
Indian Cricket Team
ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ಟೀಂ ಇಂಡಿಯಾದಲ್ಲಿನ ಆಂತರಿಕ ಜಗಳಕ್ಕೆ ಬಲಿಪಶು ಆದ್ರ ಅಭಿಷೇಕ್ ನಾಯರ್?
Team India coaching staff: ಭಾರತ ಕ್ರಿಕೆಟ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಐಪಿಎಲ್ ನಡುವೆಯೇ ಸಹಾಯಕ ಕೋಚ್ ಅಭಿಷೇಕ್ ನಾಯರ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಮತ್ತು ತರಬೇತುದಾರ ಸೋಹಮ್ ದೇಸಾಯಿ ಅವರನ್ನು ತಂಡದಿಂದ ತೆಗೆದುಹಾಕಲಾಗಿದೆ. ಕಳಪೆ ಟೆಸ್ಟ್ ಪ್ರದರ್ಶನ ಮತ್ತು ಆಂತರಿಕ ಜಗಳ ಇದಕ್ಕೆ ಕಾರಣ ಎಂದು ವರದಿಯಾಗಿದೆ.
- pruthvi Shankar
- Updated on: Apr 17, 2025
- 7:32 pm
ಗೌತಮ್ ಗಂಭೀರ್ಗೆ ಬಿಗ್ ಶಾಕ್: ಬಲಗೈ ಬಂಟರಿಗೆ ಗೇಟ್ ಪಾಸ್
Team India: ಗೌತಮ್ ಗಂಭೀರ್ ಸಾರಥ್ಯದಲ್ಲಿ ಟೀಮ್ ಇಂಡಿಯಾ ಸೀಮಿತ ಓವರ್ಗಳ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಟೆಸ್ಟ್ ಕ್ರಿಕೆಟ್ನಲ್ಲಿ ತಂಡದ ಪ್ರದರ್ಶನ ಅಷ್ಟಕಷ್ಟೇ. ಇದಕ್ಕೆ ಸಾಕ್ಷಿ ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಳಲ್ಲಿನ ಸೋಲು. ಈ ಸೋಲುಗಳನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಇದೀಗ ಭಾರತ ತಂಡ ಸಿಬ್ಬಂದಿ ವರ್ಗದಲ್ಲಿ ಕೆಲ ಬದಲಾವಣೆ ಮಾಡಲು ಮುಂದಾಗಿದೆ.
- Zahir Yusuf
- Updated on: Apr 17, 2025
- 11:54 am
ಚಾಂಪಿಯನ್ಸ್ ಟ್ರೋಫಿಯಲ್ಲಿ ಅಬ್ಬರಿಸಿದ್ದ ಶ್ರೇಯಸ್ ಅಯ್ಯರ್ಗೆ ಐಸಿಸಿಯಿಂದ ವಿಶೇಷ ಗೌರವ
ICC Player of the Month: ಮಾರ್ಚ್ 2025ರ ಐಸಿಸಿ ಪುರುಷರ ಕ್ರಿಕೆಟಿಗ ಪ್ರಶಸ್ತಿಯನ್ನು ಶ್ರೇಯಸ್ ಅಯ್ಯರ್ ಅವರಿಗೆ ನೀಡಲಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರ ಅದ್ಭುತ ಪ್ರದರ್ಶನಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇಡೀ ಟೂರ್ನಿಯಲ್ಲಿ 243 ರನ್ ಗಳಿಸಿದ್ದ ಅಯ್ಯರ್ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು.
- pruthvi Shankar
- Updated on: Apr 16, 2025
- 6:39 pm
ಟೀಂ ಇಂಡಿಯಾದಲ್ಲಿ ಸಿಗದ ಮನ್ನಣೆ ಆರ್ಸಿಬಿ ಸೇರಿದ ಬಳಿಕ ಸಿಕ್ತು! ಜಿತೇಶ್ ಶಾಕಿಂಗ್ ಹೇಳಿಕೆ; ವಿಡಿಯೋ
Jitesh Sharma: ಜಿತೇಶ್ ಶರ್ಮಾ ಅವರು ಭಾರತ ತಂಡದಲ್ಲಿ ಆಡಿದ್ದರೂ, ಆರ್ಸಿಬಿ ಸೇರಿದ ಬಳಿಕ ಅಭಿಮಾನಿಗಳ ಬೆಂಬಲದಲ್ಲಿ ಭಾರಿ ವ್ಯತ್ಯಾಸ ಕಂಡಿದ್ದಾರೆ ಎಂದು ಹೇಳಿದ್ದಾರೆ. ಟೀಂ ಇಂಡಿಯಾದಲ್ಲಿ ಕೇವಲ ಕೆಲವೇ ಅಭಿಮಾನಿಗಳು ಆಟೋಗ್ರಾಫ್ ಕೇಳುತ್ತಿದ್ದರೆ, ಆರ್ಸಿಬಿಯಲ್ಲಿ ನೂರಾರು ಅಭಿಮಾನಿಗಳು ಸಾಲುಗಟ್ಟಿ ನಿಲ್ಲುತ್ತಾರೆ ಎಂದು ಅವರು ಬಹಿರಂಗಪಡಿಸಿದ್ದಾರೆ.
