Indian Cricket Team
ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
Prasidh Krishna's Maiden Test Wickets: ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಭಾರತದ ನೆಲದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ವಿಕೆಟ್ಗಳನ್ನು ಪಡೆದರು. ನ್ಯೂ ಚಂಡೀಗಢದಲ್ಲಿ ನಡೆದ ಪಂದ್ಯದಲ್ಲಿ ಪ್ರಸಿದ್ಧ್ ಎರಡು ಪ್ರಮುಖ ವಿಕೆಟ್ಗಳನ್ನು ಕಬಳಿಸಿ ಮಿಂಚಿದರು. ಅನುಭವಿ ಸಿರಾಜ್ ಜೊತೆ ಬೌಲಿಂಗ್ ಮಾಡಿದ ಪ್ರಸಿದ್ಧ್, 7 ಓವರ್ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದು ತಂಡಕ್ಕೆ ಮಹತ್ವದ ಕೊಡುಗೆ ನೀಡಿದರು.
- pruthvi Shankar
- Updated on: Jun 7, 2026
- 9:43 pm
IND vs AFG: W,W,W.. 25 ವರ್ಷಗಳ ವಿಕೆಟ್ ಬರ ನೀಗಿಸಿದ ಮಾನವ್ ಸುತಾರ್
Manav Suthar Shines on Debut: ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಮಾನವ್ ಸುತಾರ್ ಅದ್ಭುತವಾಗಿ ಮಿಂಚಿದರು. ಮೊದಲ ಇನ್ನಿಂಗ್ಸ್ನಲ್ಲಿ ಮೂರು ಪ್ರಮುಖ ವಿಕೆಟ್ಗಳನ್ನು ಕಬಳಿಸಿದ ಅವರು, ತನ್ನ ಮೊದಲ ಓವರ್ನಲ್ಲೇ ವಿಕೆಟ್ ಪಡೆದು 25 ವರ್ಷಗಳ ದಾಖಲೆಯನ್ನು ಮುರಿದರು. ಬ್ಯಾಟಿಂಗ್ನಲ್ಲಿಯೂ 28 ರನ್ ಗಳಿಸಿ ತಂಡಕ್ಕೆ ನೆರವಾದ ಸುತಾರ್, ಭಾರತ ತಂಡ ಅಫ್ಘಾನಿಸ್ತಾನದ ಮೇಲೆ ಪ್ರಬಲ ಮೇಲುಗೈ ಸಾಧಿಸಲು ಪ್ರಮುಖ ಪಾತ್ರ ವಹಿಸಿದರು.
- pruthvi Shankar
- Updated on: Jun 7, 2026
- 8:18 pm
‘ಸೂರ್ಯನಿಗೆ ಅನ್ಯಾಯವಾಗಿದೆ’; ಬಿಸಿಸಿಐ ವಿರುದ್ಧ ಗರಂ ಆದ ಗವಾಸ್ಕರ್
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ತಂಡದಿಂದ ಕೈಬಿಟ್ಟಿರುವುದು ಅನ್ಯಾಯ ಎಂದು ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳಪೆ ಫಾರ್ಮ್ ಕಾರಣ ಹೇಳಲಾಗಿದ್ದರೂ, ಇಂಗ್ಲೆಂಡ್ ಸರಣಿವರೆಗೆ ಅವಕಾಶ ನೀಡಬೇಕಿತ್ತು ಎಂದಿದ್ದಾರೆ. ಧೋನಿಯಂತೆ ಶಾಂತ ಸ್ವಭಾವದ ಸೂರ್ಯನ ನಾಯಕತ್ವವನ್ನು ಶ್ಲಾಘಿಸಿರುವ ಗವಾಸ್ಕರ್, 2028ರ ಟಿ20 ವಿಶ್ವಕಪ್ಗೆ ಯುವ ನಾಯಕತ್ವದ ದೃಷ್ಟಿ ಇರಬಹುದು ಎಂದು ಊಹಿಸಿದ್ದಾರೆ.
