AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army

Indian Army

2023ರಲ್ಲಿ ಸೇನೆಯಲ್ಲಿ ಮಹಿಳಾ ಸೇನಾನಿಗಳು ಮಾಡಿದ ಸಾಧನೆಗಳೇನು? ಅವರು ಕೈಗೊಂಡ ಪ್ರಮುಖ ನಿರ್ಧಾರಗಳೇನು? ಮೂರು ಸೇನೆಗಳಲ್ಲಿ ಒಟ್ಟು 11,414 ಮಹಿಳಾ ಸಿಬ್ಬಂದಿಗಳು ಸೇವೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಅಧಿಕಾರಿಗಳು, ಇತರ ಶ್ರೇಣಿಗಳು, ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಶುಶ್ರೂಷಾ ಸೇವೆಗಳನ್ನು ಒಳಗೊಂಡಿದೆ.

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಹುತಾತ್ಮ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಅವರ ಅಸಾಧಾರಣ ಶೌರ್ಯ, ಅದಮ್ಯ ಧೈರ್ಯ ಮತ್ತು ರಾಷ್ಟ್ರ ಸೇವೆಯಲ್ಲಿ ಅತ್ಯುನ್ನತ ತ್ಯಾಗಕ್ಕಾಗಿ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ತಾಯಿ ದೂಖ ತಡೆಯಲಾರದೆ ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಮರಣೋತ್ತರ 'ಕೀರ್ತಿ ಚಕ್ರ' ಗೌರವ ನೀಡುವಾಗ ತಾಯಿಯ ಭಾವುಕ ಕ್ಷಣಗಳ ವಿಡಿಯೋ ವೈರಲ್ ಆಗಿದೆ.

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ರಕ್ಷಣಾ ವಲಯದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದ ವೀರ ಯೋಧರಿಗೆ ಕೀರ್ತಿ ಚಕ್ರ, ವೀರ ಚಕ್ರ ಮತ್ತು ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸಶಸ್ತ್ರ ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತದ ವಾಯುಸೇನಾ ಬಲದ ಕೊರತೆ ನೀಗಿಸಲಿರುವ 114 ರಫೇಲ್ ಯುದ್ಧವಿಮಾನಗಳು

IAF's Critical Fighter Jet Gap: ಭಾರತೀಯ ವಾಯುಸೇನೆ (IAF) ತನ್ನ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಯುದ್ಧವಿಮಾನಗಳ ಕೊರತೆಯನ್ನು ಎದುರಿಸುತ್ತಿದೆ. ಇದನ್ನು ನೀಗಿಸಲು ಭಾರತವು ₹3.25 ಲಕ್ಷ ಕೋಟಿ ಮೌಲ್ಯದ 114 ದಸ್ಸಾಲ್ಟ್ ರಫೇಲ್ ಯುದ್ಧವಿಮಾನಗಳನ್ನು ಫ್ರಾನ್ಸ್‌ನಿಂದ ಖರೀದಿಸುತ್ತಿದೆ. ಈ ಅತಿದೊಡ್ಡ ರಕ್ಷಣಾ ಒಪ್ಪಂದವು IAF ನ ಸಾಮರ್ಥ್ಯವನ್ನು ಹೆಚ್ಚಿಸಿ, ಚೀನಾ ಮತ್ತು ಪಾಕಿಸ್ತಾನದಂತಹ ದ್ವಿಮುಖ ಸವಾಲನ್ನು ಎದುರಿಸಲು ಸಹಕಾರಿಯಾಗಲಿದೆ. ಹಂತ ಹಂತವಾಗಿ ವಿತರಣೆಯಾಗುವ ಈ ವಿಮಾನಗಳ ಪೈಕಿ 96 ಭಾರತದಲ್ಲೇ ತಯಾರಾಗಲಿವೆ, ಇದು ಸ್ವಾವಲಂಬನೆಯೆಡೆಗಿನ ಹೆಜ್ಜೆಯಾಗಿದೆ.

