AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ನಾನು ಫಾರ್ಮ್​ ಕಳೆದುಕೊಂಡಿಲ್ಲ, ರನ್​ ಗಳಿಸುತ್ತಿಲ್ಲ ಅಷ್ಟೇ..!

Suryakumar Yadav: ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದಾರೆ. ಇದಕ್ಕೆ ಸಾಕ್ಷಿ ಅವರು ಕಳೆದ 20 ಇನಿಂಗ್ಸ್​ಗಳಿಂದ ಕಲೆಹಾಕಿರುವುದು ಕೇವಲ 218 ರನ್​ಗಳು ಮಾತ್ರ. ಅದರಲ್ಲೂ 2025 ರಲ್ಲಿ ಟೀಮ್ ಇಂಡಿಯಾ ನಾಯಕನ ಬ್ಯಾಟ್​ನಿಂದ ಒಂದೇ ಒಂದು ಅರ್ಧಶತಕ ಮೂಡಿಬಂದಿಲ್ಲ. ಹೀಗಾಗಿಯೇ ಇದೀಗ ಸೂರ್ಯಕುಮಾರ್ ಯಾದವ್ ಅವರ ಫಾರ್ಮ್​ ಬಗ್ಗೆ ಪ್ರಶ್ನೆಗಳೆದ್ದಿವೆ.

ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

India vs South Africa: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 117 ರನ್​ಗಳಿಸಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 15.5 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಅಭಿಷೇಕ್ ಶರ್ಮಾ ಆರ್ಭಟ… ಮತ್ತೊಂದು ವಿಶ್ವ ದಾಖಲೆ ನಿರ್ಮಾಣ

Abhishek Sharma Records: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ 3 ಭರ್ಜರಿ ಸಿಕ್ಸರ್​​ಗಳೊಂದಿಗೆ 35 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

Vaibhav Suryavanshi: ಯುಎಇ ವಿರುದ್ಧದ ಕಳೆದ ಪಂದ್ಯದಲ್ಲಿ 171 ರನ್ ಬಾರಿಸಿದ್ದ ವೈಭವ್ ಸೂರ್ಯವಂಶಿಯನ್ನು ಸಯ್ಯಮ್ ಕೇವಲ 5 ರನ್​​ಗೆ ಔಟ್ ಮಾಡಿದ್ದಾರೆ. 6 ಎಸೆತಗಳನ್ನು ಎದುರಿಸಿದ ವೈಭವ್ ಸುಲಭ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ದಾರೆ. ಇದಕ್ಕೂ ಮುನ್ನ  ನಡೆದ ಎಮರ್ಜಿಂಗ್ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ವೈಭವ್ 45 ರನ್​ ಮಾತ್ರ ಕಲೆಹಾಕಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿತ್ತು.

ಸೂಪರ್ ಸಂಡೆ: ಟೀಮ್ ಇಂಡಿಯಾಗೆ ಇಂದು ಎರಡು ಪಂದ್ಯಗಳು

ಡಿಸೆಂಬರ್ 14 ರಂದು ಎರಡು ಬಿಗ್ ಮ್ಯಾಚ್​ಗಳು ನಡೆಯಲಿವೆ. ಒಂದು ಭಾರತ ಮತ್ತು ಪಾಕಿಸ್ತಾನ್ ನಡುವೆಯಾದರೆ, ಮತ್ತೊಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ದುಬೈ ಆತಿಥ್ಯವಹಿಸಿದರೆ, ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮ್ಯಾಚ್ ಧರ್ಮಶಾಲಾದಲ್ಲಿ ಜರುಗಲಿದೆ.

ಹೀಗಾದ್ರೆ ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ..!

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಐದು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಮ್ಯಾಚ್ ನಲ್ಲಿ ಸೌತ್ ಆಫ್ರಿಕಾ ತಂಡ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs SA: 3ನೇ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ

India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ.

ಭಾರತ vs ಸೌತ್ ಆಫ್ರಿಕಾ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ.

