Indian Cricket Team

Indian Cricket Team

ಭಾರತದಲ್ಲಿ ಕ್ರಿಕೆಟ್ ಒಂದು ಅತ್ಯಂತ ಜನಪ್ರಿಯ ಕ್ರೀಡೆ. ಹೀಗಾಗಿಯೇ ಭಾರತವನ್ನು ಕ್ರಿಕೆಟ್ ಧರ್ಮ ರಾಷ್ಟ್ರ ಎಂದು ಕರೆಯಲಾಗುತ್ತದೆ. ಭಾರತ ಕ್ರಿಕೆಟ್ ಅನ್ನು ಕಪಿಲ್ ದೇವ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ಎಂಎಸ್ ಧೋನಿ ವಿವಿಎಸ್ ಲಕ್ಷ್ಮಣ್​ರಂತಹ ದಿಗ್ಗಜರಿಂದ ಹಿಡಿದು, ಪ್ರಸ್ತುತ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಸ್ಟಾರ್ ಕ್ರಿಕೆಟಿಗರು ಅಕ್ಷರಶಃ ಆಳಿದ್ದಾರೆ. ಇದುವರೆಗೆ ಟೀಂ ಇಂಡಿಯಾ ಮೂರು ವಿಶ್ವಕಪ್​ಗಳನ್ನು ಗೆದ್ದಿದ್ದು, ಕಪಿಲ್ ದೇವ್ ನಾಯಕತ್ವದಲ್ಲಿ 1983 ರಲ್ಲಿ ಭಾರತ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ 2007 ರಲ್ಲಿ ಎಂ ಎಸ್ ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ, ಅವರ ನಾಯಕತ್ವದಲ್ಲೇ 2011 ರಲ್ಲಿ ಬರೋಬ್ಬರಿ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್​ಗೆ ಮುತ್ತಿಟ್ಟಿತ್ತು. ಪ್ರಸ್ತುತ ಟೀಂ ಇಂಡಿಯಾ ವಿಶ್ವದ ಬಲಿಷ್ಠ ತಂಡಗಳ ಪೈಕಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

ಇನ್ನೂ ಹೆಚ್ಚು ಓದಿ

T20 World Cup 2024: ಟಿ20 ವಿಶ್ವಕಪ್‌ಗಾಗಿ ಯುಎಇಗೆ ಹಾರಿದ ಟೀಂ ಇಂಡಿಯಾ

T20 World Cup 2024: ಮಹಿಳೆಯರ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಕೂಡ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ತೆರಳಿದೆ. ಟೀಂ ಇಂಡಿಯಾ ಯುಎಇಗೆ ತೆರಳುತ್ತಿರುವ ಫೋಟೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

IND vs BAN: ಈ ಇಬ್ಬರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನವಿಲ್ಲ ಎಂದ ಗೌತಮ್ ಗಂಭೀರ್

IND vs BAN: ಬಾಂಗ್ಲಾದೇಶ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌತಮ್ ಗಂಭೀರ್ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ಈ ವೇಳೆ ಮಾತನಾಡಿದ ಅವರು, ಕೇವಲ 11 ಆಟಗಾರರು ಆಡಲು ಸಾಧ್ಯವಾದ ಕಾರಣ ಯುವ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್, ಅವಕಾಶಗಳಿಗಾಗಿ ಕಾಯಬೇಕಾಗಬಹುದು ಎಂದರು.

IND vs BAN: ಚೆನ್ನೈ ಟೆಸ್ಟ್​ಗೆ ಸಿದ್ಧವಾಗಿರುವ ಟೀಂ ಇಂಡಿಯಾಗೆ ಸೆಪ್ಟೆಂಬರ್ ಆತಂಕ

IND vs BAN: ಚೆನ್ನೈನಲ್ಲಿ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿರುವ ಭಾರತ ತಂಡಕ್ಕೆ ಸೆಪ್ಟೆಂಬರ್​ನ ಕರಾಳ ಇತಿಹಾಸ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಷ್ಟಕ್ಕೂ ಸೆಪ್ಟೆಂಬರ್ ತಿಂಗಳಿಗೂ ಚೆನ್ನೈನಲ್ಲಿ ನಡೆಯಲ್ಲಿರುವ ಟೆಸ್ಟ್ ಪಂದ್ಯಕ್ಕೂ ಹಾಗೂ ಟೀಂ ಇಂಡಿಯಾಕ್ಕೂ ಇರುವ ಸಂಬಂಧವೇನು ಎಂಬುದನ್ನು ನೋಡುವುದಾದರೆ..

