AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ಇದೇ ಕಾರಣಕ್ಕೆ ವೈಭವ್​ಗೆ ಅವಕಾಶ ನೀಡಲಿಲ್ಲ; ಗೌತಮ್ ಗಂಭೀರ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಅವಕಾಶ ಸಿಗದಿರಲು ಕೋಚ್ ಗೌತಮ್ ಗಂಭೀರ್ ಕಾರಣ ನೀಡಿದ್ದಾರೆ. ಟಿ20 ವಿಶ್ವಕಪ್ ತಂಡದ ಸಮತೋಲನ ಮುಖ್ಯವಾಗಿದ್ದು, ಸಂಜು ಸ್ಯಾಮ್ಸನ್ ಅವರ ಸಾಮರ್ಥ್ಯ ಮತ್ತು ಸ್ಥಿರ ಪ್ರದರ್ಶನಕ್ಕೆ ಆದ್ಯತೆ ನೀಡಲಾಗಿದೆ. ಸೂರ್ಯವಂಶಿ ಪ್ರತಿಭಾವಂತ ಆಟಗಾರನಾದರೂ, ಸದ್ಯ ತಾಳ್ಮೆಯಿಂದ ಕಾಯಬೇಕಿದ್ದು, ಭವಿಷ್ಯದಲ್ಲಿ ಅವಕಾಶಗಳು ಸಿಗಲಿವೆ ಎಂದು ಗಂಭೀರ್ ಸ್ಪಷ್ಟಪಡಿಸಿದ್ದಾರೆ.

11 ಸಿಕ್ಸರ್, 9 ಬೌಂಡರಿ.. ಅತಿ ವೇಗದ ಶತಕ ಬಾರಿಸಿದ ಅಭಿಷೇಕ್ ಶರ್ಮಾ..!

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ, ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಇದು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯತ್ವ ಪಡೆದ ದೇಶದ ಆಟಗಾರನಿಂದ ದಾಖಲಾದ ಅತಿ ವೇಗದ ಶತಕವಾಗಿದೆ. ಅವರು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಅವರ 31 ಎಸೆತಗಳ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಐತಿಹಾಸಿಕ ಸಾಧನೆ ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ.

10 ಸಿಕ್ಸ್, 8 ಬೌಂಡರಿ ..ಪವರ್​ಪ್ಲೇನಲ್ಲಿ ದಾಖಲೆಯ ರನ್ ಕಲೆಹಾಕಿದ ಟೀಂ ಇಂಡಿಯಾ..!

ದೆಹಲಿಯಲ್ಲಿ ಭಾರತ-ಅಫ್ಘಾನಿಸ್ತಾನ T20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಶತಕ ಹಾಗೂ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 100 ರನ್‌ ಸೇರಿಸಿ, ಕೇವಲ 6 ಓವರ್‌ಗಳಲ್ಲಿ ಟೀಂ ಇಂಡಿಯಾವನ್ನು 100 ರನ್ ಗಡಿ ದಾಟಿಸಿತು. ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ಪವರ್‌ಪ್ಲೇನಲ್ಲಿ ಇದು ಹೊಸ ದಾಖಲೆಯಾಗಿದೆ, ಇವರಿಬ್ಬರ ಆಕ್ರಮಣಕಾರಿ ಆಟ ಭಾರತಕ್ಕೆ ಭರ್ಜರಿ ಆರಂಭ ನೀಡಿತು.

ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌; ಈ ಪಂದ್ಯದಲ್ಲೂ ವೈಭವ್​ಗೆ ಸಿಗಲಿಲ್ಲ ಅವಕಾಶ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3ನೇ ಹಾಗೂ ಅಂತಿಮ T20 ಪಂದ್ಯ ನವದೆಹಲಿಯಲ್ಲಿ ನಡೆಯುತ್ತಿದೆ. ಸರಣಿ ಈಗಾಗಲೇ ಗೆದ್ದಿರುವ ಭಾರತ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕ್ಲೀನ್ ಸ್ವೀಪ್ ಸಾಧಿಸುವ ಗುರಿ ಹೊಂದಿದೆ. ಟಾಸ್ ಗೆದ್ದ ಅಫ್ಘಾನಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ. ಯಶ್ ಠಾಕೂರ್ ಆಡುವ ಹನ್ನೊಂದರ ಬಳಗ ಸೇರಿದ್ದು, ಪಂದ್ಯ ರೋಚಕವಾಗುವ ನಿರೀಕ್ಷೆಯಿದೆ.