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್

India U19 vs United Arab Emirates U19: ಅಂಡರ್-19 ಏಷ್ಯಾಕಪ್​ ಟೂರ್ನಿಯ ಮೊದಲ ಪಂದ್ಯದಲ್ಲೇ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಭಾರತ ತಂಡ 50 ಓವರ್​​ಗಳಲ್ಲಿ 433 ರನ್​​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 234 ರನ್​​ಗಳ ಭರ್ಜರಿ ಜಯ ಸಾಧಿಸಿದೆ.

IND vs SA: ನಾಲಾಯಕ್ ನಾಯಕ, ಉಪನಾಯಕ; ಭಾರತ ಟಿ20 ತಂಡದಲ್ಲಿರುವುದು 9 ಆಟಗಾರರಷ್ಟೆ

Team India T20: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸೋಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಶುಭ್​ಮನ್ ಗಿಲ್ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ. ನಾಯಕ ಸೂರ್ಯಕುಮಾರ್ ಕಳೆದ 20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿಲ್ಲ, ಗಿಲ್ ಸಹ T20ಯಲ್ಲಿ ನಿರಂತರವಾಗಿ ವಿಫಲರಾಗಿದ್ದಾರೆ. ಇವರ ಕಳಪೆ ಫಾರ್ಮ್ ಮುಂಬರುವ ಟಿ20 ವಿಶ್ವಕಪ್‌ಗೆ ತಂಡದ ಸಿದ್ಧತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪ್ರತಿಭಾವಂತರಿಗೆ ಅವಕಾಶ ಸಿಗದಿರುವುದು ಆತಂಕಕಾರಿ ಸಂಗತಿಯಾಗಿದೆ.

IND vs SA: 7 ಕ್ಕೆ ಏಳರಲ್ಲೂ ಸೋಲು; ಗುರಿ ದೊಡ್ಡದಿದ್ದರೆ ಟೀಂ ಇಂಡಿಯಾಗೆ ನಡುಕ

India vs South Africa T20: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ T20ಯಲ್ಲಿ ಟೀಂ ಇಂಡಿಯಾ 51 ರನ್‌ಗಳ ಭಾರಿ ಸೋಲು ಕಂಡಿದೆ. 213 ರನ್‌ಗಳ ದೊಡ್ಡ ಗುರಿ ಬೆನ್ನಟ್ಟುವಲ್ಲಿ ಭಾರತ ವಿಫಲವಾಯಿತು. 200+ ಗುರಿಗಳ ಮುಂದೆ ತಂಡ ನಡುಗುತ್ತದೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಬುಮ್ರಾ ಮತ್ತು ಅರ್ಷದೀಪ್ ದುಬಾರಿಯಾಗಿದ್ದು ಸೋಲಿಗೆ ಕಾರಣವಾಯಿತು. ಈ ಗೆಲುವಿನೊಂದಿಗೆ ಆಫ್ರಿಕಾ ಭಾರತದ ವಿರುದ್ಧ ಅತಿ ಹೆಚ್ಚು T20 ಗೆದ್ದ ದಾಖಲೆ ನಿರ್ಮಿಸಿದೆ.

ಭಾರತದ ಕ್ರಿಕೆಟಿಗರಿಗೆ ದುಶ್ಚಟಗಳು ಹೆಚ್ಚು; ಜಡೇಜಾ ಪತ್ನಿ ಶಾಕಿಂಗ್ ಹೇಳಿಕೆ

ಭಾರತದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಗುಜರಾತ್ ಸಚಿವೆಯೂ ಆಗಿರುವ ರಿವಾಬಾ ಜಡೇಜಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ಕ್ರಿಕೆಟಿಗರು ವಿದೇಶದ ಪ್ರವಾಸದಲ್ಲಿದ್ದಾಗ ದುಶ್ಚಟಗಳಲ್ಲಿ ತೊಡಗುತ್ತಾರೆ ಎಂದು ಹೇಳಿದ್ದಾರೆ. ಆದರೆ, ತನ್ನ ಪತಿಗೆ ಈ ವಿಷಯದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ಜನವರಿ 11ರಿಂದ ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೂಲಕ ರವೀಂದ್ರ ಜಡೇಜಾ ಮತ್ತೆ ಆಟಕ್ಕೆ ಮರಳಲಿದ್ದಾರೆ.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?