲ್ ಅನ್ನು ಇಂಡೋನೇಷ್ಯಾ ಮಾಡಿಕೊಂಡಿದೆ. ಬ್ರಹ್ಮೋಸ್ ಏರೋಸ್ಪೇಸ್ ಸಂಸ್ಥೆ ನಿರ್ಮಿಸಿರುವ ಬ್ರಹ್ಮೋಸ್ ಕ್ಷಿಪಣಿ ಬಹಳ ನಿಖರ ದಾಳಿಗೆ ಹೆಸರುವಾಸಿಯಾಗಿದೆ. ಪಾಕಿಸ್ತಾನ ವಿರುದ್ಧದ ಆಪರೇಷ್ ಸಿಂದೂರ್​ನಲ್ಲಿ ಇದು ಮಹತ್ವದ ಪಾತ್ರ ಹೊಂದಿತ್ತು.

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ನ ಯುದ್ಧನೌಕೆ ಐರಿಸ್ ದೇನಾ ಮೇಲೆ ಅಮೆರಿಕ ದಾಳಿ ನಡೆಸುವ ಕೆಲವು ದಿನಗಳ ಮೊದಲು ಇರಾನ್ ಭಾರತವನ್ನು ಸಂಪರ್ಕಿಸಿತ್ತು. ತಾಂತ್ರಿಕ ಸಮಸ್ಯೆಗಳಿಂದಾಗಿ ಕೊಚ್ಚಿಯಲ್ಲಿ ಮತ್ತೊಂದು ನೌಕಾ ಹಡಗು ಐರಿಸ್ ಲವನ್‌ಗೆ ಅನುಮತಿ ಕೋರಿತ್ತು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಫೆಬ್ರವರಿ 28ರಂದು ಇರಾನ್​ನಿಂದ ವಿನಂತಿಯನ್ನು ಸ್ವೀಕರಿಸಲಾಯಿತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿಗೆ ತುರ್ತು ಡಾಕಿಂಗ್ ಅಗತ್ಯವಿದೆ ಎಂದು ಇರಾನ್ ಹೇಳಿತ್ತು. ಮಾರ್ಚ್ 1ರಂದು ಡಾಕಿಂಗ್‌ಗೆ ಭಾರತೀಯ ಅಧಿಕಾರಿಗಳು ಅನುಮತಿ ನೀಡಿದರು. ಆ ಹಡಗು ಈಗಲೂ ಕೇರಳದ ಕೊಚ್ಚಿಯಲ್ಲಿಯೇ ಇದೆ.

ಸುಖೋಯ್ ಯುದ್ಧವಿಮಾನ ಅಪಘಾತ; ಆಪರೇಷನ್ ಸಿಂಧೂರ್​​ನಲ್ಲಿ ಭಾಗಿಯಾಗಿದ್ದ ಪೈಲಟ್ ಸೇರಿ ಇಬ್ಬರು ಸಾವು

ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ (Su-30MKI) ಯುದ್ಧವಿಮಾನ ನಾಪತ್ತೆಯಾಗಿತ್ತು. ರಡಾರ್​​ನಿಂದ ಕಣ್ಮರೆಯಾಗಿದ್ದ ಆ ವಿಮಾನ ಅಪಘಾತಕ್ಕೀಡಾಗಿದೆ. ಈ ವೇಳೆ ಅದರಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್​ಗಳು ಮೃತಪಟ್ಟಿದ್ದಾರೆ. ಅವರಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್ ಕೂಡ ಸೇರಿದ್ದಾರೆ. 10 ದಿನಗಳ ಹಿಂದಷ್ಟೇ ಅವರು ತಮ್ಮ ಕುಟುಂಬವನ್ನು ಭೇಟಿಯಾಗಿದ್ದರು. ಮೃತಪಟ್ಟ ಪೈಲಟ್​​ಗಳನ್ನು ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಎಂದು ಗುರುತಿಸಲಾಗಿದೆ.

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ

India to buy fighter jets, missiles and other war items worth over Rs. 3.6 crore: ಮೂರೂವರೆ ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ವಿವಿಧ ಶಸ್ತ್ರಾಸ್ತ್ರಗಳ ಖರೀದಿಗೆ ಡಿಫೆನ್ಸ್ ಅಕ್ವಿಸಿಶನ್ ಕೌನ್ಸಿಲ್ ಅನುಮೋದನೆ ನೀಡಿದೆ. ಇದರಲ್ಲಿ 288 ಎಸ್-400 ಮಿಸೈಲ್​ಗಳು ಸೇರಿವೆ. 114 ರಫೇಲ್ ಜೆಟ್​ಗಳ ಖರೀದಿಗೂ ಎಒಎನ್ ನೀಡಲಾಗಿದೆ. ಎಸ್-400 ಕ್ಷಿಪಣಿಗಳನ್ನು ತ್ವರಿತ ಪ್ರಕ್ರಿಯೆಯಲ್ಲಿ ಖರೀದಿಸಲಾಗುವುದು.