- pruthvi Shankar
- Updated on: Jun 7, 2026
- 6:26 pm
IND vs AFG: ಮಾನವ್ ಮ್ಯಾಜಿಕ್; 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಅಫ್ಘಾನಿಸ್ತಾನ
India vs Afghanistan Test Day 2: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದಿದೆ. 564 ರನ್ಗಳಿಗೆ ಡಿಕ್ಲೇರ್ ಮಾಡಿದ ನಂತರ, ಅಫ್ಘಾನಿಸ್ತಾನ 113/5ಕ್ಕೆ ಕುಸಿದಿದೆ, 451 ರನ್ಗಳ ಬೃಹತ್ ಹಿನ್ನಡೆಯಲ್ಲಿದೆ. ಯುವ ಸ್ಪಿನ್ನರ್ ಮಾನವ್ ಸುತಾರ್ ಮೂರು ಪ್ರಮುಖ ವಿಕೆಟ್ ಪಡೆದು ಭಾರತಕ್ಕೆ ಬಲ ತುಂಬಿದ್ದಾರೆ, ಪಂದ್ಯದಲ್ಲಿ ಭಾರತದ ಗೆಲುವು ಸುನಿಶ್ಚಿತವಾಗಿದೆ.
- pruthvi Shankar
- Updated on: Jun 7, 2026
- 5:44 pm
IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
Manav Suthar's Dream Debut: ಮಾನವ್ ಸುತಾರ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತಮ್ಮ ಚೊಚ್ಚಲ ಪಾದಾರ್ಪಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಯುವ ಆಲ್ರೌಂಡರ್ ಸುತಾರ್ ಬ್ಯಾಟಿಂಗ್ನಲ್ಲಿ 28 ರನ್ ಗಳಿಸಿ, ತಂಡವನ್ನು 500 ರನ್ ಗಡಿ ದಾಟಿಸಲು ನೆರವಾದರು. ಬೌಲಿಂಗ್ನಲ್ಲಿ, ತಮ್ಮ ಮೊದಲ ಓವರ್ನಲ್ಲೇ ವಿಕೆಟ್ ಉರುಳಿಸಿ ಗಮನ ಸೆಳೆದರು. ಈ ಮೂಲಕ ಅವರು ಟೀಂ ಇಂಡಿಯಾಗೆ ಭರವಸೆಯ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಅವರ ಆಲ್ರೌಂಡ್ ಆಟ ತಂಡಕ್ಕೆ ಮಹತ್ವದ ಕೊಡುಗೆ ನೀಡಿದೆ.
- pruthvi Shankar
- Updated on: Jun 7, 2026
- 4:24 pm
IND vs AFG: ಟೆಸ್ಟ್ನಲ್ಲಿ ಅತಿ ಹೆಚ್ಚು ಸಿಕ್ಸರ್; ದಿಗ್ಗಜರನ್ನು ಹಿಂದಿಕ್ಕಿದ ರಿಷಭ್ ಪಂತ್
Rishabh Pant: ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ನಲ್ಲಿ ರಿಷಭ್ ಪಂತ್ 81 ರನ್ ಗಳಿಸಿ ಮಿಂಚಿದರು. 2026ರ ಐಪಿಎಲ್ ನಿರಾಶೆಯ ನಂತರ ಇದು ಮಹತ್ವದ ಇನ್ನಿಂಗ್ಸ್. ಪಂತ್ ಇದೀಗ ಟೆಸ್ಟ್ನಲ್ಲಿ 97 ಸಿಕ್ಸರ್ಗಳೊಂದಿಗೆ ಜಾಕ್ವೆಸ್ ಕಾಲಿಸ್ ದಾಖಲೆ ಸರಿಗಟ್ಟಿದ್ದಾರೆ. 50ನೇ ಟೆಸ್ಟ್ ಆಡುವ ಮೂಲಕ ಭಾರತದ ಮೂರನೇ ವಿಕೆಟ್ ಕೀಪರ್ ಎನಿಸಿದ್ದಾರೆ. 100 ಸಿಕ್ಸರ್ಗಳ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.
- pruthvi Shankar
- Updated on: Jun 7, 2026
- 3:06 pm
15ನೇ ವಯಸ್ಸಿನಲ್ಲಿ ಕಣಕ್ಕಿಳಿದರೂ ಈ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗಲ್ಲ!
Vaibhav Sooryavanshi : ದಾಖಲೆಗಳು ಇರೋದೇ ಮುರಿಯೋಕೆ ಅಂತಾರೆ. ಆದರೆ ಕ್ರಿಕೆಟ್ ಲೋಕದ ಈ ಕೆಲವು ದಾಖಲೆಗಳನ್ನ ನೋಡಿದರೆ, ಇವುಗಳನ್ನ ಮುರಿಯಲು ಸಾಧ್ಯವಿಲ್ಲ. ಅಂತಹ ದಾಖಲೆಯೊಂದು ಇದೀಗ ವೈಭವ್ ಸೂರ್ಯವಂಶಿಯ ಕೈ ತಪ್ಪಿದೆ. ಇದಾಗ್ಯೂ ಅವರು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿಯಲಿದ್ದಾರೆ.