ನೂತನ ಸಿಡಿಎಸ್ ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅಧಿಕಾರ; ಸಶಸ್ತ್ರ ಪಡೆಗಳ ಬಲವರ್ಧನೆಗೆ ಆಲೋಚನೆ

General N.S. Raja Subramani is the new Chief of Defence Staff: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹಾಗೂ ಅತ್ಯಂತ ಪ್ರಮುಖ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (Chief of Defence Staff - CDS) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ (Gen N.S. Raja Subramani) ಅವರು ಇಂದು ಮೇ 31ರಂದು ಅಧಿಕಾರ ಸ್ವೀಕರಿಸಿದ್ದಾರೆ. ದೇಶದ ರಕ್ಷಣಾ ರಂಗದಲ್ಲಿ ಹೊಸ ಆಧ್ಯಾಯ ಬರೆದಿರುವ ಅವರ ನೇಮಕಾತಿ ಮತ್ತು ಸಶಸ್ತ್ರ ಪಡೆಗಳ ಕುರಿತಾದ ಅವರ ದೃಷ್ಟಿಕೋನ ಮತ್ತು ವಿಚಾರಗಳ ಕುರಿತು ಮಾಹಿತಿ ಇಲ್ಲಿದೆ.

ಸಾಯಿಬಾಬಾ ಸನ್ನಿಧಿಯಲ್ಲಿ ರಾಕೆಟ್ ಲಾಂಚರ್, ಡ್ರೋನ್ ಫ್ಯಾಕ್ಟರಿಗಳು; ಶಸ್ತ್ರಾಸ್ತ್ರ ರಫ್ತಿನಲ್ಲಿ ಭಾರತ ನಂ. 1 ಆಗಲಿದೆ ಎಂದ ರಾಜನಾಥ್

No power can stop India from becoming biggest exporter of arms: ನೈಬ್ ಗ್ರೂಪ್ ಸಂಸ್ಥೆ ಶಿರಡಿಯಲ್ಲಿ ಬೃಹತ್ತಾದ ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಸೌಲಭ್ಯವನ್ನು ಅನಾವರಣಗೊಳಿಸಿದೆ. ಇಲ್ಲಿ ರಾಕೆಟ್ ಲಾಂಚರ್ ಸಿಸ್ಟಂಗಳು, ಕಾಮಿಕಾಜೆ ಡ್ರೋನ್ ಮೊದಲಾದವನ್ನು ತಯಾರಿಸಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ನೈಬ್ ಡಿಫೆನ್ಸ್ ಘಟಕವನ್ನು ಉದ್ಘಾಟನೆ ಮಾಡಿದ್ದಾರೆ.

ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ

India Set to Acquire 114 Rafale Jets: ಭಾರತವು ಫ್ರಾನ್ಸ್‌ನಿಂದ 114 ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಸುಮಾರು 3.25 ಲಕ್ಷ ಕೋಟಿ ರೂ. ಮೌಲ್ಯದ ಈ ಬೃಹತ್ ಒಪ್ಪಂದದಲ್ಲಿ, 90 ವಿಮಾನಗಳನ್ನು ಭಾರತದಲ್ಲೇ 'ಮೇಕ್ ಇನ್ ಇಂಡಿಯಾ' ಅಡಿಯಲ್ಲಿ ತಯಾರಿಸಲಾಗುವುದು. ಇದು ಭಾರತೀಯ ವಾಯುಸೇನೆಯ ಸ್ಕ್ವಾಡ್ರನ್ ಕೊರತೆಯನ್ನು ನೀಗಿಸಿ, ದೇಶೀಯ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ ನೀಡಲಿದೆ.

ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!

ಭಯೋತ್ಪಾದನೆಯನ್ನು ಪೋಷಿಸುವುದನ್ನು ನಿಲ್ಲಿಸದಿದ್ದರೆ ಪಾಕಿಸ್ತಾನವು ಜಾಗತಿಕ ಭೂಪಟ ಮತ್ತು ಇತಿಹಾಸದಿಂದಲೇ ನಾಮಾವಶೇಷವಾಗಲಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಪಾಕ್ ಆಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ವಿಚಾರವಾಗಿ ಮಾತನಾಡುವಾಗ ಅವರು ಈ ಎಚ್ಚರಿಕೆ ನೀಡಿದರು.

ನೂತನ ಸಿಡಿಎಸ್ ಆಗಿ ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ ನೇಮಕ: ನೌಕಾಪಡೆಗೆ ಕೃಷ್ಣ ಸ್ವಾಮಿನಾಥನ್ ಮುಖ್ಯಸ್ಥ

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ (CDS) ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಮೇ 30 ರಂದು ಹಾಲಿ ಸಿಡಿಎಸ್ ಅನಿಲ್ ಚೌಹಾಣ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ಆ ಬಳಿಕ ಹೊಸ ನೇಮಕಾತಿ ಜಾರಿಗೆ ಬರಲಿದೆ.

