AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೆ ‘ಕುತ್ತು’

ಭಾರತಕ್ಕೆ ಟಿ20 ವಿಶ್ವಕಪ್ ಮುಕುಟ ತೊಡಿಸಿದ ಕೆಲವೇ ತಿಂಗಳುಗಳಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿದೆ. ನಾಯಕನಾಗಿ ಯಶಸ್ವಿಯಾದರೂ, ಬ್ಯಾಟರ್ ಆಗಿ ಅವರ ಬ್ಯಾಟ್‌ನಿಂದ ರನ್ ಹರಿಯುತ್ತಿಲ್ಲದಿರುವುದು ಮತ್ತು ನಿರಂತರ ಗಾಯದ ಸಮಸ್ಯೆಗಳು ಬಿಸಿಸಿಐ ಆಯ್ಕೆಗಾರರ ಕೆಂಗಣ್ಣಿಗೆ ಗುರಿಯಾಗಿವೆ.

ಟೀಮ್ ಇಂಡಿಯಾಗೆ ಅನುಭವಿ ವೇಗಿ ಕಂಬ್ಯಾಕ್ ಸಾಧ್ಯತೆ!

IPL 2026: ಐಪಿಎಲ್ 2026 ಮುಗಿದ ಕೇವಲ ಆರೇ ದಿನಗಳಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಮುಂಬರುವ ಪ್ರಮುಖ ಸಭೆಯಲ್ಲಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಜಸ್​​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಮತ್ತು ಗಾಯ ಮುಕ್ತರಾಗಿರುವ ಮೊಹಮ್ಮದ್ ಶಮಿ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವ ಕುರಿತು ಅಂತಿಮ ಮೊಹರು ಒತ್ತಲಿದೆ.

ICC Annual Ranking: ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆದ ಭಾರತದ ಪಾರುಪತ್ಯ

ICC Annual Ranking: ಐಸಿಸಿ ತನ್ನ ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟೀಂ ಇಂಡಿಯಾ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡದಿದ್ದರೂ, 118 ಅಂಕಗಳೊಂದಿಗೆ ನಂಬರ್ 1 ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದ್ದು, ಪಾಕಿಸ್ತಾನ ಐದನೇ ಸ್ಥಾನಕ್ಕೆ ಕುಸಿದಿದೆ. ಭಾರತದ ಕ್ರಿಕೆಟ್ ಪ್ರಾಬಲ್ಯವನ್ನು ಇದು ಮತ್ತೊಮ್ಮೆ ಸಾಬೀತುಪಡಿಸಿದೆ.

ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು!

BAN vs PAK: ಕ್ರಿಕೆಟ್ ಪ್ರಸಾರದ ಇತಿಹಾಸದಲ್ಲೇ ಅತ್ಯಂತ ವಿಲಕ್ಷಣ ಎನ್ನಬಹುದಾದ ತಾಂತ್ರಿಕ ಪ್ರಮಾದವೊಂದು ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಸಂಭವಿಸಿದೆ. ಪಂದ್ಯದ ಲೈವ್ ಸ್ಕೋರ್‌ಕಾರ್ಡ್‌ನಲ್ಲಿ ಪಾಕಿಸ್ತಾನದ ಆಟಗಾರರ ಬದಲಿಗೆ ಟೀಮ್ ಇಂಡಿಯಾದ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಸೇರಿದಂತೆ ಪ್ರಮುಖ ಆಟಗಾರರ ಪಟ್ಟಿಯನ್ನು ಪ್ರದರ್ಶಿಸಲಾಗಿದೆ.

ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾಗೆ ‘ನಾಡಾ’ ನೋಟಿಸ್

ಮೈದಾನದಲ್ಲಿ ಬೌಲರ್‌ಗಳ ಬೆವರಿಳಿಸುವ ಯಶಸ್ವಿ ಜೈಸ್ವಾಲ್ ಮತ್ತು ಶಫಾಲಿ ವರ್ಮಾ ಅವರಿಗೆ ಈಗ ನಡಾ (NADA) ಬಿಸಿ ಮುಟ್ಟಿಸಿದೆ! ಉದ್ದೀಪನ ಮದ್ದು ಪರೀಕ್ಷೆಗೆ ಗೈರಾದ ಹಿನ್ನೆಲೆಯಲ್ಲಿ ಈ ಇಬ್ಬರು ಸ್ಟಾರ್ ಕ್ರಿಕೆಟಿಗರಿಗೆ ನೋಟಿಸ್ ನೀಡಲಾಗಿದ್ದು, ಮುಂದಿನ 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ಈ ಬೆಳವಣಿಗೆಯಿಂದಾಗಿ ಬಿಸಿಸಿಐ ಕೂಡ ಎಚ್ಚೆತ್ತುಕೊಂಡಿದ್ದು, ತನಿಖೆಗೆ ಮುಂದಾಗಿದೆ.

ಇಬ್ಬರ ನಡುವೆ ಪೈಪೋಟಿ: ಯಾರಾಗ್ತಾರೆ ಟೀಮ್ ಇಂಡಿಯಾ ನಾಯಕ?

Team India T20 Captain: ಭಾರತೀಯ ಕ್ರಿಕೆಟ್‌ನಲ್ಲಿ ಈಗ ನಾಯಕತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. 2026ರ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಜಯ ತಂದುಕೊಟ್ಟ ಸೂರ್ಯಕುಮಾರ್ ಯಾದವ್ (SKY) ಅವರ ನಾಯಕತ್ವದ ಅವಧಿ ಮುಕ್ತಾಯದ ಹಂತಕ್ಕೆ ಬಂದಿರುವ ಸೂಚನೆಗಳು ಲಭ್ಯವಾಗಿವೆ. ಸೂರ್ಯಕುಮಾರ್ ಅವರ ಇತ್ತೀಚಿನ ಕಳಪೆ ಫಾರ್ಮ್ ಮತ್ತು ವಯಸ್ಸಿನ (35 ವರ್ಷ) ಕಾರಣದಿಂದಾಗಿ, ಬಿಸಿಸಿಐ (BCCI) ಭವಿಷ್ಯದ ದೃಷ್ಟಿಯಿಂದ ಹೊಸ ನಾಯಕನ ಹುಡುಕಾಟದಲ್ಲಿದೆ.

TMC ವಿರುದ್ಧ ಗಂಭೀರ ಆರೋಪ ಮಾಡಿ ಪಕ್ಷ ತೊರೆದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ!

Manoj Tiwary Quits TMC: ಮೈದಾನದಲ್ಲಿ ಬ್ಯಾಟ್ ಬೀಸುತ್ತಿದ್ದ ಕ್ರಿಕೆಟಿಗ ಈಗ ರಾಜಕೀಯದ ಪಿಚ್‌ನಲ್ಲಿ 'ಗೂಗ್ಲಿ' ಎಸೆದಿದ್ದಾರೆ. ಅದು ಸಹ ತೃಣಮೂಲ ಕಾಂಗ್ರೆಸ್ ಪಕ್ಷದ ಸೋಲಿನ ಬೆನ್ನಲ್ಲೇ! ಪಶ್ಚಿಮ ಬಂಗಾಳದ ಸಚಿವರೂ ಆಗಿದ್ದ ಮನೋಜ್ ತಿವಾರಿ ಸದ್ದಿಲ್ಲದೆ ಪಕ್ಷ ತೊರೆದಿದ್ದಷ್ಟೇ ಅಲ್ಲ, ಟಿಎಂಸಿ ಒಳಗಿನ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. 

ಭಾರತೀಯರಿಲ್ಲದ ವಿಶ್ವ ಏಕದಿನ ಪ್ಲೇಯಿಂಗ್ XI ಪ್ರಕಟಿಸಿದ ಬಾಬರ್ ಆಝಂ

Babar Azam's World ODI XI Sparks Debate: ಪಾಕಿಸ್ತಾನಿ ನಾಯಕ ಬಾಬರ್ ಆಜಮ್ ತಮ್ಮ ವಿಶ್ವ ಏಕದಿನ XI ತಂಡವನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ಯಾವುದೇ ಭಾರತೀಯ ಆಟಗಾರರಿಗೆ ಸ್ಥಾನ ನೀಡಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರಂತಹ ಅಗ್ರ ಆಟಗಾರರ ಅನುಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಆಟಗಾರರು ಬಾಬರ್ ಆಯ್ಕೆಯಲ್ಲಿ ಸ್ಥಾನ ಪಡೆದಿದ್ದಾರೆ.