- Zahir Yusuf
- Updated on: Jun 7, 2026
- 2:21 pm
IND vs AFG: ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿದ ಟೀಮ್ ಇಂಡಿಯಾ
IND vs AFG: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿರುವ ಟೀಮ್ ಇಂಡಿಯಾ ದಾಂಡಿಗರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಮೊದಲ ಇನಿಂಗ್ಸ್ ಬೃಹತ್ ಮೊತ್ತ ಪೇರಿಸಿದೆ.
- Zahir Yusuf
- Updated on: Jun 7, 2026
- 2:19 pm
ಕಣಕ್ಕಿಳಿದಿಲ್ಲ, ಸ್ಪರ್ಧಾತ್ಮಕ ಪಂದ್ಯವಾಡಿಲ್ಲ: ಹರ್ಷಿತ್ ರಾಣಾ ಆಯ್ಕೆ ನ್ಯಾಯವೇ?
India T20 Squad: ಇಂಗ್ಲೆಂಡ್, ಐರ್ಲೆಂಡ್ ವಿರುದ್ಧದ ಟಿ20 ಸರಣಿಗಳಿಗೆ ಹಾಗೂ ಏಷ್ಯಾಕಪ್ ಟೂರ್ನಿಗೆ ಭಾರತ ಟಿ20 ತಂಡವನ್ನು ಘೋಷಿಸಲಾಗಿದೆ. ಈ ಮೂರು ತಂಡಗಳಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ಹರ್ಷಿತ್ ರಾಣಾ ಕಳೆದ ಫೆಬ್ರವರಿ ತಿಂಗಳಿಂದ ಒಂದೇ ಒಂದು ಪಂದ್ಯವಾಡಿಲ್ಲ ಎಂಬುದು.
- Zahir Yusuf
- Updated on: Jun 7, 2026
- 12:26 pm
ಕೆಎಲ್ ರಾಹುಲ್ ನಟನೆಗೆ ‘ಆಸ್ಕರ್’ ಪ್ರಶಸ್ತಿ ನೀಡಬೇಕು: ಗ್ರೇಮ್ ಸ್ವಾನ್
India vs Afghanistan Test: ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲೇ ಟೀಮ್ ಇಂಡಿಯಾ ಬ್ಯಾಟರ್ಗಳು ಪಾರುಪತ್ಯ ಮೆರೆದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ಶತಕ ಸಿಡಿಸಿದ್ದಾರೆ. ಈ ಸೆಂಚುರಿಗಳ ನೆರವಿನಿಂದ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ 368 ರನ್ ಕಲೆಹಾಕಿದ್ದಾರೆ.
- Zahir Yusuf
- Updated on: Jun 7, 2026
- 8:56 am
ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!
ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಮೂವರು ಅಪ್ರತಿಮ ಮ್ಯಾಚ್ ವಿನ್ನರ್ಗಳಾದ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದ ಟಿ20 ಸರಣಿಯಿಂದ ಕೈಬಿಡುವ ಮೂಲಕ ಬಿಸಿಸಿಐ ಬಿಗ್ ಶಾಕ್ ನೀಡಿದೆ!
- Zahir Yusuf
- Updated on: Jun 7, 2026
- 7:19 am
ಸಚಿನ್ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ
BCCI's Special Rule for Vaibhav Sooryavanshi: ಭಾರತ ಟಿ20 ತಂಡಕ್ಕೆ 15ರ ಹರೆಯದಲ್ಲಿ ಆಯ್ಕೆಯಾದ ವೈಭವ್ ಸೂರ್ಯವಂಶಿ, ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾದ ವೈಭವ್ಗೆ ಬಿಸಿಸಿಐ ವಿಶೇಷ ವಿನಾಯಿತಿ ನೀಡಿದೆ. ಮಾನಸಿಕ ಸ್ಥಿರತೆ ಮತ್ತು ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು, ಅವರ ಪೋಷಕರನ್ನು ಜೊತೆ ಕರೆದೊಯ್ಯಲು ಅನುಮತಿ ನೀಡಿದ್ದು, ಬಿಸಿಸಿಐ ವೆಚ್ಚ ಭರಿಸಲಿದೆ.
- pruthvi Shankar
- Updated on: Jun 6, 2026
- 10:41 pm