Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ಹೈಡ್ರೋಜನ್ ರೈಲು ಟ್ರಯಲ್ ರನ್ ಯಶಸ್ವಿ: ದೆಹಲಿ-ಜಿಂದ್ ನಡುವೆ ಚಲಿಸಲಿದೆ ದೇಶದ ಮೊದಲ ಮಾಲಿನ್ಯ ರಹಿತ ರೈಲು
ದೆಹಲಿ-ಜಿಂದ್ ನಡುವೆ ಭಾರತದ ಮೊದಲ ಹೈಡ್ರೋಜನ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ವಾಯು ಮತ್ತು ಶಬ್ದ ಮಾಲಿನ್ಯ ರಹಿತ ಈ ರೈಲು ಹಸಿರು ಇಂಧನ ತಂತ್ರಜ್ಞಾನ ಆಧರಿಸಿದ್ದು, ನೀರು ಮತ್ತು ಹಬೆಯನ್ನು ಮಾತ್ರ ಹೊರಹಾಕುತ್ತದೆ. ಸುರಕ್ಷತಾ ಮಾನದಂಡಗಳನ್ನು ಪಾಸು ಮಾಡಿರುವ ಈ ರೈಲು, ಮುಂದಿನ ತಿಂಗಳಿನಿಂದ ಹರಿಯಾಣದ ಜಿಂದ್ ಮತ್ತು ಸೋನಿಪತ್ ನಡುವೆ ವಾಣಿಜ್ಯ ಸಂಚಾರ ಆರಂಭಿಸುವ ನಿರೀಕ್ಷೆಯಿದೆ. ಇದು ಭಾರತೀಯ ರೈಲ್ವೆಯ ಮಹತ್ವದ ಹೆಜ್ಜೆಯಾಗಿದೆ.
- Nayana Rajeev
- Updated on: Jun 27, 2026
- 7:31 am
ರೈಲ್ವೆ ಮುಂಬಡ್ತಿ ಪರೀಕ್ಷೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ ದಿಢೀರ್ ರದ್ದು, ಕಾರಣ ನಿಜಕ್ಕೂ ಗ್ರೇಟ್!
ಕನ್ನಡ ಭಾಷೆಯ ಆಯ್ಕೆ ಇಲ್ಲದೆ ಕೇವಲ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ನಡೆಯುತ್ತಿರುವ ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯನ್ನು ವಿರೋಧಿಸಿ ಜೂನ್ 25 ರಂದು ಹಮ್ಮಿಕೊಂಡಿದ್ದ ಧರಣಿಯನ್ನು ಕನ್ನಡಪರ ಸಂಘಟನೆಗಳು ಹಿಂಪಡೆದಿವೆ. ಕನ್ನಡಿಗ ಪರೀಕ್ಷಾರ್ಥಿಗಳೇ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡಲಾಗಿದೆ. ಇದಕ್ಕೆ ಕಾರಣ ಏನು ಗೊತ್ತೇ? ತಿಳಿಯಲು ಮುಂದೆ ಓದಿ.
- Sanjayya Chikkamath
- Updated on: Jun 23, 2026
- 7:37 am
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ
ದಿನನಿತ್ಯ ಬೆಂಗಳೂರು ಮತ್ತು ತುಮಕೂರು ನಡುವೆ ರೈಲಿನಲ್ಲಿ ಸಂಚರಿಸುವ ಸಾವಿರಾರು ಉದ್ಯೋಗಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಮಾರ್ಗದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಸುಮಾರು 6,000 ಕೋಟಿ ರೂಪಾಯಿ ವೆಚ್ಚದಲ್ಲಿ ಚತುಷ್ಪಥ ರೈಲು ಮಾರ್ಗ ನಿರ್ಮಿಸಲು ಬೃಹತ್ ಯೋಜನೆಯನ್ನು ಸಿದ್ಧಪಡಿಸಲಾಗಿದೆ.
- Jagadisha B
- Updated on: Jun 20, 2026
- 12:02 pm
ಭುವನೇಶ್ವರ-ಯಶವಂತಪುರ ವೀಕ್ಲಿ ಸ್ಪೆಷಲ್ ರೈಲುಗಳ ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಪೂರ್ವ ಕರಾವಳಿ ರೈಲ್ವೆಯು ಭುವನೇಶ್ವರ ಹಾಗೂ ಬೆಂಗಳೂರಿನ ಯಶವಂತಪುರ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ಬೇಸಿಗೆ ವಿಶೇಷ ರೈಲುಗಳ (ವೀಕ್ಲಿ ಸ್ಪೆಷಲ್ ಟ್ರೈನ್) ಅವಧಿಯನ್ನು ವಿಸ್ತರಿಸಿದೆ. ಈ ಕುರಿತು ನೈಋತ್ಯ ರೈಲ್ವೆ ಮಾಹಿತಿ ಹಂಚಿಕೊಂಡಿದ್ದು, ವಿವರಗಳು ಇಲ್ಲಿವೆ.
