AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ICC Awards: ಐಸಿಸಿ ಪ್ರಶಸ್ತಿಗೆ ಬುಮ್ರಾ, ಸ್ಯಾಮ್ಸನ್ ನಡುವೆ ಪೈಪೋಟಿ

ICC Player of the Month March: ಐಸಿಸಿ ಮಾರ್ಚ್ ತಿಂಗಳ ಆಟಗಾರ ಪ್ರಶಸ್ತಿಗೆ ಭಾರತದ ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ನಾಮನಿರ್ದೇಶನಗೊಂಡಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಕಾರಣ ಇಬ್ಬರೂ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಕಾನರ್ ಈಸ್ಟರ್‌ಹ್ಯೂಗೆನ್ ಸಹ ಈ ಪಟ್ಟಿಯಲ್ಲಿದ್ದಾರೆ. 2025ರ ಟಿ20 ವಿಶ್ವಕಪ್‌ನಲ್ಲಿ ಸ್ಯಾಮ್ಸನ್ 'ಟೂರ್ನಮೆಂಟ್ ಆಟಗಾರ' ಆಗಿದ್ದರೆ, ಬುಮ್ರಾ 14 ವಿಕೆಟ್ ಪಡೆದು ಮಿಂಚಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನದಿಂದ ಈ ಪ್ರಶಸ್ತಿ ಗೆಲ್ಲುವ ಸಾಧ್ಯತೆ ಇದೆ.

ಟೆಸ್ಟ್ ಕ್ರಿಕೆಟ್​ಗೆ ಹೊಸ ಕಾಯಕಲ್ಪ: ಬಿಸಿಸಿಐ ಭರ್ಜರಿ ಪ್ಲ್ಯಾನ್

Team India: ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ಟೆಸ್ಟ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಇದಕ್ಕೆ ಮುಖ್ಯ ಕಾರಣ ಅನುಭವದ ಕೊರತೆ ಎನ್ನಲಾಗಿದೆ. ಈ ಕೊರತೆಯನ್ನು ನೀಗಿಸಲು ಇದೀಗ ಬಿಸಿಸಿಐ ರೆಡ್ ಬಾಲ್ ಕ್ರಿಕೆಟ್‌ಗೆ ಒತ್ತು ನೀಡಲು ಐಪಿಎಲ್ ನಂತರ 64 ಆಟಗಾರರ ವಿಶೇಷ ಟೂರ್ನಿಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಿದೆ.

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

India vs Bangladesh Series: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ಸೆಪ್ಟೆಂಬರ್​ನಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಸರಣಿಯಲ್ಲಿ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ. ಬಿಸಿಸಿಐ ಈ ಪ್ರವಾಸಕ್ಕೆ ಭಾರತ ಸರ್ಕಾರದ ಅಂತಿಮ ಅನುಮತಿಯನ್ನು ಎದುರು ನೋಡುತ್ತಿದ್ದು, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟವಾಗಲಿದೆ.

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

India vs Zimbabwe T20I Schedule: ಭಾರತೀಯ ಕ್ರಿಕೆಟ್ ತಂಡವನ್ನು ಒಳಗೊಂಡ ಮತ್ತೊಂದು ಸರಣಿಯನ್ನು ಬಿಸಿಸಿಐ ಘೋಷಿಸಿದೆ. ಸರಣಿಯ ದಿನಾಂಕಗಳು ಮತ್ತು ಸ್ಥಳಗಳನ್ನು ಪ್ರಕಟಿಸಲಾಗಿದೆ. ಈ ಸರಣಿಯು ಜುಲೈನಲ್ಲಿ ನಡೆಯಲಿದ್ದು, ಜಿಂಬಾಬ್ವೆ ವಿರುದ್ಧ ಮೂರು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಒಳಗೊಂಡಿರುತ್ತದೆ. ಈ ಸರಣಿಯಲ್ಲಿ ಯುವ ಮತ್ತು ಉದಯೋನ್ಮುಖ ಭಾರತೀಯ ಆಟಗಾರರಿಗೆ ಅವಕಾಶಗಳನ್ನು ನೀಡಬಹುದು.

