AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

IND vs SL: ನಾಯಕನಾಗಿ ವಿದೇಶಿ ನೆಲದಲ್ಲಿ ಮೊದಲ ಸರಣಿ ಗೆದ್ದ ಶುಭ್​ಮನ್ ಗಿಲ್

Shubman Gill captaincy: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದು ಗಿಲ್ ಅವರ ನಾಯಕತ್ವದಲ್ಲಿ ಭಾರತಕ್ಕೆ ದೊರೆತ ಮೊದಲ ವಿದೇಶಿ ಸರಣಿ ಜಯವಾಗಿದೆ. ಗಾಲೆಯಲ್ಲಿ ಮೊದಲ ಟೆಸ್ಟ್ ಗೆದ್ದು, ಕೊಲಂಬೊದಲ್ಲಿ ಎರಡನೇ ಟೆಸ್ಟ್ ಡ್ರಾಗೊಂಡರೂ, ಅಜೇಯ ಓಟ ಮುಂದುವರೆಯಿತು. ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ.

IND vs SL: ಕೊಲಂಬೊ ಟೆಸ್ಟ್ ಡ್ರಾನಲ್ಲಿ ಅಂತ್ಯವಾಗಲು ಕಾರಣ ತಿಳಿಸಿದ ಗಿಲ್

Shubman Gill on India's Draw vs Sri Lanka: ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾನಲ್ಲಿ ಅಂತ್ಯಗೊಂಡಿದೆ. ಗೆಲ್ಲಬೇಕಿದ್ದ ಪಂದ್ಯ ಕೈತಪ್ಪಿದ್ದರಿಂದ WTC ಫೈನಲ್ ರೇಸ್‌ನಲ್ಲಿ ಭಾರತಕ್ಕೆ ಹಿನ್ನಡೆಯಾಗಿದೆ. ಎದುರಾಳಿಗಳ ಉತ್ತಮ ಪ್ರದರ್ಶನ ಮತ್ತು ಅವರ ಅದೃಷ್ಟ ಡ್ರಾಗೆ ಕಾರಣ ಎಂದು ನಾಯಕ ಶುಭ್​ಮನ್ ಗಿಲ್ ಹೇಳಿದ್ದಾರೆ. ಆದಾಗ್ಯೂ, ದೇವದತ್ ಪಡಿಕ್ಕಲ್, ಕೆಎಲ್ ರಾಹುಲ್ ಹಾಗೂ ಬೌಲರ್‌ಗಳ ಪ್ರದರ್ಶನ ಸಕಾರಾತ್ಮಕ ಅಂಶಗಳಾಗಿವೆ ಎಂದಿದ್ದಾರೆ.

ಕೊಲಂಬೊ ಟೆಸ್ಟ್ ಡ್ರಾ; ಡಬ್ಲ್ಯೂಟಿಸಿ ಫೈನಲ್​ ರೇಸ್​ನಲ್ಲಿ ಟೀಂ ಇಂಡಿಯಾಕ್ಕೆ ಹಿನ್ನಡೆ

India's WTC Final Path: ಕೊಲಂಬೊ ಟೆಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಡ್ರಾ ಸಾಧಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಕ್ಕೆ ದೊಡ್ಡ ಹಿನ್ನಡೆ ನೀಡಿದೆ. ಈ ಡ್ರಾ ಭಾರತವನ್ನು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಉಳಿಸಿದ್ದು, ಫೈನಲ್ ತಲುಪಲು ಉಳಿದಿರುವ ಬಹುತೇಕ ಎಲ್ಲಾ ಪಂದ್ಯಗಳನ್ನು ಗೆಲ್ಲುವುದು ಅನಿವಾರ್ಯವಾಗಿದೆ. ಮುಂಬರುವ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸರಣಿಗಳು ನಿರ್ಣಾಯಕವಾಗಲಿವೆ.

IND vs SL: ಅತಿ ಹೆಚ್ಚು ನೋ ಬಾಲ್; ಅನಗತ್ಯ ದಾಖಲೆ ಬರೆದ ಭಾರತದ ಸ್ಪಿನ್ನರ್​​ಗಳು

India vs Sri Lanka Test: ಭಾರತ-ಶ್ರೀಲಂಕಾ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಸ್ಪಿನ್ನರ್‌ಗಳ ಅತಿಯಾದ ನೋ ಬಾಲ್‌ಗಳು ಅನಗತ್ಯ ದಾಖಲೆ ಸೃಷ್ಟಿಸಿವೆ. ರವೀಂದ್ರ ಜಡೇಜಾ ಹಾಗೂ ಸರಾಂಶ್ ಜೈನ್ ಇಬ್ಬರು ಸೇರಿ ಸರಣಿಯ ಒಂದು ಪಂದ್ಯದಲ್ಲಿ 10 ನೋ ಬಾಲ್‌ಗಳನ್ನು ಎಸೆದಿದ್ದಾರೆ. ಇದು ಭಾರತಕ್ಕೆ ಮುಜುಗರ ತಂದಿದೆ. 2021 ರಿಂದ ಟೆಸ್ಟ್‌ನಲ್ಲಿ ಹೆಚ್ಚು ನೋ ಬಾಲ್ ಎಸೆದ ಸ್ಪಿನ್ನರ್ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.

