AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

IND vs IRE: ಇಬ್ಬರು ಇನ್, ಇಬ್ಬರು ಔಟ್; ವೈಭವ್​ಗೆ ಸಿಗುತ್ತಾ ಅವಕಾಶ? ಹೀಗಿದೆ ಪ್ಲೇಯಿಂಗ್ 11

India vs Ireland T20: ಐರ್ಲೆಂಡ್ ವಿರುದ್ಧದ ನಿರ್ಣಾಯಕ ಕೊನೆಯ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡ ಗೆಲುವಿನ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯ ಸೋತಿದ್ದ ಭಾರತ, ಸರಣಿ ಸೋಲು ತಪ್ಪಿಸಲು ಆಡುವ ಹನ್ನೊಂದರ ಬಳಗದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಿದೆ. ವೈಭವ್ ಸೂರ್ಯವಂಶಿ ಮತ್ತು ಪ್ರಿನ್ಸ್ ಯಾದವ್​ಗೆ ಅವಕಾಶ ದೊರೆಯುವ ಸಾಧ್ಯತೆಗಳಿದ್ದು, ಟೀಂ ಇಂಡಿಯಾ ಬಲಿಷ್ಠ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.

ಹೀಗೊಂದು ಕಾಕತಾಳೀಯ; 2028 ರ ಟಿ20 ವಿಶ್ವಕಪ್ ಕೂಡ ಭಾರತದ್ದೇ

T20 World Cup 2028 Prediction: ಜೂನ್ 26ರಂದು ಐರ್ಲೆಂಡ್ ವಿರುದ್ಧದ ಟೀಂ ಇಂಡಿಯಾದ ಟಿ20 ಸೋಲು ಕ್ರಿಕೆಟ್ ಲೋಕದ ಚರ್ಚೆಗೆ ಗ್ರಾಸವಾಗಿದೆ. ಈ ಸೋಲು, 2024ರ ಟಿ20 ವಿಶ್ವಕಪ್ ನಂತರ ಜಿಂಬಾಬ್ವೆ ವಿರುದ್ಧದ ಸೋಲಿನಂತೆಯೇ ಇದೆ. ಹೊಸ ನಾಯಕತ್ವದಲ್ಲಿ ದುರ್ಬಲ ತಂಡದ ವಿರುದ್ಧ ಸೋತ ಇತಿಹಾಸ ಪುನರಾವರ್ತನೆಯಾಗಿದ್ದು, ಇದು 2028ರ ಟಿ20 ವಿಶ್ವಕಪ್ ಭಾರತವೇ ಗೆಲ್ಲುವ ಶುಭ ಸೂಚನೆ ಎಂದು ಹಲವರು ವಿಶ್ಲೇಷಿಸುತ್ತಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವ ಭವಿಷ್ಯ ಕುತೂಹಲ ಮೂಡಿಸಿದೆ.

IND vs IRE: ಐರ್ಲೆಂಡ್ ವಿರುದ್ಧ ಸೋತು 5 ಅವಮಾನಕರ ದಾಖಲೆ ಬರೆದ ಟೀಂ ಇಂಡಿಯಾ

India vs Ireland T20: ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋತಿದೆ. 183 ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ 34 ರನ್‌ಗಳಿಂದ ಸೋಲನುಭವಿಸಿತು. ಈ ಪಂದ್ಯದಲ್ಲಿ ಐರ್ಲೆಂಡ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತವನ್ನು ಸೋಲಿಸಿತು. ಜೊತೆಗೆ, ಭಾರತ ಸತತ ವಿಶ್ವಕಪ್ ನಂತರದ ಆರಂಭಿಕ ಸೋಲು, ಪ್ರಸಿದ್ಧ್ ಕೃಷ್ಣ ದುಬಾರಿ ಬೌಲಿಂಗ್, ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದ ವೈಫಲ್ಯ ಸೇರಿದಂತೆ ಅನೇಕ ಅನಗತ್ಯ ದಾಖಲೆಗಳನ್ನು ನಿರ್ಮಿಸಿದೆ.

