Indian Cricket Team
ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ಇನ್ನೂ ಹೆಚ್ಚು ಓದಿಏಕದಿನ ವಿಶ್ವಕಪ್ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ಸುನಿಲ್ ಗವಾಸ್ಕರ್
ODI World Cup 2027: ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ಟೀಮ್ ಇಂಡಿಯಾ ಲೆಜೆಂಡ್ ಸುನಿಲ್ ಗವಾಸ್ಕರ್.
- Zahir Yusuf
- Updated on: Aug 6, 2026
- 10:35 am
IND vs SL: ತನ್ನ ದೌರ್ಬಲ್ಯವನ್ನು ಮೆಟ್ಟಿ ನಿಲ್ಲುವತ್ತ ಟೀಂ ಇಂಡಿಯಾ ಚಿತ್ತ
India vs Sri Lanka: ಟೀಂ ಇಂಡಿಯಾ ಪದೇ ಪದೇ ಕ್ಯಾಚ್ಗಳನ್ನು ಕೈಚೆಲ್ಲುವ ಮೂಲಕ ಮಹತ್ವದ ಪಂದ್ಯಗಳನ್ನು ಕಳೆದುಕೊಳ್ಳುತ್ತಿದೆ. ಇತ್ತೀಚಿನ ಅಂಕಿಅಂಶಗಳು ತಂಡದ ಕಳಪೆ ಫೀಲ್ಡಿಂಗ್ ಅನ್ನು ಎತ್ತಿ ತೋರಿಸುತ್ತವೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಶ್ರೀಲಂಕಾ ಪ್ರವಾಸದಲ್ಲಿ ಕ್ಯಾಚಿಂಗ್ ಅಭ್ಯಾಸಕ್ಕೆ ಆದ್ಯತೆ ನೀಡಿದ್ದು, ತಂಡದ ದೊಡ್ಡ ದೌರ್ಬಲ್ಯವನ್ನು ಸರಿಪಡಿಸಲು ಸಜ್ಜಾಗಿದ್ದಾರೆ. ಅನುಭವಿ ಆಟಗಾರರ ಅನುಪಸ್ಥಿತಿಯೂ ಇದಕ್ಕೆ ಕಾರಣ.
- pruthvi Shankar
- Updated on: Aug 5, 2026
- 10:47 pm
IND vs SL ಟೆಸ್ಟ್ ಟೀಮ್ ಇಂಡಿಯಾ ಪಾಲಿಗೆ ಐತಿಹಾಸಿಕ ಪಂದ್ಯ
India vs Sri Lanka Test 2026: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್ಎಸ್ಸಿ ಮೈದಾನದಲ್ಲಿ ಜರುಗಲಿದೆ.
- Zahir Yusuf
- Updated on: Aug 5, 2026
- 12:12 pm
ಗೌತಮ್ ಗಂಭೀರ್ ವಿರುದ್ಧ ತಿರುಗಿ ನಿಂತ ಟೀಮ್ ಇಂಡಿಯಾ ಆಟಗಾರರು!
Gautam Gambhir: ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ಗೆ ಸಂಕಷ್ಟ ಎದುರಾಗಿದೆ. ಇತ್ತೀಚಿನ ಸರಣಿ ಸೋಲುಗಳ ಬೆನ್ನಲ್ಲೇ, ಗಂಭೀರ್ ಅವರ ಕಠಿಣ ಕೋಚಿಂಗ್ ಶೈಲಿ ಮತ್ತು ಬಿಗುವಿನ ಆಡಳಿತದ ವಿರುದ್ಧ ತಂಡದ ಪ್ರಮುಖ ಹಿರಿಯ ಆಟಗಾರರು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಮೆಟ್ಟಿಲೇರಿದ್ದಾರೆ.
- Zahir Yusuf
- Updated on: Aug 4, 2026
- 1:10 pm
ಟೀಮ್ ಇಂಡಿಯಾದ 7 ಆಟಗಾರರು ಗಾಯಾಳು!
ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಗಾಯದ ಆತಂಕ ತೀವ್ರಗೊಂಡಿದೆ. ಏಕಕಾಲದಲ್ಲಿ ತಂಡದ ಪ್ರಮುಖ ಏಳು ಆಟಗಾರರು ಗಾಯದ ಸಮಸ್ಯೆಗೆ ತುತ್ತಾಗಿರುವುದು ಟೀಮ್ ಇಂಡಿಯಾ ಹೊಸ ತಲೆನೋವಾಗಿ ಪರಿಣಮಿಸಿದೆ. ಹೀಗೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
- Zahir Yusuf
- Updated on: Aug 4, 2026
- 8:11 am
IND vs SL: ಭಾರತ ತಂಡಕ್ಕೆ ಮತ್ತೆ ಮೂವರು ಆಯ್ಕೆ
India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್ಎಸ್ಸಿ ಮೈದಾನದಲ್ಲಿ ಜರುಗಲಿದೆ.
- Zahir Yusuf
- Updated on: Aug 4, 2026
- 7:32 am
ಬಿಸಿಸಿಐಗೆ ತಲೆನೋವಾದ ಆಟಗಾರರ ಗಾಯದ ಸಮಸ್ಯೆ; ತಂಡದ ಫಿಸಿಯೋಗೆ ಶೀಘ್ರದಲ್ಲೇ ಗೇಟ್ಪಾಸ್
Team India's Recurring Injury Woes: ಭಾರತ ಕ್ರಿಕೆಟ್ ತಂಡದ ಆಟಗಾರರು ಪದೇ ಪದೇ ಗಾಯಗೊಳ್ಳುತ್ತಿರುವುದು ಬಿಸಿಸಿಐಗೆ ದೊಡ್ಡ ತಲೆನೋವಾಗಿದೆ. ಪ್ರಮುಖ ಆಟಗಾರರ ಗಾಯದಿಂದ ತಂಡದ ಪ್ರದರ್ಶನಕ್ಕೆ ಹಿನ್ನಡೆಯಾಗುತ್ತಿದ್ದು, ನಾಯಕ ಶುಭ್ಮನ್ ಗಿಲ್ ಮತ್ತು ಕೋಚ್ ಗೌತಮ್ ಗಂಭೀರ್ಗೆ ಇದು ಸವಾಲಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ, ಬಿಸಿಸಿಐ ಟೀಂ ಇಂಡಿಯಾ ಫಿಸಿಯೋ ಕಮಲೇಶ್ ಜೈನ್ ಅವರನ್ನು ಬದಲಿಸುವ ಕುರಿತು ಗಂಭೀರವಾಗಿ ಚಿಂತಿಸುತ್ತಿದೆ. ಸೆಂಟರ್ ಆಫ್ ಎಕ್ಸಲೆನ್ಸ್ನ ಪಾತ್ರವೂ ಚರ್ಚೆಯಲ್ಲಿದೆ.
- pruthvi Shankar
- Updated on: Aug 3, 2026
- 6:26 pm
ಟೀಮ್ ಇಂಡಿಯಾಗೆ ಜಮ್ಮು-ಕಾಶ್ಮೀರ ವೇಗಿ ಎಂಟ್ರಿ
India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್ಎಸ್ಸಿ ಮೈದಾನದಲ್ಲಿ ಜರುಗಲಿದೆ.
- Zahir Yusuf
- Updated on: Aug 3, 2026
- 10:20 am
ಮೊದಲು ಶ್ರೀಲಂಕಾ ವಿರುದ್ಧ ಗೆಲ್ಲಿ, ಫೈನಲ್ ಆಮೇಲೆ ನೋಡೋಣ!
India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್ಎಸ್ಸಿ ಮೈದಾನದಲ್ಲಿ ಜರುಗಲಿದೆ.
