Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ಸಂಜು ಸ್ಯಾಮ್ಸನ್ ಮೇಲೆ ಬಿಸಿಸಿಐ ಗರಂ; ಏಕದಿನ ಸರಣಿಗೆ ಆಯ್ಕೆ ಅನುಮಾನ

Sanju Samson: ವಿಜಯ್ ಹಜಾರೆ ಟ್ರೋಫಿಯಿಂದ ಹಿಂದೆ ಸರಿದಿರುವ ಸಂಜು ಸ್ಯಾಮ್ಸನ್ ಮೇಲೆ ಬಿಸಿಸಿಐ ಗರಂ ಆಗಿದೆ. ಪ್ರತಿಯೊಬ್ಬರು ದೇಶೀ ಟೂರ್ನಿ ಆಡಬೇಕೆಂಬ ಕಡ್ಡಾಯ ನಿಯಮಿದ್ದರೂ ಸಂಜು ಏಕದಿನ ಟೂರ್ನಿಯಿಂದ ಹಿಂದೆ ಸರಿದಿದ್ದು, ಇದೀಗ ಅವರ ವಿರುದ್ಧ ಕ್ರಮಕ್ಕೆ ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಇದರ ಪರಿಣಾಮವಾಗಿ ಸಂಜು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಆಯ್ಕೆಯಾಗುವುದು ಅನುಮಾನ ಎನ್ನಲಾಗುತ್ತಿದೆ.

13 ವರ್ಷಗಳ ಬಳಿಕ ದೆಹಲಿ ರಣಜಿ ತಂಡಕ್ಕೆ ವಿರಾಟ್ ಕೊಹ್ಲಿ ಆಯ್ಕೆ..! ರಿಷಬ್​ ಪಂತ್​ಗೂ ಅವಕಾಶ

Ranji Trophy: ಬಿಸಿಸಿಐನ ಆದೇಶದಂತೆ, ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ರಣಜಿ ಟ್ರೋಫಿಗೆ ಮರಳಿದ್ದಾರೆ. ದೆಹಲಿ ತಂಡಕ್ಕೆ ಆಯ್ಕೆಯಾಗಿರುವ ವಿರಾಟ್ ಕೊಹ್ಲಿ ಹಾಗೂ ರಿಷಬ್ ಪಂತ್ ಕ್ರಮವಾಗಿ 13 ಮತ್ತು 8 ವರ್ಷಗಳ ಬಳಿಕ ರಣಜಿ ಕ್ರಿಕೆಟ್‌ ಆಡಲಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಆಡುವುದು ಖಚಿತವಿಲ್ಲ. ಆದಾಗ್ಯೂ ಅವರು ತಂಡದೊಂದಿಗೆ ಇರಲಿದ್ದಾರೆ.

ವಿರಾಟ್ ಕೊಹ್ಲಿಯ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಮುಂದಾದ ಬಿಸಿಸಿಐ

Team India: ಟೀಮ್ ಇಂಡಿಯಾ ಆಟಗಾರರು ಪದೇ ಪದೇ ಫಿಟ್​ನೆಸ್ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಇದೀಗ ಬಿಸಿಸಿಐ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ನಿಯಮದ ಪ್ರಕಾರ ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಫಿಟ್​ನೆಸ್ ಟೆಸ್ಟ್ ಪಾಸಾಗಲೇಬೇಕು. ಒಂದು ವೇಳೆ ಫಿಟ್​ನೆಸ್ ಟೆಸ್ಟ್​ನಲ್ಲಿ ಫೇಲ್ ಆದರೆ ತಂಡದಿಂದ ಹೊರಬೀಳಲಿದ್ದಾರೆ.

ಟೀಮ್ ಇಂಡಿಯಾ ಮಹಿಳೆಯರ ಅಬ್ಬರಕ್ಕೆ ಪುರುಷರ ದಾಖಲೆಯೇ ಉಡೀಸ್

India Women vs Ireland Women: ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮಹಿಳಾ ತಂಡವು 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ಮಹಿಳಾ ತಂಡ 31.4 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 304 ರನ್ ಗಳ ಅಮೋಘ ಜಯ ಸಾಧಿಸಿದೆ.

Record Win: ಒಂದೇ ದಿನಾಂಕದಂದು 2 ತಂಡಗಳ ದಾಖಲೆಯ ಜಯ; ಹೀಗೊಂದು ಕಾಕತಾಳೀಯ

Record Win: ಜನವರಿ 15 ರಂದು ಕಾಕತಾಳೀಯವೆಂಬಂತೆ ಭಾರತದ ಮಹಿಳಾ ಮತ್ತು ಪುರುಷರ ಕ್ರಿಕೆಟ್ ತಂಡಗಳು ಏಕದಿನ ಪಂದ್ಯಗಳಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿವೆ. ಮಹಿಳಾ ತಂಡವು ಐರ್ಲೆಂಡ್ ವಿರುದ್ಧ 304 ರನ್‌ಗಳ ಅಂತರದಿಂದ ಗೆದ್ದರೆ, ಪುರುಷರ ತಂಡವು ಎರಡು ವರ್ಷಗಳ ಹಿಂದೆ ಇದೇ ದಿನ ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿತ್ತು.

