Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

IPL 2025: ‘ಅಂಕಿಅಂಶಗಳೇ ಎಲ್ಲವನ್ನೂ ಹೇಳುತ್ತವೆ’; ರೋಹಿತ್​ಗೆ ತಿರುಗೇಟು ನೀಡಿದ ಮೊಹಮ್ಮದ್ ಸಿರಾಜ್

Mohammed Siraj's Snippy Reply to Rohit Sharma: ಭಾರತ ತಂಡದಿಂದ ಕೈಬಿಡಲ್ಪಟ್ಟ ಮೊಹಮ್ಮದ್ ಸಿರಾಜ್ ಅವರು ರೋಹಿತ್ ಶರ್ಮಾ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಹಳೆಯ ಚೆಂಡಿನಲ್ಲಿ ಪರಿಣಾಮಕಾರಿಯಲ್ಲ ಎಂಬ ರೋಹಿತ್ ಅವರ ಆರೋಪಕ್ಕೆ ಸಿರಾಜ್ ಅವರು ತಮ್ಮ ಅಂಕಿಅಂಶಗಳನ್ನು ತೋರಿಸಿ ತಮ್ಮ ಪ್ರತಿಭೆಯನ್ನು ಸಮರ್ಥಿಸಿಕೊಂಡಿದ್ದಾರೆ. ಐಪಿಎಲ್ 2025ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಆಡಲು ಸಿರಾಜ್ ಸಿದ್ಧರಾಗಿದ್ದಾರೆ.

BCCI: ಬಿಸಿಸಿಐ ನೀಡಿರುವ 58 ಕೋಟಿ ಬಹುಮಾನದಲ್ಲಿ ಯಾರಿಗೆ ಎಷ್ಟೆಷ್ಟು?

58 Crore Prize for India's Champions Trophy Win: ಭಾರತ ತಂಡವು 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದಕ್ಕಾಗಿ ಬಿಸಿಸಿಐ 58 ಕೋಟಿ ರೂಪಾಯಿಗಳ ಬಹುಮಾನವನ್ನು ಘೋಷಿಸಿದೆ. ಪ್ರತಿ ಆಟಗಾರನಿಗೆ 3 ಕೋಟಿ ರೂಪಾಯಿಗಳು, ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೂ 3 ಕೋಟಿ ರೂಪಾಯಿಗಳು ಮತ್ತು ಇತರ ಸಿಬ್ಬಂದಿಗೆ ವಿಭಿನ್ನ ಮೊತ್ತವನ್ನು ನೀಡಲಾಗುವುದು. ಐಸಿಸಿಯಿಂದ ಬರುವ 20 ಕೋಟಿ ರೂಪಾಯಿಗಳ ಬಹುಮಾನವನ್ನು ಆಟಗಾರರಿಗೆ ಮಾತ್ರ ಹಂಚಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

Champions Trophy BCCI Reward: ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ ರೂ. 58 ಕೋಟಿ ಘೋಷಿಸಿದ ಬಿಸಿಸಿಐ

BCCI Cash Prize for Team India: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಿದ್ದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಟೀಮ್ ಇಂಡಿಯಾ. ಭಾರತ ತಂಡದ ಈ ಐತಿಹಾಸಿಕ ಸಾಧನೆಗೆ ಇದೀಗ ಬಿಸಿಸಿಐ ಭರ್ಜರಿ ಉಡುಗೊರೆ ನೀಡಿದೆ. ಅದು ಕೂಡ ಬರೋಬ್ಬರಿ 58 ಕೋಟಿ ರೂ. ಬಹುಮಾನ ಮೊತ್ತ ಘೋಷಿಸುವ ಮೂಲಕ ಎಂಬುದು ವಿಶೇಷ.

BCCI: ‘ಸಾಧ್ಯವೇ ಇಲ್ಲ’; ಕೊಹ್ಲಿ ಮನವಿಗೂ ಬೆಲೆಕೊಡದ ಬಿಸಿಸಿಐ

BCCI's New Travel Policy: ಬಿಸಿಸಿಐನ ಹೊಸ ಪ್ರಯಾಣ ನೀತಿಯ ಬಗ್ಗೆ ಸಾಕಷ್ಟು ವಿರೋದಗಳು ವ್ಯಕ್ತವಾಗಿವೆ. ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಆಟಗಾರರ ಕುಟುಂಬಗಳು ತಮ್ಮೊಂದಿಗೆ ಇರುವುದು ಮುಖ್ಯ ಎಂದು ಹೇಳಿದ್ದಾರೆ. ಆದರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನೀತಿಯು ಎಲ್ಲಾ ತಂಡದ ಸದಸ್ಯರಿಗೆ ಅನ್ವಯಿಸುತ್ತದೆ ಮತ್ತು ದಶಕಗಳಿಂದ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಚಾಹಲ್- ಧನಶ್ರೀ ವಿಚ್ಛೇದನ: ಮಾಜಿ ಮಡದಿಗೆ ಸಿಕ್ಕ ಜೀವನಾಂಶ ಎಷ್ಟು?