ಎಎಂಸಿಎ ಪ್ರಾಜೆಕ್ಟ್ ರೇಸ್​ನಿಂದ ಎಚ್​ಎಎಲ್ ಔಟ್; ಈ ಯೋಜನೆಯಿಂದ ನಿರ್ಗಮಿಸಲು ಕಾರಣವಾಯಿತಾ ಈ ಸಂಗತಿ?

Reason why HAL out of race for AMCA fighter jet project: ಅತ್ಯಾಧುನಿಕ ಫೈಟರ್ ಜೆಟ್​ಗಳನ್ನು ನಿರ್ಮಿಸುವ ಎಎಂಸಿಎ ಪ್ರಾಜೆಕ್ಟ್​ನಿಂದ ಎಚ್​ಎಎಲ್ ಅನ್ನು ಕೈಬಿಡಲಾಗಿದೆ. ಕಲ್ಯಾಣಿ ಗ್ರೂಪ್ ನೇತೃತ್ವದ ಕನ್ಸಾರ್ಟಿಯಂ, ಎಲ್ ಅಂಡ್ ಟಿ ನೇತೃತ್ವದ ಕನ್ಸಾರ್ಟಿಯಂ ಮತ್ತು ಟಾಟಾ ಗ್ರೂಪ್ ಈಗ ಈ ರೇಸ್​ನಲ್ಲಿ ಉಳಿದಿವೆ. ಎಎಂಸಿಎ ಪ್ರಾಜೆಕ್ಟ್​ಗೆ ಆಯ್ಕೆಯಾಗುವ ಸಂಸ್ಥೆಯು 2029ಕ್ಕೆ ಮೊದಲ ಪ್ರೋಟೋಟೈಪ್ ಸಿದ್ಧಪಡಿಸಬಹುದು. 2035ರಿಂದ ಪೂರ್ಣ ಜೆಟ್ ಪ್ರೊಡಕ್ಷನ್ ಆರಂಭಿಸಬಹುದು.

ಕಾಶ್ಮೀರದ ಗಡಿಯೊಳಗೆ ಬಂದ ಪಾಕಿಸ್ತಾನಿ ಡ್ರೋನ್​ಗಳು; ಭಾರತೀಯ ಸೇನೆಯಿಂದ ಗುಂಡಿನ ದಾಳಿ

ಉತ್ತರ ಕಾಶ್ಮೀರದಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ. ಕಾಶ್ಮೀರದ ಕೇರನ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಡ್ರೋನ್‌ಗಳು ಕಂಡುಬಂದವು. ಹೀಗಾಗಿ, ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆಸಲಾಯಿತು. ಉತ್ತರ ಕಾಶ್ಮೀರದ ಕುಪ್ವಾರಾದ ನಿಯಂತ್ರಣ ರೇಖೆಯ ಉದ್ದಕ್ಕೂ ಸುಮಾರು 15 ಪಾಕಿಸ್ತಾನಿ ಡ್ರೋನ್‌ಗಳು ಹಾರುತ್ತಿರುವುದು ಕಂಡುಬಂದಿದ್ದು, ಸೇನಾ ಪಡೆಗಳಿಂದ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯುಪಡೆಗೆ ಸೋತು ಪಾಕಿಸ್ತಾನ ಮಂಡಿಯೂರಿತ್ತು; ಯುರೋಪಿಯನ್ ಮಿಲಿಟರಿ ವಿಶ್ಲೇಷಣೆ

ಪಹಲ್ಗಾಮ್ ದಾಳಿಯ ನಂತರ ಭಾರತ ನಡೆಸಿದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ, ಉಗ್ರರ ಸೇನಾ ನೆಲೆಗಳನ್ನು ಧ್ವಂಸಗೊಳಿಸಿತ್ತು. ಆದರೆ, ಈ ದಾಳಿಯಿಂದ ಪಾಕಿಸ್ತಾನಕ್ಕೆ ಆದ ನಷ್ಟವನ್ನು ಪಾಕಿಸ್ತಾನ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ. ಈ ದಾಳಿ ನಡೆದು 8-10 ತಿಂಗಳುಗಳೇ ಕಳೆದಿವೆ. ಇದೀಗ ಪಾಕಿಸ್ತಾನದ ಒಂದೊಂದೇ ನಿಜರೂಪ ಜಗತ್ತಿನೆದುರು ಹೊರಬೀಳತೊಡಗಿದೆ.

