AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

‘ಆಪರೇಷನ್ ಸಿಂಧೂರ್’ ಡಾಕ್ಯುಮೆಂಟರಿಗೆ ಬೆಚ್ಚಿದ ಪಾಕಿಸ್ತಾನ; ತಡರಾತ್ರಿ 2 ಗಂಟೆಗೆ ಪಾಕ್ ಸೇನೆ ಪ್ರತಿಕ್ರಿಯೆ

ಏಪ್ರಿಲ್ 2025ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ್' ಕುರಿತು ಡಿಸ್ಕವರಿ ವಾಹಿನಿಯಲ್ಲಿ ಪ್ರಸಾರವಾದ ಸಾಕ್ಷ್ಯಚಿತ್ರ ಸೀರೀಸ್​​ಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಸೇನೆಯು ಮಧ್ಯರಾತ್ರಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಆಗಸ್ಟ್ 15ರಂದು ಪ್ರಸಾರವಾದ 'ಡಿಕ್ಲಾಸಿಫೈಡ್: ಆಪರೇಷನ್ ಸಿಂಧೂರ್' ಎಂಬ ಎರಡು ಭಾಗಗಳ ಈ ಸಾಕ್ಷ್ಯಚಿತ್ರ ಸರಣಿ ಮೇ 7, 2025ರಂದು ಪ್ರಾರಂಭವಾದ ಈ ಕಾರ್ಯಾಚರಣೆಯ ಯೋಜನೆ ಮತ್ತು ಅದ್ನು ನಿರ್ವಹಿಸಿದ ಭಾರತದ ಹಿರಿಯ ಮಿಲಿಟರಿ ಹಾಗೂ ಭದ್ರತಾ ಅಧಿಕಾರಿಗಳ ಸಂದರ್ಶನಗಳನ್ನು ಒಳಗೊಂಡಿದೆ.

676 ಸ್ಟಾರ್ಟ್‌ಅಪ್‌ಗಳು, 548 ಒಪ್ಪಂದಗಳು: ಭಾರತದ ರಕ್ಷಣಾ ತಂತ್ರಜ್ಞಾನದ ಕನಸಿಗೆ ‘iDEX’ ಬಲ

How iDEX is scaling India’s defence-tech ambitions: ಯಾವುದೇ ಕ್ಷೇತ್ರವು ಬೆಳವಣಿಗೆ ಸಾಧಿಸಲು ಇನ್ನೋವೇಶನ್ ಬಹಳ ಅಗತ್ಯ. ಈ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ವ್ಯವಸ್ಥೆಯ ನಿರ್ಮಾಣದ ಅಗತ್ಯತೆ ಇರುತ್ತದೆ. ಡಿಫೆನ್ಸ್ ಸೆಕ್ಟರ್​ನಲ್ಲಿ ಸರ್ಕಾರ iDEX ಯೋಜನೆಯನ್ನು ತಂದಿದ್ದು ಇದು ವರ್ಷಗಳಿಂದ ನವೋದ್ಯಮಗಳು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ ಕೊಡುತ್ತಿದೆ. ಇದರಿಂದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧನೆಯ ಕನಸು ನನಸಾಗುವ ಅವಕಾಶ ಹೆಚ್ಚಿದೆ.

ಪಾಕ್ ಮುಖವಾಡ ಮತ್ತೊಮ್ಮೆ ಬಯಲು; ಪಾಕಿಸ್ತಾನದಲ್ಲಿ 30ಕ್ಕೂ ಹೆಚ್ಚು ಲಷ್ಕರ್ ಉಗ್ರರ ಹತ್ಯೆಯನ್ನು ಒಪ್ಪಿಕೊಂಡ ಭಯೋತ್ಪಾದಕ

ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಭಾರತ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಪಾಕಿಸ್ತಾನ ತಾನು ಯಾವುದೇ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡಿಲ್ಲ ಎಂದು ಘೋಷಿಸಿಕೊಂಡಿತ್ತು. ಆದರೆ, ಇದೀಗ ಪಾಕಿಸ್ತಾನದ ಅಸಲಿ ಮುಖ ಮತ್ತೊಮ್ಮೆ ಬಯಲಾಗಿದೆ. ಲಷ್ಕರ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ರಿಜ್ವಾನ್ ಹನೀಫ್ ಎಂಬಾತನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಷೇಧಿತ ಉಗ್ರ ಸಂಘಟನೆಯನ್ನು ದೇಶದಿಂದಲೇ ನಿವಾರಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಈ ವಿಡಿಯೋ ಪಾಕಿಸ್ತಾನದ ಸುಳ್ಳನ್ನು ಬಯಲು ಮಾಡಿದೆ.

ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ

India to strengthen border regions by upgrading railway infrastructure: ಗಡಿಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲು ಮತ್ತು ಸಮರ ಸನ್ನದ್ಧತೆಯನ್ನು ತೀವ್ರಗೊಳಿಸಲು ಭಾರತ ಮತ್ತೊಂದು ಹೆಜ್ಜೆ ಇಡುತ್ತಿದೆ. ಪಾಕಿಸ್ತಾನ, ಚೀನಾ, ಬಾಂಗ್ಲಾ ಗಡಿಗಳಲ್ಲಿ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿಗೆ ಭಾರತ ಯೋಜನೆ ಹಾಕಿದೆ. 45,000 ಕೋಟಿ ರೂ ಹೂಡಿಕೆ ಬೇಕಾಗಬಹುದು. ಎರಡು ವರ್ಷದಲ್ಲಿ ಈ ಹೂಡಿಕೆ ಆಗಲಿದೆ.

IRCTC Luggage Booking: ಆನ್​ಲೈನ್​ನಲ್ಲಿ ಹೆಚ್ಚುವರಿ ಲಗೇಜ್ ಬುಕಿಂಗ್ ಸೇವೆ ಆರಂಭಿಸಿದ ಭಾರತೀಯ ರೈಲ್ವೆ

Indian Railways Online Luggage Booking: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ(Indian Railways)ಯು ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದು, ಇಂದಿನಿಂದ ಆನ್​ಲೈ್ ಲಗೇಜ್ ಬುಕಿಂಗ್ ಸೌಲಭ್ಯವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ರೈಲುಗಳಲ್ಲಿ ನಿಯಮಕ್ಕಿಂತ ಹೆಚ್ಚು ಭಾರವಾದ ಲಗೇಜ್ ಹೊತ್ತು ತರುವುದರಿಂದ ಸಹ-ಪ್ರಯಾಣಿಕರಿಗೆ ಉಂಟಾಗುತ್ತಿದ್ದ ತೊಂದರೆಗಳನ್ನು ತಪ್ಪಿಸಲು ಹಾಗೂ ನಿಲ್ದಾಣಗಳ ಪಾರ್ಸೆಲ್ ಕೌಂಟರ್‌ಗಳಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ಡಿಜಿಟಲ್ ವ್ಯವಸ್ಥೆಯನ್ನು ತರಲಾಗಿದೆ.

ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗುತ್ತಿದೆ ‘ಮಾಲ್ವಾಣ್’ ಯುದ್ಧನೌಕೆ: ಸ್ವದೇಶಿ ನಿರ್ಮಿತ ಹಡಗಿನ ವಿಶೇಷಗಳೇನು? ಇಲ್ಲಿದೆ ನೋಡಿ

INS Malvan: ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿ ಇಂದು ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತ ಐಎನ್‌ಎಸ್ ಮಾಲ್ವಾಣ್ ಯುದ್ಧನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿದೆ. ಜಲಾಂತರ್ಗಾಮಿ ಪತ್ತೆ ಹಾಗೂ ಸಮುದ್ರ ಭದ್ರತೆಗೆ ಅಗತ್ಯವಾದ ಅತ್ಯಾಧುನಿಕ ವ್ಯವಸ್ಥೆಗಳನ್ನು ಈ ನೌಕೆ ಹೊಂದಿದೆ. ಮಾಲ್ವಾಣ್ ಯುದ್ಧನೌಕೆಯ ವಿಶೇಷತೆಗಳ ಮಾಹಿತಿ ಹಾಗೂ ವಿಡಿಯೋ ಇಲ್ಲಿದೆ.