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

Dinesh Karthik coach: ಜಿತೇಶ್ ಶರ್ಮಾ ಅವರ ಹೇಳಿಕೆಯಂತೆ, ದಿನೇಶ್ ಕಾರ್ತಿಕ್ ಭವಿಷ್ಯದಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗುವ ಎಲ್ಲ ಸಾಧ್ಯತೆಗಳಿವೆ. ಭಾರತ ತಂಡಕ್ಕೆ ಕೋಚ್ ಆಗದಿದ್ದರೂ, ಅವರ ಅಪಾರ ಅನುಭವ ಮತ್ತು ಕ್ರಿಕೆಟ್ ಜ್ಞಾನ ಬೇರೊಂದು ಪ್ರಮುಖ ದೇಶದ ತಂಡಕ್ಕೆ ಮುಖ್ಯ ಕೋಚ್ ಆಗಿ ಮಾರ್ಗದರ್ಶನ ನೀಡಲು ಸಮರ್ಥವಾಗಿದೆ. ಆರ್‌ಸಿಬಿ ಮತ್ತು ಲಂಡನ್ ಸ್ಪಿರಿಟ್‌ನಲ್ಲಿನ ಅವರ ಯಶಸ್ವಿ ಪಾತ್ರ ಇದಕ್ಕೆ ಸಾಕ್ಷಿ. ಹೀಗಾಗಿ, ಡಿಕೆ ಈ ಜವಾಬ್ದಾರಿಗೆ ಸಂಪೂರ್ಣ ಯೋಗ್ಯ ಅಭ್ಯರ್ಥಿ.

17 ನಗರ, 22 ಪಂದ್ಯಗಳು; ಟೀಂ ಇಂಡಿಯಾದ ತವರು ಸರಣಿಗಳ ವೇಳಾಪಟ್ಟಿ ಪ್ರಕಟ

BCCI Unveils India's 2026-27 Home Cricket Schedule: ಬಿಸಿಸಿಐ 2026-27ರ ಭಾರತ ಪುರುಷರ ತಂಡದ ತವರು ಅಂತರರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೆಸ್ಟ್ ಇಂಡೀಸ್, ಶ್ರೀಲಂಕಾ, ಜಿಂಬಾಬ್ವೆ ಮತ್ತು ಆಸ್ಟ್ರೇಲಿಯಾ ತಂಡಗಳು ಭಾರತಕ್ಕೆ ಪ್ರವಾಸ ಕೈಗೊಳ್ಳಲಿವೆ. 17 ನಗರಗಳಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಗಳು ಸೇರಿವೆ. ಸೆಪ್ಟೆಂಬರ್ 2026 ರಿಂದ ಜನವರಿ 2027 ರವರೆಗೆ ಈ ಸರಣಿಗಳು ನಡೆಯಲಿವೆ.

IND vs IRE: ಭಾರತ- ಐರ್ಲೆಂಡ್ ನಡುವೆ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

India Cricket Schedule Post-IPL 2026: ಬಿಸಿಸಿಐ 2026ರ ಐಪಿಎಲ್ ನಂತರದ ಟೀಂ ಇಂಡಿಯಾ ವೇಳಾಪಟ್ಟಿ ಪ್ರಕಟಿಸಿದೆ. ಅಫ್ಘಾನಿಸ್ತಾನ, ಐರ್ಲೆಂಡ್ (ಜೂನ್ 26, 28, ಬೆಲ್‌ಫಾಸ್ಟ್), ಇಂಗ್ಲೆಂಡ್ ಸರಣಿಗಳು ನಿಗದಿಯಾಗಿವೆ. ರೋಹಿತ್, ವಿರಾಟ್ ಐರ್ಲೆಂಡ್ ಟಿ20 ಸರಣಿಯಲ್ಲಿ ಇರುವುದಿಲ್ಲ, ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಐಪಿಎಲ್ ಪ್ರದರ್ಶನ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಹಾರ್ದಿಕ್ ಅಥವಾ ಸೂರ್ಯಕುಮಾರ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

2027 ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

India's 2027 ODI World Cup Squad: ಟಿ20 ವಿಶ್ವಕಪ್ ನಂತರ ಟೀಂ ಇಂಡಿಯಾ 2027ರ ಏಕದಿನ ವಿಶ್ವಕಪ್‌ಗೆ ಸಿದ್ಧತೆ ಆರಂಭಿಸಿದೆ. ಐಪಿಎಲ್‌ಗೂ ಮುನ್ನವೇ ಆಯ್ಕೆ ಸಮಿತಿ 20 ಆಟಗಾರರ ಕಿರುಪಟ್ಟಿಯನ್ನು ಸಿದ್ಧಪಡಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ, ಜಸ್ಪ್ರಿತ್ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರು ಈ ಪಟ್ಟಿಯಲ್ಲಿದ್ದಾರೆ. ಇದು ತಂಡದ ಮುಂದಿನ ವಿಶ್ವಕಪ್ ಗೆಲುವಿನ ಗಂಭೀರ ಗುರಿಯನ್ನು ಎತ್ತಿ ತೋರಿಸುತ್ತದೆ.