Yuzvendra Chahal, Dhanashree Verma Divorce: ಬಾಂಬೆ ಹೈಕೋರ್ಟ್, ಯುಜ್ವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅವರ ವಿಚ್ಛೇದನ ಅರ್ಜಿಯ ಕುರಿತು ಮಾರ್ಚ್ 20 ರೊಳಗೆ ಅಂತಿಮ ತೀರ್ಪು ನೀಡುವಂತೆ ಬಾಂದ್ರಾ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದೆ. ಕೂಲಿಂಗ್-ಆಫ್ ಅವಧಿಯನ್ನು ಮನ್ನಾ ಮಾಡಲಾಗಿದ್ದು, ಚಾಹಲ್ 4.75 ಕೋಟಿ ರೂ. ಜೀವನಾಂಶ ನೀಡಲು ಒಪ್ಪಿದ್ದಾರೆ ಎಂದು ವರದಿಯಾಗಿದೆ. ಐಪಿಎಲ್ ಆರಂಭಕ್ಕೂ ಮುನ್ನ ತೀರ್ಪು ಹೊರಬೀಳುವ ನಿರೀಕ್ಷೆಯಿದೆ.

IPL 2025: ಮೂರ್ಖ ಎಂದು ಹೇಳಿ ಗವಾಸ್ಕರ್​ರನ್ನು ಗೇಲಿ ಮಾಡಿದ್ರಾ ರಿಷಬ್ ಪಂತ್? ವಿಡಿಯೋ ವೈರಲ್

Rishabh Pant's "Fool" Video Goes Viral: ಐಪಿಎಲ್ 2025ರ ಹೊಸ ಸೀಸನ್ ಆರಂಭಕ್ಕೂ ಮೊದಲು ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಅವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಪಂತ್ ಯಾರನ್ನೋ "ಮೂರ್ಖ" ಎಂದು ಕರೆಯುತ್ತಿದ್ದಾರೆ. ಕೆಲವರು ಇದನ್ನು ಸುನಿಲ್ ಗವಾಸ್ಕರ್ ಅವರನ್ನು ಗೇಲಿ ಮಾಡುವುದೆಂದು ಅರ್ಥೈಸಿಕೊಂಡಿದ್ದಾರೆ, ಏಕೆಂದರೆ ಗವಾಸ್ಕರ್ ಮೊದಲು ಪಂತ್ ಅವರನ್ನು ಹೀಗೆ ಕರೆದಿದ್ದರು. ಆದರೆ ಪಂತ್ ಯಾರನ್ನು ಉದ್ದೇಶಿಸಿ ಹೇಳಿದ್ದಾರೆಂಬುದು ಸ್ಪಷ್ಟವಾಗಿಲ್ಲ.

‘ಫಲಿತಾಂಶವೇ ಹೇಳುತ್ತದೆ’; ಭಾರತ- ಪಾಕ್ ನಡುವೆ ಯಾವುದು ಬೆಸ್ಟ್ ತಂಡ? ಮೋದಿ ಉತ್ತರ ಏನು ಗೊತ್ತಾ?

PM Modi on India-Pakistan Cricket: ಲೆಕ್ಸ್ ಫ್ರೀಡ್‌ಮ್ಯಾನ್ ಜೊತೆಗಿನ ಸಂದರ್ಶನದಲ್ಲಿ, ಪ್ರಧಾನಿ ಮೋದಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳ ಮಹತ್ವವನ್ನು ಚರ್ಚಿಸಿದ್ದಾರೆ. ಕ್ರೀಡೆ ಜನರನ್ನು ಒಗ್ಗೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಯಾವ ತಂಡ ಉತ್ತಮ ಎಂಬ ಪ್ರಶ್ನೆಗೆ, ಫಲಿತಾಂಶಗಳು ತಾವಾಗಿಯೇ ಮಾತನಾಡುತ್ತವೆ ಎಂದು ಅವರು ಉತ್ತರಿಸಿದ್ದಾರೆ. ಅತ್ಯುತ್ತಮ ಫುಟ್ಬಾಲ್ ಆಟಗಾರನಾಗಿ ಮೆಸ್ಸಿಯನ್ನು ಅವರು ಪ್ರಶಂಸಿಸಿದ್ದಾರೆ.