ಏಷ್ಯನ್ ಗೇಮ್ಸ್​ಗೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ

2026 ರ ಏಷ್ಯನ್ ಗೇಮ್ಸ್ ಭಾರತ ಕ್ರಿಕೆಟ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಗಾಯದ ಕಾರಣ ಸ್ಪಿನ್ನರ್ ವರುಣ್ ಚಕ್ರವರ್ತಿ ಹೊರಗುಳಿದಿದ್ದು, ಅವರ ಬದಲಿಗೆ ವಿಪ್ರಜ್ ನಿಗಮ್‌ಗೆ ಅವಕಾಶ ನೀಡಲಾಗಿದೆ. ಅಫ್ಘಾನಿಸ್ತಾನ ಸರಣಿಯಲ್ಲಿ ಗಾಯಗೊಂಡ ವರುಣ್, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್ ನಂತರವೂ ಫಿಟ್ ಆಗಿರಲಿಲ್ಲ. ಉತ್ತಮ ಪ್ರದರ್ಶನ ನೀಡುತ್ತಿರುವ ವಿಪ್ರಜ್‌ಗೆ ಈ ಬಹುದೊಡ್ಡ ಅವಕಾಶ ಲಭಿಸಿದೆ.

3ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ; ವೈಭವ್​ಗೆ ಸಿಗುತ್ತಾ ಅವಕಾಶ?

ಭಾರತ vs ಅಫ್ಘಾನಿಸ್ತಾನ ಮೂರನೇ T20 ಪಂದ್ಯ ಇಂದು ನಡೆಯಲಿದೆ. ಸರಣಿಯನ್ನು ಈಗಾಗಲೇ ಗೆದ್ದಿರುವ ಭಾರತ, ವೈಟ್‌ವಾಶ್ ಸಾಧಿಸಲು ಸಜ್ಜಾಗಿದೆ. ನಾಯಕ ಶ್ರೇಯಸ್ ಅಯ್ಯರ್ ತಂಡದಲ್ಲಿ ಬದಲಾವಣೆಗಳನ್ನು ಸೂಚಿಸಿದ್ದು, ವೈಭವ್ ಸೂರ್ಯವಂಶಿ, ವಾಷಿಂಗ್ಟನ್ ಸುಂದರ್ ಮತ್ತು ಯಶ್ ಠಾಕೂರ್‌ಗೆ ಅಂತಿಮ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಭಾರತದ ಅಂತಿಮ ಪ್ಲೇಯಿಂಗ್ XI ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

42 ಪಂದ್ಯಗಳಲ್ಲಿ 13 ಶತಕ.. ಹಾಗಿದ್ದರೂ ದೇವದತ್ ಪಡಿಕ್ಕಲ್​ಗಿಲ್ಲ ಸ್ಥಾನ..! ಕಾರಣ ಇಲ್ಲಿದೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ಈ ಆಯ್ಕೆಯಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಕಡೆಗಣಿಸಿ, ರುತುರಾಜ್ ಗಾಯಕ್ವಾಡ್ ಅವರಿಗೆ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಅಸಾಮಾನ್ಯ ದಾಖಲೆಗಳ ಹೊರತಾಗಿಯೂ ಪಡಿಕ್ಕಲ್ ಅವರನ್ನು ಏಕೆ ಆಯ್ಕೆ ಮಾಡಿಲ್ಲ? ಗಾಯಕ್ವಾಡ್ ಆಯ್ಕೆಗೆ ಆಯ್ಕೆ ಸಮಿತಿ ನೀಡಿದ ಕಾರಣಗಳು ಇಲ್ಲಿವೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್-ವಿರಾಟ್ ಕೊಹ್ಲಿ ವಾಪಸ್

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಗೆ ಬಿಸಿಸಿಐ, 15 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಎರಡು ತಿಂಗಳ ವಿರಾಮದ ಬಳಿಕ ಹಿರಿಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ತಂಡಕ್ಕೆ ವಾಪಸ್ ಆಗಿದ್ದಾರೆ. ಹಾಗಾದ್ರೆ, 15ರ ಬಳಗದಲ್ಲಿ ಯಾರೆಲ್ಲಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