ಬಿಸಿಸಿಐ ಮೇಲೆ ವರ್ಣ ತಾರತಮ್ಯ ಆರೋಪ; ಕಾಮೆಂಟ್ರಿಗೆ ಶಿವರಾಮಕೃಷ್ಣನ್ ವಿದಾಯ

BCCI Racial Discrimination Row: ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಸಿಸಿಐನ ಕಾಮೆಂಟರಿ ಪ್ಯಾನಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ 2026 ಆರಂಭಕ್ಕೆ ಮುನ್ನ ಈ ನಿರ್ಧಾರ ಪ್ರಕಟಿಸಿದ್ದು, ತಮ್ಮನ್ನು ವರ್ಣ ತಾರತಮ್ಯದ ಆಧಾರದಲ್ಲಿ ಕಡೆಗಣಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಂದ್ಯ ಪ್ರಸ್ತುತಿ ಮತ್ತು ಟಾಸ್ ವರದಿ ಮಾಡುವ ಅವಕಾಶ ನನಗೆ ನೀಡಲಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.

ಐಪಿಎಲ್ ಮುಗಿದ ಕೂಡಲೇ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

India T20 schedule 2026: ಐಪಿಎಲ್ ಮುಗಿದ ಬಳಿಕ ಟೀಂ ಇಂಡಿಯಾ ಬ್ಯುಸಿಯಾಗಿರಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧ 3 ಟಿ20 ಪಂದ್ಯಗಳನ್ನು ಆಡಲಿದೆ. ಆ ಬಳಿಕ ಇಂಗ್ಲೆಂಡ್ ಪ್ರವಾಸ ಕೈಗೊಂಡು 5 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲಿದೆ. ಈ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

India's 2027 ODI World Cup Squad: ಕಳೆದ ಮೂರು ಐಸಿಸಿ ಟ್ರೋಫಿ ಗೆದ್ದಿರುವ ಭಾರತ ತಂಡ, 2027ರ ಏಕದಿನ ವಿಶ್ವಕಪ್‌ಗಾಗಿ ಸಿದ್ಧತೆ ನಡೆಸಿದೆ. ಬಿಸಿಸಿಐ ಈಗಾಗಲೇ 20 ಆಟಗಾರರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮೀಬಿಯಾದಲ್ಲಿ ನಡೆಯಲಿರುವ ಈ ಟೂರ್ನಿಗೆ, ಆಯ್ಕೆ ಮಂಡಳಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ, ಐಪಿಎಲ್ ಸೇರಿದಂತೆ ವಿವಿಧ ಪಂದ್ಯಗಳಲ್ಲಿ ಈ ಆಟಗಾರರ ಪ್ರದರ್ಶನವನ್ನು ಸೂಕ್ಷ್ಮವಾಗಿ ಗಮನಿಸಲಾಗುವುದು. ಈ ಪಟ್ಟಿಯ ಹೊರಗಿನ ಆಟಗಾರರಿಗೆ ಅವಕಾಶ ಕಷ್ಟ.

ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

Team India: ಬಿಸಿಸಿಐ, ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ಅವರ ವಾರ್ಷಿಕ ವೇತನವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುತ್ತಿದೆ. ಇತ್ತೀಚೆಗೆ A+ ಗ್ರೇಡ್ ರದ್ದುಗೊಂಡಿದ್ದರಿಂದ ಬುಮ್ರಾ ವೇತನ ಕಡಿಮೆಯಾಗಿತ್ತು. ಅಕ್ಷರ್ ತಮ್ಮ ಉತ್ತಮ ಪ್ರದರ್ಶನಗಳ ಹೊರತಾಗಿಯೂ ಗ್ರೇಡ್ C ನಲ್ಲಿದ್ದಾರೆ. ಅವರ ಪ್ರದರ್ಶನಗಳನ್ನು ಗುರುತಿಸಿ, ಯುಗಾದಿ ಉಡುಗೊರೆಯಾಗಿ ವೇತನ ಹೆಚ್ಚಳದ ಸಾಧ್ಯತೆ ಇದೆ.

ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