AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways

Indian Railways

ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ

ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದರ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಗಳ ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು?

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಹಂಚಿಕೆ ವಿವಾದದ ಕುರಿತು ಭಾರತೀಯ ರೈಲ್ವೆ ತನ್ನ ನಿಯಮಗಳನ್ನು ಸ್ಪಷ್ಟಪಡಿಸಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಖಾಲಿ ಇದ್ದರೆ ಕೆಳ ಬರ್ತ್ ಸ್ವಯಂ ಚಾಲಿತವಾಗಿ ಲಭಿಸುತ್ತದೆ. ಆದರೆ, ಒಂದೇ PNR ನಲ್ಲಿ ಎರಡು ಟಿಕೆಟ್‌ಗಳನ್ನು ಬುಕ್ ಮಾಡಿದಾಗ ಕೆಳ ಬರ್ತ್ ಸಿಗುವ ಸಾಧ್ಯತೆ ಹೆಚ್ಚು. ಗುಂಪು ಬುಕಿಂಗ್‌ನಲ್ಲಿ ಈ ಆದ್ಯತೆ ಸಿಗದಿರಬಹುದು ಎಂಬ ಬಗ್ಗೆಯೂ ಲೇಖನ ಮಾಹಿತಿ ನೀಡಿದೆ.

ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ

ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗವು 2027ಕ್ಕೆ ವೇಳೆಗೆ ಪೂರ್ಣಗೊಳ್ಳಲಿದೆ. ಈ ಯೋಜನೆಯಿಂದ ದಾವಣಗೆರೆ-ಬೆಂಗಳೂರು ನಡುವಿನ ಪ್ರಯಾಣ ಕೇವಲ 2.5 ಗಂಟೆಗೆ ಇಳಿಯಲಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿಗೆ ಇದು ಮಹತ್ವದ ತಿರುವು ನೀಡಲಿದ್ದು, ವ್ಯಾಪಾರ, ಶಿಕ್ಷಣ, ಉದ್ಯೋಗ ಕ್ಷೇತ್ರಗಳಿಗೆ ದೊಡ್ಡ ಉತ್ತೇಜನ ಸಿಗಲಿದೆ.

ರೈಲು ಈ ನಿಲ್ದಾಣಕ್ಕೆ ಬಂದಾಗ ಬೋಗಿಗಳಲ್ಲಿನ ದೀಪಗಳು ಆರಿ ಹೋಗುತ್ತೆ

ತಾಂಬರಂ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳು ಬಂದಾಗ ದೀಪಗಳು ಆಫ್ ಆಗುತ್ತವೆ. ಇದು ಭಯಪಡುವ ವಿಷಯವಲ್ಲ, ಬದಲಿಗೆ ತಾಂತ್ರಿಕ ಕಾರಣ. ರೈಲು ಒಂದು ವಿದ್ಯುತ್ ವಲಯದಿಂದ ಇನ್ನೊಂದಕ್ಕೆ ಬದಲಾದಾಗ 2-3 ಸೆಕೆಂಡುಗಳ ಕಾಲ ವಿದ್ಯುತ್ ಸರಬರಾಜು ನಿಲ್ಲುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದ್ದು, ಪ್ರಯಾಣಿಕರ ಅರಿವಿಗಾಗಿ ಫಲಕಗಳನ್ನು ಅಳವಡಿಸಲಾಗಿದೆ. ಭವಿಷ್ಯದಲ್ಲಿ ಹೊಸ ತಂತ್ರಜ್ಞಾನದಿಂದ ಈ ಸಮಸ್ಯೆ ಪರಿಹಾರವಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ

ಸಚಿವ ವಿ ಸೋಮಣ್ಣ ಅವರು ಬೆಂಗಳೂರು ಮತ್ತು ರಾಜ್ಯದಾದ್ಯಂತ ಮಹತ್ವದ ರೈಲ್ವೆ ಯೋಜನೆಗಳನ್ನು ಹಮ್ಮಿಕೊಂಡಿರುವ ಬಗ್ಗೆ ವಿವರಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕರಣ, ಹೊಸ ನಾಲ್ಕು ಪಥದ ರೈಲ್ವೆ ಮಾರ್ಗಗಳ ನಿರ್ಮಾಣ ಹಾಗೂ ಯಲಹಂಕದಲ್ಲಿ ದೇಶದ ಅತಿದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ಸ್ಥಾಪನೆಯಂತಹ ಯೋಜನೆಗಳು ಇದರಲ್ಲಿ ಸೇರಿವೆ.

ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ

ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆ ಈಡೇರಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಚಾಲನೆ ನೀಡಿದರು. ಇದರಿಂದ ಮೆಜೆಸ್ಟಿಕ್ ಮೇಲಿನ ಒತ್ತಡ ಕಡಿಮೆಯಾಗಲಿದ್ದು, ಬೆಂಗಳೂರು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್​ಗೆ ಹೋಗಬಹುದು ಗೊತ್ತೇ!

ನೆರೆಯ ರಾಷ್ಟ್ರಗಳಿಗೆ ನೇರ ಪ್ರಯಾಣಿಕ ರೈಲು ಸೇವೆ ಒದಗಿಸುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಗಡಿಯಾಚೆಗಿನ ಸಂಚಾರ, ವ್ಯಾಪಾರ, ಸಾಂಸ್ಕೃತಿಕ ಬಾಂಧವ್ಯ ಹಾಗೂ ಐತಿಹಾಸಿಕ ಸಂಪರ್ಕಗಳನ್ನು ಬಲಪಡಿಸಲು ಭಾರತವು ನೇಪಾಳ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ದೇಶಗಳೊಂದಿಗೆ ರೈಲು ಸಂಪರ್ಕವನ್ನು ಅಭಿವೃದ್ಧಿಪಡಿಸಿದೆ (ಈ ಪೈಕಿ ಸದ್ಯ ಪಾಕಿಸ್ತಾನದೊಂದಿಗಿನ ರೈಲು ಸಂಪರ್ಕ ಕಡಿತಗೊಂಡಿದೆ). ಭಾರತದಿಂದ ನೇರವಾಗಿ ಕಾರ್ಯನಿರ್ವಹಿಸುವ ಪ್ರಮುಖ ಅಂತಾರಾಷ್ಟ್ರೀಯ ರೈಲು ನಿಲ್ದಾಣ, ಮಾರ್ಗಗಳ ವಿವರ ಇಲ್ಲಿದೆ.

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ

ಎಸ್​​ಎಂವಿಟಿ ಬೆಂಗಳೂರು ಹಾಗೂ ವಿಶಾಖಪಟ್ಟಣ ವಿಶೇಷ ರೈಲು ಸಂಚಾರವನ್ನು ಹೋಳಿಹಬ್ಬದ ಕಾರಣ ಮಾರ್ಚ್​​ 30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಮತ್ತೊಂದೆಡೆ, ಇಂದಿನಿಂದ ಜಾರಿಗೆ ಬರುವಂತೆ ಬೆಂಗಳೂರಿನ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ರಮುಖ ನಾಲ್ಕು ರೈಲುಗಳಿಗೆ ನಿಲುಗಡೆ ಕಲ್ಪಿಸಲಾಗಿದೆ. ಆ ರೈಲುಗಳು ಯಾವುವೆಲ್ಲ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ

ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸಪೇಟೆ 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 3 ರೈಲು ಮಾರ್ಗಗಳಿಗೆ ಒಪ್ಪಿಗೆ ನೀಡಲಾಗಿದ್ದು, ಬಳ್ಳಾರಿ ಮಾರ್ಗವನ್ನು ಹೊರತುಪಡಿಸಿ ಕಾಸಾರ-ಮನ್ಮಾಡ್, ದೆಹಲಿ-ಅಂಬಾಲ ನಡುವಿನ 3 ಬಹು-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 18,509 ಕೋಟಿ ರೂ. ಮೌಲ್ಯದ ರೈಲು ಮಾರ್ಗಗಳ ನವೀಕರಣಕ್ಕೆ ಮೋದಿ ಸರ್ಕಾರ ಮುಂದಾಗಿದೆ.

RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ

ರೈಲ್ವೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ರೈಲ್‌ಒನ್ ಆ್ಯಪ್ ಅನ್ನು ಬಳಸುವುದರ ಮೂಲಕ ರೈಲ್ವೆ ಬುಕಿಂಗ್​​ಗೆ ಸಂಬಂಧಿಸಿದ ಎಲ್ಲ ರೀತಿಯ ಸೇವೆಗಳನ್ನು ಇಲ್ಲಿಂದಲೇ ಪಡೆಯಬಹುದು. ಟಿಕೆಟ್ ಬುಕಿಂಗ್ ಮಾತ್ರವಲ್ಲದೆ ರೈಲಿನಲ್ಲಿ ಸಿಗುವ ಆಹಾರದ ಬದಲಾವಣೆ, ಫುಡ್ ಬುಕಿಂಗ್​ ಮುಂತಾದ ಎಲ್ಲ ಸೇವೆಗಳನ್ನು ಈ ಆ್ಯಪ್​ನಲ್ಲಿ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ. ರೈಲ್‌ಒನ್ ರೈಲ್ವೆಯ ಆಲ್-ಇನ್-ಒನ್ ಅಪ್ಲಿಕೇಶನ್ ಆಗಿರುತ್ತದೆ. ಇದು ಯುಟಿಎಸ್ ಒದಗಿಸದ ಕಾಯ್ದಿರಿಸಿದ ಟಿಕೆಟ್ ಸೇವೆಗಳಿಗೂ ಪ್ರವೇಶವನ್ನು ಒದಗಿಸುತ್ತದೆ.

ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಕರ್ನಾಟಕಕ್ಕೆ ಕೇಂದ್ರ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ ಎಂದು ಟೀಕಿಸಿದವರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಂಕಿಅಂಶ ಸಮೇತ ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026-27ರ ಕೇಂದ್ರ ಬಜೆಟ್‌ನಲ್ಲಿ 7,748 ಕೋಟಿ ರೂ. ಹಂಚಿಕೆಯಾಗಿದ್ದು, ಇದು ದಾಖಲೆ ಮಟ್ಟದ ಅನುದಾನವಾಗಿದೆ ಎಂದು ಅವರು ಹೇಳಿದ್ದಾರೆ. ಅಶ್ವಿನಿ ವೈಷ್ಣವ್ ಹೇಳಿದ ಪ್ರಕಾರ ಕೇಂದ್ರ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಏನೇನು ಕೊಡುಗೆ ಕೊಟ್ಟಿದ್ದಾರೆ? ಇಲ್ಲಿದೆ ಮಾಹಿತಿ.

ಕೇವಲ ಸೀಟಲ್ಲ ರೈಲಿನ ಒಂದು ಬೋಗಿಯೇ ನಾಪತ್ತೆ, ಒಡಿಶಾದಲ್ಲಿ ಘಟನೆ

ಒಡಿಶಾದ ಸಂಬಲ್ಪುರ ರೈಲು ನಿಲ್ದಾಣದಲ್ಲಿ ಸಂಬಲ್ಪುರ-ನಾಂದೇಡ್ ಎಕ್ಸ್‌ಪ್ರೆಸ್ 20809 ಸಮಯಕ್ಕೆ ಸರಿಯಾಗಿ ಪ್ಲಾಟ್‌ಫಾರ್ಮ್‌ಗೆ ಬಂದಾಗ ಎಸಿ 3-ಟೈರ್‌ನ ಕಾಯ್ದಿರಿಸಿದ ಕೋಚ್ (BE2) ಕಾಣೆಯಾದ ಕಾರಣ ಅವ್ಯವಸ್ಥೆ ಉಂಟಾಯಿತು. ಕೋಚ್ ಇಲ್ಲದ ಕಾರಣ ಸುಮಾರು 57 ಕಾಯ್ದಿರಿಸಿದ ಪ್ರಯಾಣಿಕರು ತೊಂದರೆ ಅನುಭವಿಸಿದರು, ಇದು ನಿಲ್ದಾಣದಲ್ಲಿ ಗದ್ದಲಕ್ಕೆ ಕಾರಣವಾಯಿತು. ಪ್ರಯಾಣಿಕರು ತಮ್ಮ ಬೋಗಿಗಳನ್ನು ಹುಡುಕುತ್ತಾ ಪ್ಲಾಟ್‌ಫಾರ್ಮ್‌ನಲ್ಲಿ ಅಲೆದಾಡಿದರು.