2ನೇ ಎಸೆತದಲ್ಲೇ ವಿಕೆಟ್ ಉರುಳಿಸಿ ವಿಶೇಷ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಭಾರತ-ಅಫ್ಘಾನಿಸ್ತಾನ ಮೊದಲ T20 ಪಂದ್ಯದಲ್ಲಿ ಅಫ್ಘಾನಿಸ್ತಾನ 157 ರನ್ ಗಳಿಸಿತು. ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ತಮ್ಮ 350ನೇ T20 ವಿಕೆಟ್ ಪಡೆದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದರು. ಈ ಸಾಧನೆಯೊಂದಿಗೆ, ಅವರು ಯಜುವೇಂದ್ರ ಚಾಹಲ್ ಮತ್ತು ಭುವನೇಶ್ವರ್ ಕುಮಾರ್ ನಂತರ T20 ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳನ್ನು ಪಡೆದ ಮೂರನೇ ಭಾರತೀಯ ಬೌಲರ್ ಎನಿಸಿಕೊಂಡರು. ಭಾರತೀಯ ಬೌಲರ್‌ಗಳ ಅಗ್ರಸ್ಥಾನದಲ್ಲಿ ಚಾಹಲ್ ಇದ್ದಾರೆ.

ದೆಹಲಿ ಮೈದಾನದಲ್ಲಿ ಟೀಂ ಇಂಡಿಯಾ ಎಚ್ಚರ ತಪ್ಪಿದರೆ ಸೋಲು ಖಚಿತ..!

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ T20 ಸರಣಿ ಇಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾ ತವರಿನಲ್ಲಿ ಪ್ರವಾಸಿ ತಂಡವಾಗಿ ಆಡುತ್ತಿದ್ದರೂ, ಮೈದಾನದ ಪರಿಚಯ ಲಾಭ ನೀಡಲಿದೆ. ಆದರೆ, ಕ್ರೀಡಾಂಗಣದಲ್ಲಿ ಭಾರತದ ಹಿಂದಿನ T20 ಪ್ರದರ್ಶನ ಅಷ್ಟೇನೂ ಉತ್ತಮವಾಗಿಲ್ಲ, ಎಚ್ಚರಿಕೆ ಅಗತ್ಯ. ಪಿಚ್ ಮೊದಲು ಬೌಲಿಂಗ್ ಮಾಡುವ ತಂಡಗಳಿಗೆ ಹೆಚ್ಚು ಸಹಕಾರಿಯಾಗಲಿದೆ.

ಏಷ್ಯನ್ ಗೇಮ್ಸ್​: ಟೀಮ್ ಇಂಡಿಯಾ ಪಂದ್ಯಗಳ ಸಮಯ ಬದಲಾವಣೆ

ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಜಪಾನ್‌ನ ಹವಾಮಾನ ಮತ್ತು ಮಂದಬೆಳಕಿನ ಸವಾಲನ್ನು ಎದುರಿಸಲು ಏಷ್ಯನ್ ಗೇಮ್ಸ್​ ಆಯೋಜಕರು ಪಂದ್ಯದ ಸಮಯವನ್ನು ರೀ-ಶೆಡ್ಯೂಲ್ ಮಾಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪಂದ್ಯಗಳು ಬೇಗನೆ ಶುರುವಾಗಲಿದೆ.

ವಿಶಿಷ್ಟ ನಾಯಕತ್ವದ ಸೀಕ್ರೆಟ್ ಬಿಚ್ಚಿಟ್ಟ ಶ್ರೇಯಸ್ ಅಯ್ಯರ್!

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 13, 2026 ರಿಂದ ಆರಂಭವಾಗಲಿದೆ. ಈ ಸರಣಿಯ ದ್ವಿತೀಯ ಪಂದ್ಯ ಸೆಪ್ಟೆಂಬರ್ 15 ರಂದು ಹಾಗೂ ತೃತೀಯ ಪಂದ್ಯ ಸೆಪ್ಟೆಂಬರ್ 17 ರಂದು ಜರುಗಲಿದೆ. ಇನ್ನು ಈ ಸರಣಿಯ ಎಲ್ಲಾ ಪಂದ್ಯಗಳಿಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಸಿಎಂ ಡಿಕೆ ಶಿವಕುಮಾರ್ ಮಂಗಳೂರು ಮೀನುಗಾರಿಕೆ ಬಂದರಿಗೆ ದಿಢೀರ್ ಭೇಟಿ
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​