- Zahir Yusuf
- Updated on: Aug 3, 2026
- 8:58 am
Asia Cup 2026: ಏಷ್ಯಾಕಪ್ಗೆ ಭಾರತ ಮಹಿಳಾ ತಂಡ ಪ್ರಕಟ; ಚೇತರಿಸಿಕೊಳ್ಳದ ಶ್ರೇಯಾಂಕ ಪಾಟೀಲ್
India Women's Asia Cup 2026 Squad: 2026ರ ಮಹಿಳಾ ಏಷ್ಯಾಕಪ್ಗಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಏಷ್ಯನ್ ಕ್ರೀಡಾಕೂಟಕ್ಕೆ ಆಯ್ಕೆಯಾದ ತಂಡವನ್ನೇ ಉಳಿಸಿಕೊಂಡಿದ್ದರೂ, ಗಾಯದಿಂದ ಚೇತರಿಸಿಕೊಳ್ಳದ ಕನ್ನಡತಿ ಶ್ರೇಯಾಂಕ ಪಾಟೀಲ್ ಬದಲಿಗೆ ಲೆಗ್-ಸ್ಪಿನ್ ಆಲ್ರೌಂಡರ್ ಪ್ರೇಮಾ ರಾವತ್ಗೆ ಸ್ಥಾನ ನೀಡಲಾಗಿದೆ. ಆಗಸ್ಟ್-ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ನಡೆಯಲಿದ್ದು, ನಂತರ ಏಷ್ಯನ್ ಕ್ರೀಡಾಕೂಟ ಇರಲಿದೆ.
- pruthvi Shankar
- Updated on: Aug 2, 2026
- 10:06 pm
ಏಕದಿನ ವಿಶ್ವಕಪ್ ನಡೆಯುವ 12 ಮೈದಾನಗಳಲ್ಲಿ ಕೊಹ್ಲಿ ಪ್ರದರ್ಶನ ಹೇಗಿದೆ?
Virat Kohli's 2027 World Cup Impact: 2027ರ ಏಕದಿನ ವಿಶ್ವಕಪ್ ಆಫ್ರಿಕಾದಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಆಫ್ರಿಕಾದ 12 ಆತಿಥೇಯ ಸ್ಥಳಗಳಲ್ಲಿ ಕೊಹ್ಲಿ 8ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ತಮ್ಮ 25 ವಿಶ್ವಕಪ್ ಇನ್ನಿಂಗ್ಸ್ಗಳಲ್ಲಿ 71.47 ಸರಾಸರಿಯಲ್ಲಿ 1,358 ರನ್ ಗಳಿಸಿದ್ದಾರೆ. ಅವರ ಅನುಭವ ತಂಡಕ್ಕೆ ಬಲ ನೀಡಲಿದ್ದು, ಭಾರತದ ವಿಶ್ವಕಪ್ ಭರವಸೆಗಳಿಗೆ ಕೊಹ್ಲಿ ಪ್ರಮುಖ ಆಧಾರವಾಗಿದ್ದಾರೆ.
- pruthvi Shankar
- Updated on: Aug 2, 2026
- 7:25 pm
IND vs SL: ಟೆಸ್ಟ್ ಸರಣಿಯಿಂದ ಬುಮ್ರಾ ಔಟ್; ತಂಡದಲ್ಲಿ ಯಾರಿಗೆ ಸಿಗಲಿದೆ ಅವಕಾಶ?
Jasprit Bumrah Injury: ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಗಾಯದಿಂದಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಮಹತ್ವದ ಈ ಸರಣಿಯಲ್ಲಿ ಬುಮ್ರಾ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅವರ ಬದಲಿಗೆ ಯಾರು ಬರಬಹುದು ಎಂಬ ಕುತೂಹಲ ಮನೆ ಮಾಡಿದೆ. ಜಮ್ಮು ಕಾಶ್ಮೀರದ ಯುವ ವೇಗಿ ಅಕಿಬ್ ನಬಿ ದಾರ್ ಬುಮ್ರಾ ಸ್ಥಾನ ಪಡೆಯುವ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
- pruthvi Shankar
- Updated on: Aug 2, 2026
- 3:37 pm