  • Ashok
  • Updated on: Jul 22, 2026
  • 9:56 am

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ

Indian government to allow private sector to participate in missile production: ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆದಿಟ್ಟಿರುವ ಸರ್ಕಾರ ಈಗ ರಕ್ಷಣಾ ಕ್ಷೇತ್ರವನ್ನೂ ಹೆಚ್ಚೆಚ್ಚು ಮುಕ್ತಗೊಳಿಸುತ್ತಿದೆ. ಸರ್ಕಾರಿ ಸಂಸ್ಥೆಗಳ ಹೆಗಲಿಗೆ ಇದ್ದ ಕ್ಷಿಪಣಿಗಳ ಉತ್ಪಾದನೆಯ ಅವಕಾಶವನ್ನು ಖಾಸಗಿಯವರಿಗೂ ಕೊಡಲು ಸರ್ಕಾರ ನಿರ್ಧರಿಸಿದೆ. ಅಸ್ತ್ರ ಮಾರ್ಕ್-2, ಪ್ರಳಯ್ ಕ್ಷಿಪಣಿಗಳ ತಯಾರಿಕೆಗೆ ಟೆಂಡರ್ ಕರೆಯಬಹುದು.

Dhiraj Seth ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ

ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇವರು ಭಾರತೀಯ ಸೇನೆಯ 31ನೇ ಮುಖ್ಯಸ್ಥರಾಗಿದ್ದು, ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಜನರಲ್ ಧೀರಜ್ ಸೇಠ್ ಭಾರತೀಯ ಸೇನೆಯ ಅತ್ಯಂತ ಗೌರವಾನ್ವಿತ ಮತ್ತು ಅನುಭವಿ ಅಧಿಕಾರಿಗಳಲ್ಲಿ ಒಬ್ಬರಾಗಿದ್ದಾರೆ. ಇವರು ಭಾರತೀಯ ಸೇನೆಯ 'ಆರ್ಮರ್ಡ್ ಕಾರ್ಪ್ಸ್' ವಿಭಾಗಕ್ಕೆ ಸೇರಿದವರಾಗಿದ್ದಾರೆ. 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್ ರಾಯ್ ಚೌಧರಿ ಅವರ ನಂತರ, ಕಳೆದ ಮೂರು ದಶಕಗಳಲ್ಲಿ ಭೂಸೇನೆಯ ಅತ್ಯುನ್ನತ ಹುದ್ದೆಗೇರಿದ ಮೊದಲ ಆರ್ಮರ್ಡ್ ಕಾರ್ಪ್ಸ್ ಅಧಿಕಾರಿ ಇವರಾಗಿದ್ದಾರೆ.

ಭೂಕಂಪ ಪೀಡಿತ ವೆನೆಜುವೆಲಾಗೆ ಭಾರತದ ನೆರವು; ‘ಆಪರೇಷನ್ ಅಮಿಸ್ಟಾಡ್’ ಅಡಿ ವಾಯುಪಡೆಯ 2 ವಿಮಾನ ರವಾನೆ

ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾಗಿರುವ ವೆನೆಜುವೆಲಾ ದೇಶಕ್ಕೆ ನೆರವಾಗಲು ಭಾರತ ಸರ್ಕಾರವು 'ಆಪರೇಷನ್ ಅಮಿಸ್ಟಾಡ್' (Operation Amistad) ಹೆಸರಿನಡಿ ತುರ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಕಾರ್ಯಾಚರಣೆಯನ್ನು ಆರಂಭಿಸಿದೆ. ಬುಧವಾರ ವೆನೆಜುವೆಲಾದಲ್ಲಿ ಸಂಭವಿಸಿದ ಸರಣಿ ಭೂಕಂಪಗಳಿಂದ ಭಾರಿ ಸಾವು-ನೋವು ಹಾಗೂ ಮೂಲಸೌಕರ್ಯ ಹಾನಿ ಸಂಭವಿಸಿದೆ. ಈ ಸಂಕಷ್ಟದ ಸಮಯದಲ್ಲಿ ನೆರೆಹೊರೆಯ ದೇಶವಾಗಿ ಭಾರತವು ದೊಡ್ಡ ಮಟ್ಟದ ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದ್ದು, ಇದಕ್ಕೆ 'ಆಪರೇಷನ್ ಅಮಿಸ್ಟಾಡ್' ಎಂದು ಹೆಸರಿಡಲಾಗಿದೆ.

ಆಪರೇಷನ್ ಸಿಂಧೂರ್​​ ಕಾರ್ಯಾಚರಣೆ ವೇಳೆ ಹುತಾತ್ಮರಾದ ವೀರ ಯೋಧರ ಹೆಸರು ಪ್ರಕಟ

Operation Sindoor: 'ಆಪರೇಷನ್ ಸಿಂಧೂರ್'ನಲ್ಲಿ ಹುತಾತ್ಮರಾದ ಆರು ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಶತ್ರು ನೆಲದ ಉಗ್ರರ ಶಿಬಿರಗಳ ನಾಶಕ್ಕೆ ನಡೆದ ಈ ರಹಸ್ಯ ಕಾರ್ಯಾಚರಣೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಹೆಸರುಗಳನ್ನು ಇದೀಗ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಇದು ಅವರ ಅಪ್ರತಿಮ ಶೌರ್ಯಕ್ಕೆ ನಮನ.

ಇರಾನ್ ವಿರುದ್ಧ ಆತ್ಮರಕ್ಷಣೆಗೆ ಭಾರತದ ಆಕಾಶ್​ತೀರ್ ಡಿಫೆನ್ಸ್ ಸಿಸ್ಟಂ ಮತ್ತು ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಯುಎಇ ಮುಂದು

West Asia war situation moves UAE to think of buying weapons from India: ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಲ್ಲಿ ಯುಎಐ ಹಾಗೂ ಇತರ ಗಲ್ಫ್ ದೇಶಗಳೂ ಬಿಸಿ ಎದುರಿಸುತ್ತಿವೆ. ಯುಎಇಯಲ್ಲಿ ಅಮೆರಿಕದ ನೆಲೆಗಳು ಇರುವ ಹಿನ್ನೆಲೆಯಲ್ಲಿ ಇರಾನ್​ನಿಂದ ದಾಳಿಗಳಾಗಿವೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಲಪಡಿಸಲು ನಿರ್ಧರಿಸಿರುವ ಯುಎಇ ಈಗ ಭಾರತದಿಂದ ಕ್ಷಿಪಣಿ ಹಾಗೂ ಡಿಫೆನ್ಸ್ ಸಿಸ್ಟಂಗಳನ್ನು ಖರೀದಿಸಲು ಆಲೋಚಿಸುತ್ತಿದೆ ಎನ್ನಲಾಗಿದೆ.

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ

India's defence production and exports see big increase in 2025-26: ಭಾರತದ ರಕ್ಷಣಾ ಕ್ಷೇತ್ರದಿಂದ 2025-26ರಲ್ಲಿ ಆದ ಒಟ್ಟು ಉತ್ಪಾದನೆ 1.78 ಲಕ್ಷ ಕೋಟಿ ರೂ ಎನ್ನಲಾಗಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ಉತ್ಪಾದನೆ ಶೇ. 15.6ರಷ್ಟು ಹೆಚ್ಚಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿದಂತೆ ರಫ್ತು ಕೂಡ ಗಣನೀಯವಾಗಿ ವೃದ್ಧಿಸಿದೆ.