- Ganapathi Sharma
- Updated on: Jun 19, 2026
- 12:07 pm
ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗದ ಬಗ್ಗೆ ಸಚಿವ ಸೋಮಣ್ಣ ಬಿಗ್ ಅಪ್ಡೇಟ್
ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವಿನ 191 ಕಿ.ಮೀ ನೂತನ ನೇರ ರೈಲು ಮಾರ್ಗದ ಬಗ್ಗೆ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ. ಯೋಜನೆ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಶೇ 92 ರಷ್ಟು ಭೂಸ್ವಾಧೀನ ಮುಗಿದಿದೆ ಎಂದು ಸಚಿವರು ಹೇಳಿದ್ದು, ರೈಲು ಸಂಚಾರ ಯಾವಾಗ ಶುರುವಾಗಲಿದೆ ಎಂಬುದನ್ನೂ ತಿಳಿಸಿದ್ದಾರೆ.
- Ganapathi Sharma
- Updated on: Jun 10, 2026
- 8:42 am
ರೈಲುಗಳಲ್ಲಿ ಇನ್ಮುಂದೆ ಮತ್ತೆ ಅಡುಗೆ ಶುರು; ಆದರೆ, ಎಲ್ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಲು ನಿರ್ಧಾರ
Indian Railways Shifts to Induction Stoves for Train Food: ಭಾರತೀಯ ರೈಲ್ವೆ ಮತ್ತು ಐಆರ್ಸಿಟಿಸಿ ರೈಲುಗಳಲ್ಲಿ ಅಡುಗೆ ವಿಧಾನವನ್ನು ಬದಲಾಯಿಸುತ್ತಿವೆ. ಅಗ್ನಿ ಅವಘಡ ತಪ್ಪಿಸಲು ಮತ್ತು ಸುರಕ್ಷತೆ ಹೆಚ್ಚಿಸಲು ಎಲ್ಪಿಜಿ ಬದಲು ಇಂಡಕ್ಷನ್ ಸ್ಟೌವ್ಗಳನ್ನು ಬಳಸಲು ನಿರ್ಧರಿಸಿದೆ. ಇದು ರೈಲು ಪ್ಯಾಂಟ್ರಿಗಳಲ್ಲಿ ವರ್ಷಗಳ ನಂತರ ಅಡುಗೆ ಭಾಗ್ಯವನ್ನು ಮರಳಿಸಲಿದೆ. ಈ ಬದಲಾವಣೆಯು ಅಡುಗೆಯನ್ನು ಹೆಚ್ಚು ಸುಸ್ಥಿರ, ಸುರಕ್ಷಿತ ಮತ್ತು ಆಧುನಿಕವನ್ನಾಗಿಸಲಿದೆ, ಪ್ರಯಾಣಿಕರಿಗೆ ಉತ್ತಮ ಆಹಾರ ಒದಗಿಸಲು ನೆರವಾಗಲಿದೆ.
- Vijaya Sarathy SN
- Updated on: Jun 9, 2026
- 2:50 pm
ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು
ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್ಫೀಲ್ಡ್ ನಡುವೆ ನಡೆಯಲಿರುವ ರೈಲ್ವೆ ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಜೂನ್ 7 ಮತ್ತು 8 ರಂದು ಅಶೋಕಪುರಂ ಎಕ್ಸ್ಪ್ರೆಸ್ ಸೇರಿದಂತೆ 2 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 6 ಮೆಮು ರೈಲುಗಳ ಸಂಚಾರ ಭಾಗಶಃ ರದ್ದಾಗಿವೆ. ರದ್ದಾದ ರೈಲುಗಳ ವಿವರ ಇಲ್ಲಿದೆ.
- Ganapathi Sharma
- Updated on: Jun 4, 2026
- 12:24 pm
ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ
Indian Railways ticket rules changes 2026: ಭಾರತೀಯ ರೈಲ್ವೆ ಜೂನ್ 1, 2026 ರಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇನ್ನು ವೈಟಿಂಗ್ ಲಿಸ್ಟ್ ಟಿಕೆಟ್ಗಳಿಗೆ ಮಿತಿ ಇರಲಿದ್ದು, ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ವೈಟಿಂಗ್ ಟಿಕೆಟ್ ಹೊಂದಿರುವವರು ಸ್ಲೀಪರ್ ಅಥವಾ ಎಸಿ ಕೋಚ್ಗಳಲ್ಲಿ ಪ್ರಯಾಣಿಸುವಂತಿಲ್ಲ, ಉಲ್ಲಂಘಿಸಿದರೆ ಭಾರೀ ದಂಡ ವಿಧಿಸಲಾಗುತ್ತದೆ. ಟಿಟಿಇಗೆ ದಂಡ ಮತ್ತು ಕೆಳಗಿಳಿಸುವ ಅಧಿಕಾರ ನೀಡಲಾಗಿದೆ. ಈ ಬದಲಾವಣೆಗಳು ಪ್ರಯಾಣಿಕರ ಸುರಕ್ಷಿತ ಹಾಗೂ ಸುಖಕರ ಪ್ರಯಾಣಕ್ಕೆ ಸಹಕಾರಿ.
