AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

General N.S. Raja Subramani is the new Chief of Defence Staff: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹಾಗೂ ಅತ್ಯಂತ ಪ್ರಮುಖ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (Chief of Defence Staff - CDS) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ (Gen N.S. Raja Subramani) ಅವರು ಇಂದು ಮೇ 31ರಂದು ಅಧಿಕಾರ ಸ್ವೀಕರಿಸಿದ್ದಾರೆ. ದೇಶದ ರಕ್ಷಣಾ ರಂಗದಲ್ಲಿ ಹೊಸ ಆಧ್ಯಾಯ ಬರೆದಿರುವ ಅವರ ನೇಮಕಾತಿ ಮತ್ತು ಸಶಸ್ತ್ರ ಪಡೆಗಳ ಕುರಿತಾದ ಅವರ ದೃಷ್ಟಿಕೋನ ಮತ್ತು ವಿಚಾರಗಳ ಕುರಿತು ಮಾಹಿತಿ ಇಲ್ಲಿದೆ.

ಸಾಯಿಬಾಬಾ ಸನ್ನಿಧಿಯಲ್ಲಿ ರಾಕೆಟ್ ಲಾಂಚರ್, ಡ್ರೋನ್ ಫ್ಯಾಕ್ಟರಿಗಳು; ಶಸ್ತ್ರಾಸ್ತ್ರ ರಫ್ತಿನಲ್ಲಿ ಭಾರತ ನಂ. 1 ಆಗಲಿದೆ ಎಂದ ರಾಜನಾಥ್

No power can stop India from becoming biggest exporter of arms: ನೈಬ್ ಗ್ರೂಪ್ ಸಂಸ್ಥೆ ಶಿರಡಿಯಲ್ಲಿ ಬೃಹತ್ತಾದ ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಸೌಲಭ್ಯವನ್ನು ಅನಾವರಣಗೊಳಿಸಿದೆ. ಇಲ್ಲಿ ರಾಕೆಟ್ ಲಾಂಚರ್ ಸಿಸ್ಟಂಗಳು, ಕಾಮಿಕಾಜೆ ಡ್ರೋನ್ ಮೊದಲಾದವನ್ನು ತಯಾರಿಸಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ನೈಬ್ ಡಿಫೆನ್ಸ್ ಘಟಕವನ್ನು ಉದ್ಘಾಟನೆ ಮಾಡಿದ್ದಾರೆ.

ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ

India Set to Acquire 114 Rafale Jets: ಭಾರತವು ಫ್ರಾನ್ಸ್‌ನಿಂದ 114 ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಸುಮಾರು 3.25 ಲಕ್ಷ ಕೋಟಿ ರೂ. ಮೌಲ್ಯದ ಈ ಬೃಹತ್ ಒಪ್ಪಂದದಲ್ಲಿ, 90 ವಿಮಾನಗಳನ್ನು ಭಾರತದಲ್ಲೇ 'ಮೇಕ್ ಇನ್ ಇಂಡಿಯಾ' ಅಡಿಯಲ್ಲಿ ತಯಾರಿಸಲಾಗುವುದು. ಇದು ಭಾರತೀಯ ವಾಯುಸೇನೆಯ ಸ್ಕ್ವಾಡ್ರನ್ ಕೊರತೆಯನ್ನು ನೀಗಿಸಿ, ದೇಶೀಯ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ ನೀಡಲಿದೆ.

ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!

ಭಯೋತ್ಪಾದನೆಯನ್ನು ಪೋಷಿಸುವುದನ್ನು ನಿಲ್ಲಿಸದಿದ್ದರೆ ಪಾಕಿಸ್ತಾನವು ಜಾಗತಿಕ ಭೂಪಟ ಮತ್ತು ಇತಿಹಾಸದಿಂದಲೇ ನಾಮಾವಶೇಷವಾಗಲಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕ್ ಆಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ವಿಚಾರವಾಗಿ ಮಾತನಾಡುವಾಗ ಅವರು ಈ ಎಚ್ಚರಿಕೆ ನೀಡಿದರು.

ನೂತನ ಸಿಡಿಎಸ್ ಆಗಿ ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ ನೇಮಕ: ನೌಕಾಪಡೆಗೆ ಕೃಷ್ಣ ಸ್ವಾಮಿನಾಥನ್ ಮುಖ್ಯಸ್ಥ

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ (CDS) ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಮೇ 30 ರಂದು ಹಾಲಿ ಸಿಡಿಎಸ್ ಅನಿಲ್ ಚೌಹಾಣ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ಆ ಬಳಿಕ ಹೊಸ ನೇಮಕಾತಿ ಜಾರಿಗೆ ಬರಲಿದೆ.