IND vs BAN: ಚೆನ್ನೈನಲ್ಲಿ ರೋಹಿತ್ ಪಡೆಯ ಸಮರಾಭ್ಯಾಸ ಹೇಗಿದೆ ನೋಡಿ

IND vs BAN: ಟೀಂ ಇಂಡಿಯಾ ಟೆಸ್ಟ್ ಆರಂಭಕ್ಕೆ ವಾರಕ್ಕೂ ಮುಂಚೆಯೇ ಚೆನ್ನೈನಲ್ಲಿ ಬೀಡು ಬಿಟ್ಟಿದ್ದು, ಅಭ್ಯಾಸದಲ್ಲಿ ನಿರತವಾಗಿದೆ. ಅದರಂತೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರಾಕ್ಟೀಸ್​ನಲ್ಲಿ ನಿರತರಾಗಿದ್ದರೆ, ಕುಲ್​ದೀಪ್ ಯಾದವ್, ಸಿರಾಜ್, ಬೂಮ್ರಾ ಬೌಲಿಂಗ್ ಪ್ರಾಕ್ಟೀಸ್ ನಡೆಸಿದ್ದಾರೆ. ಅದರ ವಿಡಿಯೋವನ್ನು ಇದೀಗ ಬಿಸಿಸಿಐ ಶೇರ್ ಮಾಡಿದೆ.

IND vs BAN: ಬಾಂಗ್ಲಾ ವಿರುದ್ಧ ಚೆನ್ನೈ ಟೆಸ್ಟ್ ಗೆದ್ದರೆ ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆದ್ದ ತಕ್ಷಣ ಅಪರೂಪದ ದಾಖಲೆ ನಿರ್ಮಿಸಲಿದೆ.

IND vs BAN: ಬಾಂಗ್ಲಾ ಮಣಿಸಲು ಚೆನ್ನೈನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ

IND vs BAN: ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಸರಣಿಯಾಗಿರುವುದರಿಂದ ಗಂಭೀರ್​ ಅವರಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ತಂಡದ ಎಲ್ಲಾ ಆಟಗಾರರೊಂದಿಗೆ ಸಮಯ ಕಳೆಯುವ ಮೂಲಕ ಗಂಭೀರ್, ಆಟಗಾರರ ಅಭ್ಯಾಸವನ್ನು ಗಮನಿಸಿದರು

Highest Tax Paying Sportsperson: ಅತಿಹೆಚ್ಚು ತೆರಿಗೆ ಕಟ್ಟುವ ಭಾರತೀಯ ಕ್ರಿಕೆಟಿಗರು; ವಿರಾಟ್ ಕೊಹ್ಲಿ ನಂ. 1

ಬೆಂಗಳೂರು, ಸೆಪ್ಟೆಂಬರ್ 5: ಹೆಚ್ಚು ಆದಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿ ಕೂಡ ಇನ್ಕಮ್ ಟ್ಯಾಕ್ಸ್ ಕಟ್ಟುವ ಹೊಣೆಗಾರಿಕೆ ಹೊಂದಿರುತ್ತಾರೆ. ಸೆಲಬ್ರಿಟಿಗಳಾದರೂ ಸರಿ ತೆರಿಗೆ ಕಟ್ಟಬೇಕು. ಭಾರತದಲ್ಲಿ 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿರುವ ಟಾಪ್10 ಸೆಲಬ್ರಿಟಿಗಳ ಪಟ್ಟಿಯನ್ನು ಫಾರ್ಚೂನ್ ಇಂಡಿಯಾ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಪೈಕಿ ಆರು ಕ್ರಿಕೆಟಿಗರಿದ್ದಾರೆ. ಅವರಾರು ಎಂಬ ವಿವರ ಇಲ್ಲಿದೆ.

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಮತ್ತೊಬ್ಬ ಟೀಂ ಇಂಡಿಯಾ ಕ್ರಿಕೆಟಿಗ

Barinder Singh Sran: ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಬರೀಂದರ್ ಸಿಂಗ್ ಸ್ರಾನ್ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬಹಳ ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದ ಬರೀಂದರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಐಸಿಸಿಗೆ ಜಯ್​ ಶಾ; ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಮತ್ತೊಬ್ಬ ರಾಜಕಾರಣಿಯ ಪುತ್ರ ಆಯ್ಕೆ?

BCCI: ಜಯ್ ಶಾ ಐಸಿಸಿ ಅಧ್ಯಕ್ಷರಾದರೆ, ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೊಸ ಕಾರ್ಯದರ್ಶಿಯಾಗಿ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ರೋಹನ್ ಜೇಟ್ಲಿ ಕಳೆದ ಹಲವು ವರ್ಷಗಳಿಂದ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

Team India: ಭಾರತ ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಈ ವರ್ಷ ನಿವೃತ್ತಿ ಘೋಷಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ. ಹೀಗೆ 2024 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಭಾರತದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...