ಒಬ್ಬಂಟಿಯಾಗಿ ಕುಳಿತು ಅಳಬೇಕ?: ಕುಟುಂಬವನ್ನು ದೂರವಿಟ್ಟ ಬಿಸಿಸಿಐ ವಿರುದ್ಧ ಗುಡುಗಿದ ವಿರಾಟ್ ಕೊಹ್ಲಿ

Virat Kohli Criticizes BCCI's Family Restriction Rule: ವಿರಾಟ್ ಕೊಹ್ಲಿ ಅವರು ಬಿಸಿಸಿಐನ ಹೊಸ ಕುಟುಂಬ ನಿಯಮದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದೇಶ ಪ್ರವಾಸಗಳಲ್ಲಿ ಆಟಗಾರರ ಕುಟುಂಬದ ಉಪಸ್ಥಿತಿಯನ್ನು ಸೀಮಿತಗೊಳಿಸುವ ಈ ನಿಯಮವು ಆಟಗಾರರ ಮನೋಬಲವನ್ನು ಕುಗ್ಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕುಟುಂಬದ ಬೆಂಬಲವು ಆಟಗಾರರಿಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಕೊಹ್ಲಿ, ಈ ನಿಯಮವು ಅನ್ಯಾಯಕರ ಎಂದೂ ಹೇಳಿದ್ದಾರೆ. ಆಟಗಾರರ ಕಳಪೆ ಪ್ರದರ್ಶನಕ್ಕೆ ಕುಟುಂಬವನ್ನು ದೂಷಿಸುವುದು ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕ್ರಿಕೆಟ್ ದೇವರ ಶತಕದ ಶತಕಕ್ಕೆ ಭರ್ತಿ 13 ವರ್ಷ; ಆ ಪಂದ್ಯದ ಫಲಿತಾಂಶ ಏನಾಗಿತ್ತು ಗೊತ್ತಾ?

Sachin Tendulkar's Unbreakable Record: ಸಚಿನ್ ತೆಂಡೂಲ್ಕರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಪೂರೈಸಿ ಇಂದಿಗೆ 13 ವರ್ಷಗಳು ತುಂಬಿವೆ. ಬಿಸಿಸಿಐ ಅವರಿಗೆ ಅಭಿನಂದನೆ ಸಲ್ಲಿಸಿದೆ. ಮಾರ್ಚ್ 16, 2012 ರಂದು ಮೀರ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ, ಸಚಿನ್ 147 ಎಸೆತಗಳಲ್ಲಿ 114 ರನ್ ಗಳಿಸಿದರು. ಆದಾಗ್ಯೂ ಭಾರತ ಈ ಪಂದ್ಯದಲ್ಲಿ ಐದು ವಿಕೆಟ್‌ಗಳಿಂದ ಸೋಲಬೇಕಾಯಿತು.

Virat Kohli: ಭಾರತ ಟಿ20 ತಂಡಕ್ಕೆ ಮರಳು ನಾನು ಸಿದ್ಧ ಎಂದ ಕೊಹ್ಲಿ; ಆದರೊಂದು ಷರತ್ತು..!

Virat Kohli's T20 Retirement U-Turn: ವಿರಾಟ್ ಕೊಹ್ಲಿ ಕಳೆದ ವರ್ಷವಷ್ಟೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು ನಮಗೆಲ್ಲ ಗೊತ್ತೇ ಇದೆ. ಆದರೆ ಇತ್ತೀಚೆಗೆ ಅವರು ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಫೈನಲ್ ತಲುಪಿದರೆ ಮಾತ್ರ ಆಡುವುದಾಗಿ ಹೇಳಿದ್ದಾರೆ. ನಿವೃತ್ತಿಯ ನಂತರದ ಯೋಜನೆಗಳ ಬಗ್ಗೆ ಮಾತನಾಡಿದ ಕೊಹ್ಲಿ, ದೇಶ ಸುತ್ತಾಡುವ ಆಸೆ ಇದೆ ಎಂದಿದ್ದಾರೆ.

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?