ಭಾನುವಾರದಂದು 2 ಮಾಡು ಇಲ್ಲವೇ ಮಡಿ ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ

Do-or-Die June 28: ಜೂನ್ 28 ರಂದು ಕ್ರಿಕೆಟ್ ಪ್ರಿಯರಿಗೆ ಎರಡೆರಡು ಹೈವೋಲ್ಟೇಜ್ ಪಂದ್ಯಗಳ ರೋಮಾಂಚನ ಕಾದಿದೆ. ಭಾರತದ ಪುರುಷರ ತಂಡ ಐರ್ಲೆಂಡ್ ವಿರುದ್ಧ ಸರಣಿ ಸೋಲನ್ನು ತಪ್ಪಿಸಲು ಹೋರಾಡಿದರೆ, ಮಹಿಳಾ ತಂಡ 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಲು ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಸನ್ನಿವೇಶವಾಗಿದ್ದು, ಗೆಲುವು ಅನಿವಾರ್ಯವಾಗಿದೆ.

ಇದೇ ಕಾರಣಕ್ಕೆ ವೈಭವ್ ಸೂರ್ಯವಂಶಿಯನ್ನು ಕಣಕ್ಕಿಳಿಸಿಲ್ಲ..!

Vaibhav Sooryavanshi: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ 776 ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್ ಆರಂಭಿಸುವ ಇರಾದೆಯಲ್ಲಿದ್ದರು. ಆದರೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಕೆಲ ನಿರ್ದಿಷ್ಟ ಕಾರಣಗಳಿಂದ ಯುವ ದಾಂಡಿಗನನ್ನು ಕಣಕ್ಕಿಳಿಸಿರಲಿಲ್ಲ.

ಒಂದೇ ಪಂದ್ಯ, ಮೂರು ತಂಡಗಳ ಸೆಮಿಫೈನಲ್​ ಭವಿಷ್ಯ ನಿರ್ಧಾರ!

Womens T20 World Cup 2026: ಮಹಿಳಾ ಟಿ20 ವಿಶ್ವಕಪ್‌ನ ನಿಯಮಾವಳಿಗಳ ಪ್ರಕಾರ ಲೀಗ್ ಹಂತದ ಮುಕ್ತಾಯದ ವೇಳೆಗೆ ಪ್ರತಿ ಗ್ರೂಪ್‌ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಮಾತ್ರ ನೇರವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಪ್ರಸ್ತುತ ಗ್ರೂಪ್ ‘ಎ’ ಪಾಯಿಂಟ್ಸ್ ಟೇಬಲ್‌ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ.

2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ!

Ireland vs India, 1st T20I: ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲೇ ಐರ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 18.5 ಓವರ್​ಗಳಲ್ಲಿ 148 ರನ್​ಗಳಿಸಿ ಆಲೌಟ್ ಆಗುವ ಮೂಲಕ 34 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಖಡಕ್ ಸೂಚನೆ..!

Ireland vs India, 1st T20I: ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲೇ ಐರ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು 18.5 ಓವರ್​ಗಳಲ್ಲಿ 148 ರನ್​ಗಳಿಸಿ ಆಲೌಟ್ ಆಗುವ ಮೂಲಕ 34 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

‘ವೈಭವ್​ನ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ’; ರಾಹುಲ್ ದ್ರಾವಿಡ್

Rahul Dravid on Vaibhav Sooryavanshi: ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ರಾಹುಲ್ ದ್ರಾವಿಡ್ ವೈಭವ್‌ರನ್ನು ರಕ್ಷಿಸಲು ಮತ್ತು ಮುಕ್ತವಾಗಿ ಆಡಲು ಅವಕಾಶ ನೀಡಲು ಸಲಹೆ ನೀಡಿದ್ದಾರೆ. ಆದಾಗ್ಯೂ, ಐರ್ಲೆಂಡ್ ಅಥವಾ ಇಂಗ್ಲೆಂಡ್ ಸರಣಿಯಲ್ಲಿ ಅವರಿಗೆ ಪ್ಲೇಯಿಂಗ್ 11 ರಲ್ಲಿ ಸ್ಥಾನ ಸಿಗುವುದು ಸವಾಲಾಗಿದೆ. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರಂತಹ ಪ್ರಬಲ ಸ್ಪರ್ಧಿಗಳ ನಡುವೆ ವೈಭವ್ ಅವಕಾಶಕ್ಕಾಗಿ ಕಾಯಬೇಕಾಗಿದೆ.