ಮೂವರ ಕಂಬ್ಯಾಕ್; ಟೆಸ್ಟ್ ಸರಣಿ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ

Team India Boost: ಗಾಯದಿಂದ ಚೇತರಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಹರ್ಷಿತ್ ರಾಣಾ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್‌ನೆಸ್ ಮೇಲೆ ಕೆಲಸ ಮಾಡುತ್ತಿರುವ ಈ ಮೂವರು, ಮುಂಬರುವ ವೆಸ್ಟ್ ಇಂಡೀಸ್ ಸರಣಿ ಮತ್ತು ಏಷ್ಯನ್ ಗೇಮ್ಸ್‌ಗೆ ತಂಡಕ್ಕೆ ಬಲ ನೀಡಲಿದ್ದಾರೆ. ಇದು 2027ರ ವಿಶ್ವಕಪ್‌ಗೆ ತಂಡದ ಸಿದ್ಧತೆಗೆ ಮತ್ತಷ್ಟು ಬಲ ತುಂಬಲಿದೆ.

ಗೌತಮ್ ಗಂಭೀರ್ ನಿರ್ಧಾರಕ್ಕೆ ವಾಸಿಂ ಜಾಫರ್ ಅಸಮಾಧಾನ!

ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ಅಧಿಕಾರಾವಧಿಯು ಯಶಸ್ಸಿನ ಜೊತೆಯಲ್ಲೇ ಹಲವು ಚರ್ಚೆಗಳಿಗೂ ವೇದಿಕೆಯಾಗಿದೆ. ಇತ್ತೀಚೆಗೆ ಭಾರತ ತಂಡವು ಐಸಿಸಿ ಟ್ರೋಫಿಗಳನ್ನು ಗೆದ್ದು ಬೀಗುತ್ತಿದ್ದರೂ, ಗಂಭೀರ್ ಅವರ 'ಆಟಗಾರರ ನಿರ್ವಹಣೆ'ಯ ಶೈಲಿಯ ಬಗ್ಗೆ ಕ್ರಿಕೆಟ್ ವಲಯದಲ್ಲಿ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿವೆ.

IND vs SL: ಶ್ರೀಲಂಕಾ ಆಲೌಟ್: ಫಾಲೋಆನ್ ಹೇರಿದ ಟೀಮ್ ಇಂಡಿಯಾ

India vs Sri Lanka 2nd Test: ಭಾರತ ಮತ್ತು ಶ್ರೀಲಂಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಕೊಲೊಂಬೋದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿದೆ. ಎರಡು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆಯಲ್ಲಿರುವ ಭಾರತ ತಂಡ, ಈ ಪಂದ್ಯದಲ್ಲೂ ಜಯ ಸಾಧಿಸಿದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ.

Duleep Trophy 2026: 4 ಎಸೆತಗಳಲ್ಲಿ 2 ವಿಕೆಟ್ ಉರುಳಿಸಿದ ವೈಭವ್ ಸೂರ್ಯವಂಶಿ

Duleep Trophy 2026: ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಪೂರ್ವ ವಲಯ ತಂಡವು ಈಶಾನ್ಯ ವಲಯವನ್ನು ಇನ್ನಿಂಗ್ಸ್ ಮತ್ತು 210 ರನ್‌ಗಳಿಂದ ಮಣಿಸಿದೆ. 15ರ ಹರೆಯದ ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿ ವಿಫಲರಾದರೂ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 4 ಎಸೆತಗಳಲ್ಲಿ 2 ವಿಕೆಟ್ ಕಬಳಿಸಿ ಬೌಲಿಂಗ್‌ನಲ್ಲಿ ಮಿಂಚಿದರು.