- pruthvi Shankar
- Updated on: Apr 16, 2025
- 4:58 pm
ಈ ದೇಶದಲ್ಲಿ ಮೊದಲ ಬಾರಿಗೆ ಟಿ20 ಸರಣಿ ಆಡಲಿದೆ ಭಾರತ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
Team India's Bangladesh Tour 2025: ಭಾರತ ಕ್ರಿಕೆಟ್ ತಂಡವು ಐಪಿಎಲ್ ಬಳಿಕ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡ ಈ ಪ್ರವಾಸ ಆಗಸ್ಟ್ 17 ರಿಂದ ಆರಂಭವಾಗಲಿದೆ. 2026ರ ಟಿ20 ವಿಶ್ವಕಪ್ಗೆ ಇದು ಪ್ರಮುಖ ಸಿದ್ಧತೆಯಾಗಿದ್ದು, ರೋಹಿತ್ ಮತ್ತು ಕೊಹ್ಲಿಗೆ ಈ ಪ್ರವಾಸದಿಂದ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಈ ಸರಣಿಯು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಂತರ ನಡೆಯಲಿದೆ.
- pruthvi Shankar
- Updated on: Apr 16, 2025
- 3:52 pm
ಮಾಸಿಕ ಮೊತ್ತ… ವಿನೋದ್ ಕಾಂಬ್ಳಿ ನೆರವಿಗೆ ನಿಂತ ಸುನಿಲ್ ಗವಾಸ್ಕರ್
Vinod Kambli: ಟೀಮ್ ಇಂಡಿಯಾ ಪರ 17 ಟೆಸ್ಟ್ ಪಂದ್ಯಗಳನ್ನಾಡಿರುವ ವಿನೋದ್ ಕಾಂಬ್ಳಿ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2477 ರನ್ಗಳಿಸಿ ಮಿಂಚಿದ್ದರು.
- Zahir Yusuf
- Updated on: Apr 15, 2025
- 2:01 pm
ಒಲಿಂಪಿಕ್ಸ್ನಲ್ಲಿ ಕೇವಲ 6 ತಂಡಗಳಿಗೆ ಮಾತ್ರ ಅವಕಾಶ: ಪಾಕಿಸ್ತಾನಕ್ಕೆ ಚಿಂತೆ ಶುರು
Los Angeles Olympics 2028: ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಕೂಡ ಆಡಲಾಗುತ್ತದೆ. ಇದಕ್ಕಾಗಿ 6 ತಂಡಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಖಚಿತಪಡಿಸಿದೆ. ಈ ಹೇಳಿಕೆ ಬೆನ್ನಲ್ಲೇ ಪಾಕಿಸ್ತಾನ್ ತಂಡಕ್ಕೆ ಚಿಂತೆ ಶುರುವಾಗಿದೆ.
- Zahir Yusuf
- Updated on: Apr 10, 2025
- 8:31 pm
ತ್ರಿಕೋನ ಸರಣಿಗೆ ಟೀಂ ಇಂಡಿಯಾ ಪ್ರಕಟ; ನಾಲ್ವರಿಗೆ ಗೇಟ್ಪಾಸ್, 3 ಹೊಸ ಬೌಲರ್ಗಳಿಗೆ ಅವಕಾಶ
India Women's Cricket Team Announced: ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಸರಣಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಹರ್ಮನ್ಪ್ರೀತ್ ಕೌರ್ ನಾಯಕಿಯಾಗಿರುವ 15 ಸದಸ್ಯರ ತಂಡದಲ್ಲಿ ಮೂವರು ಹೊಸ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. ಶಫಾಲಿ ವರ್ಮಾ ಸೇರಿದಂತೆ ನಾಲ್ವರು ಆಟಗಾರ್ತಿಯರನ್ನು ತಂಡದಿಂದ ಕೈಬಿಡಲಾಗಿದೆ. ವಿಶ್ವಕಪ್ ಸಿದ್ಧತೆಗಳನ್ನು ಗಮನದಲ್ಲಿಟ್ಟುಕೊಂಡು ಈ ತಂಡವನ್ನು ಆಯ್ಕೆ ಮಾಡಲಾಗಿದೆ.
- pruthvi Shankar
- Updated on: Apr 8, 2025
- 4:23 pm
VIDEO: ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Sanjay Bangar: ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇದೀಗ ಐಪಿಎಲ್ ಟೂರ್ನಿಯಲ್ಲಿ ಕಾಮೆಂಟೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
- Zahir Yusuf
- Updated on: Apr 3, 2025
- 2:34 pm
ತವರಿನಲ್ಲಿ 4 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟ
Team India's 2025 Home Series Schedule: ಬಿಸಿಸಿಐ 2025ರಲ್ಲಿ ಭಾರತ ತಂಡದ ದೇಶೀಯ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 2 ರಿಂದ ಡಿಸೆಂಬರ್ 19 ರವರೆಗೆ ನಡೆಯುವ ಈ ಸರಣಿಯಲ್ಲಿ, ಹಲವು ಹೊಸ ಮತ್ತು ಸಾಂಪ್ರದಾಯಿಕ ಕ್ರೀಡಾಂಗಣಗಳಲ್ಲಿ ಪಂದ್ಯಗಳು ಆಡಲಿವೆ.
- pruthvi Shankar
- Updated on: Apr 2, 2025
- 8:24 pm