- Vijaya Sarathy SN
- Updated on: Jun 1, 2026
- 2:17 pm
ಜೂನ್ 1 ರಿಂದ ಘಾಟ್ ಸೆಕ್ಷನಲ್ಲಿ ವಂದೇ ಭಾರತ್ ಟ್ರಯಲ್ ರನ್: ಬೆಂಗಳೂರು – ಸುಬ್ರಹ್ಮಣ್ಯ ಪ್ರಯಾಣಕ್ಕಿನ್ನು ನಾಲ್ಕೈದು ಗಂಟೆ ಸಾಕು!
Bengaluru Mangaluru Vande Bharat Express: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ಜೂನ್ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ಇದಕ್ಕಾಗಿ ಜೂನ್ 1 ರಿಂದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಅತ್ಯಂತ ಕಠಿಣ ಘಾಟ್ ಮಾರ್ಗದಲ್ಲಿ ಅಂತಿಮ ಹಂತದ ಆರ್ಡಿಎಸ್ಒ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ.
- Ganapathi Sharma
- Updated on: May 30, 2026
- 2:47 pm
ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ
ರೈಲು ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಹಾಗೂ ಸುಗಮ ಸಂಚಾರದ ಉದ್ದೇಶದಿಂದ ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಬೆಂಗಳೂರಿನಿಂದ ರಾಮೇಶ್ವರಂ, ಕೊಲ್ಲಂ ಮತ್ತು ತಿರುವನಂತಪುರಂಗೆ ಸಂಚರಿಸುವ ಬೇಸಿಗೆ ವಿಶೇಷ ರೈಲುಗಳ ಅವಧಿಯನ್ನು ಜೂನ್ ಕೊನೆಯವರೆಗೆ ವಿಸ್ತರಿಸಿದೆ. ವಿಶೇಷ ರೈಲುಗಳ ಸಂಪೂರ್ಣ ವಿವರ ಇಲ್ಲಿದೆ.
- Ganapathi Sharma
- Updated on: May 26, 2026
- 10:04 am
ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಏನಿದರ ವಿಶೇಷತೆ?
ಬೆಂಗಳೂರು ಮತ್ತು ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಜುಲೈ ಅಥವಾ ಆಗಸ್ಟ್ನಿಂದ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಒಂದು ರೈಲಿನ ಬದಲಿಗೆ, ನಾವು ಎರಡು ರೈಲುಗಳನ್ನು ಓಡಿಸಲು ನಿರ್ಧರಿಸಿದ್ದೇವೆ. ವಂದೇ ಭಾರತ್ ಸ್ಲೀಪರ್ ರೈಲು ಸಂಜೆ ಬೆಂಗಳೂರಿನಿಂದ ಪ್ರಾರಂಭವಾಗಿ ಮರುದಿನ ಮುಂಜಾನೆ ಮುಂಬೈ ತಲುಪುತ್ತದೆ. ಅದೇ ರೀತಿ, ಇದು ಸಂಜೆ ಮುಂಬೈನಿಂದ ಪ್ರಾರಂಭವಾಗಿ ಮರುದಿನ ಮುಂಜಾನೆ ಬೆಂಗಳೂರು ತಲುಪುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
- Sushma Chakre
- Updated on: May 18, 2026
- 6:06 pm
ಬಿಹಾರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 3 ರೈಲುಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜುಗಳಿಗೆ ಹಾನಿ
ಬಿಹಾರದ ಮುಜಾಫರ್ಪುರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಇದರಿಂದ ಹಲವಾರು ಬೋಗಿಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಈ ಘಟನೆ ಪ್ರಯಾಣಿಕರಲ್ಲಿ ಭಯಭೀತಿ ಮೂಡಿಸಿದೆ. ಈ ಘಟನೆಯಲ್ಲಿ ವಂದೇ ಭಾರತ್ನ 3 ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಇದರ ಜೊತೆಗೆ ಇನ್ನೆರಡು ರೈಲುಗಳ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಎರಡೂ ರೈಲುಗಳ ಹಲವಾರು ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
- Sushma Chakre
- Updated on: May 18, 2026
- 5:13 pm