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್

ಇಂದು ಭಾರತ ಆಪರೇಷನ್ ಸಿಂಧೂರ್ ನ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಇದನ್ನು ಆಧುನಿಕ ಯುದ್ಧದ ಮಾನದಂಡ ಎಂದು ಕರೆದಿದ್ದಾರೆ. ಮೂರು ಸಶಸ್ತ್ರ ಪಡೆಗಳ ನಡುವಿನ ಅದರ ಅಪ್ರತಿಮ ನಿಖರತೆ ಮತ್ತು ಅತ್ಯುತ್ತಮ ಸಮನ್ವಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಭಾರತ ಕಳೆದ ವರ್ಷ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಇದರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿಗಳು ನಡೆದವು.

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ?

ಜಗತ್ತಿನಲ್ಲಿ ಹಲವು ಯುದ್ಧಗಳು ನಡೆದಿವೆ. ರಷ್ಯಾ-ಉಕ್ರೇನ್ ಯುದ್ಧವು ಐದನೇ ವರ್ಷಕ್ಕೆ ಕಾಲಿಟ್ಟಿದ್ದರೂ ಯಾವುದೇ ಸ್ಪಷ್ಟ ಪರಿಹಾರ ಸಿಕ್ಕಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆಯೂ ಯುದ್ಧ ನಡೆದು ಅದರ ಪರಿಣಾಮವನ್ನು ಅನೇಕ ಇತರೆ ದೇಶಗಳೂ ಅನುಭವಿಸಿವೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಈ ಎಲ್ಲ ಯುದ್ಧಗಳಿಗಿಂತಲೂ ಬಹಳ ಭಿನ್ನವಾಗಿತ್ತು. ಆ ಕಾರ್ಯಾಚರಣೆಯಲ್ಲಿ ಭಾರತ ಒಂದೇ ಒಂದು ಅಮಾಯಕರ ಜೀವವನ್ನೂ ಬಲಿ ಪಡೆಯದೆ ಕೇವಲ ಉಗ್ರರನ್ನು ಮಾತ್ರ ಟಾರ್ಗೆಟ್ ಮಾಡಿ ನಾಶಪಡಿಸಿದ್ದು ವಿಶೇಷ. ಆಪರೇಷನ್ ಸಿಂಧೂರ್​​ ನಡೆದು 1 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಹಿನ್ನೋಟ ಇಲ್ಲಿದೆ.

ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವಕರಿಬ್ಬರು ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 12650ರಲ್ಲಿ ರಾತ್ರಿ ವೇಳೆ ನಡೆದ ಈ ಘಟನೆಯಿಂದ ಸಹಪ್ರಯಾಣಿಕರು ಆತಂಕಗೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರೈಲ್ವೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ವಿಡಿಯೋ ಇಲ್ಲಿದೆ.

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ಯುದ್ಧ ಆರಂಭವಾಗಿ 20 ದಿನಗಳೇ ಆಗಿವೆ. ಯಾವ ದೇಶವೂ ಜಿದ್ದನ್ನು ಬಿಡುತ್ತಿಲ್ಲ. ಇದು ಕರ್ನಾಟಕದ ಹೋಟೆಲ್‌ ಉದ್ಯಮಕ್ಕೆ ಮರ್ಮಾಘಾತವನ್ನೇ ಕೊಟ್ಟಿದೆ. ಇದೀಗ ಗ್ಯಾಸ್‌ ಗಂಡಾಂತರ ತಪ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹೊರ್ಮುಜ್ ಮೂಲಕ ಭಾರತದತ್ತ ಬರುತ್ತಿರುವ ಎಲ್​ಪಿಜಿ, ತೈಲ ಹಡಗುಗಳ ರಕ್ಷಣೆಗಾಗಿ ಒಮಾನ್‌ ಗಲ್ಫ್‌ನತ್ತ ಭಾರತ 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ರವಾನಿಸಿರುವ ಬಗ್ಗೆ ವರದಿಯಾಗಿದೆ.

