AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ಭಾರತ ತಂಡದಿಂದ ಮೂವರು ಆಟಗಾರರು ಔಟ್..!

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಸರಣಿಯ ಮೂಲಕ ಇಶಾನ್ ಕಿಶನ್ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್

India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 30 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂಧಾನ ವಿಶೇಷ ವಿಶ್ವ ದಾಖಲೆ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?

IND vs NZ ODI: ಭಾರತ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ತಂಡದ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜನವರಿ 3 ಅಥವಾ 4 ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಆಯ್ಕೆ ಕುತೂಹಲ ಮೂಡಿಸಿದೆ. ಇದು ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ತಂಡಕ್ಕೆ ಮಹತ್ವದ ಸರಣಿಯಾಗಲಿದೆ.

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ

Gautam Gambhir Test Coach Future: ಗೌತಮ್ ಗಂಭೀರ್ ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದೆ. ತವರಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಸೋತ ಬಳಿಕ ಅವರನ್ನು ಟೆಸ್ಟ್ ಕೋಚ್ ಸ್ಥಾನದಿಂದ ತೆಗೆದುಹಾಕಿ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಿಸುವ ಬಗ್ಗೆ ವದಂತಿಗಳು ಹಬ್ಬಿದ್ದವು. ಆದರೆ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಸದ್ಯಕ್ಕೆ ಗಂಭೀರ್ ಅವರೇ ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ.

ವಿಕೆಟ್ ಕೀಪರ್ ಬದಲಿಗೆ ಟೀಮ್ ಇಂಡಿಯಾಗೆ ಎಡಗೈ ದಾಂಡಿಗನ ಎಂಟ್ರಿ

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ಜನವರಿ 14 ರಂದು ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು ಜನವರಿ 18 ರಂದು ನಡೆಯಲಿರುವ ಮೂರನೇ ಪಂದ್ಯಕ್ಕೆ ಇಂದೋರ್​ನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ‘ಗಂಭೀರ’ ಭೀತಿ

Gautam Gambhir: ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡ ಸೀಮಿತ ಓವರ್​ಗಳ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಇದಾಗ್ಯೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪ್ರದರ್ಶನ ಅಧಃಪತನದತ್ತ ಸಾಗಿದೆ. ಇದಕ್ಕೆ ಸಾಕ್ಷಿ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ 6ನೇ ಸ್ಥಾನದಲ್ಲಿರುವುದು.

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​

India Women vs Sri Lanka Women: ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 112 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 13.2 ಓವರ್​​ಗಳಲ್ಲಿ ಈ ಗುರಿ ಚೇಸಿಂಗ್ ಮಾಡುವ ಮೂಲಕ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..!

Vijay Hazare Trophy 2025: ವಿಜಯ ಹಝಾರೆ ಟೂರ್ನಿಯ ಮೊದಲ ದಿನವೇ ಬರೋಬ್ಬರಿ 22 ಶತಕಗಳು ಮೂಡಿಬಂದಿವೆ. ಈ ಇಪ್ಪತ್ತೆರಡು ಸೆಂಚುರಿಗಳಲ್ಲಿ ಮೂರು ವಿಸ್ಫೋಟಕ ಶತಕಗಳು ಕೂಡ ಸೇರಿವೆ. ಅಂದರೆ ವಿಜಯ ಹಝಾರೆ ಟೂರ್ನಿಯ ದಾಖಲೆಯ ಎರಡು ಸೆಂಚುರಿಗಳು ಒಂದೇ ದಿನ ಮೂಡಿಬಂದಿವೆ.

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್

Jharkhand vs Karnataka: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 125 ರನ್ ಸಿಡಿಸಿದ್ದಾರೆ. ಈ ಮೂಲಕ ಕರ್ನಾಟಕ ತಂಡಕ್ಕೆ ಜಾರ್ಖಂಡ್ 413 ರನ್​ಗಳ ಗುರಿ ನೀಡಿದೆ.

ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ

Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20 ವಿಶ್ವಕಪ್ 2026.

VHT ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಇಲ್ಲಿದೆ

Vijay Hazare Trophy 2025: ವಿಜಯ ಹಝಾರೆ ಟೂರ್ನಿ ಎಂದರೆ ದೇಶೀಯ ಏಕದಿನ ಪಂದ್ಯಾವಳಿ. ಈ ಟೂರ್ನಿಯಲ್ಲಿ ಬರೋಬ್ಬರಿ 32 ತಂಡಗಳು ಕಣಕ್ಕಿಳಿಯುತ್ತವೆ. ಡಿಸೆಂಬರ್ 24 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ದಿನವೇ 16 ಮ್ಯಾಚ್​ಗಳು ನಡೆಯಲಿವೆ. ಅಂದರೆ ಮೊದಲ ದಿನವೇ ಎಲ್ಲಾ ತಂಡಗಳು ಕಣಕ್ಕಿಳಿಯಲಿವೆ.