ಟೀಂ ಇಂಡಿಯಾಕ್ಕೆ ಶಾಕಿಂಗ್ ಸುದ್ದಿ; ಬೆಡ್ ರೆಸ್ಟ್‌ನಲ್ಲಿ ಬುಮ್ರಾ..! ಕ್ರಿಕೆಟ್​ನಿಂದ ಎಷ್ಟು ದಿನ ದೂರ?

Jasprit Bumrah's Back Injury: ಆಸ್ಟ್ರೇಲಿಯಾ ಪ್ರವಾಸದಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ ಅವರ ಗಾಯ ಗಂಭೀರವಾಗಿದೆ ಎಂದು ವರದಿಯಾಗಿದೆ. ಬುಮ್ರಾ ಅವರಿಗೆ ಸಂಪೂರ್ಣ ವಿಶ್ರಾಂತಿ ಅಗತ್ಯವಿದ್ದು, ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಚಿಕಿತ್ಸೆ ಪಡೆಯಬೇಕಾಗಿದೆ. ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರು ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಚಿಕಿತ್ಸೆಯ ನಂತರವಷ್ಟೇ ಅವರ ಮರಳುವಿಕೆಯ ಬಗ್ಗೆ ತಿಳಿಯಲಿದೆ.

Pratika Rawal: 40,76,18,89,67,154..! ಟೀಂ ಇಂಡಿಯಾದಲ್ಲಿ ಅಂಪೈರ್​ ಮಗಳದ್ದೇ ಕಾರುಬಾರು

Pratika Rawal's Century: ಭಾರತ ಮಹಿಳಾ ಕ್ರಿಕೆಟ್ ತಂಡದ ಯುವ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಅವರು ಐರ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 154 ರನ್‌ಗಳ ಚೊಚ್ಚಲ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇದಲ್ಲದೆ ಅವರು ಸ್ಮೃತಿ ಮಂಧಾನರೊಂದಿಗೆ 233 ರನ್‌ಗಳ ದಾಖಲೆಯ ಜೊತೆಯಾಟವನ್ನು ಮಾಡಿದರು. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದಲೂ ಅವರ ಪ್ರದರ್ಶನ ಗಮನ ಸೆಳೆದಿದ್ದು ತಮ್ಮ ಆರಂಭಿಕ ಕೆರಿಯರ್‌ನಲ್ಲೇ ಪ್ರತೀಕಾ ಅವರ ಪ್ರತಿಭೆ ಅದ್ಭುತವಾಗಿದೆ.

ಟೀಮ್ ಇಂಡಿಯಾದಲ್ಲಿ ಬಿರುಕು? ಹಿರಿಯ ಆಟಗಾರರ ವಿರುದ್ಧ ಗಂಭೀರ್ ಅಸಮಾಧಾನ

Team India: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ 3-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ, ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದೆ. ಈ ಸೋಲುಗಳಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಮೂರನೇ ಬಾರಿ ಫೈನಲ್​ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿತು. ಈ ಸೋಲುಗಳನ್ನು ಇದೀಗ ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.

ಅತೀ ವೇಗದ ಶತಕ ಸಿಡಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

India Women vs Ireland Women: ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ ಸ್ಪೋಟಕ ಸೆಂಚುರಿ ಸಿಡಿಸಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ದಾಖಲೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಟೀಮ್ ಇಂಡಿಯಾ ಆಟಗಾರರ ಪತ್ನಿಯರಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

Team India: ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಟೆಸ್ಟ್ ಸರಣಿಗಳನ್ನು ಸೋತ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಈ ಎಚ್ಚೆತ್ತುಕೊಳ್ಳುವಿಕೆಯೊಂದಿಗೆ ಇದೀಗ ಟೀಮ್ ಇಂಡಿಯಾ ಆಟಗಾರರಿಗೆ ಕೆಲ ನಿಯಮಗಳನ್ನು ಜಾರಿಗೊಳಿಸಲು ಮುಂದಾಗುತ್ತಿದ್ದು, ಈ ಮೂಲಕ ಈ ಹಿಂದೆ ನೀಡಲಾಗಿದ್ದ ವಿಶೇಷ ಸವಲತ್ತುಗಳನ್ನು ಕೊನೆಗೊಳಿಸಲು ನಿರ್ಧರಿಸಲಾಗಿದೆ.

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?