ಭಾರತೀಯ ಸೇನಾ ಮುಖ್ಯಸ್ಥರ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಪ್ರತ್ಯಕ್ಷ!

ಭಾರತೀಯ ಸೇನಾ ಮುಖ್ಯಸ್ಥಜನರಲ್ ಉಪೇಂದ್ರ ದ್ವಿವೇದಿ ಭಾರತದ ಗಡಿಯೊಳಗೆ ಪಾಕಿಸ್ತಾನದ ಡ್ರೋನ್ ಚಟುಟವಿಕೆಗಳನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಎಲ್‌ಒಸಿಯಲ್ಲಿ ಡ್ರೋನ್‌ಗಳು ಕಾಣಿಸಿಕೊಂಡಿವೆ. ಕಳೆದ 48 ಗಂಟೆಗಳಲ್ಲಿ ಭಾರತದ ಗಡಿಯೊಳಗೆ ಕಾಣಿಸಿಕೊಂಡ ಪಾಕಿಸ್ತಾನದ 2ನೇ ಡ್ರೋನ್ ಇದಾಗಿದೆ.

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ಚಟುವಟಿಕೆಗಳ ಬಗ್ಗೆ ಭಾರತೀಯ ಸೇನೆಯಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ನೆರೆಯ ದೇಶ ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳಿದೆ ಎಂದು ಭಾರತ ಹೇಳಿದೆ. ಈ ಬಗ್ಗೆ ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂದು ನಡೆದ ಭಾರತೀಯ ಸೇನೆಯ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ, ಪಾಕಿಸ್ತಾನದಿಂದ ಭಾರತಕ್ಕೆ ಡ್ರೋನ್ ಒಳನುಸುಳುವಿಕೆಯನ್ನು ನಿಯಂತ್ರಿಸಲು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ?

Indian Army to deploy ramjet powered 155 mm artillery shells: ಡಿಆರ್​ಡಿಒ ಮತ್ತು ಐಐಟಿ ಮದ್ರಾಸ್ ಜಂಟಿಯಾಗಿ ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್​ಗಳನ್ನು ಅಭಿವೃದ್ಧಿಪಡಿಸಿವೆ. ಈ ಶೆಲ್​ಗಳನ್ನು ಭಾರತದ ಸೇನೆಯ 155 ಎಂಎಂ ಗನ್​ಗಳಿಗೆ ನಿಯೋಜಿಸಲಾಗಿದೆ. ರಾಮ್​ಜೆಟ್ ಶಕ್ತಿಯ ಆರ್ಟಿಲರಿ ಶೆಲ್​ಗಳನ್ನು ನಿಯೋಜಿಸಿರುವ ವಿಶ್ವದ ಮೊದಲ ಸಶಸ್ತ್ರ ಪಡೆ ಎನ್ನುವ ದಾಖಲೆ ಭಾರತದ್ದಾಗಿದೆ.

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ; ವಿಡಿಯೋ ವೈರಲ್

ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ನಡುವಿನ ತ್ವರಿತ ಸಮನ್ವಯದಿಂದಾಗಿ ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ

ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಪ್ರಲೇ ಕ್ಷಿಪಣಿಯು ಅದರ ಹೆಚ್ಚಿನ ನಿಖರತೆಗೆ ಹೆಸರುವಾಸಿಯಾದ ಘನ ಪ್ರೊಪೆಲ್ಲಂಟ್ ಅರೆ-ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ವಿವಿಧ ರೀತಿಯ ಸಿಡಿತಲೆಗಳನ್ನು ಹೊತ್ತೊಯ್ಯುವ ಮತ್ತು ಬಹು ವಿಧದ ಉದ್ದೇಶಗಳನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಕ್ಷಿಪಣಿ ಭಾರತದ ಬೆಳೆಯುತ್ತಿರುವ ರಕ್ಷಣಾ ಸಾಮರ್ಥ್ಯಗಳ ಪ್ರಮುಖ ಭಾಗವಾಗಿದೆ. ಇದನ್ನು ಒಂದು ಒಡಿಶಾದಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.