Vinod Kambli: ವಿನೋದ್ ಕಾಂಬ್ಳಿ ಈಗ ಹೇಗಿದ್ದಾರೆ ನೋಡಿ

Vinod Kambli: ಟೀಮ್ ಇಂಡಿಯಾ ಪರ 17 ಟೆಸ್ಟ್ ಪಂದ್ಯಗಳನ್ನಾಡಿರುವ ವಿನೋದ್ ಕಾಂಬ್ಳಿ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2477 ರನ್​ಗಳಿಸಿ ಮಿಂಚಿದ್ದರು.

4 ಸರಣಿಗಳ ವೇಳೆ ಜಸ್​ಪ್ರೀತ್ ಬುಮ್ರಾಗೆ ರೆಸ್ಟ್​..!

Jasprit Bumrah: ಟೀಮ್ ಇಂಡಿಯಾದ 'ಯಾರ್ಕರ್ ಕಿಂಗ್' ಜಸ್‌ಪ್ರೀತ್ ಬುಮ್ರಾ ಅವರ ಕೆಲಸದ ಒತ್ತಡವನ್ನು ನಿರ್ವಹಿಸಲು ಬಿಸಿಸಿಐ ಈಗಿನಿಂದಲೇ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ. ಮುಂಬರುವ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪೂರ್ಣ ಶಕ್ತಿಯೊಂದಿಗೆ ಕಣಕ್ಕಿಳಿಯಬೇಕೆಂಬ ಉದ್ದೇಶದಿಂದ, 2026ರ ಕೆಲವು ಏಕದಿನ ಸರಣಿಗಳಿಂದ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ನಿರ್ಧರಿಸಿದ್ದಾರೆ. 

ICC Rankings: ಜಾರಿದ ಮಂಧಾನ; ಶಫಾಲಿಗೆ ಮುಂಬಡ್ತಿ

ICC T20 Rankings: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ಮಹಿಳಾ ತಂಡದ ಕಳಪೆ ಪ್ರದರ್ಶನ ಐಸಿಸಿ ಟಿ20 ಶ್ರೇಯಾಂಕದ ಮೇಲೆ ಪರಿಣಾಮ ಬೀರಿದೆ. ಬ್ಯಾಟಿಂಗ್ ವೈಫಲ್ಯದಿಂದ ಭಾರತ ಎರಡು ಪಂದ್ಯಗಳನ್ನು ಸೋತಿದೆ. ಸ್ಮೃತಿ ಮಂಧಾನ ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಕುಸಿದರೆ, ಶಫಾಲಿ ವರ್ಮಾ ಎರಡು ಸ್ಥಾನ ಏರಿಕೆ ಕಂಡು ಆರನೇ ಸ್ಥಾನಕ್ಕೆ ತಲುಪಿದ್ದಾರೆ. ದೀಪ್ತಿ ಶರ್ಮಾ ಮತ್ತು ರೇಣುಕಾ ಸಿಂಗ್ ಅವರೂ ಬೌಲಿಂಗ್ ಶ್ರೇಯಾಂಕದಲ್ಲಿ ಇಳಿಕೆ ಕಂಡಿದ್ದಾರೆ.

ಯಾರ ಬದಲಿಗೆ ಆಯ್ಕೆಯಾಗಲಿದ್ದಾರೆ ವೈಭವ್ ಸೂರ್ಯವಂಶಿ?

Vaibhav Sooryavanshi: ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಇಬ್ಬರೂ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಆದರೆ ಅಭಿಷೇಕ್​​ಗೆ ಹೋಲಿಸಿದರೆ ವೈಭವ್ ಅವರ 220+ ಸ್ಟ್ರೈಕ್ ರೇಟ್ ಮತ್ತು ಸ್ಥಿರತೆ ಉತ್ತಮವಾಗಿದೆ. ಹೀಗಾಗಿ ಆಯ್ಕೆ ಸಮಿತಿಯು ಮುಂಬರುವ ಸರಣಿಗೆ ಯುವ ದಾಂಡಿಗನನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.