ಭಾರತ- ಐರ್ಲೆಂಡ್ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

India vs Ireland 1st T20: ಭಾರತ ತಂಡ ಐರ್ಲೆಂಡ್ ಪ್ರವಾಸದಲ್ಲಿದ್ದು, ಜೂನ್ 26 ರಿಂದ ಟಿ20 ಸರಣಿ ಆರಂಭವಾಗಲಿದೆ. ನಾಯಕ ಶ್ರೇಯಸ್ ಅಯ್ಯರ್ ಸರಣಿ ಗೆಲ್ಲುವ ಇರಾದೆಯಲ್ಲಿದ್ದಾರೆ. ಐರ್ಲೆಂಡ್ ವಿರುದ್ಧ ಭಾರತ ಅಜೇಯ ದಾಖಲೆ ಹೊಂದಿದೆ. ಮೊದಲ ಟಿ20 ಬೆಲ್‌ಫಾಸ್ಟ್‌ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದ್ದು, ಸೋನಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ.

IND vs IRE: ಐರ್ಲೆಂಡ್​ನಲ್ಲೂ ವೈಭವ್ ಕ್ರೇಜ್; ಕ್ರೀಡಾಂಗಣದಲ್ಲಿ ಆಸನಗಳ ಹೆಚ್ಚಳ

India vs Ireland T20: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿ ಜೂನ್ 26 ಮತ್ತು 28 ರಂದು ಬೆಲ್‌ಫಾಸ್ಟ್‌ನಲ್ಲಿ ನಡೆಯಲಿದೆ. ವೈಭವ್ ಸೂರ್ಯವಂಶಿ ಅವರ ಚೊಚ್ಚಲ ಅಂತರರಾಷ್ಟ್ರೀಯ ಪಂದ್ಯದ ನಿರೀಕ್ಷೆ ಹೆಚ್ಚಾಗಿದೆ. ಐರ್ಲೆಂಡ್‌ನಲ್ಲಿ ವೈಭವ್ ಅವರ ಕ್ರೇಜ್‌ನಿಂದಾಗಿ, ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಆಸನ ಸಾಮರ್ಥ್ಯವನ್ನು 4,500 ರಿಂದ 7,000 ಕ್ಕೆ ಹೆಚ್ಚಿಸಲಾಗಿದೆ. ಆದರೂ, ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಗುವುದೇ ಎಂಬುದು ಕುತೂಹಲಕಾರಿಯಾಗಿದೆ.

IND vs IRE: ಭಾರತ-ಐರ್ಲೆಂಡ್ ನಡುವಿನ ಟಿ20 ಸರಣಿಯ ಸಮಯ ಬದಲಾವಣೆ

India vs Ireland T20 Series: ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡು ಪಂದ್ಯಗಳ T20 ಸರಣಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅಖಾಡಕ್ಕಿಳಿಯಲಿದೆ. ಮಹಿಳಾ T20 ವಿಶ್ವಕಪ್ ಕಾರಣದಿಂದ ಪಂದ್ಯಗಳ ಆರಂಭಿಕ ಸಮಯವನ್ನು ಸಂಜೆ 7 ರಿಂದ 6 ಗಂಟೆಗೆ ಬದಲಾಯಿಸಲಾಗಿದೆ. ಜೂನ್ 26 ಮತ್ತು 28 ರಂದು ಪಂದ್ಯಗಳು ನಡೆಯಲಿವೆ.

ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