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

Indonesia Inks $200-$350 Million Deal To Buy BrahMos Missiles From India Amid Defence Boost: ಭಾರತ ಮತ್ತು ರಷ್ಯಾದ ಜಂಟಿ ನಿರ್ಮಾಣದ ಬ್ರಹ್ಮೋಸ್ ಕ್ಷಿಪಣಿಗಳನ್ನು ಇಂಡೋನೇಷ್ಯಾ ಖರೀದಿಸುತ್ತಿದೆ. 200ರಿಂದ 350 ಮಿಲಿಯನ್ ಡಾಲರ್ ಮೊತ್ತದ ಡೀಲ್ ಅನ್ನು ಇಂಡೋನೇಷ್ಯಾ ಮಾಡಿಕೊಂಡಿದೆ. ಬ್ರಹ್ಮೋಸ್ ಏರೋಸ್ಪೇಸ್ ಸಂಸ್ಥೆ ನಿರ್ಮಿಸಿರುವ ಬ್ರಹ್ಮೋಸ್ ಕ್ಷಿಪಣಿ ಬಹಳ ನಿಖರ ದಾಳಿಗೆ ಹೆಸರುವಾಸಿಯಾಗಿದೆ. ಪಾಕಿಸ್ತಾನ ವಿರುದ್ಧದ ಆಪರೇಷ್ ಸಿಂದೂರ್​ನಲ್ಲಿ ಇದು ಮಹತ್ವದ ಪಾತ್ರ ಹೊಂದಿತ್ತು.

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ನ ಯುದ್ಧನೌಕೆ ಐರಿಸ್ ದೇನಾ ಮೇಲೆ ಅಮೆರಿಕ ದಾಳಿ ನಡೆಸುವ ಕೆಲವು ದಿನಗಳ ಮೊದಲು ಇರಾನ್ ಭಾರತವನ್ನು ಸಂಪರ್ಕಿಸಿತ್ತು. ತಾಂತ್ರಿಕ ಸಮಸ್ಯೆಗಳಿಂದಾಗಿ ಕೊಚ್ಚಿಯಲ್ಲಿ ಮತ್ತೊಂದು ನೌಕಾ ಹಡಗು ಐರಿಸ್ ಲವನ್‌ಗೆ ಅನುಮತಿ ಕೋರಿತ್ತು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಫೆಬ್ರವರಿ 28ರಂದು ಇರಾನ್​ನಿಂದ ವಿನಂತಿಯನ್ನು ಸ್ವೀಕರಿಸಲಾಯಿತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿಗೆ ತುರ್ತು ಡಾಕಿಂಗ್ ಅಗತ್ಯವಿದೆ ಎಂದು ಇರಾನ್ ಹೇಳಿತ್ತು. ಮಾರ್ಚ್ 1ರಂದು ಡಾಕಿಂಗ್‌ಗೆ ಭಾರತೀಯ ಅಧಿಕಾರಿಗಳು ಅನುಮತಿ ನೀಡಿದರು. ಆ ಹಡಗು ಈಗಲೂ ಕೇರಳದ ಕೊಚ್ಚಿಯಲ್ಲಿಯೇ ಇದೆ.

ಸುಖೋಯ್ ಯುದ್ಧವಿಮಾನ ಅಪಘಾತ; ಆಪರೇಷನ್ ಸಿಂಧೂರ್​​ನಲ್ಲಿ ಭಾಗಿಯಾಗಿದ್ದ ಪೈಲಟ್ ಸೇರಿ ಇಬ್ಬರು ಸಾವು

ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ (Su-30MKI) ಯುದ್ಧವಿಮಾನ ನಾಪತ್ತೆಯಾಗಿತ್ತು. ರಡಾರ್​​ನಿಂದ ಕಣ್ಮರೆಯಾಗಿದ್ದ ಆ ವಿಮಾನ ಅಪಘಾತಕ್ಕೀಡಾಗಿದೆ. ಈ ವೇಳೆ ಅದರಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್​ಗಳು ಮೃತಪಟ್ಟಿದ್ದಾರೆ. ಅವರಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದ ಪೈಲಟ್ ಕೂಡ ಸೇರಿದ್ದಾರೆ. 10 ದಿನಗಳ ಹಿಂದಷ್ಟೇ ಅವರು ತಮ್ಮ ಕುಟುಂಬವನ್ನು ಭೇಟಿಯಾಗಿದ್ದರು. ಮೃತಪಟ್ಟ ಪೈಲಟ್​​ಗಳನ್ನು ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಎಂದು ಗುರುತಿಸಲಾಗಿದೆ.

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?