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್

ಇಂದು ಭಾರತ ಆಪರೇಷನ್ ಸಿಂಧೂರ್ ನ ಮೊದಲ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದು, ಇದನ್ನು ಆಧುನಿಕ ಯುದ್ಧದ ಮಾನದಂಡ ಎಂದು ಕರೆದಿದ್ದಾರೆ. ಮೂರು ಸಶಸ್ತ್ರ ಪಡೆಗಳ ನಡುವಿನ ಅದರ ಅಪ್ರತಿಮ ನಿಖರತೆ ಮತ್ತು ಅತ್ಯುತ್ತಮ ಸಮನ್ವಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಭಾರತ ಕಳೆದ ವರ್ಷ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು. ಇದರಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿಗಳು ನಡೆದವು.

ಆಪರೇಷನ್ ಸಿಂಧೂರ್​​ಗೆ ಒಂದು ವರ್ಷ; ಉಗ್ರರ ವಿರುದ್ಧದ ಕಾರ್ಯಾಚರಣೆ ಪರಿಣಾಮಕಾರಿಯಾಗಿದ್ದು ಹೇಗೆ?

ಜಗತ್ತಿನಲ್ಲಿ ಹಲವು ಯುದ್ಧಗಳು ನಡೆದಿವೆ. ರಷ್ಯಾ-ಉಕ್ರೇನ್ ಯುದ್ಧವು ಐದನೇ ವರ್ಷಕ್ಕೆ ಕಾಲಿಟ್ಟಿದ್ದರೂ ಯಾವುದೇ ಸ್ಪಷ್ಟ ಪರಿಹಾರ ಸಿಕ್ಕಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆಯೂ ಯುದ್ಧ ನಡೆದು ಅದರ ಪರಿಣಾಮವನ್ನು ಅನೇಕ ಇತರೆ ದೇಶಗಳೂ ಅನುಭವಿಸಿವೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಈ ಎಲ್ಲ ಯುದ್ಧಗಳಿಗಿಂತಲೂ ಬಹಳ ಭಿನ್ನವಾಗಿತ್ತು. ಆ ಕಾರ್ಯಾಚರಣೆಯಲ್ಲಿ ಭಾರತ ಒಂದೇ ಒಂದು ಅಮಾಯಕರ ಜೀವವನ್ನೂ ಬಲಿ ಪಡೆಯದೆ ಕೇವಲ ಉಗ್ರರನ್ನು ಮಾತ್ರ ಟಾರ್ಗೆಟ್ ಮಾಡಿ ನಾಶಪಡಿಸಿದ್ದು ವಿಶೇಷ. ಆಪರೇಷನ್ ಸಿಂಧೂರ್​​ ನಡೆದು 1 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಹಿನ್ನೋಟ ಇಲ್ಲಿದೆ.

ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಯುವಕರಿಬ್ಬರು ರಾಜಾರೋಷವಾಗಿ ಗಾಂಜಾ ಸೇವನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ರೈಲು ಸಂಖ್ಯೆ 12650ರಲ್ಲಿ ರಾತ್ರಿ ವೇಳೆ ನಡೆದ ಈ ಘಟನೆಯಿಂದ ಸಹಪ್ರಯಾಣಿಕರು ಆತಂಕಗೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರೈಲ್ವೆ ಪೊಲೀಸರಿಗೆ ಒತ್ತಾಯಿಸಿದ್ದಾರೆ. ವಿಡಿಯೋ ಇಲ್ಲಿದೆ.

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ಯುದ್ಧ ಆರಂಭವಾಗಿ 20 ದಿನಗಳೇ ಆಗಿವೆ. ಯಾವ ದೇಶವೂ ಜಿದ್ದನ್ನು ಬಿಡುತ್ತಿಲ್ಲ. ಇದು ಕರ್ನಾಟಕದ ಹೋಟೆಲ್‌ ಉದ್ಯಮಕ್ಕೆ ಮರ್ಮಾಘಾತವನ್ನೇ ಕೊಟ್ಟಿದೆ. ಇದೀಗ ಗ್ಯಾಸ್‌ ಗಂಡಾಂತರ ತಪ್ಪಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹೊರ್ಮುಜ್ ಮೂಲಕ ಭಾರತದತ್ತ ಬರುತ್ತಿರುವ ಎಲ್​ಪಿಜಿ, ತೈಲ ಹಡಗುಗಳ ರಕ್ಷಣೆಗಾಗಿ ಒಮಾನ್‌ ಗಲ್ಫ್‌ನತ್ತ ಭಾರತ 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ರವಾನಿಸಿರುವ ಬಗ್ಗೆ ವರದಿಯಾಗಿದೆ.

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!