ಟೀಮ್ ಇಂಡಿಯಾಗೆ ಬರೀ ಗೆಲುವಲ್ಲ, ಇನಿಂಗ್ಸ್ ಜಯ ನಿಶ್ಚಿತ: ಪೂಜಾರ ಭವಿಷ್ಯ

Sri Lanka vs India, 2nd Test: ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತ್ತು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 9 ವಿಕೆಟ್ ನಷ್ಟಕ್ಕೆ 503 ರನ್ ಕಲೆಹಾಕಿ ಇನಿಂಗ್ಸ್ ಡಿಕ್ಲೇರ್ ಘೋಷಿಸಿತು. ಇನ್ನು ಭಾರತದ ಬೃಹತ್ ಮೊತ್ತಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ಶ್ರೀಲಂಕಾ ತಂಡ, ಎರಡನೇ ದಿನದಾಟದ ಅಂತ್ಯಕ್ಕೆ ಕೇವಲ 8 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಭಾರಿ ಆರಂಭಿಕ ಆಘಾತಕ್ಕೆ ಒಳಗಾಗಿದೆ.

500 ರನ್​ಗಳ ಇತಿಹಾಸ: ಟೀಮ್ ಇಂಡಿಯಾಗೆ ಸೋಲಿನ ಭಯವೇ ಇಲ್ಲ!

IND vs SL 2nd Test: ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 500ಕ್ಕೂ ಅಧಿಕ ರನ್ ಗಳಿಸಿದರೂ ಪಂದ್ಯ ಸೋತ ಉದಾಹರಣೆಗಳು ಸಾಕಷ್ಟಿವೆ. ಆದರೆ ಈ ವಿಚಾರದಲ್ಲಿ ಭಾರತೀಯ ಕ್ರಿಕೆಟ್ ತಂಡ ಮಾತ್ರ ಇಡೀ ವಿಶ್ವದಲ್ಲೇ ಅತ್ಯಂತ ಅಪರೂಪದ ಹಾಗೂ ವಿಶಿಷ್ಟ ದಾಖಲೆಯೊಂದನ್ನು ಹೊಂದಿದೆ. ಶ್ರೀಲಂಕಾ ವಿರುದ್ಧದ ಕೊಲೊಂಬೊ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಭಾರತ 503 ರನ್ ಗಳಿಸುತ್ತಿದ್ದಂತೆ ಇತಿಹಾಸದ ಆ ರೋಚಕ ಅಂಕಿ-ಅಂಶಗಳು ಮತ್ತೆ ಮುಂಚೂಣಿಗೆ ಬಂದಿವೆ.

IND vs SL: ‘ಜೈ ಜವಾನ್, ಜೈ ಕಿಸಾನ್’; ಧ್ರುವ್ ಜುರೇಲ್​ ಟ್ಯಾಟೂಗೆ ಭಾರಿ ಮೆಚ್ಚುಗೆ

Dhruv Jurel tattoo meaning: ಧ್ರುವ್ ಜುರೇಲ್ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ 115* ರನ್ ಗಳಿಸಿ ಎರಡನೇ ಶತಕ ಬಾರಿಸಿದರು. ಈ ಮೂಲಕ MS ಧೋನಿ ದಾಖಲೆ ಮುರಿದರು. ಶತಕದ ಸಂಭ್ರಮದಲ್ಲಿ 'ಜೈ ಜವಾನ್, ಜೈ ಕಿಸಾನ್' ಟ್ಯಾಟೂ ಪ್ರದರ್ಶಿಸಿ ವೈರಲ್ ಆದರು. ಸೈನಿಕ ತಂದೆ, ರೈತ ಅಜ್ಜನಿಗೆ ಅರ್ಪಿಸಿದ ಈ ಟ್ಯಾಟೂ, ಅವರ ಪಾಲಿನ ಹೆಮ್ಮೆಯ ಪ್ರತೀಕವಾಗಿದೆ.

IND vs SL: ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್; ಅಗ್ರಸ್ಥಾನಕ್ಕೇರಿದ ರಿಷಭ್ ಪಂತ್

Rishabh Pant WTC record: ರಿಷಭ್ ಪಂತ್ ಕೊಲಂಬೊ ಟೆಸ್ಟ್‌ನಲ್ಲಿ 63 ರನ್ ಗಳಿಸುವ ಮೂಲಕ ಭಾರತದ ಪರ WTC ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಶುಭ್​ಮನ್ ಗಿಲ್ ಅವರ ದಾಖಲೆಯನ್ನು ಮುರಿದು 2948 ರನ್ ಗಳಿಸಿ ಅಗ್ರಸ್ಥಾನಕ್ಕೇರಿದ್ದಾರೆ. ಗಿಲ್ 76 ಇನ್ನಿಂಗ್ಸ್‌ಗಳಲ್ಲಿ 2917 ರನ್ ಗಳಿಸಿದ್ದರೆ, ಪಂತ್ ಕೇವಲ 74 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು